No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Monday, March 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕಮಲದಾಕೃತಿಯ ವಿಮಾನ ನಿಲ್ದಾಣದಲ್ಲಿ, ವಿಮಲಾಕೃತಿಯ ಹಾರಾಟ ಶೀಘ್ರದಲ್ಲೇ ಶಿವಮೊಗ್ಗದಲ್ಲಿ

ನೋಡುಗರ ಎದೆಯಲ್ಲಿ ಸಂಚಲನ ಸೃಷ್ಠಿಸುತ್ತಿದೆ ಉದ್ದೇಶಿತ ಶಿವಮೊಗ್ಗ ವಿಮಾನ ನಿಲ್ದಾಣದ ವೀಡಿಯೋ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 14, 2021
in Special Articles, ಶಿವಮೊಗ್ಗ
0
ಕಮಲದಾಕೃತಿಯ ವಿಮಾನ ನಿಲ್ದಾಣದಲ್ಲಿ, ವಿಮಲಾಕೃತಿಯ ಹಾರಾಟ ಶೀಘ್ರದಲ್ಲೇ ಶಿವಮೊಗ್ಗದಲ್ಲಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಆಧುನಿಕತೆ ಹಾಗೂ ತಂತ್ರಜ್ಞಾನಗಳ ಉಪಯೋಗದ ಭರಾಟೆಯಲ್ಲಿ ಮಾನವ ಅದೆಷ್ಟು ದಾಪುಗಾಲಿಡುತ್ತಿದ್ದಾನೋ, ನಮ್ಮನ್ನಾಳುತ್ತಿರುವ ಆಡಳಿತ ವ್ಯವಸ್ಥೆಯೂ ಅದರ ದುಪ್ಪಟ್ಟು ವೇಗದಲ್ಲಿ ಹೆಜ್ಜೆಯನ್ನಿರಿಸುತ್ತಿದೆ. ಕೆಲವೇ ವರ್ಷಗಳ ಅಂತರದಲ್ಲಿ ಶಿವಮೊಗ್ಗ ಕಂಡುಕೇಳರಿಯದ ಅಭಿವೃದ್ಧಿಯ ದೆಸೆಯನ್ನು ಪಡೆದು ಈಗ ಮತ್ತಷ್ಟು ಸ್ಮಾರ್ಟ್ ಆಗ ಹೊರಟಿರುವುದು ಅಭಿವೃದ್ಧಿ ಹೊಂದಿದ ನಗರಗಳನ್ನೂ ನಾಚಿಸುವಂತಿದೆ. ಇಂತಹ ಸ್ಮಾರ್ಟ್ ಯೋಜನೆಯ ಬಹುಮುಖ್ಯ ಅಂಗವೇ ಶಿವಮೊಗ್ಗೆಯ ವಿಮಾನ ನಿಲ್ದಾಣ. ಇದೇ ಒಂದು ದಶಕದ ಹಿಂದೆ ಸನ್ಮಾನ್ಯ ಯಡಿಯೂರಪ್ಪನವರು ಉಪಮುಖ್ಯಮಂತ್ರಿಗಳಾಗುತ್ತಿದ್ದಂತೆಯೇ ಶಿವಮೊಗ್ಗೆಯ ಭಾಗ್ಯ ಬದಲಾಯಿತು. ಆಗಾಗ ವಿಮಾನ ಸದ್ದು ಬಂತೆಂದರೆ ಆಕಾಶದತ್ತ ತಲೆಯೆತ್ತುತ್ತಿದ್ದ ಜನ ಇನ್ನು ಮುಂದೆ ಮತ್ತೆ ಮತ್ತೆ ತಲೆಯೆತ್ತಿ ನೋಡುವ ಘಟನೆ ಕೆಲವೇ ತಿಂಗಳಿನಲ್ಲಿ ಘಟಿಸಲಿದೆ.ನಗರದಿಂದ 12 ಕಿಮೀ ದೂರದಲ್ಲಿರುವ ಸೋಗಾನೆಯಲ್ಲಿ ಈ ಹಿಂದೆ ಆರಂಭಗೊಂಡ ಶ್ರೀಯುತ ಯಡಿಯೂರಪ್ಪನವರ ಮಹತ್ವಾಕಾಂಕ್ಷಿ ಯೋಜನೆಯಾದ ವಿಮಾನ ನಿಲ್ದಾಣದ ಕಾಮಗಾರಿ ಸರ್ಕಾರದ ಬದಲಾವಣೆಯಿಂದಾಗಿ ನಿಂತಿತ್ತು. ತಮ್ಮ ಚಾಣಾಕ್ಷಮತಿ ವ್ಯಕ್ತಿತ್ವದಿಂದ ಬಿ.ವೈ. ರಾಘವೇಂದ್ರರವರು ಮತ್ತೆ ಆ ಕಾರ್ಯಗಳಿಗೆ ಪುನಶ್ಚೇತನ ನೀಡುವಲ್ಲಿ ಸಫಲರಾದರು. ಹಿಂದಿನಿಂದಲೂ ಸಂಸದರು ಎಂದರೆ ಸಾಮಾನ್ಯರಿಗೆ ನಿಲುಕದ ನಕ್ಷತ್ರ ಎಂಬುದು ಪ್ರತೀತಿ.
ಕೇಂದ್ರದಲ್ಲಿನ ಯೋಜನೆಗಳು ಜನಸಾಮಾನ್ಯರ ಮಟ್ಟದಲ್ಲಿ ತಲುಪಲಾರದ ಸಂಗತಿಯೆಂದೇ ಜನ ಪರಿಭಾವಿಸಿದ್ದರು. ಈಗ ಹಠಾತ್ತನೆ ಅಂತಹ ಎಲ್ಲಾ ಊಹಾಪೂಹಗಳಿಗೆ ತಿಲಾಂಜಲಿ ಇಟ್ಟು ನಮ್ಮ ರಾಘಣ್ಣನೆಂದೇ ಪ್ರಖ್ಯಾತಿ ಪಡೆಯುತ್ತಾ, ಶ್ರೀಸಾಮಾನ್ಯರೆಲ್ಲರನ್ನೂ ಅತ್ಯಂತ ಆತ್ಮೀಯತೆ ಹಾಗೂ ಗೌರವಾದರಗಳಿಂದ ಮಾತನಾಡಿಸುತ್ತಾ, ಎಲ್ಲಾ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು-ಅವರ ವಿಶ್ವಾಸವನ್ನು ಗಳಿಸಿಕೊಂಡು, ಸಂಘಟನೆಯ ಹಾಗೂ ಪಕ್ಷದ ಹಿರಿಯರ ಸಲಹೆಗಳನ್ನು ಸ್ವೀಕರಿಸಿ; ಅನುಷ್ಠಾನಗೊಳಿಸುತ್ತಾ ತಮ್ಮ ಕಾರ್ಯದ ಹಾದಿಯಲ್ಲಿ ಗಜನಡಿಗೆಯನ್ನಿಡುತ್ತಿದ್ದಾರೆ. ಹಿಂದಿನವರ ನಿರ್ಲಕ್ಷ್ಯ ಧೋರಣೆಯಿಂದ ಅಭಿವೃದ್ಧಿಯಲ್ಲಿ ಬಡವಾಗಿದ್ದ ಶಿವಮೊಗ್ಗ ಜಿಲ್ಲೆಗೆ ಕೇಂದ್ರದ ಹಲವಾರು ಯೋಜನೆಗಳನ್ನು ತಂದು ಅದನ್ನು ಅಸಮಾನ್ಯ ಮಟ್ಟಕ್ಕೆ ಕೊಂಡೊಯ್ಯುತ್ತಿದ್ದಾರೆ.

ಕಳೆದ ಜೂನ್ ತಿಂಗಳಲ್ಲಿ 40 ಕೋಟಿ ಮೂಲ ವೆಚ್ಚದಲ್ಲಿ ಈ ಕಾಮಗಾರಿ ಪುನರಾರಂಭವಾಗಿ, ಮೊದಲು ಸಣ್ಣ ವಿಮಾನ ಸಂಚಾರವನ್ನು ನಡೆಸಲು 220 ಕೋಟಿಯ ಅಂದಾಜು ವೆಚ್ಚದಲ್ಲಿ ಕಡಿಮೆ ವೆಚ್ಚದ ಪ್ರಾದೇಶಿಕ ವಾಹಕಗಳಿಗೆ ನಿರ್ಮಾಣ ಮಾಡುವ ಯೋಜನೆ ಇತ್ತು. ಆದಾಗ್ಯೂ, ಯಡಿಯೂರಪ್ಪನವರು ವಿಮಾನ ನಿಲ್ದಾಣವನ್ನು ಎಲ್ಲಾ ಹವಾಮಾನ, ರಾತ್ರಿ ಸಮಯ ಮತ್ತು ಏರ್ಬಸ್ ಎ -320 ಕಾರ್ಯಾಚರಣೆಗಳಿಗೆ ಕಾರ್ಯಸಾಧ್ಯವಾಗುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿ ವೆಚ್ಚವನ್ನು ಗಮನಾರ್ಹವಾಗಿ 340 ಕೋಟಿಗೆ ಏರಿಸಿದರು. ಈ ಸುಸಜ್ಜಿತ ವ್ಯವಸ್ಥೆಗೆ ತಮ್ಮ ತಂದೆಯವರಿಗೆ ಪುಷ್ಟಿ ಕೊಟ್ಟವರೇ ನಮ್ಮ ಕ್ರಿಯಾಶೀಲ, ದೂರದೃಷ್ಟಿ ವ್ಯಕ್ತಿತ್ವದ ಸಂಸದರಾದ ಬಿ.ವೈ. ರಾಘವೇಂದ್ರರವರು.

ಯಡಿಯೂರಪ್ಪ ಹಾಗೂ ರಾಘವೇಂದ್ರರವರು ಜೊತೆ ಗೂಡಿ ಹಗಲಿರುಳೆನ್ನದೆ ತಮ್ಮ ಕನಸಿನ ಕೂಸೆಂಬಂತೆ ಕಾಮಗಾರಿಯ ಪರಿವೀಕ್ಷಣೆಗೈಯುತ್ತಾ ತ್ವರಿತವಾಗಿ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೈಯಲು ಕಟಿಬದ್ಧರಾಗಿ ನಿಂತಿದ್ದಾರೆ.

ಯೂಟ್ಯೂಬ್ ಸೇರಿದಂತೆ ಹಲವು ಸೋಷಿಯಲ್ ಮೀಡಿಯಾದಲ್ಲಿ ಕೆಂಬಾವಿ ಆರ್ಕಿಟೆಕ್ಚರ್ ಫೌಂಡೇಷನ್ ರೂಪಿಸಿರುವ ನೀಲನಕ್ಷೆ, ನಮ್ಮ ರಾಷ್ಟ್ರ ಪುಷ್ಪವಾದ ಕಮಲದಾಕೃತಿಯ ವಿಮಾನ ನಿಲ್ದಾಣದ ವೀಡಿಯೋ ಹಾಗೂ ಚಿತ್ರಗಳು ನೋಡುಗರ ಕಣ್ಮನವನ್ನು ಸೆಳೆಯುತ್ತಿದೆ. ಕಮಲದ ದಳಗಳೇ ಎದ್ದುನಿಂತು ಸ್ವಾಗತಗೈಯುತ್ತಿವೆಯೇನೋ ಎಂಬಂತೆ ಭಾಸವಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಮುಖ್ಯದ್ವಾರದ ಮುಂಭಾಗದಲ್ಲಿ, ವಾಹನ ಸಂಚರಿಸುವ ಹಾದಿಗೆ ಹೊಂದಿಕೊಂಡು ಬೃಹತ್ ತಾವರೆಯ ಕೊಳವನ್ನೇ ನಿರ್ಮಿಸಲಾಗುತ್ತಿದೆ. ಕಣ್ಣು ಕೋರೈಸುವ ವರ್ಣರಂಜಿತ ದೀಪಾಲಂಕಾರದ ಪ್ರಭೆಯಿಂದ ಕಮಲದ ಕೊಳ ಮತ್ತಷ್ಟು ಝಗಝಗಿಸುತ್ತಿದೆ. ಈ 3ಡಿ ವಿಡಿಯೋ ಹಾಗೂ ಚಿತ್ರಗಳು ನೋಡುಗರ ಎದೆಯಲ್ಲಿ ಸಂಚಲನ ಮೂಡಿಸುತ್ತಿರುವುದಲ್ಲದೆ ವಿದೇಶಿಗರ ಗಮನವನ್ನೂ ಸೆಳೆಯುವಲ್ಲಿ ಸಫಲವಾಗಲಿದೆ.

ಮೊದಲ ಹಂತದ ಕಾರ್ಯಗಳಲ್ಲಿ ವಿಮಾನ ನಿಲ್ದಾಣದ ಓಡುದಾರಿ, ಟ್ಯಾಕ್ಸಿ ಹಾದಿ, ಏಪ್ರನ್, ಸಮೀಪಿಸುವ ರಸ್ತೆಗಳು, ಬಾಹ್ಯ ರಸ್ತೆಗಳು ಮತ್ತು ಕಾಂಪೌಂಡ್ ಗೋಡೆಗಳು ನಿರ್ಮಾಣವಾಗುತ್ತಿದ್ದು, ಮುಂದಿನ ಪ್ಯಾಕೇಜ್‌ನಲ್ಲಿ ಎಟಿಸಿ ಟವರ್, ಎಲೆಕ್ಟ್ರೋ-ಮೆಕ್ಯಾನಿಕಲ್ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.
ವಿಮಾನ ನಿಲ್ದಾಣವು ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ಕೈಗಾರಿಕಾ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ ಎಂಬುದು ಸರ್ಕಾರದ ಆಶಯ.ಪೂರ್ವನಿಯೋಜನೆಯಂತೆ ಡಿಸೆಂಬರ್’ನಲ್ಲಿ ಪೂರ್ಣಗೊಳ್ಳಬೇಕಿದ್ದ ಕಾಮಗಾರಿ ಕೋವಿಡ್’ನಿಂದಾಗಿ ಮುಂದಿನ ಜೂನ್’ನಲ್ಲಿ ಸರ್ವಸನ್ನದ್ಧವಾಗಿ ವಿಮಲಮಯ ವಿಮಾನಗಳ ಹಾರಾಟ ನಮ್ಮ ಬಾನಂಗಳದಲ್ಲಿ ಹಾರಾಡುವುದಕ್ಕೆ ನಾವೆಲ್ಲರೂ ಸಾಕ್ಷಿಯಾಗಲಿದ್ದೇವೆ. ಇದಕ್ಕೆ ನಮ್ಮ ಮಾನ್ಯ ಮುಖ್ಯಮಂತ್ರಿಗಳಿಗೂ ಹಾಗೂ ಶಿವಮೊಗ್ಗೆಯ ಹೆಮ್ಮೆಯ ಪ್ರತೀಕವಾದ ಸಂಸದರಿಗೂ ನಮ್ಮ ಧನ್ಯವಾದ ಸಲ್ಲಲೇಬೇಕು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AirportB S YediyurappaB Y RaghavendraKannada News WebsiteLatest News KannadaLocal NewsMalnad NewsShimogaShivamoggaShivamogga Newsಪ್ರವಾಸೋದ್ಯಮಬಿ.ವೈ. ರಾಘವೇಂದ್ರವಿಮಾನ ನಿಲ್ದಾಣಶಿವಮೊಗ್ಗಸೋಗಾನೆಸೋಷಿಯಲ್ ಮೀಡಿಯಾ
Share197Tweet123Send
Previous Post

ಸಚಿವ ಈಶ್ವರಪ್ಪ ಸುಳ್ಳು ಮಾಹಿತಿ ನೀಡುತ್ತ ಜನರನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ: ಕೆ.ಬಿ. ಪ್ರಸನ್ನ ಕುಮಾರ್

Next Post

ಸಂಕಷ್ಟದಲ್ಲಿರುವ ರಾಜ್ಯದ ಪತ್ರಕರ್ತರಿಗೆ ತಮಿಳುನಾಡು ಮಾದರಿಯಲ್ಲಿ ಪರಿಹಾರಕ್ಕೆ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಂಕಷ್ಟದಲ್ಲಿರುವ ರಾಜ್ಯದ ಪತ್ರಕರ್ತರಿಗೆ ತಮಿಳುನಾಡು ಮಾದರಿಯಲ್ಲಿ ಪರಿಹಾರಕ್ಕೆ ಮನವಿ

ಸಂಕಷ್ಟದಲ್ಲಿರುವ ರಾಜ್ಯದ ಪತ್ರಕರ್ತರಿಗೆ ತಮಿಳುನಾಡು ಮಾದರಿಯಲ್ಲಿ ಪರಿಹಾರಕ್ಕೆ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಂಜಾನ್ ದೇಣಿಗೆ ಸಂಗ್ರಹ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ | 10 ಜನರ ಬಂಧನ

ರಂಜಾನ್ ದೇಣಿಗೆ ಸಂಗ್ರಹ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ | 10 ಜನರ ಬಂಧನ

March 2, 2026
ವಿದ್ಯಾರ್ಥಿಗಳು ಸಂಶೋಧನಾ ಮನೋಭಾವ ರೂಢಿಸಿಕೊಳ್ಳಿ: ಡಾ. ಸುದರ್ಶನ್

ವಿದ್ಯಾರ್ಥಿಗಳು ಸಂಶೋಧನಾ ಮನೋಭಾವ ರೂಢಿಸಿಕೊಳ್ಳಿ: ಡಾ. ಸುದರ್ಶನ್

March 2, 2026
ಆತ್ಮವಿಶ್ವಾಸ ಬದುಕಿನ ಪ್ರತಿ ಹಂತದ ಅದ್ಭುತ ಶಕ್ತಿ: ಎನ್ಇಎಸ್ ಕಾರ್ಯದರ್ಶಿ ನಾಗರಾಜ ಅಭಿಪ್ರಾಯ

ಆತ್ಮವಿಶ್ವಾಸ ಬದುಕಿನ ಪ್ರತಿ ಹಂತದ ಅದ್ಭುತ ಶಕ್ತಿ: ಎನ್ಇಎಸ್ ಕಾರ್ಯದರ್ಶಿ ನಾಗರಾಜ ಅಭಿಪ್ರಾಯ

March 2, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL