ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಎಸ್. ಮಧು ಬಂಗಾರಪ್ಪ ಅವರು ವಿಧಾನಸೌಧದ ಎರಡನೇ ಮಹಡಿಯಲ್ಲಿರುವ ತಮ್ಮ ನೂತನ ಕಚೇರಿಯಲ್ಲಿ ಶಾಸ್ತ್ರೋಕ್ತ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ಅಧಿಕೃತವಾಗಿ ಕಾರ್ಯಾರಂಭ ಮಾಡಿದರು.
ವಿಧಾನಸೌಧದ ಎರಡನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 262 ಮತ್ತು 262(ಎ) ಸಚಿವ ಎಸ್. ಮಧು ಬಂಗಾರಪ್ಪ ಅವರ ನೂತನ ಕಚೇರಿಯಾಗಿದ್ದು, ಕಚೇರಿ ಕಾರ್ಯಾರಂಭದ ಹಿನ್ನೆಲೆಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಚಿವರು ಪೂಜಾ ವಿಧಿವಿಧಾನಗಳಲ್ಲಿ ಭಾಗವಹಿಸಿ ನೂತನ ಕಚೇರಿಯಲ್ಲಿ ತಮ್ಮ ಕರ್ತವ್ಯಗಳನ್ನು ಆರಂಭಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕರು, ಶಾಸಕರು, ಸಚಿವರ ಆಪ್ತರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಾರ್ಯಕರ್ತರು ಸಚಿವರಿಗೆ ಶುಭ ಹಾರೈಸಿದರು. ನೂತನ ಜವಾಬ್ದಾರಿಯೊಂದಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ನಿಟ್ಟಿನಲ್ಲಿ ಸಚಿವರು ಕಾರ್ಯಪ್ರವೃತ್ತರಾಗಿದ್ದಾರೆ.
Also read>> ಆಗಸ್ಟ್ 13ರಂದು ಕುಚಿಪುಡಿ ನೃತ್ಯ ಪ್ರಾತ್ಯಕ್ಷಿಕೆ
ಶುಭಹಾರೈಸಿದವರಿಗೆ ಸಚಿವರಿಂದ ಧನ್ಯವಾದ
ನೂತನ ಕಚೇರಿ ಕಾರ್ಯಾರಂಭದ ಶುಭ ಸಂದರ್ಭದಲ್ಲಿ ಶುಭ ಹಾರೈಸಿದ ಶಾಸಕ ಮಿತ್ರ ಭೀಮಣ್ಣ ಟಿ. ನಾಯ್ಕ್, ಭೀಮಸೇನ ಬಿ. ಚಿಮ್ಮನಕಟ್ಟಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಹಾಗೂ ಶಾಸಕರಿಗೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಕೃತಜ್ಞತೆ ಸಲ್ಲಿಸಿದರು.
ಅದೇ ರೀತಿ ತಮ್ಮ ನೂತನ ಜವಾಬ್ದಾರಿಯ ಸಂದರ್ಭದಲ್ಲಿ ಶುಭಕೋರಿದ ಇಲಾಖೆಯ ಹಿರಿಯ ಹಾಗೂ ಕಿರಿಯ ಸಿಬ್ಬಂದಿ ವರ್ಗ, ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೂ ಸಚಿವರು ಅನಂತ ಧನ್ಯವಾದಗಳನ್ನು ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿರುವ ಸಚಿವ ಎಸ್. ಮಧು ಬಂಗಾರಪ್ಪ ಅವರು, ಇಲಾಖೆಯ ವಿವಿಧ ಕಾರ್ಯಕ್ರಮಗಳು, ಶಿಕ್ಷಣ ಕ್ಷೇತ್ರದ ಸುಧಾರಣೆ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸಂಬಂಧಿಸಿದ ವಿಷಯಗಳ ಕುರಿತು ಮುಂದಿನ ದಿನಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ನೂತನ ಕಚೇರಿ ಕಾರ್ಯಾರಂಭದ ಸಂದರ್ಭದಲ್ಲಿ ಸಚಿವರಿಗೆ ಪಕ್ಷದ ಮುಖಂಡರು, ಶಾಸಕರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಾರ್ಯಕರ್ತರು ಶುಭಾಶಯಗಳನ್ನು ಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







