No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಗಣೇಶೋತ್ಸವದ ಅರ್ಥಪೂರ್ಣ ಆಚರಣೆಯ ಉದಾತ್ತ ಧ್ಯೇಯಗಳನ್ನು ತಿಳಿಯಿರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 31, 2019
in Special Articles
0
ಗಣೇಶೋತ್ಸವದ ಅರ್ಥಪೂರ್ಣ ಆಚರಣೆಯ ಉದಾತ್ತ ಧ್ಯೇಯಗಳನ್ನು ತಿಳಿಯಿರಿ
Share on FacebookShare on TwitterShare on WhatsApp

ಎಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ. ವಿವಿಧ ರೀತಿಯ ಗಣಪನ ಮೂರ್ತಿಗಳು ಕಂಗೊಳಿಸುತ್ತಿವೆ. ಅಂಗೈ ಅಗಲದ ಪುಟ್ಟ ಮೂರ್ತಿಯಿಂದ ಹಿಡಿದು ಆಳೆತ್ತರದ ದೊಡ್ಡ ವಿಗ್ರಹಗಳು ಸಾಲುಸಾಲಾಗಿ ಮಾರಾಟಕ್ಕಿದೆ. ಬೇರೆ ಬೇರೆ ವರ್ಣಾಲಂಕಾರಗಳಲ್ಲಿ ರಾರಾಜಿಸುತ್ತಿರುವ ವಿನಾಯಕನ ಮೂರ್ತಿಗಳನ್ನು ನೋಡುವುದೇ ಕಣ್ಣಿಗೆ ಹಬ್ಬ

ತಿಂಗಳ ಹಿಂದೆ ಪೀಠದಲ್ಲಿಟ್ಟ ಹಿಡಿ ಮಣ್ಣು ಬೆಳೆಯುತ್ತಾ ಹೋಗಿ ಪಾದಗಳಾಗಿ, ಉದರವಾಗಿ, ಸೊಂಡಿಲಾಗಿ, ಕಿರೀಟವಾಗಿ, ಈಗ ಪೂರ್ಣ ಗಣೇಶನಾಗಿ ಮೈದೆಳೆದಿದೆ. ಶಿಲ್ಪಿಗಳು ಈ ಮೂರ್ತಿಗಳ ಹುಬ್ಬುಗಳನ್ನು ತೀಡಿ ಎಡಗೆನ್ನೆಯಲ್ಲೊಂದು ದೃಷ್ಟಿಬೊಟ್ಟು ಇಟ್ಟು ಕೆಲಸ ಪೂರ್ಣಗೊಳಿಸಿ ಕುಳಿತಿದ್ದಾರೆ.

ಚೌತಿಯಂದು ಮಣ್ಣಿನ ಗಣಪನ್ನು ಮನೆ ಮನೆಗಳಲ್ಲಿ ಕೂರಿಸುವುದು ಸಹಜ. ಆದರೆ 10 ವರ್ಷದ ಕೆಳಗೆ ಮಣ್ಣಿನ ಗಣಪನನ್ನು ತಯಾರಿಸುವುದರಲ್ಲಿ ತೋರುತ್ತಿದ್ದ ಕಲಾತ್ಮಕತೆ ಈಗ ಇಲ್ಲ. ಸಿದ್ಧ ಮಾದರಿಯಲ್ಲಿರುತ್ತಿದ್ದ ಗಣಪ ಈಗ ಹೊಸ ಆಯಾಮ ಪಡೆದುಕೊಳ್ಳುತ್ತಿದ್ದಾನೆ. ಅರ್ಥಾತ್ ಕಮರ್ಷಿಯಲ್ ಆಗುತ್ತಿದ್ದಾನೆ.

ಜೇಡಿಮಣ್ಣಿನ ಗಣೇಶನ ವಿಗ್ರಹಗಳೆಂದರೆ ಈ ಹಿಂದೆ ಶ್ರೇಷ್ಟ ಭಾವನೆ ಇತ್ತು. ಆಮದು ನೀತಿ ಇವರನ್ನು ಸಂಕಷ್ಟಕ್ಕೆ ತಳ್ಳಿದೆ. ಹೊರ ರಾಜ್ಯಗಳಿಂದ ದೌಡಾಯಿಸಿ ಬರುತ್ತಿರುವ ಗಣೇಶನ ಮೂರ್ತಿಗಳಿಂದಾಗಿ ಈಗ ಸ್ಥಳಿಯರಿಗೆ ಕೈತುಂಬ ಕೆಲಸವು ಇಲ್ಲ. ನಿರೀಕ್ಷಿಸಿದಷ್ಟು ಹಣವೂ ಸಿಗುತ್ತಿಲ್ಲ. ಇವರು ಸೃಷ್ಟಿಸಿದ ಅಷ್ಟೂ ಗಣಪ ಹಬ್ಬದ ವೇಳೆಗೆ ಖರ್ಚಾದರೆ ಮಾತ್ರ ಇವರಿಗೆ ಲಾಭ ಇಲ್ಲವಾದರೆ ನಷ್ಟ.

ರಾಜ್ಯಕ್ಕೆ ಆಮದಾಗುವ ಗಣೇಶನ ವಿಗ್ರಹಗಳು ನೋಡಲು ಆಕರ್ಷಕವಾಗಿ, ಅತಿ ರಂಜಿತ ಬಣ್ಣಗಳಿಂದ ಕೂಡಿರುತ್ತವೆ. ವಾಸ್ತವದಲ್ಲಿ ಅವು ಪರಿಸರಕ್ಕೆ ಮಾರಕ ಎಂಬುದು ಅನೇಕರಿಗೆ ಗೊತ್ತಿಲ್ಲ.

ಒಂದು ಕಾಲಕ್ಕೆ ಕರ್ನಾಟಕದಲ್ಲಿ ತಯಾರಾಗುತ್ತಿದ್ದ ಗಣಪನಿಗೆ ಹೊರ ರಾಜ್ಯದಲ್ಲಿ ಭಾರೀ ಬೇಡಿಕೆ ಇತ್ತು. ಆದರೆ ಇತ್ತೀಚೆಗೆ ದೂರದ ಕೋಲ್ಕತ್ತದಿಂದ ಗಣಪನನ್ನು ತಯಾರಿಸುವ ಶಿಲ್ಪಿಗಳು ಇಲ್ಲಿಗೆ ಗುಳೆ ಬರುತ್ತಿದ್ದಾರೆ. ಆಧುನಿಕ ಸಲಕರಣೆಗಳಿಂದ ಗಣಪನನ್ನು ಸೃಷ್ಟಸಿ ಇಲ್ಲಿ ಮಾರುಕಟ್ಟೆಯನ್ನು ತಮ್ಮ ವಶಕ್ಕೆ ತೆಗೆದುಕೊಳ್ಳುತ್ತಿದ್ದಾರೆ.


ಆಧುನಿಕತೆಯ ಪ್ರವೇಶದಿಂದ ಎಲ್ಲಾ ಗುಡಿಕೈಗಾರಿಕೆಗಳು ಒಕ್ಕಲೇಳುತ್ತಿರುವ ಹೊತ್ತಿನಲ್ಲಿ ಗಣಪನನ್ನು ತಯಾರಿಸುವ ಕುಂಬಾರರು ಕೂಡ ಕಷ್ಟದಿಂದಲೇ ಮುಖ ಮಾಡುತ್ತಿದ್ದಾರೆ.

ಶುದ್ಧ ಜೇಡಿಮಣ್ಣು ಬಳಸಿ ಗಣೇಶನನ್ನು ತಯಾರಿಸಲು ಮಣ್ಣಿಗೂ ಬರ ಬಂದುಬಿಟ್ಟಿದೆ. ಬಿಡದಿ ಹತ್ತಿರದ ಹೂಳು ತುಂಬಿದ ಕೆರೆಯಲ್ಲಿ ಬೇಸಿಗೆ ಕಾಲದಲ್ಲಿ ಹೆಕ್ಕಿ ತರುತ್ತಿದ್ದೆವು. ಇತ್ತೀಚೆಗೆ ಕೆರೆಯಲ್ಲಿ ಮಣ್ಣು ತೆಗೆಯಲು ಜನರು ಬಿಡುವುದಿಲ್ಲ. ಹೀಗಾಗಿ ಜೇಡಿ ಮಣ್ಣಿಗಾಗಿ ಕಲಾವಿದರು ದೂರದ ಊರುಗಳಿಗೆ ಹೋಗಬೇಕಾದ ಸ್ಥಿತಿ ಇದೆ. ಈ ಕುಲಕಸುಬನ್ನು ಮೂಲ ಸ್ವರೂಪದಲ್ಲಿ ಉಳಿಸಿಕೊಳ್ಳುವುದೇ ದೊಡ್ಡ ಸಾಹಸದ ಕೆಲಸ ಎಂದು ವಿಷಾದಿಸುತ್ತಾರೆ. ನಗರದ ಬನಶಂಕರಿ 1 ನೇ ಹಂತದ ಶ್ರೀನಿವಾಸನಗರ ಮುಖ್ಯರಸ್ತೆಯ ಬ್ರಹ್ಮ ಚೈತನ್ಯ ಮಂದಿರದ ಬಳಿ ಇರುವ ಕಲಾವಿದರಾದ ನಾಗರಾಜಪ್ಪ ಹಾಗೂ ಕರಿಬಸಪ್ಪ ಸಹೋದರರು.

ಗಣೇಶ ಮೂರ್ತಿಗಳು ಹೈಟೆಕ್ ಆಗುತ್ತಿವೆ. ಜೇಡಿ ಮಣ್ಣಿನಿಂದ ಮಾಡಿದ ಗಣಪರು ಕಣ್ಮರೆಯಾಗಿ ಬಹುವರ್ಣದ ಗಣಪಗಳು ರಾರಾಜಿಸುತ್ತಿವೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಇತರೆ ವಸ್ತುಗಳಿಂದ ಗಣಪನನ್ನು ತಯಾರಿಸಲಾಗುತ್ತಿದೆ. ಗಣೇಶನ ಅಲಂಕರಕ್ಕೆ ಸಾವಯವ ಬಣ್ಣಗಳನ್ನು ಉಪಯೋಗಿಸುವಷ್ಟರ ಮಟ್ಟಿಗೆ ಪರಿಸರ ಪ್ರಜ್ಞೆ ಜನರಲ್ಲಿ ಮೂಡುತ್ತಿದೆ.

ಹಬ್ಬಗಳು ಹಿಂದಿನ ‘ಖದರ್’ ಕಳೆದು ಕೊಂಡಿರಬಹುದು. ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಸಮಕಾಲೀನ ವಿದ್ಯಮಾನಗಳಿಗೆ ಗಣೇಶ ಸ್ಪಂದಿಸುವ ಆಶಯ ಮೆರೆದಿದೆ. ಗಣೇಶ ವಿಗ್ರಹ ರಚಿಸುವ ಕಲಾಕಾರರ, ಗಣೇಶೋತ್ಸವ ವ್ಯವಸ್ಥಾಪಕರ ಕಲ್ಪನಾ ವಿಲಾಸ ವೈವಿಧ್ಯಮಯ.

ಮಾರುಕಟ್ಟೆಯಲ್ಲಿ ಜನರ ಕೈಗೆ ಅತ್ಯಲ್ಪ ಮೊತ್ತಕ್ಕೆ ಸುಲಭವಾಗಿ ಸಿಗುವ ಒಂದೊಂದು ಗಣೇಶನ ವಿಗ್ರಹವನ್ನು ಸೃಷ್ಟಿಸುವಾಗ ಅದರ ಹಿಂದೆ ಕಲಾವಿದನೊಬ್ಬನ ಅಪಾರ ಶ್ರಮವಿರುತ್ತದೆ ಎಂಬುದು ಅನೇಕರಿಗೆ ಗೊತ್ತಿಲ್ಲ? ಆದರೂ ಗಣೇಶನನ್ನು ಅಚ್ಚಿನಲ್ಲಿ ಸೃಷ್ಟಿಸಿ ಬಿಡುತ್ತಾರೆ ಎಂಬ ಭ್ರಮೆ ಇದೆ.

ಸಗಟು ವ್ಯಾಪಾರಿಗಳ ಮೂಲಕ ಮನೆಮನೆಗಳಲ್ಲಿಯೂ ಅಲಂಕೃತಗೊಂಡು ನೀರಿನಲ್ಲಿ ಮುಳುಗಿ ಬಿಡುತ್ತದೆ. ಕೆರೆಯ ಮಣ್ಣಿನಿಂದ ಹುಟ್ಟಿ, ರಾಸಾಯನಿಕಗಳನ್ನು ಮೈಗೆ ಹಚ್ಚಿಕೊಂಡು ‘ಗಣಪ’ ತನ್ನಪ್ಪ ‘ಬೂದಿ ಶಿವಪ್ಪ”ನಿಗಿಂತ ಆಧುನಿಕತೆಗೆ ತೆರೆದುಕಂಡಂತೆ ಕಾಣುತ್ತದೆ. ಈ ಅಲಂಕಾರವೇ ಈ ಭುವಿಯ ಕೋಟ್ಯಾಂತರ ಜೀವಿಯ ಮಾರಣ ಹೋಮಕ್ಕೂ, ಪರಿಸರ ನಾಶಕ್ಕೂ ಕಾರಣವಾಗುತ್ತದೆ ಎಂಬ ಆತಂಕ ಇಲ್ಲಿ ಕಾಣುತ್ತಲೇ ಇಲ್ಲ.

ಧಾರ್ಮಿಕ ಆಚರಣೆಯ ಹೆಸರಿನಲ್ಲಿ ಪರಿಸರಕ್ಕೆ ಧಕ್ಕೆಯಾಗಬಾರದು. ಈ ಉದಾತ್ತ ಧ್ಯೇಯೋದ್ಧೇಶಕ್ಕೆ ನಾವು ಕೈ ಜೋಡಿಸಿದರೆ ಮಾತ್ರ ಪರಿಸರ ಹಾನಿ ತಪ್ಪಿಸಲು ಸಾಧ್ಯ. ಪರಿಸರಕ್ಕೆ ಹಾನಿಕಾರಕವಲ್ಲದ ಮೂರ್ತಿಗಳನ್ನು ಖರೀದಿಸಿ, ಪೂಜಿಸುವ ಮೂಲಕ ಪರಿಸರ ಸಂರಕ್ಷಣೆಗೆ ಜವಾಬ್ದಾರಿ ಮೆರೆಯಿರಿ.

ಗಣೇಶನ ಕುರಿತು ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಇದೇ ಲೇಖಕರ ‘ನೂತನ ಕೃತಿ – ವಿಶ್ವವಂದಿತ ವಿನಾಯಕ’ ನೋಡಬಹುದು
www.vishwavinayaka108.blogspot.com

Tags: Dr. Gururaja PoshettihallyGanesha ChaturthiGaneshotsavaGauri-Ganesha festivalKannada Articleಗಣೇಶನ ವಿಗ್ರಹಗಣೇಶೋತ್ಸವಗೌರಿ-ಗಣೇಶ ಹಬ್ಬಡಾ. ಗುರುರಾಜ ಪೋಶೆಟ್ಟಿಹಳ್ಳಿಧಾರ್ಮಿಕ ಆಚರಣೆ
Share205Tweet123Send
Previous Post

ಕುರುಡುಮಲೆ ಗಣೇಶ ಸೋಮೇಶ ದೇವರ ಕುರಿತು ತಿಳಿದು ಧನ್ಯರಾಗಿ

Next Post

ಪ್ರಪಂಚದ ಕ್ಲೇಷಗಳನ್ನೆಲ್ಲಾ ನುಂಗಿ ಜಗತ್ತನ್ನು ರಕ್ಷಿಸುವ ಚಿಂತಾಮಣಿ ವಿಜ್ಞ ವಿನಾಯಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರಪಂಚದ ಕ್ಲೇಷಗಳನ್ನೆಲ್ಲಾ ನುಂಗಿ ಜಗತ್ತನ್ನು ರಕ್ಷಿಸುವ ಚಿಂತಾಮಣಿ ವಿಜ್ಞ ವಿನಾಯಕ

ಪ್ರಪಂಚದ ಕ್ಲೇಷಗಳನ್ನೆಲ್ಲಾ ನುಂಗಿ ಜಗತ್ತನ್ನು ರಕ್ಷಿಸುವ ಚಿಂತಾಮಣಿ ವಿಜ್ಞ ವಿನಾಯಕ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

May 25, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 25, 2026
ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL