ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುವೆಂಪು ವಿಶ್ವವಿದ್ಯಾಲಯದ #KuvempuUniversity 34ನೇ ವಾರ್ಷಿಕ ಘಟಿಕೋತ್ಸವ ಜ.22 ರಂದು ಬೆಳಗ್ಗೆ 10.30ಕ್ಕೆ ಶಂಕರಘಟ್ಟ ವಿಶ್ವ ವಿದ್ಯಾಲಯದ ಆವರಣದಲ್ಲಿರುವ ಬಸವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಘಟಿಕೋತ್ಸವದ ಅಗ್ರಾಸನವನ್ನು ರಾಜ್ಯಪಾಲರು #Governor ಹಾಗೂ ವಿವಿ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೊಟ್ ವಹಿಸಲಿದ್ದು, ಸಚಿವ ಹಾಗೂ ವಿವಿಯ ಸಹ ಕುಲಾಧಿಪತಿ ಡಾ.ಎಂ.ಸಿ. ಸುಧಾಕರ್ ಉಪಸ್ಥಿತರಿದ್ದು, ಮುಖ್ಯ ಅತಿಥಿಯಾಗಿ ಹೈದರಾಬಾದ್ ವಿವಿ ನಿವೃತ್ತ ಕುಲಪತಿ ಪ್ರೊ. ರಾಮ್ ರಾಮಸ್ವಾಮಿ ಘಟಿಕೋತ್ಸವ #Convocation ಭಾಷಣ ಮಾಡಲಿದ್ದಾರೆ ಎಂದರು.
Also Read>> ಜ.22 | ಇರುವಕ್ಕಿಯಲ್ಲಿ ಕೃಷಿ ವಿವಿ 9ನೇ ಘಟಿಕೋತ್ಸವ | ಕಾಗೋಡು ತಿಮ್ಮಪ್ಪಗೆ ಡಾಕ್ಟರೇಟ್ ಪ್ರದಾನ
ಘಟಿಕೋತ್ಸವದಲ್ಲಿ 6872 ಪುರುಷರು ಹಾಗೂ 12013 ಮಹಿಳೆಯರು ಸೇರಿ ಒಟ್ಟು 18885 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. ಘಟಿಕೋತ್ಸವದಲ್ಲಿ 146 ಸ್ವರ್ಣ ಪದಕಗಳಿದ್ದು, ಇವುಗಳಲ್ಲಿ 13 ಪುರುಷರು ಹಾಗೂ 71 ಮಹಿಳೆಯರು ಸೇರಿ ಒಟ್ಟು 84 ವಿದ್ಯಾರ್ಥಿಗಳು ಹಂಚಿಕೊAಡಿದ್ದಾರೆ. ಪಿಹೆಚ್ಡಿ ಪದವಿಯನ್ನು 115 ಪುರುಷರು ಹಾಗೂ 89 ಮಹಿಳೆಯರು ಪಡೆಯಲಿದ್ದಾರೆ.
ಕಲಾ ನಿಕಾಯದ ಎಂ.ಎ ವಿದ್ಯಾರ್ಥಿ ವಸಂತ್ ಕುಮಾರ್ ಒಟ್ಟು 10 ಹಾಗೂ ಒಂದು ನಗದು ಬಹುಮಾನ ಪಡೆಯುವ ಮೂಲಕ ಘಟಿಕೋತ್ಸವದಲ್ಲೇ ಅತೀ ಹೆಚ್ಚು ಪದಕ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಆನಂತರದ ಸ್ಥಾನದಲ್ಲಿ ಎಂಎಸ್ಸಿ( ಪರಿಸರ ವಿಜ್ಞಾನ) ಯಲ್ಲಿ ಸಾನಿಯಾ ಪಿರ್ದೋಸ್ ಇದ್ದು,ಅವರಿಗೆ 6 ಪದಕ ಪಡೆದಿದ್ದಾರೆ. ಮೂರನೇ ಸ್ಥಾನದಲ್ಲಿ ಎಂಎ ಸಮಾಜಶಾಸ್ರ್ತ ವಿಭಾಗದ ರಕ್ಷೀತಾ ಎ.ಎಸ್., ಎಂಬಿಎ ವ್ಯವಹಾರ ನಿರ್ವಹಣಾ ಅಧ್ಯಯನ ವಿಭಾಗದ ರಕ್ಷೀತ್ ಎಸ್., ಎಂಎಸ್ಸಿ ಜೈವಿಕ ತಂತ್ರಜ್ಞಾನ ವಿಭಾಗದ ಶುಭಶ್ರೀ ಎಸ್., ಹಾಗೂ ಆಚಾಋಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಬಿಕಾಂ ವಿದ್ಯಾರ್ಥಿನಿ ಹರ್ಷಿತಾ ಜಿ., ಅವರು ತಲಾ 5 ಪದಕ ಪಡೆದಿದ್ದಾರೆ ಎಂದರು.
ಘಟಿಕೋತ್ಸವದ ಭಾಗವಾಗಿ ವಿಶ್ವ ವಿಶ್ವವಿದ್ಯಾಲಯವು ಹಿರಿಯ ಮುತ್ಸದ್ದಿ ಹಾಗೂ ವಿಧಾನ ಸಭೆಯ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ಮುಂಬೈನ ವಿಜ್ಞಾನಿ ಸಿ.ಎಸ್. ಉನ್ನಿಕೃಷ್ಣನ್ ಮತ್ತು ಭದ್ರಾವತಿಯ ಯೋಗ ಗುರು ನಾಗರಾಜ್ ಅವರಿಗೆ ಗೌರವ ಡಾಕ್ಟರೇಟ್ #HonoraryDoctorate ಪ್ರಕಟಿಸಿದ್ದು, ಅವರಿಗೆ ವಿಶ್ವ ವಿದ್ಯಾಲಯದ ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರ್ಚೆಂದ್ ಗೆಹ್ಲೊಟ್ ಅವರು ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಲಿದ್ದಾರೆಂದರು.ಮೌಲ್ಯಮಾಪನ ವಿಭಾಗದ ಕುಲಸಚಿವ ಪ್ರೊ. ಗೋಪಿನಾಥ್ ಎಸ್.ಎಂ. ಮಾತನಾಡಿ, ಕಲಾ ನಿಕಾಯದಲ್ಲಿ 39 ಪುರುಷರು, 25 ಮಹಿಳೆಯರು ಸೇರಿ ಒಟ್ಟು 64 ವಿದ್ಯಾರ್ಥಿಗಳು , ವಾಣಿಜ್ಯ ವಿಭಾಗದಲ್ಲಿ 10 ಪುರುಷರು, 8 ಮಹಿಳೆಯರು ಸೇರಿ 18 ವಿದ್ಯಾರ್ಥಿಗಳು, ಶಿಕ್ಞಣ ನಿಕಾಯದಲ್ಲಿ 14 ಪುರುಷರು, 4 ಮಹಿಳೆಯರು ಸೇರಿ ಒಟ್ಟು 18 ವಿದ್ಯಾರ್ಥಿಗಳು ಹಾಗೂ ವಿಜ್ಞಾನ ನಿಕಾಯದಲ್ಲಿ 52 ಪುರುಷರು, 52 ಮಹಿಳೆಯರು ಸೇರಿ ಒಟ್ಟು 104 ವಿದ್ಯಾರ್ಥಿಗಳು ಘಟಿಕೋತ್ಸವದಲ್ಲಿ ಪಿಎಚ್ ಡಿ ಪಡೆಯಲು ಅರ್ಹರಾಗಿದ್ದಾರೆಂದು ತಿಳಿಸಿದರು.
ಸಮಾರಂಭಕ್ಕೆ ವಿವಿ ಸಿಂಡಿಕೇಟ್ ಸದಸ್ಯರು ಸೇರಿದಂತೆ ಹಲವು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆಂದು ಅವರು ತಿಳಿಸಿದರು.
ವಿವಿ ಹಣಕಾಸು ವಿಭಾಗದ ಕುಲಸಚಿವ ಮಂಜುನಾಥ್, ಪತ್ರಿಕೋದ್ಯಮ ವಿಭಾಗದ ಸತ್ಯಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post