ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಕೊಪ್ಪಳ ಜಿಲ್ಲೆಯು ಐತಿಹಾಸಿಕ ಪ್ರವಾಸಿ ತಾಣಗಳನ್ನು ಹೊಂದಿದ್ದು, ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ಒತ್ತು ನೀಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಹೇಳಿದರು.
ಅವರು ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಆಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿ, ಶ್ರೀ ಹುಲಿಗೆಮ್ಮ ದೇವ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಾಗೂ ಕೊಪ್ಪಳ ಜಿಲ್ಲೆಯ ಇತರೆ ಐತಿಹಾಸಿಕ ಪ್ರವಾಸಿ ತಾಣಗಳ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಲು ಕರೆದಿರುವ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಕೊಪ್ಪಳ ಜಿಲ್ಲೆಯು ಐತಿಹಾಸಿಕ, ಧಾರ್ಮಿಕ ಕ್ಷೇತ್ರ, ವನ್ಯ ಜೀವಿಗಳು, ಪ್ರಾಣಿಪಕ್ಷಿಗಳು, ಪ್ರವಾಸಿ ತಾಣಗಳು, ಸ್ಮಾರಕಗಳು, ದೇವಸ್ಥಾನಗಳು, ಜೀವವೈವಿದ್ಯ ಅಭಯಾರಣ್ಯ, ವಾಟರ್ ಫಾಲ್ಸ್ ಉದ್ಯಾನವನ ಮುಂತಾದ ಪ್ರವಾಸಿ ತಾಣಗಳಿಂದ ಕೂಡಿದ್ದು, ಪ್ರವಾಸೋದ್ಯಮದಲ್ಲಿ ಹಲವಾರು ಅವಕಾಶಗಳನ್ನು ಹೊಂದಿದೆ. ಆಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿ, ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಾಗೂ ಕೊಪ್ಪಳ ಜಿಲ್ಲೆಯ ಇತರೆ ಐತಿಹಾಸಿಕ ಪ್ರವಾಸಿ ತಾಣಗಳ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಿ. ಇದರ ಜೊತೆಗೆ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಗುರುತಿಸಬೇಕು ಹಾಗೂ ಅವುಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ, ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಗುಪ್ತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್, ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ಧಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post