No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮಧ್ವ ನವಮಿ: ಜಗದ ಜೀವಿಗಳ ಜೀವನ ಪಾವನಗೊಳಿಸಿದ ಆಚಾರ್ಯ ಮಧ್ವರು

ಉಡುಪಿಯನ್ನು ಪುಣ್ಯಕ್ಷೇತ್ರವಾಗಿಸಿ ಪುಷ್ಪವೃಷ್ಠಿಯ ನಡುವೆ ಅದೃಶ್ಯರಾದ ಮಧ್ವರ ಬಗ್ಗೆ ನೀವು ಓದಲೇಬೇಕಾದ ಲೇಖನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 30, 2023
in Special Articles
0
ಮಧ್ವ ನವಮಿ: ಜಗದ ಜೀವಿಗಳ ಜೀವನ ಪಾವನಗೊಳಿಸಿದ ಆಚಾರ್ಯ ಮಧ್ವರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಶಿವಮೊಗ್ಗ ರಾಮ್  |

ಪ್ರಥಮೋ ಹನುಮನ್ನಾಮ
ದ್ವಿತೀಯೋ ಭೀಮ ಏವಚ
ಪೂರ್ಣಪ್ರಜ್ಞ ತೃತೀಯಸ್ತು
ಭಗವತ್ಕಾರ್ಯ ಸಾಧಕಃ
ಮೊದಲು ತ್ರೇತಾಯುಗದಲ್ಲಿ ಹನುಮಂತನಾಗಿ, ರಾಮಬಂಟನೆನಿಸಿ ನಂತರ ದ್ವಾಪರ ಯುಗದಲ್ಲಿ ಭೀಮಸೇನರಾಗಿ, ಕಲಿಯುಗದಿ `ಪೂರ್ಣಪ್ರಜ್ಞ’ ರೆನಿಸಿ ವೇದವ್ಯಾಸರ ಸೇವೆ ಮಾಡಿ ಭಗವತ್ಕಾರ್ಯ ಸಾಧನೆ ಮಾಡಿದವರು ಶ್ರೀ ಮಧ್ವಾಚಾರ್ಯರು.

ಸನಾತನ ಧರ್ಮಕ್ಕೆ ಹೊಸ ಆಯಾಮ ನೀಡಿದ ಧೀರೋದ್ಧಾತ ಸನ್ಯಾಸಿ ಎಂದೇ ಹೆಸರಾದವರು ಆಚಾರ್ಯ ಶ್ರೀ ಮಧ್ವರು. ತತ್ವಜ್ಞಾನ ಪ್ರಪಂಚಕ್ಕೆ ಮೇರು ಕೊಡುಗೆ ಸಲ್ಲಿಸಿರುವ ಮೂವರು (ಶಂಕರ, ರಾಮಾನುಜ, ಮಧ್ವ) ಶ್ರೇಷ್ಠ ಆಚಾರ್ಯರಲ್ಲಿ ದ್ವೈತ ಮತ ಸಂಸ್ಥಾಪನಾಚಾರ್ಯ ಶ್ರೀ ಮಧ್ವರು ಮಾತ್ರ ಅಪ್ಪಟ ಕನ್ನಡ ನಾಡಿನವರು ಎಂಬುದು ನಮಗೆ ಬಹಳ ದೊಡ್ಡ ಹೆಮ್ಮೆ.
ಉಡುಪಿ ಬಳಿ ಪಾಜಕದಲ್ಲಿ ಕ್ರಿ.ಶ.1238, ವಿಲಂಬಿ ಸಂವತ್ಸರದ ಆಶ್ವಯಜ ಶುಕ್ಲ ದಶಮಿಯಂದು ಮಧ್ವರು ಅವತರಿಸಿದರು. ತಂದೆ ಮಧ್ಯಗೇಹ ಭಟ್ಟ. ತಾಯಿ ವೇದಾವತಿ. ಮಧ್ವರ ಬಾಲ್ಯದ ಹೆಸರು ವಾಸುದೇವ. ತಂದೆ ಬಳಿ ಪ್ರಾಥಮಿಕ ಪಾಠ. ಆಗಲೇ ವಾಸುದೇವನಿಗೆ ಅಸಾಧಾರಣ ಬುದ್ಧಿಮತ್ತೆ ಇತ್ತು. ನಂತರ ತೋಟಿಂ ತಿಲ್ಲಾಯರ ಗುರುಕುಲದಲ್ಲಿ ವೇದವಿದ್ಯೆ ಅಧ್ಯಯನ. ಗುರು ಕುಲಾಭ್ಯಾಸ ಪೂರ್ಣಗೊಳಿಸಿ ಬಂದ 7 ವರ್ಷದ ಬಾಲಕ ವಾಸುದೇವ ತಂದೆ- ತಾಯಿಯನ್ನು ಒಪ್ಪಿಸಿ ಸನ್ಯಾಸಿಯಾದ. ಮಗ ಸಂಸಾರಿಯಾಗಬೇಕೆಂದು ತಂದೆ ತಾಯಿ ಬಯಸಿದರೆ, ತಾನು ವಿಶ್ವಸಂಸಾರಿ ಆಗಬೇಕೆಂದು ಬಾಲಕ ವಾಸುದೇವ ಸಂಕಲ್ಪ ಮಾಡಿದ್ದ. ಉಡುಪಿಯ ಅನಂತೇಶ್ವರನ ಸನ್ನಿಧಿಯಲ್ಲಿ ಅಚ್ಯುತ ಪ್ರೇಕ್ಷಾಚಾರ್ಯರು ವಾಸುದೇವನಿಗೆ ಸನ್ಯಾಸ ದೀಕ್ಷೆ ನೀಡಿದರು. ವೇದಾಂತ ಪೀಠದಲ್ಲಿ ಕೂಡಿಸಿ ಪಟ್ಟಾಭಿಷೇಕ ಮಾಡಿ `ಆನಂದ ತೀರ್ಥ’ ಎಂದು ಆಶ್ರಮ ನಾಮ ಹೆಸರಿಸಿದರು. ನಂತರ ಇವರೇ ಮಧ್ವಾಚಾರ್ಯರೆಂದು ಪ್ರಸಿದ್ಧರಾದರು. ದ್ವೈತ ಮತ ಪ್ರತಿಷ್ಠಾಪಿಸಿ ಜಗತ್ತಿಗೆ `ಪೂರ್ಣಪ್ರಜ್ಞ’ ದೃಷ್ಟಿಯನ್ನು ನೀಡಿ ಮಹಾಮಹಿಮರಾದರು.

ಅವತಾರ ಪುರುಷರು
ಸಜ್ಜನರ ತತ್ತಜ್ಞಾನದ ಹಸಿವನ್ನು ಹಿಂಗಿಸಲು ವಾಯುದೇವರೇ ಮಧ್ವಾಚಾರ್ಯರಾಗಿ ಅವತರಿಸಿದರು ಎನ್ನುತ್ತದೆ `ಸುಮಧ್ವ ವಿಜಯ’ ಗ್ರಂಥ. ಆಶ್ರಮ ಸ್ವೀಕರಿಸಿ ಒಂದೂವರೆ ತಿಂಗಳಲ್ಲಿ ತರ್ಕಶಾಸದ ಪ್ರಕಾಂಡ ಪಂಡಿತನ್ನು ಸೋಲಿಸಿದರು. ಅವರ ತರ್ಕ ಸಾಮರ್ಥ್ಯ ಸಾಮಾನ್ಯರ ತರ್ಕಕ್ಕೆ ನಿಲುಕದ್ದಾಗಿತ್ತು. ಅವರನ್ನು ಅನುಸರಿಸಿ ಬಂದವರಿಗೆ ಜಗತ್ತಿನ `ಸತ್ಯ’ವನ್ನು ತಿಳಿಸಿದರು. ಭಗವಂತನನ್ನು ಕಾಣುವ ಮಾರ್ಗದ ದರ್ಶನ ಮಾಡಿಸಿದರು. ಇವರ ಶಿಷ್ಯತ್ವವನ್ನು ವಹಿಸುವ ಮುನ್ನ ಪ್ರಪಂಚವನ್ನು ಮಸುಕಾಗಿ ಕಂಡವವರಿಗೆ ದಿವ್ಯ ದೃಷ್ಟಿ ನೀಡಿದರು. ಜಗತ್ತಿನ ಬಗ್ಗೆ ಜನರಿಗಿದ್ದ ತಪ್ಪು ತಿಳಿವಳಿಕೆ ಇದರಿಂದ ದೂರವಾಯಿತು. ಮಹಾಗುರುಗಳು ಜಗಕೆ ನೀಡಿದ ಅನಂತ ಉಪಕಾರವೆಂದರೆ ಇದೇ.

ಮೌಢ್ಯಗಳಿಗೆ ಖಂಡನೆ
ಅಧ್ಯಾತ್ಮ ಮತ್ತು ವೇದಾಂತದ ಮಹಾನ್ ಪಥದಲ್ಲಿ ಸುವರ್ಣಾಕ್ಷರದ ಮೈಲಿಗಲ್ಲುಗಳನ್ನೇ ಸ್ಥಾಪಿಸಿದ ಶ್ರೀ ಮಧ್ವರು ಮೌಢ್ಯ ಮತ್ತು ಗೊಡ್ಡು ಸಂಪ್ರದಾಯಗಳನ್ನು ಖಂಡಿಸಿದರು. ಸಂಪೂರ್ಣ ವೈಜ್ಞಾನಿಕ ಹಿನ್ನೆಲೆಯ ತತ್ತಜ್ಞಾನ ಬೋಧಿಸುವಾಗ ಅವರಿಗೆ ವಿರೋಧವೂ ವ್ಯಕ್ತವಾಯಿತು. ಅದಕ್ಕೆ ಅಂಜಲಿಲ್ಲ. ಅವರನ್ನು ನಂಬಿದವರಿಗೆ ಇಂದಿಗೂ ಅಂಜಿಕೆಯಿಲ್ಲ. ಮಧ್ವರು ಇಟ್ಟ ಹೆಜ್ಜೆಯನ್ನು ಎಂದೂ ಹಿಂದಿಡಲಿಲ್ಲ.

ಗ್ರಂಥ ರಚನೆಯಲ್ಲಿ ಅಗ್ರಗಣ್ಯ
ಮಧ್ವಾಚಾರ್ಯರು ದ್ವೈತ ತತ್ವ ಸಿದ್ಧಾಂತ ಸಾರಲು 37 ಗ್ರಂಥ ರಚಿಸಿದರು. ಅವರು ಬಾಲ್ಯದಲ್ಲಿ ಚೆಂಡಾಡುತ್ತಾ ರಚಿಸಿದ ಕಂದುಕ ಸ್ತುತಿಯನ್ನೂ ಸೇರಿಸಿದರೆ ಒಟ್ಟು 38 ಆಗುತ್ತದೆ. ವೇದ, ಉಪನಿಷತ್, ಸೂತ್ರ ಇತಿಹಾಸ, ಪುರಾಣ, ತಂತ್ರ, ಪ್ರಕರಣ, ಆಚಾರ ಮುಂತಾದ ಶಾಸ್ತ್ರದ ಸರ್ವವಿಭಾಗಗಳನ್ನೂ ಉಪಯೋಗಿಸಿಕೊಂಡು ಮಧ್ವರು ಗ್ರಂಥಗಳನ್ನು ರಚಿಸಿದರು. ಆ ಮೂಲಕ ಅಗ್ರಗಣ್ಯ ಗ್ರಂಥ ಕರ್ತರ ಸಾಲಿನಲ್ಲಿ ಮೇರು ಪರ್ವತವೇ ಆದರು. ಅವರ 37 ಮಹಾನ್ ಕೃತಿಗಳು `ಸರ್ವಮೂಲ’ ಗ್ರಂಥಗಳೆಂದೇ ಪ್ರಸಿದ್ಧಿ ಪಡೆದವು. ಈ ಮಹೋನ್ನತ ಕೊಡುಗೆಯನ್ನು ವೇದಾಂತ ಕ್ಷೇತ್ರ ಎಂದಿಗೂ ಮರೆಯಲು ಸಾಧ್ಯವಿಲ್ಲ. ಮರೆತರೂ ಅವು ಮತ್ತೆ ಮತ್ತೆ ಚಿಂತನೆಗೆ ಹಚ್ಚಿ ಚಿರನೂತನವಾಗಿವೆ ಎಂಬುದೇ ವಿಶೇಷ.
ಮಹಾಭಾರತದ ತಿರುಳನ್ನು ತಿಳಿಸುವ `ಮಹಾಭಾರತ ತಾತ್ಪರ್ಯ ನಿರ್ಣಯ, ಗೀತಾತಾತ್ಪರ್ಯ ನಿರ್ಣಯ ಸೇರಿದಂತೆ ಅವರ ಎಲ್ಲ ಕೃತಿಗಳು ಜಗತ್ತಿಗೆ ಪರಿಪೂರ್ಣ ಅರಿವು ಮೂಡಿಸುವಲ್ಲಿ ಮಹತ್ವದ ಮೈಲಿಗಲ್ಲಾದವು.

ಸಂದೇಶವೇನು
ಶ್ರೀಹರಿಯೇ ಸರ್ವೋತ್ತಮ. ವಾಯುವೇ ಜೀವೋತ್ತಮ. ಕಣ್ಣಿಗೆ ಕಾಣುವ ಜಗತ್ತು ಸತ್ಯ. ಜಗದೊಳಗಿರುವ ಜೀವಿಗಳು, ಜಡಗಳು ಹಾಗೂ ಅವುಗಳ ಸೃಷ್ಟಿಗೆ ಕಾರಣನಾದ ಜಗನ್ನಾಥನ ನಡುವೆ ಪರಸ್ಪರ ಭೇದವಿದೆ ಎಂಬ ದ್ವೈತ ತತ್ವ ವಿಷಯಗಳೇ ಮಧ್ವರ ಗ್ರಂಥಗಳ ಸಾರ. ಕಾಲ ಉರುಳಿದಂತೆ ಈ ಸರ್ವಮೂಲ ಗ್ರಂಥಗಳ ಸಾರವನ್ನು ತಿಳಿಯುವುದು ಸಾಮಾನ್ಯರಿಗೆ ಕಠಿಣವಾಗುತ್ತದೆಂದು ಮೊದಲೇ ಮಧ್ವರು ನಿರೀಕ್ಷಿಸಿದ್ದರು ಎನ್ನಬಹುದು. ಹಾಗಾಗಿ ವೇದ ಪರಂಪರೆಯನ್ನು ಕನ್ನಡದಲ್ಲಿ ಕೊಂಡಾಡುವAತೆ ತಮ್ಮ ಶಿಷ್ಯ ನರಹರಿತೀರ್ಥರಿಗೆ ಆದೇಶ ಇತ್ತರು. ಅದು ದಾಸ ಸಾಹಿತ್ಯದ ಉಗಮಕ್ಕೆ ಹಾಗೂ ಕನ್ನಡದ ಸಾಹಿತ್ಯದ ಶ್ರೀಮಂತಿಕೆಗೂ ಪ್ರೇರಕವಾಯಿತು. ಕನ್ನಡ ಸಾರಸ್ವತ ಲೋಕಕ್ಕೆ ಮಧ್ವರು ಹೀಗೆ ಅನನ್ಯ ಕೊಡುಗೆ ನೀಡಿದರು. ಹಾಗಾಗಿ ಅವರು ಸಂಸ್ಕೃತ-ತುಳು-ಕನ್ನಡ ಸಾಹಿತ್ಯಲೋಕದ ಮಹಾನ್ ಆಸ್ತಿಯೂ ಹೌದು.

ಅಕ್ಷರ ತಿಳಿಯದ ವರ್ಗವನ್ನೂ ಆಚಾರ್ಯ ಮಧ್ವರು ಅಭಿಮಾನದಿಂದಲೇ ಕಂಡರು. ಅವರೂ ಭಗವಂತನ ಸ್ವರೂಪವನ್ನು ತಮ್ಮ ಜ್ಞಾನಕ್ಕನುಗುಣವಾಗಿ ಕಾಣಲು (ದರ್ಶನ ಮಾಡಲು) ಸಾಂಸ್ಕೃತಿಕ-ಧಾರ್ಮಿಕ ನಾಟಕ, ರೂಪಕ, ಆಟ ಗಳನ್ನು ರಚಿಸುವಂತೆ ಶಿಷ್ಯರಿಗೆ ಸೂಚಿಸಿದರು. ಇದೇ ಯಕ್ಷಗಾನಕ್ಕೂ ಮೂಲ ಪ್ರೇರಣೆಯಾಯಿತು. ಕನ್ನಡ ನಾಡಿನ ಕಲೆ ಸಾಗರದಾಚೆಗೂ ವಿಖ್ಯಾತವಾಗಿ ಲೋಕ ಸಂಚಾರ ಮಾಡಿತು. ಮಧ್ವರು ತಮಿಳು, ತೆಲುಗು, ತುಳು, ಕೊಂಕಣಿ, ಮರಾಠಿ ಮತ್ತಿತರ ಭಾಷೆಯ ಶಿಷ್ಯರನ್ನೂ ಹೊಂದಿದ್ದರು ಎಂಬುದು ಇನ್ನೊಂದು ಹೆಗ್ಗಳಿಕೆ.
ಮಹಾಬೆಳಕು
ಭರತಭೂಮಿಯನ್ನು ಅನೇಕ ಬಾರಿ ಕಾಲ್ನಡಿಗೆಯಲ್ಲೇ ಸುತ್ತಿ ಮಧ್ವಮತ ಸಿದ್ಧಾಂತಗಳನ್ನು ಜನ ಮಾನಸದಲ್ಲಿ ಪ್ರತಿಷ್ಠಾಪಿಸಿದರು. ಸಾವಿರಾರು ಜನ ಅವರ ಪ್ರಖರ ವಾಗ್ಝರಿಗೆ ಮನಸೋತು ಶಿಷ್ಯತ್ವ ಪಡೆದರು. ಮಹಾನ್ ಪಂಡಿತರೆನಿಸಿದ್ದವರು ವಾದದಲ್ಲಿ ಸೋಲನುಭವಿಸಿ ಶರಣಾದರು. ಮಧ್ವತತ್ವ ಅನುಯಾಯಿಗಳಾದರು. ಮಧ್ವರದ್ದು 79 ವಸಂತಗಳ ಸಾರ್ಥಕ ಜೀವನ. ಇಹದ ಬದುಕಿಗೆ ಮಂಗಳ ಹಾಡಬೇಕು ಎನಿಸುತ್ತಿದ್ದಂತೆ ಅವರು ಉಡುಪಿಯ ಶ್ರೀ ಅನಂತೇಶ್ವರ ದೇಗುಲದಲ್ಲಿ ಪ್ರವಚನ ನೀಡುವಾಗ ಪುಷ್ಪವೃಷ್ಟಿಯ ನಡುವೆ ಅದೃಶ್ಯರಾದರು. ಬೃಹತ್ ಭಕ್ತಗಣವೇ ಇದಕ್ಕೆ ಸಾಕ್ಷಿಯಾಗಿದ್ದು ಇತಿಹಾಸ. ಅವರು ಮಹಾಬದರಿಯಲ್ಲಿ ವೇದವ್ಯಾಸ ದೇವರ ಸಮೀಪವೇ ಇನ್ನೂ ಇದ್ದಾರೆ ಎಂಬುದು ಮಾಧ್ವ ಸಮುದಾಯದ ನಂಬಿಕೆ. ಮಧ್ವಾಚಾರ್ಯರು ಭವ ಜೀವಿಗಳ ಕಣ್ಣಿಗೆ ಅದೃಷ್ಯರಾದ ಆ ಪುಣ್ಯ ದಿನವೇ ಮಾಘ ಶುದ್ಧ ನವಮಿ. ಅರ್ಥಾತ್ `ಮಧ್ವ ನವಮಿ’. ಆಚಾರ್ಯ ಮಧ್ವರನ್ನು ಅತ್ಯಂತ ಧನ್ಯತೆಯಿಂದ ಸ್ಮರಿಸಬೇಕಾದ ಪುಣ್ಯದಿನ. ಮಧ್ವರು ಇಂದು ನಮ್ಮ ಕಣ್ಣಿಗೆ ಅಗೋಚರ. ಆದರೂ ಪರಿಪೂರ್ಣ ಜೀವನವನ್ನು ನಾವು ರೂಪಿಸಿಕೊಳ್ಳಲು ಅವರ ಗ್ರಂಥಗಳು ಭವ ಜೀವಿಗಳಿಗೆ ಮಹಾಬೆಳಕಾಗಿವೆ.

ಪುಣ್ಯಕ್ಷೇತ್ರವಾಯಿತು ಉಡುಪಿ
ಶ್ರೀ ಮಧ್ವಾಚಾರ್ಯರು ಉಡುಪಿಯಲ್ಲಿ ಬಾಲ ಕೃಷ್ಣನನ್ನು ಸ್ಥಾಪಿಸಿದ ಕಾರಣಕ್ಕಾಗಿ ಇದು ನಮ್ಮ ನಾಡಿನ ಪವಿತ್ರ ತೀರ್ಥ ಕ್ಷೇತ್ರವಾಯಿತು. ಅಷ್ಟ ಯತಿಗಳನ್ನು ಕೃಷ್ಣನ ಪೂಜೆಗೆ ಅವರು ನೇಮಿಸಿದರು. ಪರ್ಯಾಯ ಪೂಜಾ ವ್ಯವಸ್ಥೆ ಜಾರಿಗೆ ತಂದರು. ದಿನವೂ ಬಾಲ ಯತಿಗಳಿಂದ ಜಗದೋದ್ಧಾರಕನ ಪೂಜೆ ನಡೆಯುವ ವಿಶ್ವದ ಏಕೈಕ ಸನ್ನಿಧಿಯಾಯಿತು ಉಡುಪಿ. ಗೀತಾಚಾರ್ಯರ ಕ್ಷೇತ್ರವೆಂದೇ ಪ್ರಖ್ಯಾತವಾಯಿತು.

ಮಧ್ವರು ಸರ್ವಕಾಲಿಕ ಸಂತ
ಶ್ರೀ ಮಧ್ವಾಚಾರ್ಯರು ಅದೃಷ್ಯರಾಗಿ 700 ವರ್ಷ ಗತಿಸಿದರೂ ಅವರು ಗ್ರಂಥರೂಪದಲ್ಲಿ ಸಜ್ಜನರ ರಕ್ಷಣೆಗೆ ಸದಾ ಬದ್ಧವಾಗಿದ್ದಾರೆ. ಭವದ ಜನರಿಗೆ ಸುಂದರ ಬದುಕು ರೂಪಿಸಿಕೊಟ್ಟಿದ್ದಾರೆ. ಮಾನವೀಯ ಬಂಧುತ್ವ ಬೆಸೆದಿದ್ದಾರೆ. ಮಧ್ವಮತದ ಎಲ್ಲ ಆಚರಣೆಯೂ ಸಂಪೂರ್ಣ ವೈಜ್ಞಾನಿಕ ಎಂದು ಹಲವು ಸಂಶೋಧನೆಗಳು ದೃಢಪಡಿಸಿವೆ. ದೇಶ- ಕಾಲಗಳು ಏನೇ ಬದಲಾದರೂ ಆಚಾರ್ಯರ ಸಿದ್ಧಾಂತ ಎಂದಿಗೂ ನಿತ್ಯ ನೂತನ. ಸದಾ ಹಸಿರು. ನಂಬಿದವರ ಬದುಕು ಉಲ್ಲಾಸದ ಚಿಗುರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dwait SiddhantKannada News WebsiteLatest News KannadaMadhwa navamiPajakaSanatana DharmaSpecial ArticleSri MadhwacharyaUdupiಆಚಾರ್ಯ ಶ್ರೀ ಮಧ್ವರುಉಡುಪಿತ್ರೇತಾಯುಗದ್ವೈತ ಮತಪಾಜಕಮಧ್ವ ನವಮಿಮಧ್ವಾಚಾರ್ಯರುವೇದವ್ಯಾಸಸನಾತನ ಧರ್ಮ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

2023ರ ಮೊದಲ ಮನ್ ಕಿ ಬಾತ್: ನಳಿನ್ ಕುಮಾರ್ ಕಟೀಲ್, ಸಂಸದ ರಾಘವೇಂದ್ರ ವೀಕ್ಷಣೆ

Next Post

ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ: ಜೈನ್ ಪಬ್ಲಿಕ್ ಶಾಲೆಯ ಮದಿಹ ಇಬ್ರಾಹಿಂಗೆ ಪ್ರಥಮ ಸ್ಥಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ: ಜೈನ್ ಪಬ್ಲಿಕ್ ಶಾಲೆಯ ಮದಿಹ ಇಬ್ರಾಹಿಂಗೆ ಪ್ರಥಮ ಸ್ಥಾನ

ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ: ಜೈನ್ ಪಬ್ಲಿಕ್ ಶಾಲೆಯ ಮದಿಹ ಇಬ್ರಾಹಿಂಗೆ ಪ್ರಥಮ ಸ್ಥಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

June 18, 2026
Mysore - Shivamogga - Talguppa Train

ಮೈಸೂರು – ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಹೆಚ್ಚುವರಿ ರೈಲು ಸೇವೆ ವಿಸ್ತರಣೆ

June 18, 2026
ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

June 18, 2026
Shivamogga Police : Traffic Rules

ಶಾಲಾ – ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್

June 18, 2026
ಮನೆ ಕಳ್ಳತನ ಪ್ರಕರಣ | ಓರ್ವನ ಬಂಧನ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

ಮನೆ ಕಳ್ಳತನ ಪ್ರಕರಣ | ಓರ್ವನ ಬಂಧನ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

June 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL