No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಲಾಲ್ ಬಹದ್ದೂರ್ ಶಾಸ್ತ್ರಿ: ಒಂದು ನೆನಪು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 12, 2021
in Special Articles
0
ಲಾಲ್ ಬಹದ್ದೂರ್ ಶಾಸ್ತ್ರಿ: ಒಂದು ನೆನಪು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಐವತ್ತನಾಲ್ಕು ವರ್ಷಗಳ ಹಿಂದೆ ಇದೇ ದಿನ ಅಂದರೆ ಜನವರಿ 11, 1966 ರಂದು ವಿಧಿವಶರಾದರು. ರಷ್ಯಾ ಪ್ರವಾಸದಲ್ಲಿದ್ದಾಗಲೇ ಅವರು ಮೃತರಾದ ಸುದ್ದಿ ಭಾರತಕ್ಕೆ ಆಘಾತ ತಂದಿತ್ತು. ಅಂದು ದೆಹಲಿಯ ಪಿಐಬಿಯಲ್ಲಿ ಕರ್ತವ್ಯವಲ್ಲಿದ್ದ ಹಿರಿಯ ಪತ್ರಕರ್ತ ಎಸ್.ಕೆ. ಶೇಷ ಚಂದ್ರಿಕಾ ಆ ದಿನವನ್ನು ಇಲ್ಲಿ ನೆನಪಿಸಿಕೊಂಡಿದ್ದಾರೆ.

ಭಾರತದ ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿಯವರು ತಾಷ್ಕೆಂಟ್ ನಲ್ಲಿ ನಿಧನರಾದ ದಿನದ ನೆನಪು ನನ್ನ ಮನಸಿನಲ್ಲಿ ಚಿರಸ್ಮರಣೀಯವಾಗಿ ಉಳಿದಿದೆ. ಅಂದು ಜನವರಿ 11, 1966. ನಾನು ನವದೆಹಲಿಯ ಆಕಾಶವಾಣಿ ಭವನದಲ್ಲಿದ್ದ ಪ್ರೆಸ್ ಇನ್ ಫರ್ಮೇಷನ್ ಬ್ಯುರೋ – ಪಿಐಬಿ ಕಚೇರಿಯಲ್ಲಿ- ಅಸಿಸ್ಟೆಂಟ್ ಜರ್ನಲಿಸ್ಟ್. ಇದು ಭಾರತ ಸರ್ಕಾರದ ವಾರ್ತಾ ಸೇವೆಯ ಮುಖ್ಯ ಕೇಂದ್ರ ಹಾಗೂ ಕೇಂದ್ರ ಸರಕಾರದ ಮುಖವಾಣಿ.

ಪಿಐಬಿ ಒಂದು ಅಂಗವಾದ ಪ್ರೆಸ್ ಫೆಸಿಲಿಟೀಸ್ ನಲ್ಲಿ ನಾನು ಸೇವಾ ನಿಯೋಜಿತನಾಗಿದ್ದೆ. ರಾಷ್ಟ್ರ ರಾಜಧಾನಿಯಲ್ಲಿರುವ ರಾಷ್ಟ್ರೀಯ ಪತ್ರಿಕೆಗಳು ಮತ್ತು ಪಿಟಿಐ, ಯುಎನ್ ಐ ಮತ್ತಿತರ ನ್ಯೂಸ್ ಏಜೆನ್ಸಿಗಳಿಗೆ ವಾರ್ತೆ- ಮಾಹಿತಿ ಒದಗಿಸುವುದು ಪಿಐಬಿಯ ಮುಖ್ಯ ಕೆಲಸ. ಆಗ ಟೆಲಿವಿಷನ್ ಇನ್ನೂ ಭಾರತಕ್ಕೆ ಕಾಲಿಟ್ಟಿರಲಿಲ್ಲ. ಫಿಲ್ಮ್ ಡಿವಿಜನ್ ವಾರಾಂತ್ಯಕ್ಕೆ ಬಿಡುಗಡೆ ಮಾಡುತ್ತಿದ್ದ ಇಂಡಿಯನ್ ನ್ಯೂಸ್ ರೀಲ್ ಗಳು ಸಿನೆಮಾ ಮಂದಿರಗಳ ಮೂಲಕ ‘ಲೈವ್’ ದೃಶ್ಯ ತೋರಿಸುತ್ತಿತ್ತು. ಆಕಾಶವಾಣಿಯೊಂದೇ ದೇಶದ ಪ್ರಮುಖ ಸುದ್ದಿ ಬಿಂದು.

ಈ ಹಿನ್ನೆಲೆಯಲ್ಲಿ ಜನವರಿ 11ರಂದು ರಾತ್ರಿ ಹತ್ತು ಗಂಟೆವರೆಗೆ ಕೆಲಸ ಮುಗಿಸಿ ಕಾರಿನಲ್ಲಿ ನನ್ನ ರೂಮಿಗೆ ಡ್ರಾಪ್ ತೆಗೆದುಕೊಳ್ಳಲು ಸಿದ್ಧನಾಗುತ್ತಿದ್ದೆ. ವಾಹನ ಬರುವುದು ತಡವಾಗಿತ್ತು. ಸುಂದರ್ ರಾಜನ್ ಅವರು ನಮ್ಮ ಹಿರಿಯ ಸಹೋದ್ಯೋಗಿ. ಇನ್ನೇನು ಬೀಗ ಹಾಕಿ ಹೊರಡಲು ಸನ್ನದ್ಧರಾದಾಗ ವಾರ್ತಾಧಿಕಾರಿಯ ಮೇಜಿನ ಮೇಲಿದ್ದ ಹಾಟ್ ಲೈನ್ ಸದ್ದು ಮಾಡಿತು. ಜೊತೆಗೆ ಸೈರನ್ ಕೂಗಿನೊಂದಿಗೆ ವಿದೇಶಾಂಗ ವ್ಯವಹಾರದ ಪಬ್ಲಿಸಿಟಿ ವಿಭಾಗದ ಅಧಿಕಾರಿಗಳ ತಂಡ ನಾನಿದ್ದಲ್ಲಿಗೆ ಧಾವಿಸಿ ಬಂದಿತು. ಏನು ಅನಾಹುತದ ಮುನ್ಸೂಚನೆ ಸ್ಪಷ್ಟವಾಯಿತು. ರಷ್ಯಾದಲ್ಲಿ ಅಧಿಕೃತ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ಲಾಲಬಹಾದ್ದೂರ ಶಾಸ್ತ್ರಿ ನಿಧನರಾಗಿದ್ದಾರೆ ಎಂಬ ಸುದ್ದಿ ಬಂದಿತು.

ಸುದ್ದಿ ಆಘಾತ ನಿಜ. ಅಂತೆಯೇ ನಮ್ಮ ಕರ್ತವ್ಯ ಪ್ರಜ್ಞೆ ಜಾಗೃತವಾಯಿತು ಅಂಥ ದಿನಗಳಲ್ಲಿ ಟೆಲೆಕ್ಸ್ ಯಂತ್ರವೊಂದರ ಬಿಟ್ಟರೆ ಮತ್ತಾವುದೇ ತಾಂತ್ರಿಕ ಯಾಂತ್ರಿಕ ಸಾಧನ ಇರಲಿಲ್ಲ. ಇಡೀ ದೇಶಕ್ಕೆ ಅಧಿಕೃತ ಮಾಹಿತಿ ನೀಡುವ ಜವಾಬ್ದಾರಿ ನಮಗೆ ಅರಿವಿಲ್ಲದಂತೆಯೇ ನಮಗೆ ಬಂದಿತ್ತು. ದಿಲ್ಲಿಯ ವರದಿಗಾರರೆಲ್ಲ ಪಿಐಬಿಗೆ ಮುತ್ತಿಗೆ ಹಾಕಿದರು. ಕ್ಷಣ ಕ್ಷಣದ ಮಾಹಿತಿಯನ್ನು ಲೌಡ್ ಸ್ಪೀಕರ್ ಮೂಲಕ ತಿಳಿಸುವ ವ್ಯವಸ್ಥೆಯಾಯಿತು.

ಇನ್ಫರ್ಮೇಷನ್ ಆಫೀಸರ್ ಡೆಸ್ಕ್ ನಲ್ಲಿ ಕೂತವನು ಕುರ್ಚಿ ಬಿಟ್ಟು ಎದ್ದುದ್ದು ಬೆಳಿಗ್ಗೆ ಎಂಟು ಗಂಟೆಗೆ. ಪುನಃ ಕುಳಿತು ಮಾಹಿತಿ ವಿತರಣೆಗೆ ಧಾವಿಸಿದ್ದು ಕೆಲವೇ ನಿಮಿಷಗಳ ನಂತರ. ದಿ. ಲಾಲ ಬಹದ್ದೂರ್ ಶಾಸ್ತ್ರಿ ಅವರ ಪಾರ್ಥಿವ ಶರೀರ ನವದೆಹಲಿಗೆ ಬಂದು ಸಾರ್ವಜನಿಕ ಗೌರವ ಅರ್ಪಣೆ, ಅಂತಿಮ ಯಾತ್ರೆ ಇದೆಲ್ಲವೂ ಮುಗಿಯುವವರೆಗೆ ಸತತವಾಗಿ 40 ಗಂಟೆ ಕೆಲಸ ಮಾಡಿದ್ದೆವು. ಅದಾವ ದೈತ್ಯ ಶಕ್ತಿ ಪಿಐಬಿಯಲ್ಲಿದ್ದ ನಮಗೆ ಬಂದಿತ್ತೋ ತಿಳಿಯದು.

ಈ ಸಂದರ್ಭದಲ್ಲಿ ನಮ್ಮೊಂದಿಗೆ ಇದ್ದು ಸೇವೆ ಸಲ್ಲಿಸಿದ ಮಹನೀಯ ಅಧಿಕಾರಿಯೆಂದರೆ ಟಿ. ಕಾಶಿನಾಥ. ಭಾರತ ಸರ್ಕಾರ ಅಧಿಕೃತ ಫೋಟೋ ಡಿವಿಜನ್ ನ ಮುಖ್ಯಸ್ಥ ಕಾಶಿನಾಥರು ಕನ್ನಡಿಗರು. ರಾಷ್ಟ್ರಮಟ್ಟದ ಖ್ಯಾತ ಫೋಟೊಗ್ರಾಫರ್. ಅಂದಿನ ದಿನಗಳಲ್ಲಿ ರಾಷ್ಟ್ರೀಯ ನ್ಯೂಸ್ ಏಜೆನ್ಸಿಗಳಿಗೆ, ದೇಶ ವಿದೇಶದ ಪತ್ರಿಕೆಗಳಿಗೆ ಫೋಟೋ ರವಾನಿಸಿದ ಮಹನೀಯರು ಇವರು. ಜೊತೆಜೊತೆಗೆ ಮಾಹಿತಿ ಒದಗಿಸುವ ಕೆಲಸ ನನ್ನದಾಗಿತ್ತು. ಇದು ನಾನು ಪುಣ್ಯ ಜೀವಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಸಲ್ಲಿಸಿದ ಶ್ರದ್ಧಾಂಜಲಿ.

–ಎಸ್.ಕೆ. ಶೇಷ ಚಂದ್ರಿಕಾ, ಹಿರಿಯ ಪತ್ರಕರ್ತ 

Courtesy: Kannadapress.com


ಎಸ್.ಕೆ. ಶೇಷಚಂದ್ರಿಕ ನಾಡಿನ ಹಿರಿಯ ಪತ್ರಕರ್ತರು. ಭಾರತ ಸರಕಾರದ ಕ್ಷೇತ್ರ ಪ್ರಚಾರಾಧಿಕಾರಿಯಾಗಿ, ದೂರದರ್ಶನ, ಆಕಾಶವಾಣಿಯಲ್ಲಿ ಸುದ್ದಿ ಸಂಪಾದಕ, ವಿಶೇಷ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ಪತ್ರಿಕಾ ಕಾರ್ಯದರ್ಶಿಯೂ ಆಗಿದ್ದರು.ದಿ ಟ್ರಿಬ್ಯೂನ್ ಪತ್ರಿಕೆಯ ವಿಶೇಷ ವರದಿಗಾರರು ಆಗಿ ಸೇವೆ ಸಲ್ಲಿಸಿದ ಅವರು ಈಗ ಬೆಂಗಳೂರು ನ್ಯೂಸ್ ಬ್ಯೂರೋದ ವಿಶೇಷ ವರದಿಗಾರರು ಹಾಗೂ ಗಾಂಧಿಯನ್ ಥಾಟ್ಸ್ ನ ವಿಸಿಟಿಂಗ್ ಪ್ರೊಫೆಸರ್ ಕೂಡ ಹೌದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Govt of IndiaKannada News WebsiteLatest News KannadaPIBಎಸ್.ಕೆ. ಶೇಷಚಂದ್ರಿಕಭಾರತ ಸರಕಾರಲಾಲ್ ಬಹದ್ದೂರ್ ಶಾಸ್ತ್ರಿ
Share206Tweet123Send
Previous Post

ಗಮನಿಸಿ! ಜ.13ರಿಂದ ನಾಲ್ಕು ದಿನ ಎಸ್’ಪಿಎಂ ರಸ್ತೆ ಸೇರಿ ಶಿವಮೊಗ್ಗದ ಹಲವೆಡೆ ಕರೆಂಟ್ ಇರುವುದಿಲ್ಲ

Next Post

ನಾಳೆ ಶಿವಮೊಗ್ಗದಲ್ಲಿ ಶಕ್ತಿದೇವತೆಗಳ ಸಮಾಗಮ: ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಾಳೆ ಶಿವಮೊಗ್ಗದಲ್ಲಿ ಶಕ್ತಿದೇವತೆಗಳ ಸಮಾಗಮ: ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ನಾಳೆ ಶಿವಮೊಗ್ಗದಲ್ಲಿ ಶಕ್ತಿದೇವತೆಗಳ ಸಮಾಗಮ: ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಡಿ.ಕೆ. ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್

ಡಿ.ಕೆ. ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್

June 2, 2026
ಕ್ರೈಸ್ಟ್ ಕಿಂಗ್: ಮಕ್ಕಳಿಗೆ ರೋಬೊ ಟೀಚರ್ ಸ್ವಾಗತದೊಂದಿಗೆ ಪ್ರಾಥಮಿಕ ಶಾಲೆ ಪ್ರಾರಂಭ

ಕ್ರೈಸ್ಟ್ ಕಿಂಗ್: ಮಕ್ಕಳಿಗೆ ರೋಬೊ ಟೀಚರ್ ಸ್ವಾಗತದೊಂದಿಗೆ ಪ್ರಾಥಮಿಕ ಶಾಲೆ ಪ್ರಾರಂಭ

June 2, 2026
Mysore – Shivamogga Express Big Update on this Date | Must Read

ಈ ದಿನಗಳು ಶಿವಮೊಗ್ಗ-ಬೆಂಗಳೂರು ಶತಾಬ್ದಿ ರೈಲು ರದ್ದು, ತಾಳಗುಪ್ಪ, ತುಮಕೂರು ಸೇರಿ 10 ರೈಲುಗಳ ಬಿಗ್ ಅಪ್ಡೇಟ್

June 2, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL