No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಓಟ್ ಮಾಡಲು ಮತಗಟ್ಟೆಗೆ ಹೋಗಲು ಆಗುವುದಿಲ್ಲವೇ? ಹಾಗಾದ್ರೆ ಹೀಗೆ ಮತ ಚಲಾಯಿಸಿ!

kalpa News by kalpa News
March 21, 2023
in ಕೊಡಗು
0
ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  |

ಎಂಬತ್ತು ವರ್ಷ ಮೇಲ್ಪಟ್ಟ ಹಿರಿಯರು, ವಿಕಲಚೇತನರು, ಕೋವಿಡ್-19 ಸೋಂಕಿತ/ ಬಾದಿತ ವ್ಯಕ್ತಿಗಳು ಹಾಗೂ ಅಗತ್ಯ ಸೇವೆಯಲ್ಲಿರುವವರು, ಮತಗಟ್ಟೆ ಕೇಂದ್ರಕ್ಕೆ ತೆರಳಲು ಆಗದಿರುವ ಮತದಾರರಿಗೆ ‘ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಮಾಡಿದೆ. ಈ ಅವಕಾಶವನ್ನು ಅರ್ಹರು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರಮುಖರ ಜೊತೆ ಮಂಗಳವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಸಂಬಂಧ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಕಲಚೇತನರು, ಕೋವಿಡ್-19 ನಿಂದ ಬಾದಿತ ವ್ಯಕ್ತಿಗಳು ಹಾಗೂ ಅಗತ್ಯ ಸೇವೆಯಲ್ಲಿರುವ ವಿದ್ಯುತ್, ಬಿಎಸ್‍ಎನ್‍ಎಲ್, ರೈಲ್ವೆ, ದೂರದರ್ಶನ, ಆಕಾಶವಾಣಿ, ಆರೋಗ್ಯ, ವಿಮಾನಯಾನ, ರಾಜ್ಯ ರಸ್ತೆ ಸಾರಿಗೆ ನಿಗಮ, ಅಗ್ನಿಶಾಮಕ, ಮಾಧ್ಯಮ, ಸಂಚಾರಿ ಪೊಲೀಸ್ ಹಾಗೂ ಆಂಬ್ಯುಲೆನ್ಸ್‍ನಲ್ಲಿ ಸೇವೆ ನಿರ್ವಹಿಸುತ್ತಿರುವವರು ‘ಅಂಚೆ ಮತಪತ್ರ’ ಪಡೆದು ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.

ಬೂತ್ ಮಟ್ಟದ ಅಧಿಕಾರಿಗಳು ಮತದಾನ ಕೇಂದ್ರವಿರುವ ಪ್ರದೇಶದಲ್ಲಿ ಚುನಾವಣಾಧಿಕಾರಿಯು ಒದಗಿಸಿದ ವಿವರಗಳ ಅನುಸಾರ ಎವಿಎಸ್‍ಸಿ, ಎವಿಪಿಡಿ ಮತ್ತು ಎವಿಸಿಓ ಪ್ರವರ್ಗಗಳಲ್ಲಿನ ಗೈರು ಹಾಜರಿ ಮತದಾರರ ಮನೆಗಳಿಗೆ ಭೇಟಿ ನೀಡಿ ಸಂಬಂಧಪಟ್ಟ ಮತದಾರರಿಗೆ ನಮೂನೆ 12 ಡಿ ಯನ್ನು ವಿತರಿಸಿ, ನಂತರ ಮತದಾರರಿಂದ ನಮೂನೆ 12 ಡಿ ಯನ್ನು ಪಡೆಯಲಾಗುವುದು. ಈ ಉದ್ದೇಶಕ್ಕಾಗಿಯೇ ಪ್ರತ್ಯೇಕ ಪಟ್ಟಿ ತಯಾರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಸೆಕ್ಟರ್ ಅಧಿಕಾರಿಗಳು ನಮೂನೆ 12 ಡಿ ಅರ್ಜಿಗಳನ್ನು ವಿತರಿಸುವ ಹಾಗೂ ಸಂಗ್ರಹಿಸುವ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲಿದ್ದಾರೆ. ಈ ಎಲ್ಲಾ ಕಾರ್ಯದ ಸಂಪೂರ್ಣ ಮೇಲ್ವಿಚಾರಣೆಯನ್ನು ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ನೋಡಿಕೊಳ್ಳುತ್ತಾರೆ ಎಂದು ಡಾ.ಬಿ.ಸಿ.ಸತೀಶ ಅವರು ನುಡಿದರು.

ಅಂಚೆ ಮತದಾರನು ಒಂದು ಬಾರಿ ಅಂಚೆ ಮತಪತ್ರದ ಮೂಲಕ ಮತಚಲಾಯಿಸುವುದಾಗಿ ಆಯ್ಕೆ ಮಾಡಿಕೊಂಡಲ್ಲಿ, ಯಾವುದೇ ಕಾರಣಕ್ಕೂ ಮತಗಟ್ಟೆಗೆ ಹೋಗಿ ಮತಚಲಾಯಿಸಲು ಆಗುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಅವರು ಸ್ಪಷ್ಟಪಡಿಸಿದರು.

ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕದಂದು, ಆ ಮತದಾರರ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು. ಚುನಾವಣೆಯು ಮುಕ್ತಾಯಗೊಳ್ಳುವವರೆಗೂ ಆ ಪಟ್ಟಿಯಲ್ಲಿ ಯಾವುದೇ ಹೆಚ್ಚುವರಿ ಸೇರ್ಪಡೆ ಅಥವಾ ತೆಗೆದುಹಾಕುವಿಕೆ ಮಾಡುವುದಿಲ್ಲ ಎಂದರು.
Kalahamsa Infotech private limitedಕೋವಿಡ್-19 Covid-19 ಪ್ರವರ್ಗಕ್ಕೆ ಸೇರಿದ ಗೈರು ಹಾಜರಿ ಮತದಾರರ ಸಂದರ್ಭದಲ್ಲಿ ಅಂಚೆ ಮತದಾನಕ್ಕಾಗಿ ನಮೂನೆ-12 ಡಿ ಯನ್ನು ಅನುಮೋದಿಸುವ ಮುಂಚೆ ಚುನಾವಣಾಧಿಕಾರಿಯು ಸಕ್ಷಮ ಪ್ರಾಧಿಕಾರವು ನೀಡಿದ ಪ್ರಮಾಣ ಪತ್ರ ಪರಿಶೀಲಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಚುನಾವಣಾಧಿಕಾರಿಯು ಮತದಾರರ ಪಟ್ಟಿ ಗುರುತು ಮಾಡಿದ ಪ್ರತಿಯನ್ನು ಅವರ ಹೆಸರಿನ ಮುಂದೆ ‘ಪಿಬಿ’ (ಪೊಸ್ಟಲ್ ಬ್ಯಾಲೆಟ್) ಎಂದು ನಮೂದಿಸುತ್ತಾರೆ. ಅಂಚೆ ಮತಪತ್ರವನ್ನು ನೀಡಲಾದ ಮತದಾರನಿಗೆ ಮತದಾನ ಕೇಂದ್ರದಲ್ಲಿ ಮತ ಹಾಕಲು ಅನುಮತಿ ನೀಡುವುದಿಲ್ಲ ಎಂದರು.

ಕಾಂಗ್ರೆಸ್ ಪಕ್ಷದ ತೆನ್ನಿರಾ ಮೈನಾ ಮತ್ತು ಬಿಜೆಪಿಯ ಸತೀಶ್ ಅವರು ಮತದಾನ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಹಲವು ಹೊಸ ಹೊಸ ಯೋಜನೆಗಳನ್ನು ಕೈಗೊಳ್ಳುತ್ತಿದೆ. ಆ ನಿಟ್ಟಿನಲ್ಲಿ ಚುನಾವಣಾ ಆಯೋಗಕ್ಕೆ ಕೈಜೋಡಿಸಲಾಗುವುದು. 80 ವರ್ಷ ಮೇಲ್ಪಟ್ಟವರು ಹಾಗೂ ಇತರರನ್ನು ಸಂಪರ್ಕಿಸಿ ಮತಗಟ್ಟೆಗೆ ತೆರಳಲು ಅಸಾಧ್ಯವಾಗಿರುವವರಿಗೆ ಅಂಚೆ ಮತಪತ್ರ ಪಡೆದು ಮತದಾನ ಮಾಡಲು ಉತ್ತೇಜಿಸಲಾಗುವುದು ಎಂದು ಅವರು ಹೇಳಿದರು.

ಕೊಡಗು ಜಿಲ್ಲೆಯ ಹಲವು ಹಾಡಿಯ ಕುಟುಂಬಗಳು ಇನ್ನೂ ಸಹ ಮತದಾರರ ಗುರುತಿನ ಚೀಟಿ ಪಡೆದಿಲ್ಲ. ಆದ್ದರಿಂದ ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕಿದೆ ಎಂದು ತೆನ್ನಿರ ಮೈನಾ ಅವರು ಕೋರಿದರು.
ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಎರಡು ಬಾರಿ ಮನೆ ಮನೆ ಸಮೀಕ್ಷೆ ಮಾಡಲಾಗಿದೆ. ಈ ಹಿಂದೆ ನವೆಂಬರ್ ತಿಂಗಳಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಸಂಬಂಧ ಅಭಿಯಾನ ನಡೆದಿತ್ತು. ಈಗಲೂ ಸಹ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡದಿರುವವರು, ಹೆಸರು ಸೇರ್ಪಡೆ ಮಾಡಬೇಕು ಎಂದು ತಿಳಿಸಿದರು.

ಹಾಡಿಗಳಲ್ಲಿ ಈಗಾಗಲೇ ಎರಡು ಬಾರಿ ಮನೆ ಮನೆಗೆ ಭೇಟಿ ನೀಡಿ 1002 ಕ್ಕೂ ಹೆಚ್ಚು ಮಂದಿಯ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಇನ್ನೂ ಯಾರಾದರೂ 18 ವರ್ಷ ಮೇಲ್ಪಟ್ಟವರು ಬಿಟ್ಟು ಹೋಗಿದ್ದಲ್ಲಿ ಹತ್ತಿರದ ಬಿಎಲ್‍ಒಗಳನ್ನು ಅಥವಾ ವೋಟರ್ ಹೆಲ್ಫ್‍ಲೈನ್ ಆ್ಯಪ್ ಮೂಲಕ ಹೆಸರು ನೋಂದಾಯಿಸಬಹುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಸತೀಶ್(ಬಿಜೆಪಿ), ಗುಲಾಬಿ(ಜೆಡಿಎಸ್), ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬಾನಾ ಎಂ.ಶೇಕ್, ಚುನಾವಣಾ ತಹಶೀಲ್ದಾರ್ ರವಿಶಂಕರ ಇತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: COVID 19Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMadikeriNewsinKannadaNewsKannadaಕೋವಿಡ್-19ಮಡಿಕೇರಿ
Share224Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಗರದೆಲ್ಲೆಡೆ ಮನೆಮಾಡಿದ ಯುಗಾದಿ ಸಂಭ್ರಮ: ಖರೀದಿ ಭರಾಟೆಯಲ್ಲಿ ಜನತೆ

Next Post

ಸಾವನ್ನು ಸಾರ್ಥಕಗೊಳಿಸಲು ಅಂಗ ದಾನದ ಮಹತ್ವ ಅರಿಯಿರಿ: ಡಾ. ಧನಂಜಯ ಸರ್ಜಿ ಕರೆ

kalpa News

kalpa News

Next Post
ಸಾವನ್ನು ಸಾರ್ಥಕಗೊಳಿಸಲು ಅಂಗ ದಾನದ ಮಹತ್ವ ಅರಿಯಿರಿ: ಡಾ. ಧನಂಜಯ ಸರ್ಜಿ ಕರೆ

ಸಾವನ್ನು ಸಾರ್ಥಕಗೊಳಿಸಲು ಅಂಗ ದಾನದ ಮಹತ್ವ ಅರಿಯಿರಿ: ಡಾ. ಧನಂಜಯ ಸರ್ಜಿ ಕರೆ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL