Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಲಾಲ್ ಬಹದ್ದೂರ್ ಶಾಸ್ತ್ರಿ: ಒಂದು ನೆನಪು

January 12, 2021
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಐವತ್ತನಾಲ್ಕು ವರ್ಷಗಳ ಹಿಂದೆ ಇದೇ ದಿನ ಅಂದರೆ ಜನವರಿ 11, 1966 ರಂದು ವಿಧಿವಶರಾದರು. ರಷ್ಯಾ ಪ್ರವಾಸದಲ್ಲಿದ್ದಾಗಲೇ ಅವರು ಮೃತರಾದ ಸುದ್ದಿ ಭಾರತಕ್ಕೆ ಆಘಾತ ತಂದಿತ್ತು. ಅಂದು ದೆಹಲಿಯ ಪಿಐಬಿಯಲ್ಲಿ ಕರ್ತವ್ಯವಲ್ಲಿದ್ದ ಹಿರಿಯ ಪತ್ರಕರ್ತ ಎಸ್.ಕೆ. ಶೇಷ ಚಂದ್ರಿಕಾ ಆ ದಿನವನ್ನು ಇಲ್ಲಿ ನೆನಪಿಸಿಕೊಂಡಿದ್ದಾರೆ.

ಭಾರತದ ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿಯವರು ತಾಷ್ಕೆಂಟ್ ನಲ್ಲಿ ನಿಧನರಾದ ದಿನದ ನೆನಪು ನನ್ನ ಮನಸಿನಲ್ಲಿ ಚಿರಸ್ಮರಣೀಯವಾಗಿ ಉಳಿದಿದೆ. ಅಂದು ಜನವರಿ 11, 1966. ನಾನು ನವದೆಹಲಿಯ ಆಕಾಶವಾಣಿ ಭವನದಲ್ಲಿದ್ದ ಪ್ರೆಸ್ ಇನ್ ಫರ್ಮೇಷನ್ ಬ್ಯುರೋ – ಪಿಐಬಿ ಕಚೇರಿಯಲ್ಲಿ- ಅಸಿಸ್ಟೆಂಟ್ ಜರ್ನಲಿಸ್ಟ್. ಇದು ಭಾರತ ಸರ್ಕಾರದ ವಾರ್ತಾ ಸೇವೆಯ ಮುಖ್ಯ ಕೇಂದ್ರ ಹಾಗೂ ಕೇಂದ್ರ ಸರಕಾರದ ಮುಖವಾಣಿ.

ಪಿಐಬಿ ಒಂದು ಅಂಗವಾದ ಪ್ರೆಸ್ ಫೆಸಿಲಿಟೀಸ್ ನಲ್ಲಿ ನಾನು ಸೇವಾ ನಿಯೋಜಿತನಾಗಿದ್ದೆ. ರಾಷ್ಟ್ರ ರಾಜಧಾನಿಯಲ್ಲಿರುವ ರಾಷ್ಟ್ರೀಯ ಪತ್ರಿಕೆಗಳು ಮತ್ತು ಪಿಟಿಐ, ಯುಎನ್ ಐ ಮತ್ತಿತರ ನ್ಯೂಸ್ ಏಜೆನ್ಸಿಗಳಿಗೆ ವಾರ್ತೆ- ಮಾಹಿತಿ ಒದಗಿಸುವುದು ಪಿಐಬಿಯ ಮುಖ್ಯ ಕೆಲಸ. ಆಗ ಟೆಲಿವಿಷನ್ ಇನ್ನೂ ಭಾರತಕ್ಕೆ ಕಾಲಿಟ್ಟಿರಲಿಲ್ಲ. ಫಿಲ್ಮ್ ಡಿವಿಜನ್ ವಾರಾಂತ್ಯಕ್ಕೆ ಬಿಡುಗಡೆ ಮಾಡುತ್ತಿದ್ದ ಇಂಡಿಯನ್ ನ್ಯೂಸ್ ರೀಲ್ ಗಳು ಸಿನೆಮಾ ಮಂದಿರಗಳ ಮೂಲಕ ‘ಲೈವ್’ ದೃಶ್ಯ ತೋರಿಸುತ್ತಿತ್ತು. ಆಕಾಶವಾಣಿಯೊಂದೇ ದೇಶದ ಪ್ರಮುಖ ಸುದ್ದಿ ಬಿಂದು.

ಈ ಹಿನ್ನೆಲೆಯಲ್ಲಿ ಜನವರಿ 11ರಂದು ರಾತ್ರಿ ಹತ್ತು ಗಂಟೆವರೆಗೆ ಕೆಲಸ ಮುಗಿಸಿ ಕಾರಿನಲ್ಲಿ ನನ್ನ ರೂಮಿಗೆ ಡ್ರಾಪ್ ತೆಗೆದುಕೊಳ್ಳಲು ಸಿದ್ಧನಾಗುತ್ತಿದ್ದೆ. ವಾಹನ ಬರುವುದು ತಡವಾಗಿತ್ತು. ಸುಂದರ್ ರಾಜನ್ ಅವರು ನಮ್ಮ ಹಿರಿಯ ಸಹೋದ್ಯೋಗಿ. ಇನ್ನೇನು ಬೀಗ ಹಾಕಿ ಹೊರಡಲು ಸನ್ನದ್ಧರಾದಾಗ ವಾರ್ತಾಧಿಕಾರಿಯ ಮೇಜಿನ ಮೇಲಿದ್ದ ಹಾಟ್ ಲೈನ್ ಸದ್ದು ಮಾಡಿತು. ಜೊತೆಗೆ ಸೈರನ್ ಕೂಗಿನೊಂದಿಗೆ ವಿದೇಶಾಂಗ ವ್ಯವಹಾರದ ಪಬ್ಲಿಸಿಟಿ ವಿಭಾಗದ ಅಧಿಕಾರಿಗಳ ತಂಡ ನಾನಿದ್ದಲ್ಲಿಗೆ ಧಾವಿಸಿ ಬಂದಿತು. ಏನು ಅನಾಹುತದ ಮುನ್ಸೂಚನೆ ಸ್ಪಷ್ಟವಾಯಿತು. ರಷ್ಯಾದಲ್ಲಿ ಅಧಿಕೃತ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ಲಾಲಬಹಾದ್ದೂರ ಶಾಸ್ತ್ರಿ ನಿಧನರಾಗಿದ್ದಾರೆ ಎಂಬ ಸುದ್ದಿ ಬಂದಿತು.

ಸುದ್ದಿ ಆಘಾತ ನಿಜ. ಅಂತೆಯೇ ನಮ್ಮ ಕರ್ತವ್ಯ ಪ್ರಜ್ಞೆ ಜಾಗೃತವಾಯಿತು ಅಂಥ ದಿನಗಳಲ್ಲಿ ಟೆಲೆಕ್ಸ್ ಯಂತ್ರವೊಂದರ ಬಿಟ್ಟರೆ ಮತ್ತಾವುದೇ ತಾಂತ್ರಿಕ ಯಾಂತ್ರಿಕ ಸಾಧನ ಇರಲಿಲ್ಲ. ಇಡೀ ದೇಶಕ್ಕೆ ಅಧಿಕೃತ ಮಾಹಿತಿ ನೀಡುವ ಜವಾಬ್ದಾರಿ ನಮಗೆ ಅರಿವಿಲ್ಲದಂತೆಯೇ ನಮಗೆ ಬಂದಿತ್ತು. ದಿಲ್ಲಿಯ ವರದಿಗಾರರೆಲ್ಲ ಪಿಐಬಿಗೆ ಮುತ್ತಿಗೆ ಹಾಕಿದರು. ಕ್ಷಣ ಕ್ಷಣದ ಮಾಹಿತಿಯನ್ನು ಲೌಡ್ ಸ್ಪೀಕರ್ ಮೂಲಕ ತಿಳಿಸುವ ವ್ಯವಸ್ಥೆಯಾಯಿತು.

ಇನ್ಫರ್ಮೇಷನ್ ಆಫೀಸರ್ ಡೆಸ್ಕ್ ನಲ್ಲಿ ಕೂತವನು ಕುರ್ಚಿ ಬಿಟ್ಟು ಎದ್ದುದ್ದು ಬೆಳಿಗ್ಗೆ ಎಂಟು ಗಂಟೆಗೆ. ಪುನಃ ಕುಳಿತು ಮಾಹಿತಿ ವಿತರಣೆಗೆ ಧಾವಿಸಿದ್ದು ಕೆಲವೇ ನಿಮಿಷಗಳ ನಂತರ. ದಿ. ಲಾಲ ಬಹದ್ದೂರ್ ಶಾಸ್ತ್ರಿ ಅವರ ಪಾರ್ಥಿವ ಶರೀರ ನವದೆಹಲಿಗೆ ಬಂದು ಸಾರ್ವಜನಿಕ ಗೌರವ ಅರ್ಪಣೆ, ಅಂತಿಮ ಯಾತ್ರೆ ಇದೆಲ್ಲವೂ ಮುಗಿಯುವವರೆಗೆ ಸತತವಾಗಿ 40 ಗಂಟೆ ಕೆಲಸ ಮಾಡಿದ್ದೆವು. ಅದಾವ ದೈತ್ಯ ಶಕ್ತಿ ಪಿಐಬಿಯಲ್ಲಿದ್ದ ನಮಗೆ ಬಂದಿತ್ತೋ ತಿಳಿಯದು.

ಈ ಸಂದರ್ಭದಲ್ಲಿ ನಮ್ಮೊಂದಿಗೆ ಇದ್ದು ಸೇವೆ ಸಲ್ಲಿಸಿದ ಮಹನೀಯ ಅಧಿಕಾರಿಯೆಂದರೆ ಟಿ. ಕಾಶಿನಾಥ. ಭಾರತ ಸರ್ಕಾರ ಅಧಿಕೃತ ಫೋಟೋ ಡಿವಿಜನ್ ನ ಮುಖ್ಯಸ್ಥ ಕಾಶಿನಾಥರು ಕನ್ನಡಿಗರು. ರಾಷ್ಟ್ರಮಟ್ಟದ ಖ್ಯಾತ ಫೋಟೊಗ್ರಾಫರ್. ಅಂದಿನ ದಿನಗಳಲ್ಲಿ ರಾಷ್ಟ್ರೀಯ ನ್ಯೂಸ್ ಏಜೆನ್ಸಿಗಳಿಗೆ, ದೇಶ ವಿದೇಶದ ಪತ್ರಿಕೆಗಳಿಗೆ ಫೋಟೋ ರವಾನಿಸಿದ ಮಹನೀಯರು ಇವರು. ಜೊತೆಜೊತೆಗೆ ಮಾಹಿತಿ ಒದಗಿಸುವ ಕೆಲಸ ನನ್ನದಾಗಿತ್ತು. ಇದು ನಾನು ಪುಣ್ಯ ಜೀವಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಸಲ್ಲಿಸಿದ ಶ್ರದ್ಧಾಂಜಲಿ.

–ಎಸ್.ಕೆ. ಶೇಷ ಚಂದ್ರಿಕಾ, ಹಿರಿಯ ಪತ್ರಕರ್ತ 

Courtesy: Kannadapress.com


ಎಸ್.ಕೆ. ಶೇಷಚಂದ್ರಿಕ ನಾಡಿನ ಹಿರಿಯ ಪತ್ರಕರ್ತರು. ಭಾರತ ಸರಕಾರದ ಕ್ಷೇತ್ರ ಪ್ರಚಾರಾಧಿಕಾರಿಯಾಗಿ, ದೂರದರ್ಶನ, ಆಕಾಶವಾಣಿಯಲ್ಲಿ ಸುದ್ದಿ ಸಂಪಾದಕ, ವಿಶೇಷ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ಪತ್ರಿಕಾ ಕಾರ್ಯದರ್ಶಿಯೂ ಆಗಿದ್ದರು.ದಿ ಟ್ರಿಬ್ಯೂನ್ ಪತ್ರಿಕೆಯ ವಿಶೇಷ ವರದಿಗಾರರು ಆಗಿ ಸೇವೆ ಸಲ್ಲಿಸಿದ ಅವರು ಈಗ ಬೆಂಗಳೂರು ನ್ಯೂಸ್ ಬ್ಯೂರೋದ ವಿಶೇಷ ವರದಿಗಾರರು ಹಾಗೂ ಗಾಂಧಿಯನ್ ಥಾಟ್ಸ್ ನ ವಿಸಿಟಿಂಗ್ ಪ್ರೊಫೆಸರ್ ಕೂಡ ಹೌದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Govt of IndiaKannada News WebsiteLatest News KannadaPIBಎಸ್.ಕೆ. ಶೇಷಚಂದ್ರಿಕಭಾರತ ಸರಕಾರಲಾಲ್ ಬಹದ್ದೂರ್ ಶಾಸ್ತ್ರಿ
Previous Post

ಗಮನಿಸಿ! ಜ.13ರಿಂದ ನಾಲ್ಕು ದಿನ ಎಸ್’ಪಿಎಂ ರಸ್ತೆ ಸೇರಿ ಶಿವಮೊಗ್ಗದ ಹಲವೆಡೆ ಕರೆಂಟ್ ಇರುವುದಿಲ್ಲ

Next Post

ನಾಳೆ ಶಿವಮೊಗ್ಗದಲ್ಲಿ ಶಕ್ತಿದೇವತೆಗಳ ಸಮಾಗಮ: ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಾಳೆ ಶಿವಮೊಗ್ಗದಲ್ಲಿ ಶಕ್ತಿದೇವತೆಗಳ ಸಮಾಗಮ: ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

‘ಆಪರೇಷನ್ ಸಿಂಧು’ | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

June 19, 2025
File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

‘ಆಪರೇಷನ್ ಸಿಂಧು’ | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

June 19, 2025
File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!