Wednesday, July 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಚರಕ ಉಚಿತ ಮಾಸಿಕ ಪತ್ರಿಕೆ ಲೋಕಾರ್ಪಣೆ

ಸಾಹಿತ್ಯಕ್ಕೆ ವ್ಯಕ್ತಿತ್ವವನ್ನೇ ಬದಲಿಸುವ ಶಕ್ತಿಯಿದೆ: ಸಾಹಿತಿ ನಾ.ಡಿಸೋಜಾ ಅಭಿಮತ

February 14, 2019
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಶಿವಮೊಗ್ಗ: ಸಾಹಿತ್ಯಕ್ಕೆ ವ್ಯಕ್ತಿತ್ವವನ್ನೇ ಬದಲಾವಣೆ ಮಾಡುವ ಶಕ್ತಿಯಿದೆ. ಹೀಗಾಗಿ, ಪ್ರತಿಯೊಬ್ಬರೂ ಪುಸ್ತಕ ಹಾಗೂ ಸಾಹಿತ್ಯವನ್ನು ಓದು ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಡಾ.ನಾ. ಡಿಸೋಜಾ ಕರೆ ನೀಡಿದರು.

ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಿಂದ ಹೊರತಂದಿರುವ ಚರಕ ಮಾಸಿಕ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಜೀವನದಲ್ಲಿ ಓದುವ ಹವ್ಯಾಸವನ್ನು ರೂಢಿಸಿಕೊಂಡರೆ ಎಂತಹ ಕಷ್ಟವನ್ನೂ ಸಹಾ ಮರೆಯಬಹುದು. ಸಾಹಿತ್ಯ ಅಧ್ಯಾಯನದಿಂದ ವ್ಯಕ್ತಿಯ ವ್ಯಕ್ತಿತ್ವವನ್ನು ಬದಲಾಯಿಸುವ ಶಕ್ತಿ ಇದೆ. ಒಬ್ಬ ವ್ಯಕ್ತಿಯು ಎಷ್ಟು ಪುಸ್ತಕ ಓದುತ್ತಾನೋ ಅಷ್ಟು ಅವನ ಜೀವನದಲ್ಲಿ ಹೊಸ ಹುರುಪು ಮತ್ತು ಉತ್ಸಾಹ ಬೆಳೆಯುತ್ತಾ ಹೋಗುತ್ತದೆ. ಹೆಚ್ಚಾಗಿ ಓದುವ ಹಾಗೂ ಬರೆಯುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಆಗ ನಿಮ್ಮಲ್ಲಿರುವ ಮಾನಸಿಕ ದುಗುಡಗಳು ದೂರವಾಗಿ ನಿಮ್ಮ ಮನಸ್ಸು ಶುದ್ದವಾಗುತ್ತದೆ ಎಂದರು.


ಚರಕ ಮಾಸಿಕ ಪತ್ರಿಕೆಯನ್ನು ಬಹಳ ಸಂತೋಷದಿಂದ ಲೋಕಾರ್ಪಣೆಗೊಳಿಸಿದ್ದೇನೆ. ಕಾರಣವೆನೆಂದರೆ, ಚರಕ ಎಂಬ ಹೆಸರು ನಮ್ಮ ಪರಂಪರೆಯಿಂದ ಬಂದಿದೆ. ಕ್ರಿ.ಪೂ. 3ನೆಯ ಶತಮಾನದಲ್ಲಿ ತಕ್ಷಶಿಲೆಯಲ್ಲಿದ್ದ ಚರಕ ಮುನಿಗಳು ಆಧುನಿಕ ವೈದ್ಯರಿಗೆ ಸರ್ವಥಾ ಮಾದರಿ. ಇಂತಹ ಮಹಾನ್ ಪುರುಷನ ಹೆಸರನ್ನು ಪತ್ರಿಕೆಗೆ ಇಟ್ಟಿರುವುದು ಹೆಮ್ಮೆಯ ಸಂಗತಿ ಎಂದು ಶ್ಲಾಘಿಸಿದರು.

ಚರಕ ಪತ್ರಿಕೆಯ ಚಿನ್ಹೆಯನ್ನು ಸಹ ಅತ್ಯುತ್ತಮವಾಗಿ ರಚಿಸಲಾಗಿದೆ. ಮನುಷ್ಯನನ್ನು ಕಾಡುವ ರೋಗವನ್ನು ಹಾವನ್ನಾಗಿ ಬಿಂಬಿಸಲಾಗಿದೆ ಅದನ್ನು ಗುಣಪಡಿಸುವ ಔಷಧಿಯನ್ನಾಗಿ ಪುರಾತನ ವೈದ್ಯಕೀಯ ಶಾಸ್ತ್ರದ ಚಿನ್ಹೆಯಾದ ಧಂಡವನ್ನಾಗಿ ರಚಿಸಲಾಗಿದೆ. ಹೃದಯ ಬಡಿತದ ಗ್ರಾಫನ್ನೂ ಇಲ್ಲಿ ಬಳಸಿರುವದನ್ನು ಗಮನಿಸಿದರೆ ಈ ಸಂಸ್ಥೆ ಆರೋಗ್ಯದ ಕುರಿತಾಗಿ ಎಂತಹ ಕಾಳಜಿನ ಮನೋಭಾವನೆಯನ್ನು ಹೊಂದಿದೆ ಎನ್ನುವುದು ತಿಳಿಯುತ್ತದೆ. ಒಟ್ಟಾರೆ ಪತ್ರಿಕೆ ವೈದ್ಯಕೀಯ ಜಗತ್ತಿನ ಪರ್ಯಾಟನೆ ಹಾಗೂ ಪ್ರಸ್ತುತ ಆವಿಷ್ಕಾರಗಳ ಅನಾವರಣ ಎನ್ನುವಂತಿದೆ.
-ಡಾ.ನಾ. ಡಿಸೋಜಾ, ಹಿರಿಯ ಸಾಹಿತಿ

ಚರಕ ಮುನಿಗಳು ಪ್ರಿವೆನ್ಷನ್ ಈಸ್ ಬೆಟರ್‌ದೆನ್ ಕ್ಯೂರ್ ಎನ್ನುವುದನ್ನು ಶತಮಾನಗಳ ಹಿಂದೆಯೇ ಸಾಬೀತು ಮಾಡಿದ್ದರು. ಇಂದಿನ ಆಧುನಿಕ ಯುಗದಲ್ಲಿ ಇಂಜೀನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು ಇಂಗ್ಲಿಷ್‌ನ ವ್ಯಾಮೋಹಕ್ಕೆ ಬಿದ್ದು ಕನ್ನಡವನ್ನೆ ಮರೆತು ಬಿಡುತ್ತಿದ್ದಾರೆ. ಇವರೆಲ್ಲರ ನಡುವೆ ಸುಬ್ಬಯ್ಯ ವೈದ್ಯಕೀಯ ಮಹಾ ವಿದ್ಯಾಲಯವು ಕನ್ನಡದಲ್ಲಿ ತನ್ನ ಮಾಸಿಕ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಎಲ್ಲಾ ಇಂಗ್ಲಿಷ್ ವ್ಯಾಮೋಹಿ ಕಾಲೇಜುಗಳಿಗೆ ಮಾದರಿಯಾಗಿದ್ದಾರೆ ಎಂದು ಪ್ರಸಂಶೆ ವ್ಯಕ್ತಪಡಿಸಿದರು.


ಇಂದು ಪುಸ್ತಕ ಹಾಗೂ ಪತ್ರಿಕೆಯನ್ನು ಓದುವ ಹವ್ಯಾಸ ಜನರಿಂದ ಮರೆಯಾಗುತ್ತಿದೆ. ಕೇವಲ ಆಧುನಿಕತೆಗೆ ಮೊರೆ ಹೋಗಿ ತನ್ನ ಆರೋಗ್ಯ ಹಾಳುಮಾಡಿಕೊಳ್ಳುತ್ತಿದ್ದಾರೆ. ಚರಕ ಪತ್ರಿಕೆಯಲ್ಲಿ ಆರೋಗ್ಯದ ಕುರಿತು ಅಂಕಣಗಳಿದ್ದು ಜನಸಾಮಾನ್ಯರು ಇದನ್ನು ಓದಿದರೆ ಅನುಕೂಲವಾಗುತ್ತದೆ ಎಂದರು.

ಕಾಲೇಜಿನ ಸಾಹಿತ್ಯ ಸಂಘ ಉದ್ಘಾಟಿಸಿ ಮಾತನಾಡಿದ ರೈತ ಮುಖಂಡ ಕಡಿದಾಳು ಶಾಮಣ್ಣ, ರಾಷ್ಟ್ರಕವಿ ಕುವೆಂಪು ಅವರು ಈಗ ಸುಬ್ಬಯ್ಯ ವೈದ್ಯಕೀಯ ಕಾಲೇಜು ಇರುವ ಪುರಲೆ ಪ್ರದೇಶದೊಂದಿಗೆ ಹೊಂದಿದ್ದ ಭಾವನಾತ್ಮಕ ಸಂಬಂಧವನ್ನು ತಿಳಿಸಿದರು.

ಇದೇ ವೇಳೆ, ಪರಿಸರ ಉಳಿಸುವ ಕುರಿತಾಗಿ ಮಾತನಾಡಿದ ಅವರು, ಮರಗಳನ್ನು ಬೆಳೆಸುವಲ್ಲಿ ಕುವೆಂಪು ಅವರ ಕಾಳಜಿ ಹೇಗಿತ್ತು ಎಂಬ ಕುರಿತಾಗಿ ಸ್ವಾನುಭವವನ್ನು ನೆನೆದರು.

ನಾ. ಡಿಸೋಜಾ ದಂಪತಿ ಹಾಗೂ ಕಡಿದಾಳು ಶಾಮಣ್ಣ ದಂಪತಿಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು

ಕಾರ್ಯಕ್ರಮದಲ್ಲಿ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ, ಡಾ.ಲತಾ ನಾಗೇಂದ್ರ, ಡಾ.ಆರ್.ಪಿ. ಪೈ, ಡಾ.ವಿನಯಾ ಶ್ರೀನಿವಾಸ್, ವೈದ್ಯಕೀಯ ಅಧೀಕ್ಷಕ ಡಾ. ಬಿ. ಶ್ರೀನಿವಾಸ್, ಪ್ರಾಂಶುಪಾಲ ಡಾ.ಎಸ್.ಎಂ. ಕಟ್ಟಿ, ಡಾ.ಬಿ.ಎಸ್. ಸುರೇಶ್ ವನಮಾಲಾ ಸತೀಶ್, ನಾ. ಡಿಸೋಜಾ ಅವರ ಧರ್ಮಪತ್ನಿ ಫಿಲೋಮಿನಾ ಡಿಸೋಜಾ ಹಾಗೂ ಕಡಿದಾಳು ಶಾಮಣ್ಣ ಅವರ ಧರ್ಮಪತ್ನಿ ಶ್ರೀದೇವಿ ಶಾಮಣ್ಣ, ಆಕಾಶವಾಣಿ ವಿಶ್ರಾಂತ ನಿಲಯ ನಿರ್ದೇಶಕ ಡಾ.ಸುಧೀಂದ್ರ ಇನ್ನಿತರರು ಉಪಸ್ಥಿತರಿದ್ದರು.

Tags: Charaka News PaperKannada NewsMedical JournalMedical News PaperMonthly News PaperShivamoggasubbaiah medical college shimogaಚರಕ ಮಾಸಿಕ ಪತ್ರಿಕೆಸಾಹಿತ್ಯಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ
Previous Post

ಚನ್ನಗಿರಿ ತಾಲೂಕು ಸಾಹಿತ್ಯ ಸಮ್ಮೇಳನದ ಚಿತ್ರಸಂಪುಟ

Next Post

ಸತಿ-ಪತಿಗಳಾದರು ದಾವಣಗೆರೆ ಡಿಸಿ ಗೌತಮ್-ಸಿಇಒ ಅಶ್ವಾಥಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸತಿ-ಪತಿಗಳಾದರು ದಾವಣಗೆರೆ ಡಿಸಿ ಗೌತಮ್-ಸಿಇಒ ಅಶ್ವಾಥಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಗವದ್ಗೀತಾ ಜ್ಞಾನದಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಅಶೋಕ್ ಭಟ್

July 9, 2025

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

July 9, 2025
Gurupoornima

ಗುರುಪೂರ್ಣಿಮೆ ಮಹೋತ್ಸವ | ಜು.10ರಂದು ವಿಶೇಷ ಕಾರ್ಯಕ್ರಮ

July 9, 2025

ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ | ಏನದು?

July 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಗವದ್ಗೀತಾ ಜ್ಞಾನದಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಅಶೋಕ್ ಭಟ್

July 9, 2025

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

July 9, 2025
Gurupoornima

ಗುರುಪೂರ್ಣಿಮೆ ಮಹೋತ್ಸವ | ಜು.10ರಂದು ವಿಶೇಷ ಕಾರ್ಯಕ್ರಮ

July 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!