No Result
View All Result
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ
English Articles

SWR Opens Makajipalli–Dharmavaram Double Line Project

by ಕಲ್ಪ ನ್ಯೂಸ್
February 23, 2026
0

Kalpa Media House  |  Hubli  | South Western Railway has successfully commissioned the 30.04 km doubling section between Makajipalli and...

Read moreDetails
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
Bharat gen unveils ‘Sutra’ at India AI Impact Summit, an initiative to enhance News Accessibility

Bharat gen unveils ‘Sutra’ at India AI Impact Summit, an initiative to enhance News Accessibility

February 20, 2026
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
  • Advertise With Us
  • Grievances
  • About Us
  • Contact Us
Tuesday, February 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೂತನ ಶಿಕ್ಷಣ ನೀತಿಯಿಂದ ಉದ್ಯೋಗಾವಕಾಶ ಹೆಚ್ಚಲಿದೆ: ಪ್ರೊ.ವೈ.ಎಸ್. ಸಿದ್ದೇಗೌಡ

ಕುವೆಂಪು ವಿವಿ: ಸಮಾಜಕಾರ್ಯ ವಿಭಾಗದ ವತಿಯಿಂದ ನೂತನ ಶಿಕ್ಷಣ ನೀತಿ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2022
in ಶಿವಮೊಗ್ಗ
0
ನೂತನ ಶಿಕ್ಷಣ ನೀತಿಯಿಂದ ಉದ್ಯೋಗಾವಕಾಶ ಹೆಚ್ಚಲಿದೆ: ಪ್ರೊ.ವೈ.ಎಸ್. ಸಿದ್ದೇಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಸರ್ಕಾರ ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿಯು ವಿದ್ಯಾರ್ಥಿ ಕೇಂದ್ರಿತವಾಗಿದ್ದು, ಹೊಸ ಅವಕಾಶಗಳ ಬಾಗಿಲು ತೆರೆಯಲಿದೆ. ಪದವಿ ಹಂತದಲ್ಲಿಯೇ ಅಂತರ್‍ಶಿಸ್ತೀಯ ಅಧ್ಯಯನ ಕೈಗೊಳ್ಳಲು ನೆರವಾಗುವುದರ ಜೊತೆಗೆ ಉದ್ಯೋಗ ಕೇಂದ್ರಿತ ಕೌಶಲ್ಯಗಳನ್ನು ಕಲಿಯಲು ವಿದ್ಯಾರ್ಥಿಗಳಿಗೆ #Students ಅನುವು ಮಾಡಿಕೊಡಲಿದೆ. ಇದರಿಂದಾಗಿ ಭವಿಷ್ಯದಲ್ಲಿ ಉದ್ಯೋಗಾವಕಾಶಗಳು ಹೆಚ್ಚಳವಾಗಲಿದೆ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೈ. ಎಸ್. ಸಿದ್ದೇಗೌಡ ಅಭಿಪ್ರಾಯಪಟ್ಟರು.

Also Read: ಅತಿಯಾದ ಕಲ್ಲು ಸಾಗಾಣಿಕೆ, ಸ್ಫೋಟದಿಂದ ಕೃಷಿ ಚಟುವಟಿಕೆಗೆ ಹಿನ್ನೆಡೆ: ಬಸ್ತಿಕೊಪ್ಪ ಗ್ರಾಮಸ್ಥರ ಅಳಲು

ಕುವೆಂಪು ವಿಶ್ವವಿದ್ಯಾಲಯದ #KuvempuUniversity ಸಮಾಜ ಕಾರ್ಯ ವಿಭಾಗವು ಗುರುವಾರ ಬಸವ ಭವನದಲ್ಲಿ, ‘ನೂತನ ಶಿಕ್ಷಣ ನೀತಿ ಮತ್ತು ಸಮಾಜಕಾರ್ಯ’ ಕುರಿತು ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೂತನ ಶಿಕ್ಷಣ ನೀತಿಯ #NewEducationPolicy ಅನುಷ್ಠಾನದ ಆರಂಭಿಕ ಹಂತದಲ್ಲಿರುವುದರಿಂದ ಸಾಂಪ್ರದಾಯಿಕವಾಗಿ ಬೋಧಿಸಲಾಗುತ್ತಿದ್ದ ಪಠ್ಯಕ್ರಮವನ್ನು ಹೊಸ ಮಾದರಿಗೆ ಅಳವಡಿಸಬೇಕಾದ ಅನಿವಾರ್ಯತೆ ಇದೆ. ಇದೇ ಕಾರಣದಿಂದ ಸರ್ಕಾರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನೆರವಾಗುವ ಉದ್ದೇಶದಿಂದ ಮಾದರಿ ಪಠ್ಯಕ್ರಮ ರಚನೆಗೆ ಸಮಿತಿಗಳನ್ನು ರಚಿಸಿತ್ತು.

Also Read: 15 ದಿನದಲ್ಲಿ ಸರ್ಕಾರಿ ಬಂಗಲೆ ಖಾಲಿ ಮಾಡಿ: ಶರದ್ ಯಾದವ್’ಗೆ ಕೋರ್ಟ್ ವಾರ್ನಿಂಗ್

ಸಮಾಜ ವಿಜ್ಞಾನಗಳ ಪಠ್ಯಕ್ರಮ ರಚನಾ ಸಮಿತಿಯ ಅಧ್ಯಕ್ಷರಾಗಿ ಸರ್ಕಾರ ತಮ್ಮನ್ನು ನೇಮಿಸಿದಾಗ, ವಿಶ್ವವಿದ್ಯಾಲಯಗಳ ಅಧ್ಯಯನ ಮಂಡಳಿಗಳಿಗೆ ನೆರವು ಒದಗಿಸುವ ಉದ್ದೇಶದಿಂದ ಮಾದರಿ ಪಠ್ಯಕ್ರಮವನ್ನು ರಚಿಸಿ ಕಳುಹಿಸಿಕೊಡಲಾಯಿತು. ಆದರೆ ನೂತನ ಶಿಕ್ಷಣ ನೀತಿಯ ಪ್ರಕಾರ ಆಯಾ ವಿಶ್ವವಿದ್ಯಾಲಯಗಳು #University ಈ ಮಾದರಿ ಸಂರಚನೆ ಮತ್ತು ವಿಷಯಗಳ ಶೀರ್ಷಿಕೆಗಳನ್ನು ಉಳಿಸಿಕೊಂಡು ಪಠ್ಯಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶವಿದೆ ಎಂದರು.
ಬೆಂಗಳೂರು ನಗರ ವಿಶ್ವವಿದ್ಯಾಲಯದ #BengaluruUniversity ಪರೀಕ್ಷಾಂಗ ಕುಲಸಚಿವ ಪ್ರೊ. ಬಿ. ರಮೇಶ್ ಮಾತನಾಡಿ, ನೂತನ ಶಿಕ್ಷಣ ನೀತಿ ಇತರ ಎಲ್ಲ ವಿಷಯಗಳಂತೆ ಸಮಾಜ ಕಾರ್ಯ ವಿಷಯಕ್ಕೂ ಹೊಸ ಸಾಧ್ಯತೆಗಳನ್ನು ಸೃಷ್ಟಿಸಿದೆ. ಸಮಾಜದ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸುವ ಕ್ರಿಯಾತ್ಮಕ ಕಾರ್ಯದಲ್ಲಿ ಸಮಾಜ ಕಾರ್ಯ ಪದವೀಧರರು ವೃತ್ತಿಪರ ಸೇವೆ ಒದಗಿಸುತ್ತಾ ಬಂದಿದ್ದಾರೆ. ಹೊಸದಾಗಿ ಅಳವಡಿಸಿಕೊಂಡಿರುವ ಅಂತರ್‍ಶಿಸ್ತೀಯ ಅಧ್ಯಯನವು ಸಮಾಜ ಕಾರ್ಯ ಪದವೀಧರರ ಲೋಕದೃಷ್ಟಿಯನ್ನು ಇನ್ನಷ್ಟು ವಿಸ್ತರಿಸಲಿದೆ ಎಂದರು.

ನಾಲ್ಕು ದತ್ತಿನಿಧಿ ಸ್ವರ್ಣಪದಕ ನೀಡಿರುವ ಸೋಮಶೇಖರ್ ಗೆ ಸನ್ಮಾನ

ಕುವೆಂಪು ವಿಶ್ವವಿದ್ಯಾಲಯದ ನಾಲ್ಕು ನಿಕಾಯಗಳಲ್ಲಿ ತಲಾ ಒಂದೊಂದು ದತ್ತಿನಿಧಿ ಸ್ವರ್ಣಪದಕವನ್ನು ಸ್ಥಾಪಿಸಿರುವ ಅಭಿವೃದ್ಧಿ ವಿಭಾಗದ ಹಿರಿಯ ಸಹಾಯಕ ಪಿ. ಸಿ. ಸೋಮಶೇಖರ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸಮಾಜಕಾರ್ಯ ವಿಭಾಗ, ಎಂಎಡ್, ಔದ್ಯೋಗಿಕ ರಸಾಯನ ಶಾಸ್ತ್ರ ಮತ್ತು ವಾಣಿಜ್ಯ ಶಾಸ್ತ್ರ ವಿಭಾಗಗಳ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ‘ಸೋಮಶೇಖರ್ ಪಿ.ಸಿ. S/O ಪರಶುರಾಮಪ್ಪ ಬಿ. ಎಚ್’ ಹೆಸರಿನಲ್ಲಿ ತಲಾ ಒಂದು ಲಕ್ಷ ಠೇವಣ ನೀಡಿ, ದತ್ತಿನಿಧಿ ಸ್ವರ್ಣ ಪದಕಗಳನ್ನು ಸ್ಥಾಪಿಸಿದ್ದಾರೆ. ಬರುವ ಜುಲೈ ತಿಂಗಳಲ್ಲಿ ನಿವೃತ್ತರಾಗಲಿರುವ ಸೋಮಶೇಖರ್, ಕರ್ತವ್ಯಕ್ಕೆ ವರದಿ ಮಾಡಿಕೊಂಡ ಮೊದಲ ದಿನದಿಂದ ಇದುವರೆಗೆ ಒಂದು ದಿನದ ರಜೆಯ ಸೌಲಭ್ಯವನ್ನೂ ಬಳಸಿಕೊಂಡಿಲ್ಲ ಎಂಬುದು ವಿಶೇಷ. ಇವರ ಸೇವೆಯನ್ನು ಪರಿಗಣಿಸಿ ವಿಶ್ವವಿದ್ಯಾಲಯ ಈ ಹಿಂದೆ ‘ಸಾಧನಾ ಪುರಸ್ಕಾರ’ ನೀಡಿ ಗೌರವಿಸಿದೆ.

ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿ, ಸಮಾಜದ ಎಲ್ಲ ರಂಗಗಳಲ್ಲಿ ಮೌಲ್ಯಗಳ ಅಧಃಪತನವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಹೊಸ ಶಿಕ್ಷಣ ನೀತಿಯ ಸಾಧ್ಯತೆಗಳನ್ನು ಅಳವಡಿಸಿಕೊಂಡು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಹೀಗೆ ಎಲ್ಲ ವರ್ಗಗಳನ್ನು ಮೇಲೆತ್ತುವ ಗುರುತರ ಜವಾಬ್ದಾರಿಯನ್ನು ಸಮಾಜ ಕಾರ್ಯದ ವೃತ್ತಿಪರರು ನಿರ್ವಹಿಸಬೇಕಿದೆ. ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ತಳಹಂತದಲ್ಲಿ ಕಾರ್ಯನಿರ್ವಹಿಸುವ ಸಾಮಾಜಿಕ ಕಾರ್ಯಕರ್ತರು ರಾಷ್ಟ್ರದ ಅಭಿವೃದ್ಧಿಗೆ ಇಂಬುಕೊಡುವ ತೆರೆಮರೆಯ ನಾಯಕರು ಎಂದು ಶ್ಲಾಘಿಸಿದರು.ಸಮಾಜಕಾರ್ಯ ವಿಭಾಗದ ಅಧ್ಯಕ್ಷ ಪ್ರೊ. ಎ. ರಾಮೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಸಂಗೀತಾ ಮಾನೆ, ಪ್ರೊ. ಪರಶುರಾಮ ಕೆ. ಜಿ., ಪ್ರೊ. ಲೋಕೇಶ ವಿಚಾರ ಮಂಡಿಸಿದರು. ಪ್ರೊ. ಗುರುಲಿಂಗಯ್ಯ, ಪ್ರೊ. ಈ. ಚಂದ್ರಶೇಖರ್, ಡಾ. ಸಂಧ್ಯಾ ಕಾವೇರಿ, ಪ್ರೊ. ಅಂಜನಪ್ಪ, ಡಾ. ದಿಲೀಪ್ ಕುಮಾರ್, ಡಾ. ಸರವಣ, ಡಾ. ರವಿಶಂಕರ್, ಡಾ. ಮಹೇಶ್, ಶ್ರೀಧರ್, ಸುನಿತಾ, ನೇತ್ರಾವತಿ, ವಿವಿಧ ವಿಶ್ವವಿದ್ಯಾಲಯಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKuvempu UniversityLatest News KannadaLocal NewsMalnad NewsNew Education PolicyShimogaShivamoggaShivamogga NewsTumkur UniversityUniversityಕುವೆಂಪು ವಿಶ್ವವಿದ್ಯಾಲಯತುಮಕೂರು ವಿಶ್ವವಿದ್ಯಾಲಯನೂತನ ಶಿಕ್ಷಣ ನೀತಿಮಲೆನಾಡು ಸುದ್ಧಿವಿಶ್ವವಿದ್ಯಾಲಯಶಿವಮೊಗ್ಗ ನ್ಯೂಸ್ಸಮಾಜಕಾರ್ಯ
Share198Tweet123Send
Previous Post

ಅತಿಯಾದ ಕಲ್ಲು ಸಾಗಾಣಿಕೆ, ಸ್ಫೋಟದಿಂದ ಕೃಷಿ ಚಟುವಟಿಕೆಗೆ ಹಿನ್ನೆಡೆ: ಬಸ್ತಿಕೊಪ್ಪ ಗ್ರಾಮಸ್ಥರ ಅಳಲು

Next Post

ಮಾರ್ಚ್ 18ರಂದು ಶ್ರೀ ಬಾಲಸುಬ್ರಮಣ್ಯಸ್ವಾಮಿಯ ರಥೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾರ್ಚ್ 18ರಂದು ಶ್ರೀ ಬಾಲಸುಬ್ರಮಣ್ಯಸ್ವಾಮಿಯ ರಥೋತ್ಸವ

ಮಾರ್ಚ್ 18ರಂದು ಶ್ರೀ ಬಾಲಸುಬ್ರಮಣ್ಯಸ್ವಾಮಿಯ ರಥೋತ್ಸವ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸಿನೆಮಾ ಕಥೆಗಾರರಿಗೆ ರಾಷ್ಟ್ರಮಟ್ಟದ ಅವಕಾಶ | ಜೀ ಕಿರುಚಿತ್ರ ಸ್ಪರ್ಧೆ | ಪ್ರತಿಭೆ ಪ್ರದರ್ಶಿಸಲು ಇಲ್ಲಿದೆ ಸುವರ್ಣಾವಕಾಶ

ಸಿನೆಮಾ ಕಥೆಗಾರರಿಗೆ ರಾಷ್ಟ್ರಮಟ್ಟದ ಅವಕಾಶ | ಜೀ ಕಿರುಚಿತ್ರ ಸ್ಪರ್ಧೆ | ಪ್ರತಿಭೆ ಪ್ರದರ್ಶಿಸಲು ಇಲ್ಲಿದೆ ಸುವರ್ಣಾವಕಾಶ

February 23, 2026
ಮಾರಿಕಾಂಬೆ ಜಾತ್ರೆ | ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು

ಮಾರಿಕಾಂಬೆ ಜಾತ್ರೆ | ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು

February 23, 2026
Mysore – Shivamogga Express Big Update on this Date | Must Read

ಯಶವಂತಪುರ–ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ

February 23, 2026
ಫೆ.25ರಂದು ಶ್ರೀ ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣಮ್, ಗೋದೀಪ ಮಹೋತ್ಸವ

ಫೆ.25ರಂದು ಶ್ರೀ ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣಮ್, ಗೋದೀಪ ಮಹೋತ್ಸವ

February 23, 2026
ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ

ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ

February 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL