No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Friday, June 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಲೋಕಸಭಾ ಚುನಾವಣೆ: ಮೈಸೂರು-ಕೊಡಗು ಕ್ಷೇತ್ರದಲ್ಲಿ ಎಷ್ಟು ಮತದಾರರಿದ್ದಾರೆ?

ನಾಮಪತ್ರ ಸಲ್ಲಿಕೆ ಆರಂಭ ಯಾವಾಗ | ಮತಗಟ್ಟೆ ಮಾಹಿತಿಗಾಗಿ 24x7 ವೋಟರ್ ಸಹಾಯವಾಣಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 28, 2024
in ಕೊಡಗು
0
ಲೋಕಸಭಾ ಚುನಾವಣೆ: ಮೈಸೂರು-ಕೊಡಗು ಕ್ಷೇತ್ರದಲ್ಲಿ ಎಷ್ಟು ಮತದಾರರಿದ್ದಾರೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಡಿಕೇರಿ  |

ಲೋಕಸಭಾ ಸಾರ್ವತ್ರಿಕ ಚುನಾವಣೆಯು Lokasabha Election ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾರ್ಚ್, 28 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ DC Venkat Raja ಅವರು ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಏಪ್ರಿಲ್, 04 ಕೊನೆಯ ದಿನವಾಗಿದೆ. ಏಪ್ರಿಲ್, 05 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್, 08 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ. ಏಪ್ರಿಲ್, 26 ರಂದು ಮತದಾನ ನಡೆಯಲಿದ್ದು, ಜೂನ್, 04 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು  ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ 4,66,154 ಮತದಾರರು ಇದ್ದು, ಇವರಲ್ಲಿ 2,28,478 ಪುರುಷ ಮತದಾರರು ಮತ್ತು 2,37,660 ಮಹಿಳಾ ಮತದಾರರು ಇದ್ದಾರೆ. 16 ಮಂದಿ ಇತರೆ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2,36,562 ಮತದಾರರು ಇದ್ದು, ಇವರಲ್ಲಿ 1,15,159 ಪುರುಷ ಮತದಾರರು ಮತ್ತು 1,21,394 ಮಹಿಳಾ ಮತದಾರರು ಇದ್ದು, ಇತರೆ 9 ಮಂದಿ ಮತದಾರರು ಇದ್ದಾರೆ. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 2,29,592 ಮಂದಿ ಮತದಾರರು ಇದ್ದು, ಇವರಲ್ಲಿ 1,13,319 ಪುರುಷ ಮತದಾರರು ಮತ್ತು 1,16,266 ಮಹಿಳಾ ಮತದಾರರು ಇದ್ದಾರೆ, 7 ಮಂದಿ ಇತರೆ ಮತದಾರರು ಇದ್ದಾರೆ.
ಕೊಡಗು ಜಿಲ್ಲೆಯಲ್ಲಿ 1,357 ಮಂದಿ ಸೇವಾ ಮತದಾರರು ಇದ್ದು, ಇವರಲ್ಲಿ 1,298 ಪುರುಷ ಮತದಾರರು ಹಾಗೂ 59 ಮಹಿಳಾ ಮತದಾರರು ಇದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 622 ಮಂದಿ ಸೇವಾ ಮತದಾರರು ಇದ್ದು, ಇವರಲ್ಲಿ 596 ಪುರುಷ ಮತದಾರರು, 26 ಮಹಿಳಾ ಮತದಾರರು ಇದ್ದಾರೆ. ಹಾಗೆಯೇ ವಿರಾಜಪೇಟೆ ವಿಭಾನಸಭಾ ಕ್ಷೇತ್ರದಲ್ಲಿ 735 ಮಂದಿ ಸೇವಾ ಮತದಾರರು ಇದ್ದು, ಇವರಲ್ಲಿ 702 ಪುರುಷ ಮತದಾರರು, 33 ಮಂದಿ ಮಹಿಳಾ ಸೇವಾ ಮತದಾರರು ಇದ್ದಾರೆ.

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ 18 ರಿಂದ 19 ವಯಸ್ಸಿನ 9,076 ಯುವ ಮತದಾರರು ಇದ್ದು, 4,547 ಪುರುಷ ಯುವ ಮತದಾರರು ಮತ್ತು 4,529 ಮಹಿಳಾ ಮತದಾರರು ಇದ್ದಾರೆ. ಹಾಗೆಯೇ ಕೊಡಗು ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ವಿಶೇಷ ಚೇತನ ಮತದಾರರು ಇದ್ದಾರೆ.

ಕೊಡಗು ಜಿಲ್ಲೆಯಲ್ಲಿ ಒಟ್ಟು 546 ಮತಗಟ್ಟೆಗಳಿದ್ದು, ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಲಾ 273 ಮತಗಟ್ಟೆ ಹೊಂದಿದೆ. ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಶೌಚಾಲಯ, ರ್ಯಾಂಪ್ ವ್ಯವಸ್ಥೆ ಕಲ್ಪಿಸಲಾಗಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಖಾತರಿಪಡಿಸಿಕೊಳ್ಳುವುದು, ಮತಗಟ್ಟೆ ಬಗ್ಗೆ ಮಾಹಿತಿ ಪಡೆಯುವುದು ಇತರೆ ಚುನಾವಣೆ ವಿಷಯಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು/ ಮಾಹಿತಿಯನ್ನು ಪಡೆಯಲು ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಟೋಲ್ ಫ್ರೀ ಸಂಖ್ಯೆ 1950 ಕ್ಕೆ ಕರೆ ಮಾಡಬಹುದಾಗಿದೆ. ಹಾಗೆಯೇ ವೋಟರ್ ಸಹಾಯವಾಣಿ 24*7 ಕಾರ್ಯನಿರ್ವಹಿಸಲಾಗುತ್ತದೆ.

Also read: ಹಾಲಿ ಸಂಸದರ ಬಗ್ಗೆ ಆಕ್ರೋಶವಿದೆ, ಪಕ್ಷ ನಿಷ್ಠೆಗಾಗಿ ಜನರಿಂದ ನನಗೆ ಬೆಂಬಲ: ಈಶ್ವರಪ್ಪ ವಿಶ್ವಾಸ

ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ಮತಗಟ್ಟೆಗಳಿಗೆ ಒಬ್ಬರು ಅಧ್ಯಕ್ಷಾಧಿಕಾರಿ ಮತ್ತು ಮೂವರು ಮತಗಟ್ಟೆ ಅಧಿಕಾರಿಗಳು ಹಾಗೂ ಮೀಸಲು ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ. ಅದೇ ರೀತಿ ಕೇಂದ್ರ ಸರ್ಕಾರಿ ಅಧಿಕಾರಿ/ ಸಿಬ್ಬಂದಿಗಳನ್ನು ಆಯ್ದ ಮತಗಟ್ಟೆಗಳಿಗೆ ಮೈಕ್ರೋ ವೀಕ್ಷಕರನ್ನಾಗಿ ನೇಮಕ ಮಾಡಲಾಗುತ್ತದೆ.

ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಾಗೂ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾ ಇಡಲು ಸೆಕ್ಟರ್ ಅಧಿಕಾರಿಗಳು ಪ್ರೈಯಿಂಗ್ ಸ್ಕ್ವಾಡ್, ಲೆಕ್ಕ ವೀಕ್ಷಕರ ತಂಡ, ವಿಡಿಯೋ ವಿವಿಂಗ್ ತಂಡ, ವಿಡಿಯೋ ಪರಿಶೀಲನಾ ತಂಡ, ಸಹಾಯಕ ವೆಚ್ಚ ವೀಕ್ಷಕರ ತಂಡಗಳನ್ನು ರಚಿಸಲಾಗಿದೆ. ಜಿಲ್ಲೆಯಲ್ಲಿ 44 ಮಂದಿ ಸೆಕ್ಟರ್ ಅಧಿಕಾರಿಗಳು, 21 ಮಂದಿ ಪ್ಲೈಯಿಂಗ್ ಸ್ಕ್ವಾಡ್, 42 ಮಂದಿ ಸ್ಟಾಟಿಕ್ ಸರ್ವಿಲೆನ್ಸ್ ತಂಡದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ಭಾರತ ಚುನಾವಣಾ ಆಯೋಗವು ಸಿ-ವಿಜಿಲ್ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿ ಪಡಿಸಿದ್ದು. ಈ ಅಪ್ಲಿಕೇಷನ್‍ನ್ನು ಗೂಗಲ್ ಪ್ಲೇ ಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಂಡು, ಚುನಾವಣೆಯಲ್ಲಿ ಮತದಾರರಿಗೆ ಅಕ್ರಮವಾಗಿ ಹಣ, ಗೃಹ ಬಳಕೆ ಸಾಮಾಗ್ರಿಗಳು, ಮದ್ಯ ಹಂಚಿಕೆ ಮಾಡುವ ಬಗ್ಗೆ ಹಾಗೂ ಯಾವುದೇ ರೀತಿಯ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ಅಪ್ಲಿಕೇಷನ್‍ನಲ್ಲಿ ವಿಡಿಯೋ ಮತ್ತು ಪೋಟೋಗಳ ಮೂಲಕ ಮಾಹಿತಿ ನೀಡಬಹುದಾಗಿದೆ.

85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ, ಕೋವಿಡ್ ಶಂಕಿತ, ದೃಢಪಟ್ಟ ಮತದಾರರಿಗೆ ಹಾಗೂ ಅಗತ್ಯ ಸೇವೆಗಳ ಇಲಾಖೆಗಳ ನಿರತ ಅಧಿಕಾರಿ ಸಿಬ್ಬಂದಿಗಳಿಗೆ ವಿಶೇಷ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಯಾವುದೇ ಚುನಾವಣಾ ಕರಪತ್ರಗಳು, ಪೋಸ್ಟರ್, ಬಿಲ್‍ಗಳಲ್ಲಿ ಪ್ರಕಾಶಕರು ಮತ್ತು ಪ್ರಕಾಶನ ಸಂಸ್ಥೆಯ ಮಾಹಿತಿಯನ್ನು ಕಡ್ಡಾಯವಾಗಿ ಮುದ್ರಿಸಬೇಕು. ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಅಭ್ಯರ್ಥಿಯ ಪರವಾಗಿ ಯಾವುದೇ ರೀತಿಯ ರಾಜಕೀಯ ಜಾಹೀರಾತನ್ನು ಪ್ರಕಟಿಸುವ/ಪ್ರಸಾರ ಮಾಡುವ ಮೊದಲು ಜಾಹೀರಾತಿನ ವಿವರವನ್ನು ಚುನಾವಣಾ ಎಂಸಿಎಂಸಿ ತಂಡದ ಗಮನಕ್ಕೆ ತಂದು ಪ್ರಮಾಣ ಪತ್ರ ಪಡೆದುಕೊಳ್ಳುವುದು ಕಡ್ಡಾಯವಾಗಿದೆ.
Kalahamsa Infotech private limited2024 ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪ್ರತಿಯೊಬ್ಬ ಮತದಾರರು ಸಹ ಅವರ ಹಕ್ಕನ್ನು ಚಲಾಯಿಸಲು ಅಡೆತಡೆಗಳಾಗದಂತೆ ಎಲ್ಲರೂ ಸಹ ಮತದಾನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಜಿಲ್ಲಾಡಳಿತದಿಂದ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಭಾರತ ಚುನಾವಣಾ ಆಯೋಗದ ಎಲ್ಲಾ ನಿಯಮಗಳಂತೆ ಕಟ್ಟುನಿಟ್ಟಾಗಿ ಪಾಲಿಸಿ ಚುನಾವಣೆಯನ್ನು ನಡೆಸಲು ಜಿಲ್ಲೆಯ ಎಲ್ಲಾ ಮತದಾರರು, ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಸಹಕಾರ ಕೋರಿದೆ.

ಚುನಾವಣೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಭಾರತ ಚುನಾವಣಾ ಆಯೋಗದ ವೆಬ್‍ಸೈಟ್ www.eci.nic.in ಮತ್ತು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‍ಸೈಟ್ www.ceokarnataka.kar.nic.in ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ವೆಬ್‍ಸೈಟ್ www.kodagu.nic.in ನಲ್ಲಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0024.mp4
Tags: DC Venkat RajaKannada NewsKannada News LiveKannada News OnlineKannada News WebsiteKannada WebsiteLatest News KannadaLokasabha ElectionMadikeriNews in KannadaNews Kannadaಮಡಿಕೇರಿಲೋಕಸಭಾ ಸಾರ್ವತ್ರಿಕ ಚುನಾವಣೆವೆಂಕಟ್ ರಾಜಾ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಾಲಿ ಸಂಸದರ ಬಗ್ಗೆ ಆಕ್ರೋಶವಿದೆ, ಪಕ್ಷ ನಿಷ್ಠೆಗಾಗಿ ಜನರಿಂದ ನನಗೆ ಬೆಂಬಲ: ಈಶ್ವರಪ್ಪ ವಿಶ್ವಾಸ

Next Post

ಯೂಟ್ಯೂಬ್ ಜ್ಯೋತಿಷ್ಯ ಜಾಹಿರಾತು | ನಂಬಿ ಕರೆ ಮಾಡಿದ್ದ ಶಿವಮೊಗ್ಗದ ಮಹಿಳೆಗೆ ಲಕ್ಷ ಲಕ್ಷ ರೂ. ದೋಖಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯೂಟ್ಯೂಬ್ ಜ್ಯೋತಿಷ್ಯ ಜಾಹಿರಾತು | ನಂಬಿ ಕರೆ ಮಾಡಿದ್ದ ಶಿವಮೊಗ್ಗದ ಮಹಿಳೆಗೆ ಲಕ್ಷ ಲಕ್ಷ ರೂ. ದೋಖಾ

ಯೂಟ್ಯೂಬ್ ಜ್ಯೋತಿಷ್ಯ ಜಾಹಿರಾತು | ನಂಬಿ ಕರೆ ಮಾಡಿದ್ದ ಶಿವಮೊಗ್ಗದ ಮಹಿಳೆಗೆ ಲಕ್ಷ ಲಕ್ಷ ರೂ. ದೋಖಾ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
Shivamogga Ganja sale case Two arrested

ಶಿವಮೊಗ್ಗ | ಗಾಂಜಾ ಮಾರಾಟ ಪ್ರಕರಣ: ಇಬ್ಬರ ಬಂಧನ

June 19, 2026
ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

June 19, 2026
ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

June 19, 2026
ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

ಧರ್ಮಸ್ಥಳ ವಿಚಾರ: ನಟ ಪ್ರಕಾಶ್ ರಾಜ್ ವಿರುದ್ಧ ತನಿಖೆ ನಡೆಸಲು ಶಾಸಕ ಚನ್ನಬಸಪ್ಪ ಆಗ್ರಹ

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL