No Result
View All Result
V. Somanna Dedicates ₹22.40 Crore Road Over Bridge at Yelekeri Gate
English Articles

V. Somanna Dedicates ₹22.40 Crore Road Over Bridge at Yelekeri Gate

by ಕಲ್ಪ ನ್ಯೂಸ್
June 30, 2026
0

Kalpa Media House  |  Bangaluru  | Hon'ble Minister of State for Railways & Jal Shakti, Shri V. Somanna, dedicates Road...

Read moreDetails
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕಮಗಳೂರು

ಮೈತ್ರಿ ಅಭ್ಯ ರ್ಥಿಗಳನ್ನು ಅಧಿಕ ಮತಗಳಿಂದ ಗೆಲ್ಲಿಸೋಣ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 26, 2024
in ಚಿಕ್ಕಮಗಳೂರು
0
ಮೈತ್ರಿ ಅಭ್ಯ ರ್ಥಿಗಳನ್ನು ಅಧಿಕ ಮತಗಳಿಂದ ಗೆಲ್ಲಿಸೋಣ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  |

ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಹಣದ ಬಲದಿಂದ ಯಾರನ್ನ ಬೇಕಾದರೂ ಗೆಲ್ಲಿಸುತ್ತೇವೆ ಎನ್ನುವ ಭ್ರಮೆಯಲ್ಲಿದೆ, ಇದರಿಂದ ಕಾಂಗ್ರೆಸ್ ಪಕ್ಷವನ್ನು ಹೊರತರಬೇಕೆಂದೆರೆ ಪರಿಷತ್ ಚುನಾವಣೆಯನ್ನು ಗೆಲ್ಲಲ್ಲೆಬೇಕು ಎಂದು ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಹೇಳಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಭಾನುವಾರ ಹಮ್ಮಿಕೊಂಡಿದ್ದ ಚುನಾವಣಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಸರ್ಕಾರದ ಈ ಅವಧಿಯಲ್ಲಿ ಯಾವುದೇ ಕ್ಷೇತ್ರಕ್ಕೆ ನಯಾಪೈಸೆ ರೂಪಾಯಿ ಕೂಡ ಅನುದಾನ ಕೊಟ್ಟಿಲ್ಲ, ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ, ಕರ್ನಾಟಕ ರಾಜ್ಯ ಹಿಂದೆಂದೂ ಇಂತಹ ಕೆಟ್ಟ ಆಡಳಿತವನ್ನು ಕಂಡಿರಲಿಲ್ಲ ಎಂದು ಆರೋಪಿಸಿದ ಅವರು, ದೇಶದಲ್ಲಿ ಈ ಭಾರಿ ಸ್ಪಷ್ಟ ಬಹುಮತ ಬರುವುದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಭಾರಿಗೆ ಪ್ರಧಾನಿ ಆಗುತ್ತಾರೆ, ಇದೆ ರೀತಿ ಪರಿಷತ್ ಚುನಾವಣೆಯನ್ನು ಕೂಡ ನಾವು ಗೆಲ್ಲುತ್ತೇವೆ ಎಂದು ಹೇಳಿದರು.

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಎಸ್. ಎಲ್. ಭೋಜೇಗೌಡರನ್ನು ಗೆಲ್ಲಿಸಲು ನಮ್ಮ ಕಾರ್ಯಕರ್ತರು , ನಮ್ಮ ಪಕ್ಷದ ಮುಖಂಡರು , ಜೆಡಿಎಸ್ ಕಾರ್ಯಕರ್ತರು ಒಂದಾಗಿ ಅತ್ಯಂತ ಶ್ರಮದಿಂದ ಕೆಲಸ ಮಾಡುತ್ತಿರುವುದು ತುಂಬಾ ಸಂತೋಷ ತಂದಿದೆ, ಇತ್ತೀಚೆಗಷ್ಟೇ ಬಿಜೆಪಿ ಜೆಡಿಎಸ್ ಮೈತ್ರಿಯಾಗಿ ಎರಡೂ ಪಕ್ಷದ ಕಾರ್ಯಕರ್ತರು ಅತ್ಯಂತ ಶ್ರದ್ದೆಯಿಂದ ಕೆಲಸ ಮಾಡಿ ಯಶಸ್ವಿಯಾಗಿ ಚುನುವಣೆಯನ್ನು ನಡೆಸಿದ್ದೇವೆ. ಇದೆ ರೀತಿ ಪರಿಷತ್ ಚುನಾವಣೆಯನ್ನು ಶ್ರದ್ಧೆ ಕೆಲಸ ಮಾಡಿ ಇಬ್ಬರೂ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದರು.

ರಾಜಕಾರಣದಲ್ಲಿ ಜಾತಿ ಅನ್ನುವುದು ಇರುವುದಿಲ್ಲ, ಡಾ ಧನಂಜಯ ಸರ್ಜಿಯವರು ಒಬ್ಬ ಸಜ್ಜನ ವ್ಯಕ್ತಿ , ರಾಜಕಾರಣಕ್ಕೆ ಬರಬೇಕು ಎಂದುಕೊಂಡು ಬಂದವರಲ್ಲ, ಪ್ರಾಮಾಣಿಕತೆಯಿಂದ ಜನರ ಸೇವೆಯನ್ನು ಮಾಡಬೇಕು, ಉತ್ತಮ ರಾಜಕಾರಣವನ್ನು ಮಾಡಬೇಕು ,ಧನಂಜಯ ಸರ್ಜಿಯಂತವರು ರಾಜಕಾರಣಕ್ಕೆ ಬರುವುದರಿಂದ ರಾಜಕಾರಣಕ್ಕೆ ಒಂದು ಹೊಸ ರೂಪ ಸಿಗುವಂತಾಗುತ್ತದೆ , ರಾಜಕಾರಣಿಗಳಿಗೆ ಉತ್ತಮ ಹೆಸರು ಸಿಗುತ್ತದೆ, ಸರ್ಜಿಯವರ ಮೇಲೆ ನಮಗೆ ವಿಸ್ವಾಸ ಇದೆ, ದೊಡ್ಡ ಅಂತರದಿಂದ ವಿಜಯಶಾಲಿ ಆಗುವ ಮೂಲಕ ಕ್ಷೇತ್ರಕ್ಕೂ ಒಡೆತನವನ್ನು ಮಾಡುತ್ತಾರೆ, ಸಂಘಟನೆಗೂ ಶಕ್ತಿ ತುಂಬುವ ಕೆಲಸ ಮಾಡುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.

ಚುನಾವಣೆಗೆ ಇನ್ನು ಕೇವಲ ಏಳು ದಿನಗಳು ಮಾತ್ರ ಬಾಕಿ ಇದೆ, ಶಿಕ್ಷಕರ ಕ್ಷೆತ್ರದ ಅಭ್ಯರ್ಥಿ ಎಸ್. ಎಲ್. ಭೋಜೇಗೌಡರ ಕ್ರಮ ಸಂಖ್ಯೆ 1 ಮತ್ತು ಬಿಜೆಪಿ ಅಭ್ಯರ್ಥಿ ಡಾ ಧನಂಜಯ ಸರ್ಜಿ ಅವರ ಕ್ರಮ ಸಂಖ್ಯೆ 2 , ಈ ಇಬ್ಬರು ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯದ ಮತವನ್ನು ಕೇಳಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ದೇವರಾಜ್ ಶೆಟ್ಟಿ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಎಸ್ ಎಲ್ ಭೋಜೇಗೌಡ, ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಭಾರಿ ಹಾಗೂ ಮಾಜಿ ಸಚಿವರಾದ ಸಿ. ಟಿ. ರವಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್, ರಾಜ್ಯ ಬಿಜೆಪಿ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ , ಸ್ಥಳೀಯ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು. 

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

  

Tags: B Y VijayendraChikkamagaluruDr. Dhananjaya SarjiPolitical NewsShimogaShivamogga
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭೀಕರ ಅಪಘಾತ: 11 ಮಂದಿ ಸ್ಥಳದಲ್ಲೇ ಸಾವು | 10 ಜನರಿಗೆ ಗಂಭೀರ ಗಾಯ

Next Post

ಪರಿಷತ್ ಚುನಾವಣೆ | ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಮತಬೇಟೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪರಿಷತ್ ಚುನಾವಣೆ | ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಮತಬೇಟೆ

ಪರಿಷತ್ ಚುನಾವಣೆ | ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಮತಬೇಟೆ

Leave a Reply Cancel reply

Your email address will not be published. Required fields are marked *

No Result
View All Result
V. Somanna Dedicates ₹22.40 Crore Road Over Bridge at Yelekeri Gate
English Articles

V. Somanna Dedicates ₹22.40 Crore Road Over Bridge at Yelekeri Gate

by ಕಲ್ಪ ನ್ಯೂಸ್
June 30, 2026
0

Kalpa Media House  |  Bangaluru  | Hon'ble Minister of State for Railways & Jal Shakti, Shri V. Somanna, dedicates Road...

Read moreDetails
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL