No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಮಹಿಳಾ ದಸರಾವು ಮಹಿಳೆಯರ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ: ವೀಣಾ ಅಚ್ಚಯ್ಯ

kalpa News by kalpa News
October 9, 2024
in ಕೊಡಗು
0
ಮಹಿಳಾ ದಸರಾವು ಮಹಿಳೆಯರ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ: ವೀಣಾ ಅಚ್ಚಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಡಿಕೇರಿ  |

ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ, #Gruhalakshmi ಶಕ್ತಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಇವುಗಳನ್ನು ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಕಾರದಲ್ಲಿ ನಗರ ದಸರಾ #Dasara ಸಮಿತಿ ವತಿಯಿಂದ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ‘ಮಹಿಳಾ ದಸರಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಹಿಳೆಯರು ರಾಜಕೀಯ, ಆರ್ಥಿಕ, ವಾಣಿಜ್ಯ, ಆಡಳಿತ, ಬಾಹ್ಯಾಕಾಶ, ಕ್ರೀಡೆ, ಸಿನಿಮಾ, ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದು ವೀಣಾ ಅಚ್ಚಯ್ಯ ಅವರು ಬಣ್ಣಿಸಿದರು.

ಪಟ್ಟಣ, ನಗರ ಮತ್ತು ಬೃಹತ್ ನಗರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದು, ಗ್ರಾಮೀಣ ಪ್ರದೇಶದ ಮಹಿಳೆಯರಿಗೂ ಅವಕಾಶಗಳು ಒದಗಬೇಕು ಎಂದು ವೀಣಾ ಅಚ್ಚಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಮಹಿಳಾ ದಸರಾವು #Mahila Dasara ಮಹಿಳೆಯರ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಆ ನಿಟ್ಟಿನಲ್ಲಿ ಅವಕಾಶಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯುವಂತಾಗಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯರು ಹೇಳಿದರು.
ಮಹಿಳೆಯರು ಸಾಮಾಜಿಕ ಹಾಗು ಸಾರ್ವಜನಿಕ ಕ್ಷೇತ್ರಗಳಲ್ಲಿ ಮತ್ತಷ್ಟು ತೊಡಗಿಸಿಕೊಂಡಲ್ಲಿ ಶ್ರೇಯೋಭಿವೃದ್ಧಿ ಮತ್ತಷ್ಟು ಹೆಚ್ಚಲಿದೆ. ರಾಷ್ಟ್ರದ ಅಭಿವೃದ್ಧಿಗೆ ಮಹಿಳೆಯರ ಪಾತ್ರ ಹೆಚ್ಚಿನದ್ದಾಗಿದೆ ಎಂದು ವೀಣಾ ಅಚ್ಚಯ್ಯ ಅವರು ನುಡಿದರು.

ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಅವರು ಮಾತನಾಡಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಶೇ.50ರಷ್ಟು ಮೀಸಲು ಶೀಘ್ರ ಜಾರಿಯಾಗಬೇಕು ಎಂದು ಅವರು ಒತ್ತಾಯಿಸಿದರು.

ಮಹಿಳಾ ಮತ್ತು ಪುರುಷ ಸಮಾನವಾಗಿ ಬದುಕಿದಾಗ ಸಮಾಜ ಅಭಿವೃದ್ಧಿ ಸಾಧ್ಯ ಎಂಬುದನ್ನು ಮರೆಯುವಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಗಂಡು-ಹೆಣ್ಣು ಸಮಾನರು ಎಂಬುದನ್ನು ಅರಿತುಕೊಳ್ಳಬೇಕು ಎಂದರು.
ಈ ಹಿಂದೆ ಸ್ತ್ರೀಶಕ್ತಿ ಸಂಘಗಳನ್ನು ಸ್ಥಾಪಿಸುವ ಮೂಲಕ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸಿತು ಎಂಬುದನ್ನು ಮರೆಯಬಾರದು ಎಂದು ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಮಹಿಳೆಯರು ಸಹಕಾರ ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಆರ್ಥಿಕ, ಕುಟುಂಬ, ಸಾಮಾಜಿಕ, ಜೀವನ ನಿರ್ವಹಣೆ ಅರಿತು ಕೊಳ್ಳಬೇಕು. ಹೀಗಾದಾಗ ರಾಷ್ಟ್ರದ ಅಭಿವೃದ್ಧಿ ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಕೆ.ಪಿ.ಚಂದ್ರಕಲಾ ಅವರು ಪ್ರತಿಪಾದಿಸಿದರು.

Also read: ಭದ್ರಾವತಿ | ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪ | ತನಿಖೆಗೆ ಆಗ್ರಹ

ಇಂದಿಗೂ ಸಹ ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಸಂಕುಚಿತ ಮನೋಭಾವ ಹೊಂದಿದ್ದು, ಇದನ್ನು ಬಿಡಬೇಕು. ಎಲ್ಲರಂತೆ ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಕೆ.ಪಿ.ಚಂದ್ರಕಲಾ ಅವರು ಸಲಹೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರು ಮಾತನಾಡಿ ದಸರಾ ಸಂದರ್ಭದಲ್ಲಿಯೂ ದುರ್ಗೆ, ಚಾಮುಂಡಿ, ಹೆಸರಿನಲ್ಲಿ ದಸರಾವನ್ನು ಆಚರಿಸುವುದು ವಿಶೇಷವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮಹಿಳೆಯರು ಎಲ್ಲಾ ರಂಗಗಳಲ್ಲೂ ಪ್ರಮುಖ ಪಾತ್ರ ವಹಿಸುತ್ತಾರೆ. ಸ್ತ್ರೀ ಎಂದರೆ ಆತ್ಮಶಕ್ತಿ, ಆದಿಶಕ್ತಿ ಎಂಬುದನ್ನು ಮರೆಯುವಂತಿಲ್ಲ ಎಂದು ಆರ್. ಐಶ್ವರ್ಯ ಅವರು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ಅವರು ಮಾತನಾಡಿ ಸರ್ಕಾರ ಮಹಿಳೆಯರು ಮತ್ತು ಮಕ್ಕಳಿಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಗ್ಯಾರಂಟಿ ಯೋಜನೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆಯಡಿ ಪ್ರತೀ ತಿಂಗಳು 23 ಕೋಟಿ ರೂ. ಪಾವತಿಯಾಗುತ್ತಿದೆ. ಆರಂಭದಿಂದ ಇದುವರೆಗೆ 241 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಮಾತೃ ವಂದನಾ, ಮಾತೃ ಪೂರ್ಣ, ಕ್ಷೀರಭಾಗ್ಯ ಹೀಗೆ ಹಲವು ಯೋಜನೆಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರೂಪಿಸಲಾಗಿದೆ ಎಂದು ನಟರಾಜು ಅವರು ವಿವರಿಸಿದರು.

ಮಹಿಳಾ ದಸರಾಗೆ ದಿವ್ಯ ಮಂತರ್ ಗೌಡ ಅವರು ಚಾಲನೆ ನೀಡಿದರು. ನಗರಸಭಾ ಸದಸ್ಯರಾದ ಅನಿತಾ ಪೂವಯ್ಯ, ಸವಿತಾ ರಾಕೇಶ್, ಚಿತ್ರಾವತಿ, ಕಲಾವತಿ, ಪ್ರಮುಖರಾದ ಜುಲೈಕಾಭಿ, ಲೀಲಾ ಶೇಷಮ್ಮ, ಸೂರಯ್ಯಾ ಅಬ್ರಾರ್, ಉಷಾ, ಎಚ್.ಎನ್.ಶಾರದ, ಸವಿತಾ, ಸೀತಾಲಕ್ಷ್ಮಿ, ರಜನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತರು ಇತರರು ಇದ್ದರು.

ಅನಿಲ್ ಎಚ್.ಟಿ. ಸ್ವಾಗತಿಸಿದರು. ಅನಿತಾ ನಿರೂಪಿಸಿದರು. ಮಹಿಳಾ ದಸರಾ ಸಂಚಾಲಕರಾದ ಕುಡೆಕಲ್ ಸವಿತಾ ಸಂತೋಷ್ ಅವರು ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: DasaraGruhalakshmiKannada News WebsiteKannada_NewsKannada_News_LiveKannada_News_OnlineKannada_WebsiteKodaguLatest News KannadaMadikeriMahila DasaraNews_in_KannadaNews_Kannadaಗೃಹಲಕ್ಷ್ಮಿದಸರಾಮಡಿಕೇರಿಮಹಿಳಾ ದಸರಾ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪ | ತನಿಖೆಗೆ ಆಗ್ರಹ

Next Post

ಶರನ್ನವರಾತ್ರಿ | ಮಿಟ್ಟೇಸೂಗುರು ಶ್ರೀ ಮಾರಿಕಾಂಬಾ ದೇಗುಲಕ್ಕೆ ಚರಣಗಿರಿ ಮಠದ ಶ್ರೀಗಳು ಭೇಟಿ

kalpa News

kalpa News

Next Post
ಶರನ್ನವರಾತ್ರಿ | ಮಿಟ್ಟೇಸೂಗುರು ಶ್ರೀ ಮಾರಿಕಾಂಬಾ ದೇಗುಲಕ್ಕೆ ಚರಣಗಿರಿ ಮಠದ ಶ್ರೀಗಳು ಭೇಟಿ

ಶರನ್ನವರಾತ್ರಿ | ಮಿಟ್ಟೇಸೂಗುರು ಶ್ರೀ ಮಾರಿಕಾಂಬಾ ದೇಗುಲಕ್ಕೆ ಚರಣಗಿರಿ ಮಠದ ಶ್ರೀಗಳು ಭೇಟಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL