ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೃಷಿ ಇಲಾಖೆಯ ಗ್ರೂಪ್ ಸಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಈ ಕುರಿತಂತೆ ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಕೇಳಿದ ಚುಕ್ಕಿ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.
ಖಾಲಿ ಇರುವ ಹುದ್ದೆಗಳಿಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸರ್ಕಾದ ಸೌಲಭ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. 2018-19 ನೆಯ ಸಾಲಿನಲ್ಲಿ ಗ್ರೂಪ್-ಎ ಮತ್ತು ಬಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗಿದೆ. ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲಾಗುವುದು. ನೇರ ನೇಮಕಾತಿ ಮೂಲಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುತ್ತಿದೆ ಎಂದಿದ್ದಾರೆ.
ಕೃಷಿ ಇಲಾಖೆಯಲ್ಲಿ 3640 ಹುದ್ದೆಗಳು ಖಾಲಿಯಿದ್ದು, 2018-19 ನೆಯ ಸಾಲಿನಲ್ಲಿ ಗ್ರೂಪ್ ಎ ಮತ್ತು ಬಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗಿದೆ. ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
(ವರದಿ: ಶ್ರೀಮತಿ ಸಂಧ್ಯಾ, ಕೃಷಿ ಸಚಿವರ ಮಾಧ್ಯಮ ಕಾರ್ಯದರ್ಶಿ)
Get in Touch With Us info@kalpa.news Whatsapp: 9481252093







Discussion about this post