ಕಲ್ಪ ಮೀಡಿಯಾ ಹೌಸ್
ಲಕ್ನೋ: ವ್ಯಕ್ತಿಯೊಬ್ಬರು ತನ್ನ 5 ತಿಂಗಳ ಮಗುವನ್ನು ಕಳೆದುಕೊಂಡು, ಆಸ್ಪತ್ರೆ ಮುಂದೆ ಮೃತದೇಹವನ್ನು ತಬ್ಬಿಕೊಂಡು ರೋಧಿಸುತ್ತಿದ್ದರೆ, ಏನಿದು ನಾಟಕ? ಎಂದು ಪೊಲೀಸರು ಅಮಾನವೀಯವಾಗಿ ಪ್ರಶ್ನಿಸಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಬಾರ್ಬಂಕಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಹೊರಗೆ ವ್ಯಕ್ತಿಯೊಬ್ಬ ತನ್ನ 5 ತಿಂಗಳ ಮಗುವಿನ ಮೃತದೇಹವನ್ನು ತೋಳಲ್ಲಿ ಅಪ್ಪಿಕೊಂಡು, ಅಳುತ್ತ ನನ್ನ ಮಗುವಿಗೆ ಚಿಕಿತ್ಸೆ ನೀಡಿಲ್ಲ, ಜೀವವೇ ಹೋಯ್ತು ಎಂದು ತೋಳಲ್ಲಿ ಅಪ್ಪಿ ತಂದೆಯ ಕಣ್ಣೀರು ಹಾಕುತ್ತಿದ್ದರು. ಆದರೆ, ವ್ಯಕ್ತಿಯ ಬಳಿ ಪೊಲೀಸ್ ಒಬ್ಬರು, ಏನಿದು ನಾಟಕ? ಎಂದು ಪ್ರಶ್ನಿಸುತ್ತಾರೆ. ನನ್ನ ಮಗು ಸಾವನ್ನಪ್ಪಿದೆ. ನಾನ್ಯಾಕೆ ಡ್ರಾಮಾ ಮಾಡಲಿ ಎಂದು ಮಗುವಿನ ತಂದೆ ಹೇಳುವಂತ ವಿಡಿಯೋಗಳು ವೈರಲ್ ಆಗಿವೆ. ಅದಕ್ಕೆ ಪ್ರತಿಯಾಗಿ ಪೊಲೀಸರು ಒಂದು ಲಿಖಿತ ದೂರು ನೀಡುವಂತೆ ಕೇಳಿದ್ದಾರೆ.
ಕೆಲವು ವರದಿಗಳ ಪ್ರಕಾರ, ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಬಳಿ ವ್ಯಕ್ತಿ ನನ್ನ ಮಗುವಿನ ಆರೋಗ್ಯ ಗಂಭೀರ ಸ್ಥಿತಿ ತಲುಪಿದ್ದರು, ಕೊರೋನಾ ಭಯದಿಂದ ಯಾರೊಬ್ಬರೂ ರೋಗಿಗಳನ್ನು ಮುಟ್ಟಲು ಬರುವುದಿಲ್ಲ. ಎರಡು ತಾಸುಗಳ ಬಳಿಕ ವೈದ್ಯರು ನೋಡಿದರೂ, ಅಷ್ಟರಲ್ಲಿ ನನ್ನ ಹೆಣ್ಣುಮಗುವಿನ ಜೀವ ಹೋಗಿತ್ತು. ಇದ್ಯಾವ ವ್ಯವಸ್ಥೆ ಎಂದು ತಂದೆ ಅಳಲು ತೋಡಿಕೊಂಡಿದ್ದಾರೆ.
ಆದರೆ, ಈ ಆರೋಪವನ್ನು ಆಸ್ಪತ್ರೆ ತಳ್ಳಿ ಹಾಕಿದ್ದು, ಮಗುವನ್ನು ಇಲ್ಲಿಗೆ ಕರೆದುಕೊಂಡು ಬರುವ ಮುನ್ನವೇ ಮೃತಪಟ್ಟಿತ್ತು. ವೈದ್ಯರು ಮತ್ತು ಪ್ಯಾರಾ ಮೆಡಿಕಲ್ ಸಿಬ್ಬಂದಿ ಇಬ್ಬರೂ ಮಗುವನ್ನು ಪರೀಕ್ಷೆ ಮಾಡಿದ್ದಾರೆ ಎಂದು ನನಗೆ ಆಸ್ಪತ್ರೆಯ ಸೂಪರಿಂಟೆಂಡೆಂಟ್ ತಿಳಿಸಿದ್ದಾರೆ. ಈ ಮಗು ಟೆರೇಸ್ನಿಂದ ಕೆಳಗೆ ಬಿದ್ದಿತ್ತು ಎಂದು ಪಾಲಕರೇ ತಿಳಿಸಿದ್ದಾರೆ ಎಂದು ಅಲ್ಲಿನ ಮುಖ್ಯ ವೈದ್ಯಾಧಿಕಾರಿ ಚೌಹಾಣ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post