No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Saturday, February 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಹರ್ ಘರ್ ತಿರಂಗಾ ಅಭಿಯಾನ: ಜಿಲ್ಲೆಯಾದ್ಯಂತ ಹಲವು ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 11, 2022
in ಕೊಡಗು
0
ಹರ್ ಘರ್ ತಿರಂಗಾ ಅಭಿಯಾನ: ಜಿಲ್ಲೆಯಾದ್ಯಂತ ಹಲವು ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  |

ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಅವಿರತ ಹೋರಾಟ ಮಾಡಿ, ದಾಸ್ಯದ ಸಂಕೋಲೆಯಿಂದ ಬಿಡುಗಡೆಯಾಗಿ ಭಾರತ ಸ್ವಾತಂತ್ರ್ಯಕ್ಕೆ 75 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಅಮೃತ ಮಹೋತ್ಸವ ಪ್ರಯುಕ್ತ ‘ಹರ್ ಘರ್ ತಿರಂಗಾ’ Har Ghar Tiranga ಅಭಿಯಾನವನ್ನು ಆಗಸ್ಟ್, 13 ರಿಂದ 15 ರವರೆಗೆ ಕೊಡಗು ಜಿಲ್ಲೆಯಾದ್ಯಂತ ಸಾರ್ವಜನಿಕರ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.

‘ಈಗಾಗಲೇ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 28 ಸಾವಿರ ಧ್ವಜವನ್ನು ವಿವಿಧ ಇಲಾಖೆಗಳಿಗೆ ವಿತರಿಸಲಾಗಿದ್ದು, ಜಿ.ಪಂ.ಸ್ವಸಹಾಯ ಗುಂಪುಗಳಿಂದ 53 ಸಾವಿರಕ್ಕೂ ಹೆಚ್ಚು ಧ್ವಜಗಳನ್ನು ಗ್ರಾಮೀಣ ಮಟ್ಟದಲ್ಲಿ ವಿತರಿಸಲಾಗಿದೆ. ಅಂಚೆ ಕಚೇರಿಯಿಂದ 13 ಸಾವಿರಕ್ಕೂ ಹೆಚ್ಚು, ಹಾಗೆಯೇ ಶಾಸಕರ ನೇತೃತ್ವದಲ್ಲಿಯೂ ಧ್ವಜ ವಿತರಣೆ ಮಾಡಿದ್ದು, ಒಟ್ಟಾರೆ ಜಿಲ್ಲೆಯ 1.44 ಲಕ್ಷ ಕುಟುಂಬಗಳಿಗೆ ರಾಷ್ಟ್ರಧ್ವಜವನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
‘ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜು, ಅಂಗನವಾಡಿ ಸೇರಿದಂತೆ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ಆಗಸ್ಟ್, 13 ರಿಂದ 15 ರವರೆಗೆ ಪ್ರತೀ ದಿನ ಬೆಳಗ್ಗೆ 8 ರಿಂದ ಧ್ಜಜಾರೋಹಣ ಮಾಡಿ ಸೂರ್ಯಾಸ್ತದ ವೇಳೆಗೆ ಇಳಿಸಬೇಕಿದೆ. ಜಿಲ್ಲೆಯಾದ್ಯಂತ ಮನೆಗಳಲ್ಲಿ ಮಾತ್ರ ಆಗಸ್ಟ್, 13 ರಂದು ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ಮಾಡಿ ಹಗಲು ರಾತ್ರಿ ನಿರಂತರವಾಗಿ ಧ್ವಜ ಹಾರಿಸಿ ಆಗಸ್ಟ್, 15 ರ ಸಂಜೆ ಸೂರ್ಯಾಸ್ತದ ವೇಳೆಗೆ ಇಳಿಸಿ, ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಹಕರಿಸುವಂತೆ ಡಾ.ಬಿ.ಸಿ.ಸತೀಶ ಅವರು ಕೋರಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಹರ್ ಘರ್ ತಿರಂಗಾ ಅಭಿಯಾನ ಆರಂಭವಾಗಿದ್ದು, ಜಿಲ್ಲೆಯ ಮಡಿಕೇರಿ ನಗರಸಭೆ, ವಿರಾಜಪೇಟೆ ಪುರಸಭೆ, ಕುಶಾಲನಗರ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯಿತಿಗಳಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಗುರುವಾರ ಚಾಲನೆ ದೊರೆತಿದೆ.
ಅಮೃತ ಮಹೋತ್ಸವ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನ ತ್ಯಾಗಮಾಡಿದ ಎಲ್ಲರನ್ನೂ ಗೌರವಿಸಿ ಸ್ಮರಿಸಬೇಕಿದೆ. ಭವ್ಯ ಭಾರತ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕಿದೆ.

ಆ.12 ರಂದು ಹರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಜಾಥಾ: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ದಿನಾಚರಣೆಯ ಪ್ರಯುಕ್ತ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಆಗಸ್ಟ್ 12 ರಂದು ಬೆಳಗ್ಗೆ 10.30 ಗಂಟೆಗೆ ಹರ್ ಘರ್ ತಿರಂಗಾ ಜಾಥಾವು ನಗರದಲ್ಲಿ ನಡೆಯಲಿದೆ.

Also read: ಅತಿವೃಷ್ಟಿ: ಹೆಚ್ಚಿನ ಪರಿಹಾರ ಕೋರಿ ಶೀಘ್ರದಲ್ಲಿ ಕೇಂದ್ರಕ್ಕೆ ಮನವಿ – ಸಿಎಂ

ಈ ಜಾಥವು ಮಡಿಕೇರಿಯ ಕೋಟೆ ಆವರಣದಿಂದ ಪ್ರಾರಂಭವಾಗಿ ಸ್ಕ್ವಾಡ್ರ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ ಮೂಲಕ ಇಂದಿರಾ ಗಾಂಧಿ ವೃತ್ತ ತಲುಪಿ ನಂತರ ಸ್ಕ್ವಾಡ್ರ್ರನ್ ಲೀಡರ್ ದೇವಯ್ಯ ವೃತ್ತ-ಮಂಗೆರೀರ ಮುತ್ತಣ್ಣ ವೃತ್ತ-ಜನರಲ್ ತಿಮ್ಮಯ್ಯ ವೃತ್ತ ಮತ್ತು ಮಂಗೆರೀರ ಮುತ್ತಣ್ಣ ವೃತ್ತದ ಮುಖಾಂತರ ಕೋಟೆ ಆವರಣಕ್ಕೆ ತಲುಪಲಿದೆ.
ಈ ಜಾಥಾದಲ್ಲಿ ಎಲ್ಲಾ ಸರ್ಕಾರಿ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿಗಳು ರಾಷ್ಟ್ರಧ್ವಜದೊಂದಿಗೆ ಭಾಗವಹಿಸಲಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಸರ್ಕಾರೇತರ ಸಂಸ್ಥೆಗಳು ಸಹ ಜಾಥಾದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಮತ್ತಷ್ಟು ಮಾಹಿತಿ: ಭಾರತ ಸ್ವಾತಂತ್ರ್ಯ ಪಡೆದು 75 ವರ್ಷಗಳು ಪೂರ್ಣಗೊಂಡಿದೆ. ಆದರೆ, ಅದರ ಹಿಂದೆ ಅಸಂಖ್ಯಾತ ಹೋರಾಟ, ತ್ಯಾಗ, ಬಲಿದಾನಗಳಿವೆ. ಭಾರತಾಂಬೆಗೆ ಪ್ರಾಪ್ತಿಯಾದ ಸ್ವಾತಂತ್ರ್ಯಕ್ಕೆ ಈಗ ಅಮೃತ ಮಹೋತ್ಸವದ ಸಂಭ್ರಮ ಈ ಹೋರಾಟಗಳಲ್ಲಿ ಮುಂಚೂಣಿ ನಾಯಕರುಗಳ ಪಾತ್ರ ಎಷ್ಟು ಮುಖ್ಯವಾಗಿರುತ್ತೋ ಅಷ್ಟೇ ಮುಖ್ಯವಾಗಿ ಅವರು ಹೋರಾಟಕ್ಕೆ ಕರೆ ನೀಡಿದಾಗ, ತಮ್ಮ ಮನೆ ಮಠಗಳನ್ನು ಹಾಗೂ ವೈಯಕ್ತಿಕ ಬದುಕನ್ನು ತ್ಯಾಗ ಮಾಡಿ ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮನ್ನು ತಾವು ಸಮರ್ಪಿಸಿಕೊಂಡ ಲಕ್ಷಾಂತರ ಜನರ ಪಾತ್ರವೂ ಮುಖ್ಯ. ಆದರೆ ಅವರುಗಳ ಹೆಸರು ಎಲ್ಲೂ ದಾಖಲಾಗಿಲ್ಲ. ಆದರೆ ಮುಂಚೂಣಿ ನಾಯಕರ ಜೊತೆ ಇವರೆಲ್ಲ ಕೈಜೋಡಿಸಿದ್ದರಿಂದ ಸ್ವಾತಂತ್ರ್ಯ ಕನಸು ಸಾಕಾರವಾಯಿತು.
ಪ್ರಸ್ತುತ ದೇಶಾದ್ಯಂತ ಭಾರತ ಸ್ವಾತಂತ್ರ್ಯದ 75ರ ಸಂಭ್ರಮವನ್ನು ವೈವಿಧ್ಯಮಯವಾಗಿ ಆಚರಿಸಲಾಗುತ್ತಿದೆ. ಈ ಸಂಭ್ರಮದ ಒಂದು ಭಾಗವಾಗಿ ಕೇಂದ್ರ ಸರ್ಕಾರವು ‘ಹರ್ ಘರ್ ತಿರಂಗಾ’ ಎಂಬ ಘೋಷ ವಾಕ್ಯದೊಂದಿಗೆ ಆಗಸ್ಟ್ 13 ರಿಂದ 15 ರವರೆಗೆ ದೇಶದ ಪ್ರತಿಮನೆ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಿ ದಾಖಲಿಸುವಂತೆ ಕರೆ ನೀಡಿದೆ. ಅದರಂತೆ ಈ ಸಂದರ್ಭದಲ್ಲಿ ನೀವೆಲ್ಲರೂ ಆಗಸ್ಟ್, 13 ರಿಂದ 15 ರವರೆಗೆ ನಿಮ್ಮ-ನಿಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜಹಾರಿಸುವ ಮೂಲಕ ಈ ವಿಶೇಷ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Har Ghar TirangaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMadikeriNewsinKannadaNewsKannadaಮಡಿಕೇರಿಹರ್ ಘರ್ ತಿರಂಗಾ
Share209Tweet123Send
Previous Post

ಅತಿವೃಷ್ಟಿ: ಹೆಚ್ಚಿನ ಪರಿಹಾರ ಕೋರಿ ಶೀಘ್ರದಲ್ಲಿ ಕೇಂದ್ರಕ್ಕೆ ಮನವಿ – ಸಿಎಂ

Next Post

ಎಮ್ಮೆ ಅಪಘಾತ ವಿಮೆ ನಿರಾಕರಿಸಿದ ವಿಮಾ ಕಂಪನಿಗೆ 95 ಸಾವಿರ ರೂ.ದಂಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೇವಾನ್ಯೂನ್ಯತೆ ಹಿನ್ನೆಲೆ ಸರಕಿನ ಹಣ, ಇತರೆ ಖರ್ಚು ಪಾವತಿಸುವಂತೆ ಆದೇಶ

ಎಮ್ಮೆ ಅಪಘಾತ ವಿಮೆ ನಿರಾಕರಿಸಿದ ವಿಮಾ ಕಂಪನಿಗೆ 95 ಸಾವಿರ ರೂ.ದಂಡ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
ಸೊರಬ | ಚಂದ್ರಗುತ್ತಿಯಲ್ಲಿ ಅಪೂರ್ವ ಶಾಸನ ಪತ್ತೆ

ಸೊರಬ | ಚಂದ್ರಗುತ್ತಿಯಲ್ಲಿ ಅಪೂರ್ವ ಶಾಸನ ಪತ್ತೆ

February 28, 2026
ಬಾಕ್ಸಿಂಗ್ ಮಹೋತ್ಸವ; ಇಂಡಿಯಾ ನಾಕ್‌ಔಟ್ ನೈಟ್ಸ್’ ಭರ್ಜರಿ ಆರಂಭ!

ಬಾಕ್ಸಿಂಗ್ ಮಹೋತ್ಸವ; ಇಂಡಿಯಾ ನಾಕ್‌ಔಟ್ ನೈಟ್ಸ್’ ಭರ್ಜರಿ ಆರಂಭ!

February 28, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಮೈಸೂರು – ಶಿವಮೊಗ್ಗ ಎಕ್ಸ್ಪ್ರೆಸ್ ರೈಲಿನ ಕುರಿತು ಲೇಟೆಸ್ಟ್ ಅಪ್ಡೇಟ್

February 28, 2026
ಚಾಮರಾಜನಗರ | ಡಾ. ರಾಜ್ ಒಡನಾಡಿ ಕೃಷ್ಣ ಟಾಕೀಸ್ ಚಂದ್ರಣ್ಣರವರಿಗೆ ಗೌರವ ಸನ್ಮಾನ

ಚಾಮರಾಜನಗರ | ಡಾ. ರಾಜ್ ಒಡನಾಡಿ ಕೃಷ್ಣ ಟಾಕೀಸ್ ಚಂದ್ರಣ್ಣರವರಿಗೆ ಗೌರವ ಸನ್ಮಾನ

February 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL