No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನಿಮ್ಮ ಮನೆಯಲ್ಲಿ ಗೋವಿಲ್ಲವೆಂಬ ನೋವು ಬಿಟ್ಟು ಗೋವರ್ಧನ ಟ್ರಸ್ಟ್’ನ ಜೊತೆಗೂಡಿ

ಗೋ ಸಂತತಿ ರಕ್ಷಣೆಯ ಆಧುನಿಕ ಗೋಪಾಲಕ ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 5, 2025
in Special Articles
0
ನಿಮ್ಮ ಮನೆಯಲ್ಲಿ ಗೋವಿಲ್ಲವೆಂಬ ನೋವು ಬಿಟ್ಟು ಗೋವರ್ಧನ ಟ್ರಸ್ಟ್’ನ ಜೊತೆಗೂಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಗಾವೋ ವಿಶ್ವಸ್ಯ ಮಾತರಃ ಪಾವನೀ ಪಾಪನಾಶನೀ |
ಅನಂತಾ ಹಿತದಾತಾರಃ ಸರ್ವಮಂಗಲಕಾರಿಣೀ ll
ಗೋಮಾತಾ ಧನದಾತ್ರೀ ಚ ಪೋಷಿಣೀ ಪುಷ್ಟಿಕಾರಿಣೀ |
ಗೋಮಯಂ ಗೋಮಧುಃ ವ್ಯಾಧಿ ನಾಶಿನೀ ಶುಭದಾಯಿನೀ ll
ಗಾವೋ ಮೇತ್ರಪ್ರದಾ ನಿತ್ಯಂ ಗಾವೋ ದೈವಸ್ವರೂಪಿಣೀ l
ಗೋಸೇವಾ ಗೋ ಪ್ರದಾನಂ ಚ ಪುನಾತಿ ಪರಮಂ ಪಥಮ್ ll

ಈ ಮೇಲಿನ ಎಲ್ಲ ಶ್ಲೋಕಗಳೂ ಸಹ ಗೋವಿನ ಮಹತ್ವವನ್ನು ಹೇಳುವಂತವುಗಳು. ಇದರಲ್ಲಿಯೂ ಬಹು ಮುಖ್ಯವಾಗಿ ಮಹಾಭಾರತದ ಗಾವೋ ವಿಶ್ವಸ್ಯ ಮಾತರಃ ಪಾವನೀ ಪಾಪನಾಶನೀ ಸಾಲುಗಳಂತೂ ಗೋವು ನಮಗೆಲ್ಲರಿಗೂ ಮಾತೃ ಸ್ವರೂಪಿಣಿ ಎಂದು ತಿಳಿಸುತ್ತದೆ. ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೊಂದು ವಿಶೇಷವಾದ ಸ್ಥಾನವನ್ನೇ ನೀಡಿ ಗೌರವಿಸಿರುವುದು ಕಾಣುತ್ತೇವೆ. ಆ ಕಾರಣಕ್ಕಾಗಿಯೇ ಗೋವಿನಲ್ಲಿ ಮುಕ್ಕೋಟಿ ದೇವತೆಗಳ ಆವಾಸ ಸ್ಥಾನ ಎಂಬ ಕಾರಣಕ್ಕಾಗಿಯೇ ಅತ್ಯಂತ ಪೂಜನೀಯ ಎಂದು ಹೇಳಿದ್ದಾರೆ. ನಮ್ಮ ಸಂಸ್ಕೃತಿಯಲ್ಲಿ ಗೋವಿಗೆ ಮಾಡುವ ಪೂಜೆಯು ನಮ್ಮೆಲ್ಲ ಪಾಪಗಳನ್ನು ತೊಳೆಯಲು ಸಹಕಾರಿ ಎಂದು ಹೇಳುತ್ತಲೇ ಅದನ್ನು ಧನದಾತ್ರೀ, ಪೋಷಿಣೀ, ಪುಷ್ಟಿಕಾರಿಣೀ ಗೋಮಯ, ಗೋಮಧುಃ, ವ್ಯಾಧಿ ನಾಶಿನೀ ಎಂದು ಬಣ್ಣಿಸಿದ್ದಾರೆ. ಅಂದರೆ, ಗವ್ಯೋತ್ಪನ್ನಗಳಾದ ಹಾಲು, ತುಪ್ಪ, ಮೊಸರು, ಬೆಣ್ಣೆಗಳು ಪೋಷಕ ಆಹಾರವಾಗಿದೆ. ಗೋಮಯದಿಂದ ಜೈವಿಕ ಕೃಷಿಗೆ ಅದು ಸಹಾಯವಾಗುತ್ತದೆ. ಮತ್ತು ರೈತನ ಜೀವನದ ಆಧಾರವೇ ಆಗಿದೆ ಎಂದೆನ್ನುತ್ತಾರೆ. ಆರ್ಥಿಕ ಸಬಲತೆಯೇ ಅಲ್ಲದೆ ಅದರಿಂದ ನಮಗೆ ಬರುವಂತಹ ಎಲ್ಲಾ ವ್ಯಾಧಿಗಳನ್ನು ನಾಶಪಡಿಸುವ ಗುಣ ಗೋಮೂತ್ರ ಗೋಮಯಕ್ಕಿದೆ ಎನ್ನುವುದನ್ನು ಬಹು ಹಿಂದೆಯೇ ನಮ್ಮ ಪೂರ್ವಜರು ಹೇಳಿದ್ದಾರೆ.

ಗಾವೋ ಮೇತ್ರಪ್ರದಾ….ಎನ್ನುವಲ್ಲಿ ಗೋವುಗಳನ್ನು ಕುಟುಂಬದ ಸದಸ್ಯರಲ್ಲಿ ಒಬ್ಬರಂತೆ ಕಂಡು ಅವುಗಳಿಂದಲೇ ಗ್ರಾಮೀಣ ಜೀವನದಲ್ಲಿ ಐಕ್ಯತೆ ಸಹಬಾಳ್ವೆ ವೃದ್ಧಿಯಾಗುತ್ತಿತ್ತು. ಅಷ್ಟೇ ಅಲ್ಲದೆ ಗೋ ಸೇವೆಯು ಹಾಗೂ ಗೋದಾನವು ನಮ್ಮನ್ನು ಮೋಕ್ಷಕ್ಕೆ ಕೊಂಡೊಯ್ಯಬಲ್ಲ ಸಾಧನವಾಗಬಲ್ಲದು ಎಂದು ನಮ್ಮ ವೇದ ಮಂತ್ರಗಳು ಹೇಳಿದ್ದರಿಂದಲೇ ಮನೆಯಲ್ಲಿ ಯಾರಾದರೂ ಮೃತರಾದಾಗ ಅವರ ಹೆಸರಿನಲ್ಲಿ ಗೋದಾನ ಮಾಡಿದರೆ ಆ ಜೀವಕ್ಕೆ ಮುಕ್ತಿ ಎಂದು ಇಂದಿಗೂ ನಂಬಿಕೆ ಇದೆ.ಧಾರ್ಮಿಕ ಪೂಜಾ ವಿಧಿ ವಿಧಾನಗಳಲ್ಲೂ ಗೋವನ್ನು ದೇವತಾ ಸ್ವರೂಪವಾಗಿ ಹೇಳಿ ಗೋವಿನಿಂದಲೇ ನಮಗೆ ಸಿಗುವ ಹಾಲು, ಮೊಸರು, ತುಪ್ಪ, ಗೋಮೂತ್ರ, ಗೋಮಯ ಇವುಗಳನ್ನು ಪಂಚಗವ್ಯಗಳಾಗಿ ಹೇಳಿ, ಅದನ್ನು ಪೂಜಾ ವಿಧಿ ವಿಧಾನಗಳಲ್ಲಿ ಪ್ರಮುಖ ಸ್ಥಾನವನ್ನ ನೀಡಿದ್ದೇವೆ. ಗೋ ಸೇವೆಯನ್ನು ಮಾಡುವುದು ದೇವಸೇವೆಯಷ್ಟೇ ಪುಣ್ಯಕರ ಎಂದೂ ಹೇಳಲಾಗಿದೆ.

ಇಷ್ಟೆಲ್ಲ ಮಹತ್ವವನ್ನು ಹೊಂದಿರುವಂತಹ ಗೋವುಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ. ಭಾರತೀಯ ಸಂಸ್ಕೃತಿಯಲ್ಲಿ ಶ್ರೀಕೃಷ್ಣನು ಗೋವುಗಳನ್ನು ರಕ್ಷಿಸಿ ಗೋಪಾಲನಾದನು ಆತನು ಗೋ ರಕ್ಷಣೆ, ಧರ್ಮ, ಕೃಷಿ ಹಾಗೂ ಜೀವನಕ್ಕೆ ಆಧಾರವೆಂದು ಗೋವುಗಳನ್ನು ಸಾರಿದನು. ಗೋಮಾತೆ ಎಂದು ಪೂಜಿಸುವ ನಮ್ಮ ಸಂಸ್ಕೃತಿಯಲ್ಲಿ ಭಾರತೀಯ ನಾರಿಯರ ನಿತ್ಯ ಕರ್ಮಗಳಲ್ಲಿ ಗೋಪೂಜೆಯೂ ಒಂದು ಸಂಪ್ರದಾಯವೇ ಆಗಿ ಹೋಗಿದೆ. ಗೋವಿಗೆ ಅಕ್ಕಿ ಬೆಲ್ಲ ಅಥವಾ ಬಾಳೆಹಣ್ಣಿನೊಂದಿಗೆ ಬೆಲ್ಲ ನೀಡಿ ನಿತ್ಯವೂ ಸ್ತ್ರೀ ಗೋಪೂಜೆ ಮಾಡಬೇಕೆಂದು ಹೇಳಿದೆ ಅಷ್ಟೇ ಅಲ್ಲದೆ ದೀಪಾವಳಿಯ ಸಂದರ್ಭದಲ್ಲಿ ವಿಶೇಷವಾಗಿ ಅದರ ಹೆಸರಿನಲ್ಲಿ ಹಬ್ಬವೇ ಆಚರಿಸುವುದನ್ನು ಕಂಡಿದ್ದೇವೆ.

ಸಾಮಾಜಿಕವಾದ ದೃಷ್ಟಿಯಲ್ಲಿ ಹಸುವಿನ ಹಾಲು, ತುಪ್ಪ, ಮೊಸರು ಬೆಣ್ಣೆಗಳಿಂದ ಮಾನವನ ಪೋಷಣೆಯಾಗುತ್ತದೆ ಹೀಗಾಗಿ ಗೋಪಾಲನೆ ಸಮಾಜದ ಪೋಷಣೆಗೂ ಕಾರಣವಾಗಿದೆ. ಒಟ್ಟಿನಲ್ಲಿ ಗೋಪಾಲನೆ ಕೇವಲ ಕೃಷಿ ಆರ್ಥಿಕ, ಧಾರ್ಮಿಕ ಇಷ್ಟೇ ಇಲ್ಲದೆ ಇದೊಂದು ಆಧ್ಯಾತ್ಮಿಕ ಸಾಂಸ್ಕೃತಿಕ ಹಾಗೂ ಮಾನವೀಯ ಮೌಲ್ಯಗಳನ್ನು ಒಳಗೊಂಡ ಮಹತ್ವ ಹೊಂದಿದ್ದು ಗೋವುಗಳನ್ನು ಕಾಪಾಡುವುದೆಂದರೆ ನಮ್ಮ ಭವಿಷ್ಯವನ್ನು ನಾವು ಕಾಪಾಡುವುದೇ ಆಗಿದೆ.ಈ ನಿಟ್ಟಿನಲ್ಲಿ ಮಾನ್ಯ ಕೆ.ಎಸ್. ಈಶ್ವರಪ್ಪನವರು ಹಾಗೂ ಅವರ ಪುತ್ರ ಕೆ.ಈ. ಕಾಂತೇಶ್ ರವರು ಇಬ್ಬರೂ ಶ್ಲಾಘನೀಯ ಕಾರ್ಯ ಮಾಡ ಹೊರಟಿದ್ದಾರೆ. ಅದೇನೆಂದರೆ ಗೋ ಸೇವೆ, ಗೋರಕ್ಷಣೆ, ಗೊ ವರ್ಧನೆ ಎನ್ನುವ ಸೂತ್ರಗಳನ್ನು ಒಳಗೊಂಡ ಗೋವರ್ಧನ ಟ್ರಸ್ಟ್ ಎನ್ನುವುದನ್ನು ಸ್ಥಾಪಿಸಿ ಅದರ ಮೂಲಕ ಪ್ರತಿ ಹಿಂದು ಬಾಂಧವರ ಮನೆಯಿಂದ ಈ ಟ್ರಸ್ಟಿಗೆ ಹೆಸರು ನೊಂದಾಯಿಸಿ ತಿಂಗಳಿಗೆ 100 ರೂ ದೇಣಿಗೆ ಪಡೆದು ಅದರಿಂದ ಹಿಂದೂ ಸಮಾಜಕ್ಕೆ ಗೋ ಸೇವೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗೆ ಹಣ ದೇಣಿಗೆ ಕೊಟ್ಟ ಮನೆಯು ‘ಗೋ ಸಂರಕ್ಷಣಾ ಗೃಹ’ಎಂದು ಕರೆಯಲಾಗುತ್ತದೆ.

ಈಶ್ವರಪ್ಪನವರು ತಾವು ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದಾಗಲೇ ಗಾಜನೂರಿನ ಸಮೀಪ ಏಳು ಎಕರೆ ಜಮೀನನ್ನು ಗೋಪಾಲನಾ ಕಾರ್ಯಗಳಿಗಾಗಿ ಮಂಜೂರು ಮಾಡಿಸಿದ್ದು ಈಗ ಅಲ್ಲಿ ನಗರದ ಸುತ್ತಮುತ್ತಲಿನ ಗೋ ಸಂರಕ್ಷಣಾ ಕೇಂದ್ರದವರು ಎದುರಿಸುತ್ತಿರುವ ಅನೇಕ ಸಮಸ್ಯೆಗಳಿಗೆ ಪರಿಹಾರದ ಕಾರ್ಯ ಮಾಡುವಲ್ಲಿ ಸಜ್ಜಾಗಿದ್ದಾರೆ. ಮುಖ್ಯವಾಗಿ ಗೋವುಗಳಿಗೆ ಬೇಕಾದ ಮೇವು ಅದಕ್ಕಾಗಿ ಹುಲ್ಲಿನ ಬೀಜಗಳನ್ನು ನೆಟ್ಟು ಮೇವಿಗಾಗಿ ವ್ಯವಸ್ಥೆ ಮಾಡುವ ಕಾರ್ಯ ಭರದಿಂದ ಸಾಗಿದೆ.

ಮೊನ್ನೆ ಮೊನ್ನಯಷ್ಟೇ ಗೋವಿಗಾಗಿ ಅವುಗಳ ಆರೈಕೆಗಾಗಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಆಂಬುಲೆನ್ಸ್ ಸೇವೆ ಮತ್ತು ವೈದ್ಯಕೀಯ ಸೌಲಭ್ಯ ಒದಗಿಸುವ ಶುಶ್ರೂಷ ಕೇಂದ್ರ ಹಾಗೂ ಸಿಬ್ಬಂದಿಗಳನ್ನು ಒದಗಿಸಿಕೊಡುವ ಯೋಜನೆಯನ್ನು ಹೊಂದಿ ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿ ಟ್ರಸ್ಟಿಗೆ ಒಪ್ಪಿಸಲಾಗಿದೆ. ನಗರದ ಬೀಡಾಡಿ ದನಗಳ ರಕ್ಷಣೆಯ ಜೊತೆಗೆ ಅವುಗಳಿಗೆ ಅಗತ್ಯವಿರುವ ಮೂಲ ಸೌಲಭ್ಯ ಒದಗಿಸುವ ಯೋಜನೆಯನ್ನು ಈ ಟ್ರಸ್ಟ್ ಹೊಂದಿದೆ. ಸುಮಾರು 5000 ಜನರನ್ನು ಬರುವ ಅಕ್ಟೋಬರ್ 8ರ ಒಳಗೆ ಗೋ ಸಂರಕ್ಷಣಾ ಗೃಹಕ್ಕೆ ನೋಂದಣಿ ಮಾಡಿಕೊಳ್ಳಬೇಕೆಂದು ಗುರಿ ಹೊಂದಿರುವ ಈ ಟ್ರಸ್ಟ್ ಈಗಾಗಲೇ 3000ಕ್ಕೂ ಅಧಿಕ ಜನರನ್ನ ತಲುಪಿದೆ.
ಈ ಟ್ರಸ್ಟಿಗೆ ಬೆಂಬಲವಾಗಿ ಸಮಾಜದ ಅನೇಕ ಗಣ್ಯರು ಸಾತ್ ನೀಡಿರುವುದು ಸಹ ಈಶ್ವರಪ್ಪನವರ ಈ ಕಾರ್ಯಕ್ಕೆ ನೂರಾನೆಯ ಬಲಬಂದಂತಿದೆ. ಸದಾ ನಮ್ಮ ಹಿಂದೂ ಸಂಸ್ಕೃತಿಯ ಔನ್ನತ್ಯದ ಚಿಂತನೆಗಾಗಿ ಕಾರ್ಯ ಮಾಡುವ ಮಾನ್ಯ ಈಶ್ವರಪ್ಪನವರು ಗೋ ಸಂತತಿಯ ರಕ್ಷಣೆ ಮಾಡುವ ಆಧುನಿಕ ಗೋಪಾಲಕರಾಗಿದ್ದಾರೆ. ನಾವು ಸಹ ಈ ಯಜ್ಞದಲ್ಲಿ ಪಾಲ್ಗೊಳ್ಳೋಣ.

ನಮೋ ಗೋಭ್ಯೋ ನಮೋ ನಿತ್ಯಂ ಸುರಭ್ಯೇ ಚ ನಮೋ ನಮಃ l
ಗೋವಿನಾ ನಂದಿತಂ ವಿಶ್ವಂ ಭವತು ಕ್ಷೇಮಮಂಗಲಮ್ ll
ನಾವು ಮಾಡುವ ಈ ಕಾರ್ಯದಿಂದ ಗೋಮಾತೆ ತೃಪ್ತವಾಗಿ ಸಂತೋಷಗೊಳ್ಳುತ್ತಾಳೆ. ಅದರಿಂದ ಜಗತ್ತು ಕ್ಷೇಮ ಹಾಗೂ ಮಂಗಳದಿಂದ ಕೂಡಿರುತ್ತದೆ. ಹಾಗಾಗಿ ಮನೆಯಲ್ಲಿ ಗೋವಿಲ್ಲವೆಂಬ ನೋವು ಬಿಟ್ಟು ಗೋವರ್ಧನ ಟ್ರಸ್ಟ್ ನ ಜೊತೆಗೂಡಿ.ಈಗಾಗಲೇ ಗೋವಿನ ಸಂರಕ್ಷಣೆಯನ್ನು ನಾಡಿನ ಅನೇಕ ಮಠಾಧೀಶರು, ಸಂಘ-ಸಂಸ್ಥೆಗಳವರು ಕಾರ್ಯ ನಿರ್ವಹಿಸುತ್ತಲೇ ಬಂದಿದ್ದಾರೆ. ಅದರ ಸಾಲಿನಲ್ಲಿ ನಿಲ್ಲುವ ಮತ್ತೊಂದು ಟ್ರಸ್ಟ್ ಎಂದರೆ ಗೋವರ್ಧನ ಸೇವಾ ಟ್ರಸ್ಟ್ ನಗರದಲ್ಲಿರುವ ಗೋಶಾಲೆಗಳಾದ ಸುರಭಿ, ಜ್ಞಾನೇಶ್ವರಿಯೇ ಮೊದಲಾದ ಗೋ ಶಾಲೆಗಳಲ್ಲಿ ಗೋವಿನ ಆರೈಕೆಗೆ ಅಗತ್ಯವಾದ ಮೇವು ಆರೋಗ್ಯವೇ ಮೊದಲಾಗಿ ಮೂಲ ಸೌಲಭ್ಯಗಳನ್ನು ಒದಗಿಸಿ ಕೊಡುವ ಮೂಲಕ ಗೋ ರಕ್ಷಣೆಗೆ ಟೊಂಕ ಕಟ್ಟಿ ನಿಂತಾಗಿದೆ. ಗೋ ಸಂತತಿಯ ರಕ್ಷಣೆ ನಮ್ಮ ಜೀವ ನಾಡಿಯ ರಕ್ಷಣೆ ಎಂದರಿತು ನಾವೂ ಸಹ ಭಾಗಿಯಾಗೋಣ.

ವಿಶೇಷವಾಗಿ ಈ ಗೋವರ್ಧನ ಟ್ರಸ್ಟ್ ನ ಉದ್ಘಾಟನೆಯನ್ನು ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತಿ ಮಹಾಸ್ವಾಮಿಗಳವರು ಇದೇ ಅಕ್ಟೊಬರ್ 8 ರಂದು ಅಲ್ಲಮಪ್ರಭು ಮೈದಾನದಲ್ಲಿ ನಡೆಯುವ ನೆರವೇರಿಸಲಿದ್ದಾರೆ. ಈ ಒಂದು ಪುಣ್ಯ ಕಾರ್ಯಕ್ರಮಕ್ಕೆ ನಗರದ ಸಮಸ್ತ ಹಿಂದೂ ಬಾಂಧವರು ಅತೀ ಹೆಚ್ಚಿನ ಸಮಖ್ಯೆಯಲ್ಲಿ ಭಾಗಿಯಾಗಬೇಕೆಂಬ ಆಶಯ ಆಯೋಜಕರದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Govardhan TrustK S EshwarappaKannada News WebsiteLatest News KannadaShimogaShivamoggaShivamoggaNewsShri Vidhushekara Bharathi SwamijiSpecial ArticleSringeri Swamijiಕೆ.ಎಸ್. ಈಶ್ವರಪ್ಪಗಾವೋ ವಿಶ್ವಸ್ಯ ಮಾತರಃಗೋರಕ್ಷಣೆಗೋವರ್ಧನ ಟ್ರಸ್ಟ್ಗೋವರ್ಧನೆವಿಶೇಷ ಲೇಖನ
Share196Tweet123Send
Previous Post

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ ಮರೆತ ಮಹಿಳೆ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

Next Post

ಗಾಂಧಿಜಿ, ಶಾಸ್ತ್ರಿ ಅವರ ಜೀವನಾದರ್ಶಗಳು ನಮಗೆ ದಾರಿದೀಪವಾಗಲಿ: ಬಿ.ಎಲ್. ಚಂದ್ವಾನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಾಂಧಿಜಿ, ಶಾಸ್ತ್ರಿ ಅವರ ಜೀವನಾದರ್ಶಗಳು ನಮಗೆ ದಾರಿದೀಪವಾಗಲಿ: ಬಿ.ಎಲ್. ಚಂದ್ವಾನಿ

ಗಾಂಧಿಜಿ, ಶಾಸ್ತ್ರಿ ಅವರ ಜೀವನಾದರ್ಶಗಳು ನಮಗೆ ದಾರಿದೀಪವಾಗಲಿ: ಬಿ.ಎಲ್. ಚಂದ್ವಾನಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

March 16, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಕಣ್ಣೂರು ಎಕ್ಸ್’ಪ್ರೆಸ್ ಕೋಜಿಕೋಡ್’ವರೆಗೆ ವಿಸ್ತರಣೆ

March 16, 2026
ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

March 16, 2026
ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

March 16, 2026
ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

March 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL