No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Tuesday, February 17, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೋಲಾರ

ಜಗತ್ತು AI ಹಿಂದೆ ಓಡುವಾಗ ನಾವು FI ಹಿಂದೆ ಓಡ್ತಾ ಇದೀವಿ: ಕೆ.ವಿ. ಪ್ರಭಾಕರ್

"ಪತ್ರಿಕೋದ್ಯಮ ಇಂದು-ಮುಂದು" ಒಂದು ದಿನದ ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 14, 2025
in ಕೋಲಾರ
0
ಜಗತ್ತು AI ಹಿಂದೆ ಓಡುವಾಗ ನಾವು FI ಹಿಂದೆ ಓಡ್ತಾ ಇದೀವಿ: ಕೆ.ವಿ. ಪ್ರಭಾಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕೋಲಾರ  |

ಜಗತ್ತು AI (Artificial Intelligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಫೇಕ್ ನ್ಯೂಸ್ ಗಳ ಕಾರಣಕ್ಕೆ ಈಗ ಫ್ಯಾಕ್ಟ್ ಚೆಕ್ ಆರಂಭಿಸುವ ಸ್ಥಿತಿ ಬಂದಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ #K V Prabhakar ಅವರು ಅಭಿಪ್ರಾಯಪಟ್ಟರು.

ಮಾಧ್ಯಮ‌ ಅಕಾಡೆಮಿ ಆಯೋಜಿಸಿದ್ದ “ಪತ್ರಿಕೋದ್ಯಮ ಇಂದು-ಮುಂದು” ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತರಲ್ಲಿ ಅಧ್ಯಯನಶೀಲತೆ ಕಡಿಮೆ ಆಗುತ್ತಿದೆ. ಕೈಯಲ್ಲಿ ಲೋಗೋ ಹಿಡಿದು ಪ್ರಶ್ನೆ ಕೇಳುವ ಪತ್ರಕರ್ತರಿಗೆ ವಾಪಾಸ್ ಅದೇ ವಿಚಾರದ ಬಗ್ಗೆ ನಾವೇ ಒಂದು ಪ್ರಶ್ನೆ ಕೇಳಿದರೆ ಅವರಲ್ಲಿ ಉತ್ತರ ಇರುವುದಿಲ್ಲ. ಇದಕ್ಕೆ ಅಧ್ಯಯನಶೀಲತೆಯ ಕೊರತೆಯೇ ಕಾರಣ ಎಂದರು.

ಮತ್ತೊಂದು ಊಹಾ ಪತ್ರಿಕೋದ್ಯಮ‌ ಅತಿಯಾಗುತ್ತಿದೆ. ನಡೆಯದ ಸಂಗತಿಗಳನ್ನು ಅವರಿಗೆ ಅವರೇ ಊಹೆ ಮಾಡಿಕೊಂಡು ಬ್ರೇಕಿಂಗ್ ಸುದ್ದಿ ಕೊಡುವ ಹಾವಳಿ ಹೆಚ್ಚಾಗಿದೆ ಎಂದರು.

ಮಾಧ್ಯಮ ಅಕಾಡೆಮಿ ಇಂದು ಆಯೋಜಿಸಿರುವ ಪತ್ರಿಕೋದ್ಯಮ: ಇಂದು-ಮುಂದು” ವಿಷಯ ಕುರಿತ ಒಂದು ದಿನದ ಕಾರ್ಯಾಗಾರ ಅತ್ಯಂತ ಅರ್ಥಪೂರ್ಣ ಮತ್ತು ಅಗತ್ಯವಾದದ್ದು

ಪತ್ರಿಕಾ ವೃತ್ತಿಗೆ, ಮಾಧ್ಯಮ ಕ್ಷೇತ್ರಕ್ಕೆ ಬಂದೊದಗಬಹುದಾದ ಸವಾಲುಗಳನ್ನು ಮೊದಲೇ ಗ್ರಹಿಸಿ ಆ ಸವಾಲುಗಳನ್ನು ಗೆಲ್ಲಲು ಅಗತ್ಯವಾದ ಬೌದ್ಧಿಕ ಕಸರತ್ತು ನಡೆಸುವುದು ಅತ್ಯಗತ್ಯ ಎಂದರು.
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಪತ್ರಿಕೋದ್ಯಮವನ್ನು ಸಮಾಜದ ಪ್ರಾಣವಾಯು ಅಂತ ಕರೆದಿದ್ದಾರೆ. ಆದರೆ ಈ ಮಾತು ಈಗ ಪತ್ರಿಕೋದ್ಯಮದಲ್ಲಿ ಉಳಿದಿದೆಯಾ ಎಂದು ನಾವೇ ಪ್ರಶ್ನಿಸಿಕೊಳ್ಳಬೇಕು ಎಂದರು.

ಇವತ್ತಿನ ಈ ಕಾರ್ಯಾಗಾರಕ್ಕೆ ಎರಡು ಕಾರಣಗಳು ಇರಬಹುದು ಎಂದು ನಾನು ಭಾವಿಸುತ್ತೇನೆ…

  • AI (ಕೃತಕ‌ ಬುದ್ದಿ ಮತ್ತೆ) ಹಾಗೂ ಇತರೆ ತಂತ್ರಜ್ಞಾನ‌ ತಂದೊಡ್ಡುವ ಸವಾಲು.
  • ತಂತ್ರಜ್ಞಾನದ ಜೊತೆಗೆ Fake News ವೇಗವೂ ಹೆಚ್ಚಾಗುತ್ತಿರುವ ಸವಾಲು.

ಇವೆರಡೂ ಸವಾಲುಗಳಿಂದ ಮಾದ್ಯಮ ಕ್ಷೇತ್ರ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಏನಿದ್ದರೂ ಇವೆರಡನ್ನೂ ಮುಖಾಮುಖಿಯಾಗಿ ನಾವು ಎದುರಿಸಲೇಬೇಕು ಮತ್ತು ಜೀರ್ಣಿಸಿಕೊಳ್ಳಲೇಬೇಕಿದೆ ಎಂದರು.
ನಮ್ಮ ಮಾಧ್ಯಮ ಕ್ಷೇತ್ರಕ್ಕೆ ಜೀರ್ಣಿಸಿಕೊಳ್ಳುವ ಶಕ್ತಿ ಇದೆ. ಇಂತಹ ಹಲವಾರು ಸವಾಲುಗಳನ್ನು ಜೀರ್ಣಿಸಿಕೊಂಡಿರುವ ಉದಾಹರಣೆ ಕೂಡ ನಮ್ಮ‌ ಮುಂದಿದೆ. ಇದಕ್ಕೆ ಉತ್ತಮ‌ ಉದಾಹರಣೆ ಎಂದರೆ ಕೋವಿಡ್.

ಕೋವಿಡ್ ಬಂದಾಗ ಮಾಧ್ಯಮಗಳು ಅದರಲ್ಲೂ ಮುದ್ರಣ ಮಾಧ್ಯಮದ ಭವಿಷ್ಯವೇ ಮುಗಿದುಹೋಯ್ತು ಎನ್ನುವ ಆತಂಕ ಮನೆ ಮಾಡಿತ್ತು.‌ ಆದರೆ, FICCI (Federation of Indian Chambers of Commerce and Industry) ಸಂಸ್ಥೆ 2023 ರಲ್ಲಿ ಮುದ್ರಣ ಮಾಧ್ಯಮಗಳ ಸ್ಥಿತಿ ಗತಿಯ ವರದಿ ಬಿಡುಗಡೆ ಮಾಡಿದೆ. ಈ ವರದಿ ಬಹಳ ಭರವಸೆ ಮೂಡಿಸುವಂತಿದೆ.
ಕೋವಿಡ್ ಸಂದರ್ಭದಲ್ಲಿ ಅಪಾರವಾಗಿ ನೆಲಕಚ್ಚಿದ್ದ ಮುದ್ರಣ ಮಾಧ್ಯಮ 2023ರಲ್ಲಿ ಬಹಳ ಚೇತರಿಸಿಕೊಂಡಿದೆ. ದೇಶದ ಮುದ್ರಣ ಮಾಧ್ಯಮದ ಆದಾಯ 4% ಹೆಚ್ಚಾಗಿ ವಾರ್ಷಿಕ 260 ಬಿಲಿಯನ್ ರೂಪಾಯಿಗೆ ತಲುಪಿದೆ.2027ಕ್ಕೆ ಈ ಬೆಳವಣಿಗೆ ದರ ಇನ್ನೂ ಹೆಚ್ಚಾಗಿ 295.7 ಬಿಲಿಯನ್ ಗೆ ಏರಿಕೆ ಆಗಲಿದೆ ಎನ್ನುವ ಆಶಾ ಭಾವನೆ ವ್ಯಕ್ತವಾಗಿದೆ. ಇದರಲ್ಲಿ…

  • ಜಾಹಿರಾತು ಆದಾಯ 4% ಹೆಚ್ಚಾಗಿದೆ
  • ಪತ್ರಿಕೆಗಳ ಪ್ರಸಾರದಿಂದ ಬರುವ ಆದಾಯ 3% ಹೆಚ್ಚಾಗಿದೆ.
  • ದಿನಪತ್ರಿಕೆಗಳಲ್ಲದ ಮ್ಯಾಗ್ಸೀನ್ ಗಳ ಆದಾಯ 3% ಹೆಚ್ಚಾಗಿದೆ.
  • ಜಾಹಿರಾತು insertion ಗಳ ಪ್ರಮಾಣ 4% ಹೆಚ್ಚಾಗಿದೆ. ( ಪತ್ರಿಕೆಗಳ ಒಳಗೆ ಜಾಹಿರಾತು ಕರಪತ್ರಗಳನ್ನು ಹಾಕಿ ಕಳುಹಿಸುವುದು).
  • ಇಂಗ್ಲಿಷ್ ಪತ್ರಿಕೆಗಳ circulation ಆದಾಯ 10% ಹೆಚ್ಚಾಗಿದ್ದರೆ, ಕನ್ನಡ ಮತ್ತು ಇತರೆ ರಾಜ್ಯ ಭಾಷಿಕ ಪತ್ರಿಕೆಗಳ circulation ಆದಾಯ 2% ಹೆಚ್ಚಾಗಿದೆ.
  • ಸರ್ಕಾರಗಳ ಜಾಹಿರಾತು ಪ್ರಮಾಣ ಕೂಡ ಹೆಚ್ಚಾಗಿದೆ.
  • ಎಲ್ಲಕ್ಕಿಂತ ಮುಖ್ಯವಾಗಿ, ಜಾಹಿರಾತುದಾರರ ವಿಶ್ವಾಸಾರ್ಹತೆಯನ್ನು ಮುದ್ರಣ ಮಾಧ್ಯಮಗಳು ಉಳಿಸಿಕೊಂಡಿವೆ ಎಂದು FICCI ಹೇಳಿದೆ.

1,50000 ಜಾಹಿರಾತುದಾರರು, 185000 ಬ್ರಾಂಡ್ ಗಳು ಮುದ್ರಣ ಮಾಧ್ಯಮಗಳ ಮೇಲೆ ಅಪಾರ ಭರವಸೆ ವ್ಯಕ್ತಪಡಿಸಿವೆ. ಹೀಗಾಗಿ ಆದಾಯ, ಗಳಿಕೆಯ ಸವಾಲನ್ನು ಮುದ್ರಣ ಮಾಧ್ಯಮ ನಿರಂತರವಾಗಿ ಗೆಲ್ಲುತ್ತಲೇ ಇದೆ ಎಂದು ವಿಶ್ಲೇಷಿಸಿದರು.

ಅಚ್ಚುಮೊಳೆ ಕಾಲದಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಹಲವಾರು ತಂತ್ರಜ್ಞಾನದ ಸವಾಲುಗಳನ್ನು ಮಾಧ್ಯಮ ಲೋಕ ಜೀರ್ಣಿಸಿಕೊಳ್ಳುತ್ತಲೇ ಬೆಳೆದಿದೆ ಎಂದರು.
ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಪತ್ರಿಕೋದ್ಯಮ ತಂತ್ರಜ್ಞಾನದಲ್ಲಿ ಎಷ್ಟೇ ಉನ್ನತ ಮಟ್ಟಕ್ಕೇರಿದರೂ, ಅದರ ನೈತಿಕ ಗುಣಮಟ್ಟ ಪಾತಾಳ ಸೇರದಂತೆ ಕಾಪಾಡಿಕೊಳ್ಳುವ ನೈತಿಕ ಮತ್ತು ಸಾಮಾಜಿಕ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು.

ಸುಳ್ಳುಸುದ್ದಿಗಳನ್ನು ತಡೆಯುವ ಸವಾಲು ಮತ್ತು ನಿಖರತೆ ಹಾಗೂ ವಾಸ್ತವಾಂಶಗಳ ಪರಿಶೀಲನೆಯ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಇದಕ್ಕಾಗಿ fact check ಆರಂಭಿಸಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                                               

Tags: Kannada News WebsiteKannada_NewsKannada_News_LiveKannada_News_OnlineKannada_WebsiteKolaraLatest News KannadaNews_in_KannadaNews_Kannadaಕೋಲಾರ
Share196Tweet123Send
Previous Post

ಎಟಿಎಂನಲ್ಲಿ ವೃದ್ಧನಿಗೆ ವಂಚನೆ ಪ್ರಕರಣ | ಆರೋಪಿಗಳ ಬಂಧನ

Next Post

ಪರಿಸರದ ಮೇಲಿನ ಮಾನವ ದೌರ್ಜನ್ಯವೇ ಹವಾಮಾನ ವೈಪರಿತ್ಯಕ್ಕೆ ಕಾರಣ: ಸಚಿವ ಈಶ್ವರ ಖಂಡ್ರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪರಿಸರದ ಮೇಲಿನ ಮಾನವ ದೌರ್ಜನ್ಯವೇ ಹವಾಮಾನ ವೈಪರಿತ್ಯಕ್ಕೆ ಕಾರಣ: ಸಚಿವ ಈಶ್ವರ ಖಂಡ್ರೆ

ಪರಿಸರದ ಮೇಲಿನ ಮಾನವ ದೌರ್ಜನ್ಯವೇ ಹವಾಮಾನ ವೈಪರಿತ್ಯಕ್ಕೆ ಕಾರಣ: ಸಚಿವ ಈಶ್ವರ ಖಂಡ್ರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ: ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ: ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

February 17, 2026
ಶಿವಮೊಗ್ಗ | ಈ ಬಾರಿ ಮಾರಿಕಾಂಬೆಗೆ 1.6 ಕೆಜಿ ತೂಕದ ಚಿನ್ನದ ಮುಖವಾಡ ವಿಶೇಷ

ಶಿವಮೊಗ್ಗ | ಈ ಬಾರಿ ಮಾರಿಕಾಂಬೆಗೆ 1.6 ಕೆಜಿ ತೂಕದ ಚಿನ್ನದ ಮುಖವಾಡ ವಿಶೇಷ

February 17, 2026
ಕರಾವಳಿಗೆ ಕೋಮುವಾದಿ ಹಣೆಪಟ್ಟಿ ಹಚ್ಚುವ ವ್ಯರ್ಥ ಪ್ರಯತ್ನ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತಿರುಗೇಟು

ಕರಾವಳಿಗೆ ಕೋಮುವಾದಿ ಹಣೆಪಟ್ಟಿ ಹಚ್ಚುವ ವ್ಯರ್ಥ ಪ್ರಯತ್ನ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತಿರುಗೇಟು

February 17, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಪ್ರೀತಿ ನಿರಾಕರಣೆ ಹಿನ್ನೆಲೆ | ಯುವತಿಗೆ ಬಿಯರ್ ಬಾಟಲ್‌ನಿಂದ ಚುಚ್ಚಿ ಹಲ್ಲೆ

February 17, 2026
ರಾಜ್ಯದ 3ನೇ ಅತಿ ಎತ್ತರದ ಧ್ವಜಸ್ತಂಭ | ಪುತ್ತೂರಿನಲ್ಲಿ ಹಾರಾಡಿದ ರಾಷ್ಟ್ರಧ್ವಜದ ವಿಶೇಷತೆಯೇನು?

ರಾಜ್ಯದ 3ನೇ ಅತಿ ಎತ್ತರದ ಧ್ವಜಸ್ತಂಭ | ಪುತ್ತೂರಿನಲ್ಲಿ ಹಾರಾಡಿದ ರಾಷ್ಟ್ರಧ್ವಜದ ವಿಶೇಷತೆಯೇನು?

February 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL