No Result
View All Result
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8
English Articles

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

by ಕಲ್ಪ ನ್ಯೂಸ್
June 5, 2026
0

Kalpa Media House  |  Special Article  | On June 8, Indian fans will be amongst the first in the world...

Read moreDetails
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೃಷ್ಣ ಹೇಳಿದ ಮಾರ್ಗದಲ್ಲಿ ಬದುಕೋಣ | ಭಂಡಾರ ಕೇರಿ ಮಠದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಂದೇಶ

ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವ ಅಂಗವಾಗಿ ಸಂವಾದ | ನೂರಾರು ಗೋವುಗಳ ಸಂರಕ್ಷಕ ಅರುಣ್ ಅವರಿಗೆ ಸನ್ಮಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 18, 2024
in ಬೆಂಗಳೂರು ನಗರ
0
ಕೃಷ್ಣ ಹೇಳಿದ ಮಾರ್ಗದಲ್ಲಿ ಬದುಕೋಣ | ಭಂಡಾರ ಕೇರಿ ಮಠದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಂದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಹಾಭಾರತ ಮತ್ತು ಭಾಗವತದಲ್ಲಿ ಭಗವಾನ್ ಶ್ರೀ ಕೃಷ್ಣ ತೋರಿದ ಮಾರ್ಗದಲ್ಲಿ ನಮ್ಮ ಬದುಕನ್ನು ರೂಪಿಸಿಕೊಂಡರೆ ಸಾರ್ಥಕತೆ ಸಾಧ್ಯ ಎಂದು ಭಂಡಾರ ಕೇರಿ #BandarakeriMutt ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಹೇಳಿದರು.

ಬೆಂಗಳೂರಿನ #Bengaluru ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಭಾಗವತಾಶ್ರಮ ಪ್ರತಿಷ್ಠಾನ, ಲೋಕ ಸಂಸ್ಕೃತಿ ಕಲಾವಿದ್ಯಾ ವಿಕಾಸ ಪ್ರತಿಷ್ಠಾನ ಸಂಯುಕ್ತವಾಗಿ ಹಮ್ಮಿಕೊಂಡಿರುವ ಶ್ರೀ ವಿದ್ಯಾಮಾನ್ಯ ತೀರ್ಥ ಗುರುಗಳ ಆರಾಧನಾ ಉತ್ಸವ ಮತ್ತು ವೇದವ್ಯಾಸ ಜಯಂತಿ ಸರಣಿ ಕಾರ್ಯಕ್ರಮದ ಮೂರನೇ ದಿನ ಆಯೋಜನೆಗೊಂಡಿರುವ ವಿಶೇಷ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಅವರು ಆಶೀರ್ವಚನ ನೀಡಿದರು.

ಧರ್ಮ ಮಾರ್ಗದಲ್ಲಿ ನಾವು ಸಾಗಿದಾಗ ದಿನೇ ದಿನೇ ಅಭಿವೃದ್ಧಿ ಸಾಧ್ಯವಿದೆ. ಶ್ರೀ ಕೃಷ್ಣನ ಅನನ್ಯ ಸೇವಕರಾದ ಪಾಂಡವರು ಹೇಗೆ ಬದುಕಿದ್ದರು ಎಂಬುದನ್ನು ಕೊಂಚ ಅವಲೋಕಿಸಿದರೆ ನಮ್ಮ ಬದುಕನ್ನು ಯಾವ ಮಾರ್ಗದಲ್ಲಿ ಕೊಂಡೊಯ್ಯಬೇಕು ಎಂಬುದು ನಿರ್ಧರಿತವಾಗುತ್ತದೆ ಎಂದರು.
ಅರ್ಜುನನನ್ನು ನೆನೆಸಿಕೊಂಡರೆ ಒಳ ಹೊರಗಿನ ಶತ್ರುಗಳು ನಾಶವಾಗುತ್ತಾರೆ. ನಕುಲ ಸಹದೇವರನ್ನು ಸ್ಮರಿಸಿಕೊಂಡರೆ ನೂರೆಂಟು ರೋಗಗಳು ದೂರವಾಗುತ್ತವೆ. ಧರ್ಮರಾಜ ಮತ್ತು ಭೀಮಾದಿಗಳನ್ನು ಸ್ಮರಿಸಿಕೊಂಡರೆ ಧರ್ಮದ ಉಳಿವು ಮತ್ತು ಸಾಮರ್ಥ್ಯದ ಸದ್ಬಳಕೆಯಾಗುತ್ತದೆ. ಹಾಗಾಗಿ ನಾವು ಮಹಾಭಾರತ ಏನು ಸಂದೇಶ ಕೊಟ್ಟಿದೆಯೋ ಆ ನಿಟ್ಟಿನಲ್ಲಿ ನಮ್ಮ ಚಟುವಟಿಕೆಗಳನ್ನು ರೂಪಿಸಿಕೊಳ್ಳುವುದು ಕಲಿಯುಗದಲ್ಲಿ ವಿಹಿತ ಎಂದರು.

Also read: ಜಾತಿ, ದುಡ್ಡಿನ ಮೇಲೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಕಾನೂನು ಪ್ರಕೋಷ್ಠದ ಪ್ರವೀಣ್ ಆಕ್ರೋಶ
ಮಹಾಕಾವ್ಯದ ಮರು ಸೃಷ್ಟಿ ಸಲ್ಲದು
ಮಹಾಭಾರತ ಮತ್ತು ರಾಮಾಯಣಗಳನ್ನು ಸೃಜನಶೀಲತೆ ಎಂಬ ಹೆಸರಿನಲ್ಲಿ ಮರು ಸೃಷ್ಟಿ ಮಾಡುವ ಕಾರ್ಯ ಎಂದಿಗೂ ಸಲ್ಲದು ಎಂದು ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ಈ ಎರಡೂ ಮಹಾ ಕಾವ್ಯಗಳನ್ನು ಆಧರಿಸಿ ತಮಗೆ ತೋಚಿದ ರೀತಿಯಲ್ಲಿ ಸಿನಿಮಾ ಮಾಡುವುದು, ನಾಟಕ ಆಡುವುದ, ಮರು ಸೃಷ್ಟಿ ಗ್ರಂಥಗಳನ್ನು ರಚಿಸುವುದು ಆಧುನಿಕರಿಗೆ ಒಂದು ಫ್ಯಾಶನ್ ಆಗಿಬಿಟ್ಟಿದೆ. ಈ ನಿಟ್ಟಿನಲ್ಲಿ ಸಾಹಿತಿಗಳು ಮತ್ತು ಕಲಾವಿದರು ಚಿಂತನ – ಮಂಥನ ನಡೆಸಿ ಮೂಲ ಮಹಾಭಾರತ ಮತ್ತು ರಾಮಾಯಣಗಳಿಗೆ ಯಾವುದೇ ರೀತಿಯ ಅಪಚಾರವಾಗದಂತೆ ಎಚ್ಚರ ವಹಿಸಬೇಕು ಎಂದು ಅವರು ಸಲಹೆ ನೀಡಿದರು.
ರಾಮಾಯಣ ಮತ್ತು ಮಹಾಭಾರತಗಳಿಗೆ ಉತ್ತಮವಾದ ವ್ಯಾಖ್ಯಾನವನ್ನು ನೀಡಿದ್ದು, ನಮ್ಮೆಲ್ಲರಿಗೆ ಮಹಾ ಕಾವ್ಯವನ್ನು ಅರ್ಥ ಮಾಡಿಕೊಳ್ಳಲು ಆಚಾರ್ಯ ಶ್ರೀ ಮಧ್ವರು ತಾತ್ಪರ್ಯ ನಿರ್ಣಯ ಗ್ರಂಥಗಳನ್ನು ರಚನೆ ಮಾಡಿದ್ದಾರೆ‌.

ಗೋ ಸಂರಕ್ಷಕ ಅರುಣ್- ಸ್ಮಿತಾ ದಂಪತಿಗೆ ಸನ್ಮಾನ
ಭಂಡಾರಿಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿಯವರು ಇದೇ ಸಂದರ್ಭದಲ್ಲಿ ಗೋ ಸಂರಕ್ಷಣೆಯಲ್ಲಿ ಅದ್ವಿತೀಯ ಸಾಧನೆಗಳನ್ನು ಮಾಡುತ್ತಿರುವ ಡೆಂಕಣಿಕೋಟೆಯ ಫಲಾಮೃತ ಸಂಸ್ಥೆಯ ಮುಖ್ಯಸ್ಥರಾದ ಅರುಣ್ ಮತ್ತು ಸ್ಮಿತ ದಂಪತಿಗೆ ವಿಶೇಷವಾಗಿ ಸನ್ಮಾನಿಸಿದರು. ಗೋ ಸೇವೆ ಎಂದರೆ ಅದು ಸಾಕ್ಷಾತ್ ಶ್ರೀ ಕೃಷ್ಣನ ಸೇವೆ ಇಂತಹ ನಿಸ್ವಾರ್ಥ ಗೋ ಸೇವೆಯಲ್ಲಿ ಶ್ರಮಿಸುತ್ತಿರುವ ಪಟ್ಟು ಹೆಚ್ಚಾಗಿ ಎಂದು ಶ್ರೀಗಳು ಆಶೀರ್ವದಿಸಿದರು.

ಮಹಾಭಾರತವು ನಿತ್ಯ ನೂತನ ಕಥೆಯಾಗಿದೆ. ಪಾಂಡವರು ಮತ್ತು ಕೌರವರ ಗುಣಗಳು, ಚಿಂತನೆಗಳು, ಉದ್ದೇಶಗಳು, ರಾಜ್ಯಭಾರದ ಕ್ರಮಗಳು, ಗುರು ಹಿರಿಯರನ್ನು ಗೌರವಿಸುವ ವಿಧಾನಗಳು, ಮಾಡಿದ ಯುದ್ಧಗಳು, ಕೊಡುವ ಸಂದೇಶಗಳನ್ನು ಸೂಕ್ಷ್ಮವಾಗಿ ನಾವು ಅವಲೋಕಿಸಿಕೊಳ್ಳಬೇಕಿದೆ ಎಂದರು.
ಪಂಡಿತ ತಿರುಮಲ ಕುಲಕರ್ಣಿ ಅವರು ಮಾತನಾಡಿ ಪಾಂಡವರು ವನವಾಸಕ್ಕೆಂದು ಕಾಡಿಗೆ ತೆರಳಿದರೂ ಅವರಿಗೆ ಭಗವಂತನ ಸಖ್ಯವಿತ್ತು. ಋಷಿ ಮುನಿಗಳ ಅನುಗ್ರಹವಿತ್ತು. ಅವರಿಗೆ ಕಾಡೇ ಸ್ವರ್ಗವಾಯಿತು. ಪಾಂಡವರಿಗೆ ಫಲಗಳನ್ನು ನೀಡಲೆಂದೇ ಭಗವಂತ ಧರೆಗಿಳಿದು ಬಂದ. ಪಾಂಡವರ ಮಹತ್ವ ಮತ್ತು ಸಮಾಜಕ್ಕೆ ನೀಡಿದ ಸಂದೇಶ ನಮಗೆ ಅರ್ಥವಾಗುವುದು ಮಹಾಕಾವ್ಯದ ಕೊನೆಯ ಭಾಗದಲ್ಲಿ. ಅಂದರೆ ಸಾಧಕರಿಗೆ ಮಾನ್ಯತೆ ದೊರಕುವುದು ಸಾಧನೆಯ ಕೊನೆಯ ಘಟ್ಟದಲ್ಲಿ. ಕೌರವನ ಗುಣಗಳನ್ನು ಅನುಸರಿಸಿದವರಿಗೆ ಮೊದಲಿಗೆ ಸಾಕಷ್ಟು ಫಲಗಳು ದೊರಕಬಹುದು. ಆದರೆ ಅವುಗಳು ಯಾವುದೂ ಶಾಶ್ವತವಲ್ಲ . ಹಾಗಿರುವಾಗ ನಾವು ಕೃಷ್ಣ ಮತ್ತು ಪಾಂಡವರ ಸಂದೇಶಗಳನ್ನು ಅನುಸರಿಸಿ ಜೀವನ ಕ್ರಮ ರೂಪಿಸಿಕೊಳ್ಳುವುದು ಅಗತ್ಯ ಎಂದರು.

ಪಂಡಿತ ವೆಂಕಟೇಶ್ ಕುಲಕರ್ಣಿ ತಮ್ಮ ವಿಚಾರಗಳನ್ನು ಮಂಡಿಸಿ ಮಹಾಭಾರತ ಎಂದರೆ ಕೇವಲ ಶಾಸ್ತ್ರ ಗ್ರಂಥ ಮಾತ್ರವಲ್ಲ. ಭಗವಂತನನ್ನು ತಿಳಿಯಲು ಒಂದು ಉತ್ತಮ ಸಾಧನ ಎಂದರು.

ದ್ರೌಪದಿ ಸ್ವಯಂವರ, ಪಗಡೆಯಾಟ, ವನವಾಸ ಮತ್ತು ಅಜ್ಞಾತವಾಸಗಳನ್ನು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದ ಅವರು, ಮಹಾಭಾರತ ಪ್ರತಿ ದಿನವೂ, ಪ್ರತಿ ಕ್ಷಣವೂ ನಮಗೆ ಸಂವಾದಿಯಾಗಿ ನಿಲ್ಲುತ್ತದೆ. ಅದರಲ್ಲಿನ ಧನಾತ್ಮಕ ಸಂಗತಿಗಳನ್ನು ನಾವೆಲ್ಲರೂ ಪಾಲನೆ ಮಾಡಿದಾಗ ಮಾತ್ರ ಇಹ ಮತ್ತು ಪರದಲ್ಲಿ ಮುಕ್ತಿ ದೊರಕಲು ಸಾಧ್ಯ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4
Tags: Bandarakeri MuttBENGALURUKannada News WebsiteLatest News KannadaLord KrishnaSri Vidyeshathirtha Swamijiಬೆಂಗಳೂರುಭಾಗವತಮಹಾಭಾರತಶ್ರೀ ಕೃಷ್ಣಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ
Share196Tweet123Send
Previous Post

ಪದವೀಧರರ ಸಮಸ್ಯೆ ಅರಿತಿದ್ದೇನೆ | ಗೆಲ್ಲಿಸಿ ಸ್ಪಂದಿಸಲು ಅವಕಾಶ ನೀಡಿ | ಡಾ.ಧನಂಜಯ ಸರ್ಜಿ ಮನವಿ

Next Post

ಮೂಡಬಿದರೆ | ಎರಡು ದಿನ ಆಳ್ವಾಸ್ ಬೃಹತ್ ಉದ್ಯೋಗ ಮೇಳ | ನೋಂದಣಿ ಮಾಡಿಕೊಳ್ಳುವುದು ಹೇಗೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೂಡಬಿದರೆ | ಎರಡು ದಿನ ಆಳ್ವಾಸ್ ಬೃಹತ್ ಉದ್ಯೋಗ ಮೇಳ | ನೋಂದಣಿ ಮಾಡಿಕೊಳ್ಳುವುದು ಹೇಗೆ?

ಮೂಡಬಿದರೆ | ಎರಡು ದಿನ ಆಳ್ವಾಸ್ ಬೃಹತ್ ಉದ್ಯೋಗ ಮೇಳ | ನೋಂದಣಿ ಮಾಡಿಕೊಳ್ಳುವುದು ಹೇಗೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

June 5, 2026
ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

June 5, 2026
ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

June 5, 2026
SWR to run special trains for Good Friday, Easter rush

ಮೈಸೂರು – ಬೆಂಗಳೂರು ವಿಶೇಷ ರೈಲು ಸೇವೆ ಕಾಯಂ

June 5, 2026
ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL