ಕಲ್ಪ ಮೀಡಿಯಾ ಹೌಸ್
ಕೊಪ್ಪಳ: ಜಿಲ್ಲೆಯ ಹೂಸಕನಕಾಪುರ ಗ್ರಾಮದಲ್ಲಿ ಕೊಪ್ಪಳ ಇಂಡಸ್ಟ್ರೀಸ್ ಅಸೋಸಿಯೆಷನ್ ವತಿಯಿಂದ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗಾಗಿ ಸಂಪ್ರಾದಾಯಿಕ ಸರಳ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಕೊಪ್ಪಳ ವಿದಾನಸಭಾ ಕ್ಷೇತ್ರದ ಸದಸ್ಯ ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಪ್ರಶಾಂತ್ ಮತ್ತು ಕೊಪ್ಪಳ ಇಂಡಸ್ಟ್ರೀಸ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಆರ್.ವಿ. ಗುಮಾಸ್ತೆ, ಮುಕುಂದ್ ಸುಮಿ ಸ್ಪಷಲ್ ಸ್ಟೀಲ್ ಲಿಮಿಟೆಡ್ನ ಆಡಳಿತ ವಿಭಾಗದ ಮುಖ್ಯಸ್ಥ ಓ.ಪಿ. ಸಿಂಗ್, ಹೊಸಪೇಟ್ ಸ್ಟ್ರೀಲ್ಸ್ ಮುಖ್ಯಸ್ಥ ರತ್ನಪ್ರಸಾದ್, ಎಕ್ಸ್ಸಿಂಡಿಯಾ ಸ್ಟೀಲ್ಸ್ ಲಿಮಿಟೆಡ್ನ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಮುಖ್ಯಸ್ಥಸೋಮಶೇಖರ ಬಾವಿ , ಎಮ್ಎಸ್ಪಿಎಲ್ ಲಿಮಿಟೆಡ್ ಮುಖ್ಯಸ್ಥ ಕೆ ಪ್ರಭು, ಕೊಪ್ಪಳ ಇಂಡಸ್ಟ್ರೀಸ್ ಅಸೋಸಿಯೇಷನ್ ಜಂಟಿ ಕಾರ್ಯದರ್ಶಿ ಪಿ. ನಾರಾಯಣ ಮತ್ತು ವಿವಿಧ ಕೈಗಾರಿಕೆಗಳ ಮುಖ್ಯಸ್ಥರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಗ್ರಾಮ ಪಂಚಾಯ್ತಿ ಸದಸ್ಯರು, ಅಧಿಕಾರಿಗಳು ಹಾಜರಿದ್ದರು.
ಕೋವಿಡ್ ಕೇರ್ ಸೆಂಟರ್ ಹಿನ್ನೆಲೆ:
ಕೋವಿಡ್-19 ಸಾಂಕ್ರಾಮಿಕ ಎರಡನೇ ಅಲೆಯು ದೇಶಾದ್ಯಾಂತ ತೀವ್ರ ರೀತಿಯಲ್ಲಿ ಹಬ್ಬಿದ್ದು, ಅದೇ ರೀತಿ ಕೊಪ್ಪಳ ಜಿಲ್ಲೆಯಲ್ಲಿಯೂ ಈ ಸಾಂಕ್ರಾಮಿಕ ರೋಗವು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗಿರುತ್ತಿರುವ ಹಿನ್ನೆಲೆಯಲ್ಲಿ ಮೇ 25ರಂದು ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ಕೈಗಾರಿಕೆಗಳ ಮುಖ್ಯಸ್ಥರುಗಳ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಜಿಲ್ಲಾದ್ಯಾಂತ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕೋವಿಡ್ ಸೋಂಕಿತ ವ್ಯಕ್ತಿಗಳಿಗೆ ವೈದ್ಯಕೀಯ ಮೂಲ ಸೌಕರ್ಯಗಳನ್ನು ಒದಗಿಸುವುದು, ಆಮ್ಲಜನಕ ಹಾಗೂ ವೆಂಟಿಲೇಟರ್ ಹಾಸಿಗೆಗಳನ್ನು ಒದಗಿಸುವುದರಲ್ಲಿ ಬಹಳಷ್ಟು ಒತ್ತಡ ಉಂಟಾಗಿರುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಒಂದು ಕೋವಿಡ್ ಕೇರ್ ಸೆಂಟರ್ನ ಅವಶ್ಯಕತೆ ಇದ್ದು, ಇದನ್ನು ಜಿಲ್ಲೆಯ ಎಲ್ಲಾ ಕೈಗಾರಿಕೆಗಳು ಸೇರಿ ಸ್ಥಾಪಿಸಬೇಕೆಂದು ಆಗ್ರಹಿಸಿದರು.
ನಂತರ ಮೇ.26ರಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಸಹ ಸಭೆ ಕರೆದು, ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಯಶಸ್ವಿಯಾಗಿ ತಡೆಗಟ್ಟುವ ಹಾಗೂ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಸುರಕ್ಷತಾ ಮತ್ತು ಆರೋಗ್ಯದ ಹಿತದೃಷ್ಠಿಯಿಂದ ಜಿಲ್ಲೆಯ ಎಲ್ಲಾ ಕೈಗಾರಿಕೆಗಳು ಸೇರಿ 200 ಬೆಡ್ಗಳ ಕೋವಿಡ್ ಕೇರ್ ಸೆಂಟರನ್ನು ಸ್ಥಾಪಿಸಬೇಕೆಂದು ಸಚಿವರು ಸೂಚಿಸಿದರು.
ಸಭೆಯಲ್ಲಿ ಹಾಜರಿದ್ದ ಎಲ್ಲಾ ಕೈಗಾರಿಕೆಗಳ ಮುಖ್ಯಸ್ಥರು ಈ ನಿರ್ಧಾರವನ್ನು ತುಂಬು ಹೃದಯದಿಂದ ಸ್ವಾಗತಿಸಿ, 200 ಬೆಡ್ ಕೋವಿಡ್ ಕೇರ್ ಸೆಂಟರ್ನ್ನು ಸ್ಥಾಪಿಸಲು ಓಪ್ಪಿಗೆ ನೀಡಿದರು. ಇದಕ್ಕೆ ಪೂರಕವಾಗಿ ಕೊಪ್ಪಳ ಇಂಡಸ್ಟ್ರೀಸ್ ಅಸೋಸಿಯೇಷನ್ ಅನ್ನು (ಕೊಪ್ಪಳ ಜಿಲ್ಲಾ ಕೈಗಾರಿಕಾ ಸಂಘ) ಸ್ಥಾಪನೆ ಮಾಡಿದ್ದು, ಈ ಸಂಘದ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರನ್ನು ನಿರ್ಮಿಸಲಾಗುವುದು.
ಹೊಸಪೇಟೆ ಸ್ಟ್ರೀಲ್ಸ್ ಲಿಮಿಟೆಡ್ ಗಿಣಿಗೇರಾದಿಂದ ನಿರಂತರ ಆಮ್ಲಜನಕ ಪೂರೈಕೆ ಮಾಡಲು ಅನುಕೂಲವಾಗಿರುತ್ತದೆ. ಜೊತೆಗೆ ಕೊಪ್ಪಳ ಜಿಲ್ಲೆಯ ಹೆಸರಾಂತ ಕಾರ್ಖಾನೆಗಳಾದ ಕಿರ್ಲೋಸ್ಕರ್ ಪೆರಸ್ ಇಂಡಸ್ಟ್ರೀಸ್ ಲಿಮಿಟೆಡ್, ಮುಕುಂದ್ ಸುಮಿ ಸ್ಪಷಲ್ ಸ್ಟೀಲ್ ಲಿಮಿಟೆಡ್, ಎಮ್ಎಸ್ಪಿಎಲ್, ಎಕ್ಸಿಸಿಂಡಿಯಾ, ಅಲ್ಟಾಟೆಕ್ ಸಿಮೆಂಟ್ , ಅಭಯ್ ಸಾಲ್ವೆಂಟ್ಸ್, ಎಮ್ಎಸ್ ಮೆಟಲ್ಸ್ , ಐಎಲ್ಸಿ ಇನ್ನುಳಿದ ಎಲ್ಲಾ ಡಿಆರ್ಐ ಪ್ಲಾಂಟ್ಗಳು ತುಂಬು ಹೃದಯದಿಂದ ಈ ಕೋವಿಡ್ ಕೇರ್ ಸೆಂಟರನ್ನು ಸ್ಥಾಪಸಲು ಮುಂದೆ ಬಂದಿದ್ದು, ಧಾರಾಳವಾಗಿ ದೇಣಿಗೆಯನ್ನು ನೀಡಲು ಒಪಿರುವುದು ಶ್ಲಾಘನೀಯ ಕಾರ್ಯವಾಗಿದೆ.
ಅಂದಾಜು 4 ಕೋಟಿ ವೆಚ್ಚದಲ್ಲಿ ಈ ಕೋವಿಡ್ ಕೇರ್ ಸೆಂಟರನ್ನು ಹೊಸ ಕನಕಾಪುರ ಗ್ರಾಮದ ಬಳಿ ಸ್ಥಾಪಿಸಲಾಗುತ್ತಿದ್ದು, ಸಕಲ ಸಿದ್ದತೆಗಳನ್ನು ಕೈಗೂಳ್ಳಲಾಗುತ್ತಿದೆ. ಈ ತರಹ ಎಲ್ಲಾ ಕೈಗಾರಿಕೆಗಳು ಸೇರಿ ಸಾರ್ವಜನಿಕ ಹಿತದೃಷ್ಠಿಯಿಂದ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುತ್ತಿರುವುದು ಬಹುಷ ದೇಶದಲ್ಲಿಯೇ ಪ್ರಥಮವಾಗಿದ್ದು, ಇದು ಎಲ್ಲರಿಗೂ ಮಾದರಿಯಾಗಲಿದೆ.
ಈ ಕೋವಿಡ್ ಕೇರ್ ಸೆಂಟರನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಸಾರ್ವಜನಿಕರ ಅರೋಗ್ಯಕ್ಕೆ ಹೆಚ್ಚಿನ ಗಮನಹರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಲ್ಪ ಡಿಜಿಟಲ್ ಮಿಡಿಯಾ ಹೌಸ್ ವರದಿಗಾರರು ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಆಡಳಿತ ಮಂಡಳಿಗೆ ಪ್ರಶಂಸೆ ವ್ಯಕ್ತಪಡಿಸಿ, ಕಳೆದ ಒಂದು ತಿಂಗಳಲ್ಲಿ ಕಾರ್ಖಾನೆಯ ವತಿಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಅನುಕೂಲವಾಗುವ ದಷ್ಠಿಯಿಂದ ಕೊಪ್ಪಳದಲ್ಲಿ ಸ್ಥಾಪನೆಯಾಗಿರುವ ಗವಿಸಿದ್ದೇಶ್ವರ ಕೋವಿಡ್ ಹಾಸ್ಪೇಟಲ್ಗೆ ಪೋರ್ಟಬಲ್ ಡಿಜಿಟಲ್ ಎಕ್ಸ್ ರೇ ಮಿಷನ್ ಮತ್ತು ಬೈಪ್ಯಾಪ್ ಉಪಕರಣಗಳನ್ನು ದೇಣಿಗೆ ಮಾಡಿರಯವುದನ್ನು ಎತ್ತಿಹಿಡಿದು ಆರ್.ವಿ. ಗುಮಾಸ್ತೆಯವರಿಗೆ ಕಲ್ಪ ಡಿಜಿಟಲ್ ಹೌಸ್ ಅಭಿನಂದನೆಯನ್ನು ವ್ಯಕ್ತಪಡಿಸಿದರು.
ವರದಿ: ಮುರುಳಿಧರ್ ನಾಡಿಗೇರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post