ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ನೈಋತ್ಯ ರೈಲ್ವೆಯ ರಕ್ಷಣಾ ಪಡೆ ಸೆಪ್ಟೆಂಬರ್ ಒಂದೇ ತಿಂಗಳಿನಲ್ಲಿ ಸಾಲು ಸಾಲಾಗಿ ಹಲವು ಸಾಧನೆಗಳನ್ನು ಮಾಡಿದೆ.
ನೈಋತ್ಯ ರೈಲ್ವೆ ತನ್ನ ಪ್ರಯಾಣಿಕರಿಗೆ ಸುರಕ್ಷತೆ, ಸುಖಕರ ಪ್ರಯಾಣವನ್ನು ಒದಗಿಸುವ ಭರವಸೆಯೊಂದಿಗೆ ಇಲಾಖೆಯ ಆಸ್ತಿಯನ್ನು ಸಂರಕ್ಷಿಸುವುದೂ ಸೇರಿದಂತೆ ಹಲವು ಮಹತ್ವದ ಕಾರ್ಯಗಳನ್ನು ಸಾಧಿಸಿದೆ.
ಇಲಾಖೆಯ ಕಾರ್ಯಾಚರಣೆಯಡಿ ರೈಲ್ವೆ ರಕ್ಷಣಾ ಪಡೆ 12 ಹೆಣ್ಣುಮಕ್ಕಳನ್ನು ಒಳಗೊಂಡಂತೆ ಒಟ್ಟು 51 ಮಕ್ಕಳನ್ನು ರಕ್ಷಿಸಿದೆ. ಅಲ್ಲದೇ, ಉಪಲಬ್ಧ ಕಾರ್ಯಾಚರಣೆಯಡಿ ರೈಲ್ವೆ ರಕ್ಷಣಾ ಪಡೆ ಒಟ್ಟು 3,22,001 ರೂ. ಮೌಲ್ಯದ ರೈಲು ಟಿಕೆಟ್’ಗಳನ್ನು ವಶಪಡಿಸಿಕೊಂಡಿದೆ.
ರೈಲ್ವೆ ರಕ್ಷಣಾ ಪಡೆ 14 ಮಂದಿಯನ್ನು ಬಂಧಿಸಿ, 86,833 ರೂ. ಮೌಲ್ಯದ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಂಡಿದೆ.
ರೈಲ್ವೆ ರಕ್ಷಣಾ ಪಡೆ ರೈಲ್ವೆ ಆಸ್ತಿ, ಪ್ರಯಾಣಿಕರ ಪ್ರದೇಶಗಳು ಹಾಗೂ ಪ್ರಯಾಣಿಕರ ಸುರಕ್ಷತೆಯನ್ನು ಕಾಪಾಡುವಲ್ಲಿ ಸದಾ ಬದ್ಧವಾಗಿದೆ. ಪ್ರಯಾಣಿಕರಿಗೆ ಸುರಕ್ಷಿತ, ಭದ್ರ ಮತ್ತು ಸುಗಮ ಪ್ರಯಾಣದ ಅನುಭವ ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ.
ಸೆ. 2025ರಲ್ಲಿ ರೈಲ್ವೆ ರಕ್ಷಣಾ ಪಡೆ ಪ್ರಯಾಣಿಕರ ಸುರಕ್ಷತೆ, ಭದ್ರತೆ ಹಾಗೂ ಸೌಕರ್ಯ ಖಚಿತಪಡಿಸಲು ನಿರಂತರವಾಗಿ ಕೆಲಸ ಮಾಡಿ. ಭಾರತೀಯ ರೈಲ್ವೆಯ ವಿಶ್ವಾಸಾರ್ಹ ಸರಕು ಸಾಗಣಾ ಸೇವೆಗೂ ಮಹತ್ವದ ಸಹಕಾರ ನೀಡಿದೆ.

ಡಿಗ್ನಿಟಿ ಕಾರ್ಯಾಚರಣೆ
ಈ ಕಾರ್ಯಾಚರಣೆಯಡಿ ಆರೈಕೆ ಮತ್ತು ರಕ್ಷಣೆಯ ಅಗತ್ಯವಿದ್ದ ಒಟ್ಟು 6 ವೃದ್ಧರನ್ನು (1 ಪುರುಷ ಮತ್ತು 5 ಮಹಿಳೆಯರು) ರಕ್ಷಿಸಿ ಅವರ ಕುಟುಂಬಗಳಿಗೆ ಅಥವಾ ಎನ್’ಜಿಒಗಳಿಗೆ ಹಸ್ತಾಂತರಿಸಲಾಗಿದೆ.
ಮಹಿಳಾ ಪ್ರಯಾಣಿಕರ ಶಕ್ತೀಕರಣ – ಮೇರಿ ಸಹೇಲಿ ಅಭಿಯಾನ
ಈ ಮಹಿಳಾ ಕೇಂದ್ರಿತ ಯೋಜನೆಯಡಿ, ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಗಳು ಒಂಟಿಯಾಗಿ ಅಥವಾ ಸಂಗಾತಿಯಿಲ್ಲದೆ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಯ ಖಚಿತಪಡಿಸಿದೆ. ಅವರ ಸೀಟ್ ಹಾಗೂ ಬರ್ತ್ ವಿವರಗಳನ್ನು ಮಾರ್ಗದಲ್ಲಿನ ಸ್ಟೇಷನ್’ಗಳ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಗಳಿಗೆ ಹಂಚಲಾಗುತ್ತದೆ. ಪ್ರಯಾಣದ ಅಂತ್ಯದಲ್ಲಿ ಮಹಿಳಾ ಪ್ರಯಾಣಿಕರಿಂದ ಪ್ರತಿಕ್ರಿಯೆ ಸಂಗ್ರಹಿಸಲಾಗುತ್ತದೆ. ಪ್ರಸ್ತುತ 32 ರೈಲುಗಳನ್ನು ಈ ಅಭಿಯಾನದಡಿ ಒಳಗೊಂಡಿದೆ.
ಟಿಕೆಟ್ ದಂಧೆ ವಿರುದ್ಧದ ಕ್ರಮ
ಸಾಮಾನ್ಯ ಪ್ರಯಾಣಿಕರಿಗೆ ನ್ಯಾಯಯುತವಾಗಿ ಟಿಕೆಟ್’ಗಳು ಲಭ್ಯವಾಗಲು ಮತ್ತು ಕಪ್ಪುಬಜಾರಿನ ತಡೆಗಟ್ಟಲು ಕರ್ನಾಟಕ ಹಾಗೂ ಗೋವಾದಾದ್ಯಂತ ಟ್ರಾವೆಲ್ ಏಜೆನ್ಸಿಗಳಲ್ಲಿ ತಪಾಸಣೆ ನಡೆಸಲಾಯಿತು. ಇದರ ಫಲವಾಗಿ 35 ಪ್ರಕರಣಗಳಲ್ಲಿ 46 ದಂಧೆಗಾರರನ್ನು ಬಂಧಿಸಲಾಯಿತು. ಒಟ್ಟು 96 ಟಿಕೆಟ್’ಗಳು (1,19,956.85 ಮೌಲ್ಯ) ಮತ್ತು 140 ಬಳಕೆಮುಗಿದ ಟಿಕೆಟ್’ಗಳು (2,02,045.95 ಮೌಲ್ಯ) ವಶಪಡಿಸಿಕೊಳ್ಳಲಾಗಿದೆ.

ಸತರ್ಕ ಕಾರ್ಯಾಚರಣೆಯಡಿ, ಒಟ್ಟು 9 ಮದ್ಯ ಪ್ರಕರಣಗಳಲ್ಲಿ 168 ಮದ್ಯದ ಬಾಟಲಿಗಳು (170.010 ಲೀಟರ್) ರೂ. 86,833 ಮೌಲ್ಯದಲ್ಲಿ ವಶಪಡಿಸಕೊಳ್ಳಲಾಯಿತು. ಅಬಕಾರಿ ಇಲಾಖೆಗೆ ಹಸ್ತಾಂತರಿಸಲಾಯಿತು.
ನಾರ್ಕೋ ಕಾರ್ಯಾಚರಣೆಯಡಿ, 7 ಪ್ರಕರಣಗಳಲ್ಲಿ 53.958 ಕೆ.ಜಿ ಗಾಂಜಾ(ರೂ. 41.26 ಲಕ್ಷ ಮೌಲ್ಯ) ವಶಪಡಿಸಿಕೊಂಡು 2 ಅಪರಾಧಿಗಳನ್ನು ಬಂಧಿಸಲಾಗಿದ್ದು, ಅವರನ್ನು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಕಳೆದುಹೋದ ವಸ್ತುಗಳ ಪುನಃ ಹಸ್ತಾಂತರ
ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಗಳು 66 ಸಂದರ್ಭಗಳಲ್ಲಿ ಪ್ರಯಾಣಿಕರು ಬಿಟ್ಟುಹೋದ ಲ್ಯಾಪ್’ಟಾಪ್’ಗಳು, ಮೊಬೈಲ್’ಗಳು, ಆಭರಣಗಳು ಹಾಗೂ ಇತರ ವೈಯಕ್ತಿಕ ವಸ್ತುಗಳು ಸೇರಿದಂತೆ ಒಟ್ಟು ರೂ. 17,33,153 ಮೌಲ್ಯದ ವಸ್ತುಗಳನ್ನು ಪತ್ತೆಹಚ್ಚಿ ಮಾಲೀಕರಿಗೆ ಹಿಂತಿರುಗಿಸಲಾಗಿದೆ.
ಯಾತ್ರಿ ಸುರಕ್ಷಾ ಕಾರ್ಯಾಚರಣೆ
ಒಂದು ಸಂದರ್ಭದಲ್ಲಿ, ಅಪರಾಧ ತಡೆ ಪತ್ತೆ ದಳ ತಂಡವು ಪ್ರಯಾಣಿಕರ ವಸ್ತುಗಳ ಕಳ್ಳತನ ಪ್ರಕರಣದಲ್ಲಿ ಸಂಶಯಾಸ್ಪದ ಅಪರಾಧಿಯನ್ನು ಬಂಧಿಸಿ ಗವರ್ನಮೆಂಟ್ ರೈಲ್ವೆ ಪೊಲೀಸ್ /ದಾವಣಗೆರೆಗೆ ಹಸ್ತಾಂತರಿಸಲಾಗಿದೆ.

ರೈಲು ಪೆಟ್ರೋಲಿಂಗ್, ಎಸ್ಕಾರ್ಟಿಂಗ್
ಪ್ರತಿ ದಿನ ಸರಾಸರಿ 32 ರಿಂದ 35 ಎಕ್ಸ್’ಪ್ರೆಸ್ ಮತ್ತು ವಿಶೇಷ ರೈಲುಗಳಲ್ಲಿ ಒಟ್ಟು 85 ರಿಂದ 90 ಸಿಬ್ಬಂದಿಗಳು ಎಸ್ಕಾರ್ಟ್ ಕರ್ತವ್ಯ ನಿರ್ವಹಿಸಿ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿದರು.
ರೈಲ್ವೆ ಆಸ್ತಿ ರಕ್ಷಣೆ
ಈ ಕಾಯ್ದೆಯಡಿ 9 ಪ್ರಕರಣಗಳು ದಾಖಲಾಗಿದ್ದು, 14 ಅಪರಾಧಿಗಳನ್ನು ಬಂಧಿಸಲಾಯಿತು. ರೂ. 1,66,247 ಮೌಲ್ಯದ ಕಳವಾದ ರೈಲ್ವೆ ಆಸ್ತಿಯನ್ನು ವಶಪಡಿಸಕೊಳ್ಳಲಾಗಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ ಮಹಾ ಪ್ರಬಂಧಕರಾದ ಮುಖುಲ ಸರನ್ ಮಾಥರ್ ಅವರು ಮಾತನಾಡಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ಕಾರ್ಯನಿರ್ವಹಿಸುತ್ತಿರುವ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರತಿಯೊಬ್ಬ ಪ್ರಯಾಣಿಕರ ಕಲ್ಯಾಣಕ್ಕಾಗಿ ರೈಲ್ವೆಯು ಹೊಂದಿರುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post