ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಿನ್ನೆ ತಡರಾತ್ರಿ ಇಲ್ಲಿನ ಕೆಎಸ್’ಆರ್’ಟಿಸಿ ಡಿಪೋ ಬಳಿಯಿರುವ ಮಂಜುನಾಥ ಸಾಮಿಲ್’ನಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂ. ಬೆಲೆ ಬಾಳುವ ನಾಟ ಸುಟ್ಟು ಭಸ್ಮವಾಗಿವೆ.
ಹೊಸ ಸೇತುವೆ ರಸ್ತೆಯಲ್ಲಿರುವ ಈ ಸಾಮಿಲ್’ನಲ್ಲಿ ನಿನ್ನೆ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣ ಮಾತ್ರದಲ್ಲಿ ಇಡಿಯ ನಾಟಾ ರಾಶಿಗೆ ಇದು ಹರಡಿ, ಹೊತ್ತಿ ಉರಿದಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿರುವ ಅಗ್ನಿ ಶಾಮಕ ದಳ ವಾಹನಗಳ ಬೆಳಗಿನ ಜಾವದವರೆಗೂ ಪ್ರಯತ್ನಿಸಿದರೂ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ.
ಅಗ್ನಿ ಅನಾಹುತಕ್ಕೆ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post