ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಅಲ್ಲಲ್ಲಿ ಚದುರಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಅದಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ದಿನದ ನೆನಪಿಗಾಗಿ ನವೆಂಬರ್ 1ನೇ ತಾರೀಖಿನಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದು ಮುರಳಿಧರ್ ನಾಡಿಗೇರ್ ತಿಳಿಸಿದರು.
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ನಲ್ಲಿ Kirloskar Ferrous Industries Ltd., 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಲಾಯಿತು. ಕಾರ್ಖಾನೆಯ ಅಧ್ಯಕ್ಷ ಸಿ. ರಮೇಶ್, ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಪಿ. ನಾರಾಯಣ, ಬೀಡು ಕಬ್ಬಿಣ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಎಂ.ಜಿ.ನಾಗರಾಜ್ ಹಾಗೂ ಹಣಕಾಸು ವಿಭಾಗದ ಹಿರಿಯ ಅಧಿಕಾರಿ ಪರುಶುರಾಮ್ ಇವರು ಒಟ್ಟಾಗಿ ಧ್ವಜಾರೋಹಣ ಮಾಡುವುದರ ಮೂಲಕ ಶುಭಾಶಯಗಳು ಕೋರಿದರು.
ಕಾರ್ಯಕ್ರಮ ಪ್ರಾರಂಭದಲ್ಲಿ ಕರ್ನಾಟಕ ಸರ್ಕಾರದ ಇಂದಿನ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಮಹತ್ವದ ಬಗ್ಗೆ ಮುರುಳಿಧರ್ ನಾಡಿಗೇರ್ ಮಾಹಿತಿ ನೀಡಿದರು.

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯು ಕಳೆದ 29 ವರ್ಷಗಳಿಂದ ಈ ಕಾರ್ಯಕ್ರಮವನ್ನು ಆಯೋಜಿಸಿ ನವಂಬರ್ ಒಂದನೇ ತಾರೀಕು ಧ್ವಜಾರೋಹಣವನ್ನು ಮಾಡುವುದರ ಮೂಲಕ ಕನ್ನಡದ ಹಿರಿಮೆಯನ್ನು ಹೆಚ್ಚಿಸಿಕೊಂಡು ಬಂದಿದ್ದು, ಕಾರ್ಖಾನೆಯ ಹಿರಿಯ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕೆಲಸಗಾರರು ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಯ ಭಾರತ ಜನನಿಯ ತನುಜಾತೆ ಗಾಯನ ಹಾಡುವುದರ ಮೂಲಕ ಕನ್ನಡ ಭಾಷೆಗೆ ಉತ್ತೇಜನವನ್ನು ನೀಡಿ ಸಂತಸವನ್ನು ಹಂಚಿಕೂಂಡರು.

Also read: ಕನ್ನಡವನ್ನು ಉಳಿಸಿ ಬೆಳೆಸುವ ಸಂಸ್ಕೃತಿ ಪ್ರತಿಯೊಬ್ಬ ಕನ್ನಡಿಗನದಾಗಲಿ: ಚೈತನ್ಯ ಕುಮಾರ್
ಕಾರ್ಯಕ್ರಮದಲ್ಲಿ ಕಾರ್ಮಿಕರು. ಹಿರಿಯ ಅಧಿಕಾರಿಗಳು, ಹೆಚ್ ಆರ್ ಎಂ ವಿಭಾಗದ ಕಿರಣ್ ಶೇಜೆಕರ್ ಮತ್ತು ವಿಭಾಗದ ಅಧಿಕಾರಿಗಳು, ಕಾರ್ಮಿಕ ಸಂಘದ ಪದಾದಿಕಾರಿಗಳಾದ ಶರಣಪ್ಪ, ಬಸವರಾಜ್ ಕಂಠಿ ಹಾಗೂ ಹನುಮಪ್ಪ ಕಲ್ಮಂಗಿ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಕರ್ನಾಟಕ ರಾಜೋತ್ಸವದ ಸಂಕಲ್ಪ ವಿಧಿಯನ್ನು ಪ್ರತಿಜ್ಞೆ ಮಾಡಲಾಯಿತು.
ವರದಿ: ಮುರುಳೀಧರ್ ನಾಡಿಗೇರ್










Discussion about this post