No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಆರ್ಥಿಕ ಬೆಳವಣಿಗೆ ಇನ್ಮುಂದೆ ಬರೀ ಬೆಂಗಳೂರಿಗಷ್ಟೇ ಸೀಮಿತವಲ್ಲ: Kotak Mahindra Bank

ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳಿಗೆ (ಎಸ್‌ಎಮ್‌ಇ) ನೂತನ ಅವಕಾಶ

kalpa News by kalpa News
July 24, 2026
in Special Articles
0
Kotak | creating fresh opportunities for SMEs
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |            

ಭಾರತದ ಅತ್ಯಂತ ಕ್ರಿಯಾಶೀಲ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳ ಮಾರುಕಟ್ಟೆಗಳಲ್ಲಿ ಒಂದಾಗಿರುವ ಕರ್ನಾಟಕವು, 55 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತಿರುವ 8.5 ಲಕ್ಷಕ್ಕೂ ಅಧಿಕ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳಿಗೆ (ಎಮ್‌ಎಸ್‌ಎಮ್‌ಇ) ತವರಾಗಿದೆ. ಆರ್ಥಿಕ ಚಟುವಟಿಕೆಗಳು ದಿನದಿಂದ ದಿನಕ್ಕೆ ಬೆಂಗಳೂರನ್ನು ಮೀರಿ ವಿಸ್ತರಿಸುತ್ತಿದ್ದು, ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಯಂತಹ ನಗರಗಳು ಪ್ರಮುಖ ಆರ್ಥಿಕ ಹಾಗೂ ಕೈಗಾರಿಕಾ ಕೇಂದ್ರಗಳಾಗಿ ಹೊರಹೊಮ್ಮುತ್ತಿವೆ. ರಾಜ್ಯದಾದ್ಯಂತ ಹೆಚ್ಚುತ್ತಿರುವ ಹೂಡಿಕೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಕೈಗಾರಿಕಾ ಬೆಳವಣಿಗೆಯು ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ತಮ್ಮ ವ್ಯವಹಾರವನ್ನು ವಿಸ್ತರಿಸಲು, ಹೊಸ ಮಾರುಕಟ್ಟೆಗಳನ್ನು ತಲುಪಲು ಹಾಗೂ ಬೃಹತ್ ಪೂರೈಕೆ ಸರಪಳಿಗಳಲ್ಲಿ ಭಾಗವಹಿಸಲು ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿದೆ.

ಕೋಟಕ್ ಮಹೀಂದ್ರಾ ಬ್ಯಾಂಕ್ ಪ್ರಕಾರ, ಕರ್ನಾಟಕದಾದ್ಯಂತ ಇರುವ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಗ್ರಾಹಕರು ತಮ್ಮ ವ್ಯವಹಾರ ವಿಸ್ತರಣೆ ಮತ್ತು ಮಾರುಕಟ್ಟೆ ವೈವಿಧ್ಯೀಕರಣದಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ರಾಜ್ಯದ ಉದಯೋನ್ಮುಖ ವಾಣಿಜ್ಯ ಕೇಂದ್ರಗಳಲ್ಲಿರುವ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಂದ ವಾಣಿಜ್ಯ ಬ್ಯಾಂಕಿಂಗ್ ಮತ್ತು ಸಾಲ ಸೌಲಭ್ಯಗಳಿಗೆ ಬೇಡಿಕೆ ಹೆಚ್ಚುತ್ತಿರುವುದನ್ನು ಬ್ಯಾಂಕ್ ಗಮನಿಸಿದ್ದು, ಇದು ಉದ್ಯಮಿಗಳಲ್ಲಿ ಹೆಚ್ಚುತ್ತಿರುವ ಆತ್ಮವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಕೋಟಕ್, ತನ್ನ ಮೂಲತತ್ವದಲ್ಲೇ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಮೇಲೆ ಗಮನಹರಿಸುವ ಬ್ಯಾಂಕ್ ಆಗಿದೆ. 2026 ರ ಜೂನ್ 30 ರ ವೇಳೆಗೆ, ಬ್ಯಾಂಕ್ ₹1,25,826 ಕೋಟಿಗಳಷ್ಟು ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಾಲದ ಪ್ರಮಾಣವನ್ನು ಹೊಂದಿದ್ದು, ವಾರ್ಷಿಕವಾಗಿ ಶೇಕಡಾ 20 ರಷ್ಟು ಬೆಳವಣಿಗೆಯೊಂದಿಗೆ ಬ್ಯಾಂಕ್‌ನ ಒಟ್ಟು ಮುಂಗಡಗಳ ಪಾಲಿನಲ್ಲಿ ಶೇಕಡಾ 24 ರಷ್ಟನ್ನು ಹೊಂದಿದೆ.
ಈ ಕುರಿತು ಕೋಟಕ್ ಮಹೀಂದ್ರಾ ಬ್ಯಾಂಕ್‌ ನ ಸಣ್ಣ ಮತ್ತು ಮಧ್ಯಮ ಉದ್ಯಮ ವಿಭಾಗದ ಮುಖ್ಯಸ್ಥರಾದ ಶೇಖರ್ ಭಂಡಾರಿ ಅವರು, ಬೆಳವಣಿಗೆಯ ದಾರಿಗಳು ಇನ್ಮುಂದೆ ಕೇವಲ ಬೆಂಗಳೂರಿಗಷ್ಟೇ ಸೀಮಿತವಲ್ಲ. ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಇತರ ಉದಯೋನ್ಮುಖ ಕೇಂದ್ರಗಳ ಉದ್ಯಮಿಗಳು ಬೆಳವಣಿಗೆಗಾಗಿ ಹೂಡಿಕೆ ಮಾಡುವ ಮೂಲಕ ಹಾಗೂ ಹೊಸ ಮಾರುಕಟ್ಟೆಗಳನ್ನು ಪ್ರವೇಶಿಸುವ ಮೂಲಕ ತಮ್ಮ ಸಾಹಸ ಮನೋಭಾವವನ್ನು ಪ್ರದರ್ಶಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಈ ನಗರಗಳಿಂದ ವಾಣಿಜ್ಯ ಬ್ಯಾಂಕಿಂಗ್ ಮತ್ತು ಸಾಲ ಸೌಲಭ್ಯಗಳಿಗೆ ಹೆಚ್ಚುತ್ತಿರುವ ಬೇಡಿಕೆಯು ಸಣ್ಣ ಮತ್ತು ಮಧ್ಯಮ ಉದ್ಯಮಗಳ ಮಾಲೀಕರಲ್ಲಿ ಹೆಚ್ಚುತ್ತಿರುವ ಧೈರ್ಯವನ್ನು ತೋರಿಸುತ್ತದೆ. ಭಾರತದಾದ್ಯಂತ ಇರುವ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ದೀರ್ಘಕಾಲದ ಬ್ಯಾಂಕಿಂಗ್ ಪಾಲುದಾರರಾಗಿ, ಉದ್ಯಮಿಗಳು ತಮ್ಮ ವ್ಯವಹಾರಗಳನ್ನು ಆತ್ಮವಿಶ್ವಾಸದಿಂದ ಬೆಳೆಸಲು ಬೆಂಬಲಿಸುವುದರ ಮೇಲೆ ನಾವು ಗಮನಹರಿಸಿದ್ದೇವೆ” ಎಂದು ಹೇಳಿದ್ದಾರೆ.

Also read>> ಜು.26 ಶ್ರೀ ಅನ್ನಪೂರ್ಣೇಶ್ವರಿ ಮುಷ್ಟಿ ಅಕ್ಕಿ ಯೋಜನೆ – ‘ಸ್ನೇಹ ಮಿಲನ’ ಕಾರ್ಯಕ್ರಮ

ಕರ್ನಾಟಕದ ಬೆಳೆಯುತ್ತಿರುವ ತಂತ್ರಜ್ಞಾನ, ಉತ್ಪಾದನೆ ಮತ್ತು ಜಾಗತಿಕ ಸಾಮರ್ಥ್ಯ ಕೇಂದ್ರಗಳ (ಜಿಸಿ‍ಸಿ) ಜಾಲವು ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಬೃಹತ್ ಮೌಲ್ಯ ಸರಪಳಿಗಳಲ್ಲಿ ಭಾಗವಹಿಸಲು ನೂತನ ಅವಕಾಶಗಳನ್ನು ಸೃಷ್ಟಿಸುತ್ತಿದೆ. ವ್ಯವಹಾರಗಳು ಬೆಳೆದಂತ, ಉದ್ಯಮಿಗಳು ತಮ್ಮ ವಾಣಿಜ್ಯ ಮತ್ತು ವೈಯಕ್ತಿಕ ಹಣಕಾಸು ಅಗತ್ಯಗಳೆರಡನ್ನೂ ಬೆಂಬಲಿಸಬಲ್ಲ ಬ್ಯಾಂಕಿಂಗ್ ಪಾಲುದಾರರನ್ನು ಹೆಚ್ಚಾಗಿ ಬಯಸುತ್ತಿದ್ದಾರೆ.

ಈ ಕುರಿತು ಭಂಡಾರಿ, “ಇಂದಿನ ಉದ್ಯಮಿಗಳು ಕೇವಲ ಸಾಲ ನೀಡುವ ಸಂಸ್ಥೆಗಿಂತ ಹೆಚ್ಚಿನದನ್ನು ಬಯಸುತ್ತಾರೆ. ಅವರು ತಮ್ಮ ವ್ಯವಹಾರವನ್ನು ಅರ್ಥಮಾಡಿಕೊಳ್ಳುವ ಮತ್ತು ಬೆಳವಣಿಗೆಯ ವಿವಿಧ ಹಂತಗಳಲ್ಲಿ ಅವರಿಗೆ ಬೆಂಬಲ ನೀಡುವ ಬ್ಯಾಂಕಿಂಗ್ ಪಾಲುದಾರರನ್ನು ಬಯಸುತ್ತಾರೆ. ನಮ್ಮ ಪೂರ್ಣಮಟ್ಟದ ಬ್ಯಾಂಕಿಂಗ್ (ಹೌಸ್- ಬ್ಯಾಂಕ್) ವಿಧಾನವು ಈ ನಂಬಿಕೆಯ ಮೇಲೆ ನಿರ್ಮಿತವಾಗಿದೆ. ಒಂದೇ ಬಾಂಧವ್ಯದ ಮೂಲಕ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಮಾಲೀಕರ ವ್ಯವಹಾರ, ವೈಯಕ್ತಿಕ ಬ್ಯಾಂಕಿಂಗ್, ವಹಿವಾಟು ಬ್ಯಾಂಕಿಂಗ್ ಮತ್ತು ಬೆಳವಣಿಗೆಯ ಅಗತ್ಯಗಳನ್ನು ಬೆಂಬಲಿಸಲು ನಾವು ಅವರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತೇವೆ. ಇದು ಅವರಿಗೆ ಅವಕಾಶಗಳನ್ನು ಪಡೆದುಕೊಳ್ಳಲು ಮತ್ತು ಆತ್ಮವಿಶ್ವಾಸದಿಂದ ಬೆಳೆಯಲು ಸಹಾಯ ಮಾಡುತ್ತದೆ” ಎಂದು ತಿಳಿಸಿದ್ದಾರೆ.

ಕೋಟಕ್ ಮಹೀಂದ್ರಾ ಬ್ಯಾಂಕ್, ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ತನ್ನ ಕಾರ್ಯಾಚರಣೆಯೊಂದಿಗೆ ಕರ್ನಾಟಕದಾದ್ಯಂತ ತನ್ನ ಅಸ್ತಿತ್ವವನ್ನು ಗಟ್ಟಿಗಳಿಸುವುದನ್ನು ಮುಂದುವರಿಸಿದೆ. ತನ್ನ ಬಾಂಧವ್ಯ ಆಧಾರಿತ ವಿಧಾನ, ಕ್ಷೇತ್ರ ಪರಿಣತಿ ಮತ್ತು ಡಿಜಿಟಲ್ ಸಾಮರ್ಥ್ಯಗಳ ಮೂಲಕ, ಕರ್ನಾಟಕದ ಉದ್ಯಮಿಗಳಿಗೆ ಹೊಸ ಅವಕಾಶಗಳನ್ನು ಪಡೆದುಕೊಳ್ಳಲು ಮತ್ತು ಆತ್ಮವಿಶ್ವಾಸದಿಂದ ಬೆಳೆಯಲು ನೆರವಾಗಲು ಕೋಟಕ್ ಬದ್ಧವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalpa News Advertising DisclaimerKalahamsa Infotech private limited

Tags: BENGALURUKannada NewsKannada News LiveKannada News OnlineKannada News WebsiteKannada WebsiteKotak Mahindra BankLatest News KannadaNews in KannadaNews Kannadaಬೆಂಗಳೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಜು.26 ಶ್ರೀ ಅನ್ನಪೂರ್ಣೇಶ್ವರಿ ಮುಷ್ಟಿ ಅಕ್ಕಿ ಯೋಜನೆ – ‘ಸ್ನೇಹ ಮಿಲನ’ ಕಾರ್ಯಕ್ರಮ

Next Post

Growth Is No Longer Just a Bengaluru Story: Kotak

kalpa News

kalpa News

Next Post
Kotak | creating fresh opportunities for SMEs

Growth Is No Longer Just a Bengaluru Story: Kotak

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL