No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿ: ಕೋವಿಡ್19 ನಿಯಮ ಪಾಲನೆಯೊಂದಿಗೆ ಭರದಿಂದ ನಡೆದ ಪಿಜಿ ಪ್ರವೇಶಾತಿ ಕೌನ್ಸಿಲಿಂಗ್

kalpa News by kalpa News
December 18, 2020
in ಶಿವಮೊಗ್ಗ
0
ಕುವೆಂಪು ವಿವಿ: ಕೋವಿಡ್19 ನಿಯಮ ಪಾಲನೆಯೊಂದಿಗೆ ಭರದಿಂದ ನಡೆದ ಪಿಜಿ ಪ್ರವೇಶಾತಿ ಕೌನ್ಸಿಲಿಂಗ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ಸ್ನಾತಕೋತ್ತರ ಪದವಿ ಪ್ರವೇಶ ಕೌನ್ಸಿಲಿಂಗ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ವಿಭಾಗಗಳಿಗೆ ವಿದ್ಯಾರ್ಥಿಗಳು ಉತ್ಸಾಹದೊಂದಿಗೆ ಪ್ರವೇಶ ಪಡೆದುಕೊಂಡರು.

ವಿಶ್ವವಿದ್ಯಾಲಯದ ಮುಖ್ಯ ಆವರಣ, ಕಡೂರು ಪಿ.ಜಿ.ಕೇಂದ್ರ, ಚಿಕ್ಕಮಗಳೂರು ಪಿಜಿ ಕೇಂದ್ರ ಮತ್ತು 20ಕ್ಕೂ ಹೆಚ್ಚು ಸ್ನಾತಕೋತ್ತರ ಕಾಲೇಜುಗಳ ಎಲ್ಲಾ ವಿಭಾಗಗಳಿಗೆ ಡಿಸೆಂಬರ್ 18, 19 ಮತ್ತು 21 ರಂದು ಪ್ರವೇಶಾತಿ ಕೌನ್ಸಿಲಿಂಗ್ ಹಮ್ಮಿಕೊಳ್ಳಲಾಗಿದೆ.ಮೊದಲ ದಿನವಾದ ಇಂದು ಮೆರಿಟ್ ಸೀಟುಗಳಿಗೆ ಪ್ರವೇಶಾತಿ ಪ್ರಕ್ರಿಯೆ ಯಾವುದೇ ತೊಡಕುಗಳಿಲ್ಲದೆ ನಡೆಯಿತು. 19 ಹಾಗೂ 21 ರಂದು ಪೇಮೆಂಟ್ ಮತ್ತು ಇತರೆ ಕೋಟಾಗಳ ಸೀಟುಗಳಿಗೆ ಪ್ರವೇಶಾತಿ ನಡೆಯಲಿದೆ. ವಿಶ್ವವಿದ್ಯಾಲಯದ ಶೈಕ್ಷಣಿಕ ವಿಭಾಗದ ಪ್ರಕಾರ ಶುಕ್ರವಾರ ಸಂಜೆ 4 ಗಂಟೆಯ ಹೊತ್ತಿಗೆ ಎಲ್ಲ ಸ್ನಾತಕೋತ್ತರ ವಿಭಾಗಗಳ ಶೇ. 65ರಷ್ಟು ಸೀಟುಗಳು ಭರ್ತಿಯಾಗಿದ್ದವು ಹಾಗೂ ಕೋವಿಡ್19 ಕಾರಣದಿಂದಾಗಿ ಇನ್ನುಳಿದ ಆಕಾಂಕ್ಷಿಗಳು ಶನಿವಾರ ಮತ್ತು ಸೋಮವಾರ ವಿವಿಗೆ ಆಗಮಿಸಿ ಪ್ರವೇಶ ಪಡೆಯಲಿದ್ದಾರೆ.

ಆನ್‌ಲೈನ್ ಮತ್ತು ಆಫ್‌ಲೈನ್
ಪ್ರವೇಶಾತಿ ಪಡೆದ ಕೋರ್ಸುಗಳ ದಾಖಲಾತಿ ನಿರ್ವಹಣೆ ಹಾಗೂ ಶುಲ್ಕವನ್ನು ಭರಿಸಲು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮತ್ತು ಆಫ್‌ಲೈನ್‌ನ ಎರಡೂ ಮಾದರಿಗಳಲ್ಲಿ ಅವಕಾಶಗಳನ್ನು ನೀಡಲಾಗಿತ್ತು. ಆಫ್‌ಲೈನ್‌ನಲ್ಲಿ ಶುಲ್ಕ ಭರಿಸುವವರ ಸಂಖ್ಯೆ ಹೆಚ್ಚಾದಂತೆ ಮೂರು ಕೌಂಟರ್‌ಗಳನ್ನು ಬ್ಯಾಂಕಿನಲ್ಲಿ ತೆರೆಯಲಾಗಿತ್ತು. ಕೋವಿಡ್-19 ಮಾರ್ಗದರ್ಶಿ ಸೂತ್ರಗಳೊಂದಿಗೆ ವಿದ್ಯಾರ್ಥಿಗಳು ಮತ್ತು ಪಾಲಕರು ಸುರಕ್ಷಿತವಾಗಿ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ವಿಶ್ವವಿದ್ಯಾಲಯವು ಪ್ರವೇಶ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದು, ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿತ್ತು. ದೇಹದ ಉಷ್ಣಾಂಶ ಪರೀಕ್ಷಿಸಿ ವಿವಿ ಕ್ಯಾಂಪಸ್ ಒಳಬಿಡುವ ಜೊತೆಗೆ ವಿಭಾಗಗಳಲ್ಲಿ ಕೂರಲು 6 ಅಡಿ ಅಂತರ ನೀಡಿ ಕುರ್ಚಿಗಳನ್ನು ಹಾಕಲಾಗಿತ್ತು. ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಕ್ಕೂ ಹೆಚ್ಚು ಸೀಟು ಆಕಾಂಕ್ಷಿಗಳು ಮತ್ತುಅವರ ಪೋಷಕರು ಉತ್ಸುಕತೆಯಿಂದ ಪ್ರವೇಶ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.

ವಿವಿಯ ವಿಭಾಗಗಳನ್ನು ಕಲೆ ಮತ್ತು ಸಮಾಜವಿಜ್ಞಾನ ವಿಷಯಗಳು, ವಾಣಿಜ್ಯ ಮತ್ತು ನಿರ್ವಹಣಾ ವಿಷಯಗಳು, ಅನ್ವಯಿಕ ವಿಜ್ಞಾನಗಳು ಮತ್ತು ಮೂಲ ವಿಜ್ಞಾನಗಳೆಂದು ವಿಂಗಡಿಸಿ ಅನುಕ್ರಮವಾಗಿ ಸಮಾಜ ವಿಜ್ಞಾನ, ವಾಣಿಜ್ಯಶಾಸ್ತ್ರ, ಗಣಿತ ವಿಜ್ಞಾನ ಮತ್ತುಜೀವ ವಿಜ್ಞಾನ ವಿಷಯಗಳ ಸಮುಚ್ಚಯಗಳಲ್ಲಿ ಪ್ರವೇಶಾತಿ ಹಮ್ಮಿಕೊಳ್ಳಲಾಗಿತ್ತು. ಮುಂದಿನ ಎರಡು ದಿನವೂ ಇದೇ ಕಟ್ಟಡಗಳಲ್ಲಿ ಕೌನ್ಸಿಲಿಂಗ್ ನಡೆಯಲಿದೆ.

ವಿಶ್ವವಿದ್ಯಾಲಯಕ್ಕೆ ಆಗಮಿಸುವ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿವಿಯ ದ್ವಾರದ ಬಳಿಯೇ ವಿಭಾಗವಾರು ಕೌನ್ಸೆಲಿಂಗ್ ಕಟ್ಟಡದ ವಿವರ, ಮಾರ್ಗತೋರುವ ಸೂಚನಾ ಫಲಕಗಳು, ಅಗತ್ಯ ದಾಖಲೆಗಳ ವಿವರ ಸೇರಿದಂತೆ ಸ್ವಾಗತ ಕೋರುವ ಫಲಕಗಳನ್ನು ಹಾಕಲಾಗಿತ್ತು. ಜೊತೆಗೆ ಪ್ರತಿಕಟ್ಟಡದ ಬಳಿಯೂ ಪೂರಕ ಮಾಹಿತಿ ನೀಡಲಾಗಿತ್ತು. ಸೀಟುಗಳ ವಿವಿರ, ವಿದ್ಯಾರ್ಥಿ ಮಾಹಿತಿ, ಕಾಲೇಜು ಆಯ್ಕೆ ಕುರಿತ ಮಾಹಿತಿಗಳನ್ನು ಯಾವುದೇ ಗೊಂದಲಗಳಿಗೆ ದಾರಿಯಾಗದಂತೆ ಡಿಜಿಟಲ್ ಬೋರ್ಡ್‌ಗಳಲ್ಲಿ ಪ್ರದರ್ಶಿಸಲಾಗುತ್ತಿತ್ತು ಹಾಗೂ ಮೈಕ್ ಮೂಲಕ ಆಯ್ಕೆಗೊಂಡವರ ಹೆಸರುಗಳನ್ನು ಘೋಷಿಸಲಾಗುತ್ತಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Admissions CounselingKannada News WebsiteKuvempu UniversityLatest News KannadaLocal NewsMalnad NewsMaster's degreeShankaraghattaShimogaShivamoggaShivamogga Newsಕುವೆಂಪು ವಿವಿಕುವೆಂಪು ವಿಶ್ವವಿದ್ಯಾಲಯಶಂಕರಘಟ್ಟಸ್ನಾತಕೋತ್ತರ ಪದವಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಿಂದ ಮತಯಾಚನೆ

Next Post

ಸರ್ಕಾರಿ ಕಾರ್ಯಕ್ರಮಗಳಲ್ಲಿ ಲೋಪವಾಗದಂತೆ ಶಿಷ್ಠಾಚಾರ ಪಾಲಿಸಿ: ಅಧಿಕಾರಿಗಳಿಗೆ ಎಡಿಸಿ ಅನುರಾಧ ಸೂಚನೆ

kalpa News

kalpa News

Next Post
ಸರ್ಕಾರಿ ಕಾರ್ಯಕ್ರಮಗಳಲ್ಲಿ ಲೋಪವಾಗದಂತೆ ಶಿಷ್ಠಾಚಾರ ಪಾಲಿಸಿ: ಅಧಿಕಾರಿಗಳಿಗೆ ಎಡಿಸಿ ಅನುರಾಧ ಸೂಚನೆ

ಸರ್ಕಾರಿ ಕಾರ್ಯಕ್ರಮಗಳಲ್ಲಿ ಲೋಪವಾಗದಂತೆ ಶಿಷ್ಠಾಚಾರ ಪಾಲಿಸಿ: ಅಧಿಕಾರಿಗಳಿಗೆ ಎಡಿಸಿ ಅನುರಾಧ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL