No Result
View All Result
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ
English Articles

MEIL Scripts Himalayan History with Final Breakthrough of Zojila Tunnel

by ಕಲ್ಪ ನ್ಯೂಸ್
June 9, 2026
0

Kalpa Media House  |  Sringar/ Zojila  | Megha Engineering & Infrastructure Limited (MEIL) has achieved the final breakthrough of the...

Read moreDetails
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 21, 2025
in ಚಾಮರಾಜನಗರ
0
ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಲೆಮಹದೇಶ್ವರ ಬೆಟ್ಟ  |

ಕಲಿಯುವ ವಯಸ್ಸಿನಲ್ಲಿ ವಿದ್ಯಾರ್ಥಿಗಳಲ್ಲಿ ಜ್ಞಾನದ ದಾಹ ಮತ್ತು ಕಲಿಕೆಯ ಹಂಬಲ ಜ್ವರದಂತೆ ಕಾಡಬೇಕು. ಪ್ರತಿಭೆ ಅಂದರೆ ಕೇವಲ ಪರೀಕ್ಷಾ ಫಲಿತಾಂಶ ಅಲ್ಲ. ಜ್ಞಾನ ಮತ್ತು ನಿರಂತರ ಸಾಧನೆ ಮತ್ತು ನೀವು ಪಟ್ಟ ಪರಿಶ್ರಮ ಮೂರೂ ಬೆರೆತ ಮಿಶ್ರಣ. ಇಂದು ಪ್ರತಿಭಾ ಪುರಸ್ಕಾರ ಸ್ವೀಕರಿಸುತ್ತಿರುವ ಎಲ್ಲಾ ಮಕ್ಕಳಿಗೂ ಎಲ್ಲಾ ಪೋಷಕರ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆ.ವಿ. ಪ್ರಭಾಕರ್ ಹೇಳಿದರು.

ಇವತ್ತು ಶಿಕ್ಷಣ ವ್ಯವಸ್ಥೆ ಹೇಗಾಗಿದೆ, ಎಷ್ಟು ದುಬಾರಿ ಆಗಿದೆ‌ ಎಂದರೆ, ಪೋಷಕರು ಸದಾ ಮಕ್ಕಳ ಶಿಕ್ಷಣದ ಬಗ್ಗೆಯೇ ಯೋಚಿಸುವಂತಾಗಿದೆ. ಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕಾಗಿ ಪೋಷಕರು ತಮ್ಮ ಅಗತ್ಯ ಮತ್ತು ಅನುಕೂಲಗಳ ಜೊತೆ ರಾಜಿ ಮಾಡಿಕೊಳ್ಳುತ್ತಾರೆ. ಪೋಷಕರ ಈ ತಪಸ್ಸಿಗೆ ಸಾರ್ಥಕತೆ ಬರುವುದು ಅವರ ಮಕ್ಕಳು ಸಾಧನೆ ಮಾಡಿದಾಗ, ಮಕ್ಕಳ ಪ್ರತಿಭಾ ಪುರಸ್ಕಾರವನ್ನು ಕಣ್ಣಲ್ಲಿ ಕಾಣುವ ಪೋಷಕರಿಗೆ ಇದಕ್ಕಿಂತ ದೊಡ್ಡ ಸಮಾಧಾನ ಬೇರೆ ಇರುವುದಿಲ್ಲ. ಜೊತೆಗೆ ಮಕ್ಕಳು ಪರಿಶ್ರಮದಿಂದ ಕಲಿತರೆ ಪೋಷಕರ ಮೇಲಿನ ಆರ್ಥಿಕ ಹೊರೆಯೂ ಕಡಿಮೆ ಆಗುತ್ತದೆ. ಆರ್ಥಿಕ ಹೊರೆ ಕಡಿಮೆ ಇದ್ದಾಗ ಸಹಜವಾಗಿ ಪೋಷಕರ ಆರೋಗ್ಯ ಮತ್ತು ಮನೆಯ ಆರೋಗ್ಯವೂ ಚನ್ನಾಗಿರುತ್ತದೆ. ಹೀಗಾಗಿ SSLC ಮತ್ತು PUC ದಾಟಿದ ನಿಮ್ಮಗಳ ಮೇಲೆ ಪೋಷಕರನ್ನು ಖುಷಿಯಾಗಿಡುವ ಜವಾಬ್ದಾರಿ ಇರುತ್ತದೆ. ನಿಮ್ಮ ಪರಿಶ್ರಮ ಮತ್ತು ಜ್ಞಾನದಾಹ ಹಾಗೂ ಕಲಿಕೆಯ ಹಸಿವು ಹೆಚ್ಚಾಗಬೇಕು. ಈ ದಾಹ ಮತ್ತು ಹಸಿವು ನಿಮಗೆ ಜ್ವರದಂತೆ ಕಾಡಬೇಕು.
ಇಲ್ಲಿ ಪ್ರತಿಭಾ ಸ್ವೀಕಾರಕ್ಕೆ ಬಂದಿರುವ ಮಕ್ಕಳ ಜೊತೆ ಎರಡು ವಿಚಾರಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ. ಒಂದು, ನಮ್ಮ ಎಲ್ಲಾ ಸಾಧನೆಗಳಿಗೂ ನಾವು ಬದುಕುತ್ತಿರುವ ಸಮಾಜದ ಕೊಡುಗೆ ಇರುತ್ತದೆ.

ಸಮಾಜ ಎಂದರೆ ಶರೀರ ಇದ್ದ ಹಾಗೆ. ನಾವು ಈ ಶರೀರದೊಳಗೆ ಬದುಕುತ್ತಿದ್ದೇವೆ. ನಾವು ಇರುವ ಶರೀರವನ್ನು ಕಟ್ಟುಮಸ್ತಾಗಿ, ಆರೋಗ್ಯಕರವಾಗಿ, ಆನಂದಮಯವಾಗಿ ಇಟ್ಟುಕೊಳ್ಳುವುದೇ ನಮ್ಮ ಪ್ರತಿಭೆಗೆ, ನಮ್ಮ ಸಾಧನೆಗೆ ಸಿಗುವ ನಿಜವಾದ ಪುರಸ್ಕಾರ ಎಂದು ಭಾವಿಸುತ್ತೇನೆ.

ಎರಡು, ಇಂದು ಸಮಾಜದಲ್ಲಿ ಭ್ರಷ್ಟಾಚಾರ ಇರುವುದಕ್ಕೆ ಮುಖ್ಯ ಕಾರಣ ಆರೋಗ್ಯ ಮತ್ತು ಶಿಕ್ಷಣ ಅತ್ಯಂತ ದುಬಾರಿ ಆಗಿರುವುದೇ ಕಾರಣ ಆಗಿದೆ. ಮಕ್ಕಳ ಓದಿನ ಖರ್ಚು, ಹಿರಿಯರ ಆಸ್ಪತ್ರೆ ಖರ್ಚು ನಮ್ಮ ನಿದ್ದೆಗೆಡಿಸುತ್ತದೆ. ಸಮಾಜದಲ್ಲಿ ಇದು ಬದಲಾಗಬೇಕು. ಈ ಬದಲಾವಣೆಗೆ ಪೂರಕವಾಗಿ ನೀವುಗಳು ವಿದ್ಯಾರ್ಥಿ ಜೀವನದಿಂದಲೇ ಯೋಚಿಸಬೇಕು. ನಾವು ಬದುಕುತ್ತಿರುವ ಸಮಾಜವೆಂಬ ಈ ಶರೀರ ಇನ್ನಷ್ಟು ಆನಂದವಾಗಿರಲು, ಇನ್ನಷ್ಟು ಆರೋಗ್ಯಕರವಾಗಿರಲು ನಾವೇನು ಮಾಡಬೇಕು ಎನ್ನುವ ದಿಕ್ಕಿನಲ್ಲಿ ಸದಾ ಚಿಂತನಾಶೀಲರಾಗಿರಬೇಕು. ಈ ಚಿಂತನಶೀಲತೆ ನಮ್ಮ ಜ್ಞಾನ ದಾಹ ಮತ್ತು ವಿವೇಕದ ಹಸಿವನ್ನು ಹೆಚ್ಚಿಸುತ್ತದೆ.
ಈ ಎರಡು ಸಂಗತಿಗಳನ್ನು ಮಕ್ಕಳ ಜೊತೆ ಹಂಚಿಕೊಳ್ಳುವುಕ್ಕಾಗಿ ಮತ್ತು ಪೋಷಕರನ್ನು ವೃದ್ದಾಶ್ರಮಗಳಿಗೆ ಕಳುಹಿಸದಂತೆ ನಾವು ಜವಾಬ್ದಾರರಾಗಬೇಕು ಎನ್ನುವ ನನ್ನ ಕೋರಿಕೆಗಳನ್ನು ನಿಮ್ಮ ಮುಂದೆ ಇಡಲು ನಾನು ಇಲ್ಲಿಗೆ ಬಂದಿದ್ದೇನೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸತತ ಐದನೇ ವರ್ಷ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿದೆ. ಇದಕ್ಕಾಗಿ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪದಾಧಿಕಾರಿಗಳನ್ನೂ ನಾನು ಅಭಿನಂದಿಸುತ್ತೇನೆ ಎಂದರು.
ಜುಲೈ 1 ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ವೃತ್ತಿ ಮತ್ತು ಬದುಕಿನ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಜುಲೈ 1 ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ.

ಹಾಗೆಯೇ 5 ಲಕ್ಷ ರೂಪಾಯಿ ವರೆಗಿನ ಆರೋಗ್ಯ ಚಿಕಿತ್ಸಾ ವೆಚ್ಚವನ್ನು ಒದಗಿಸುವ ಪತ್ರಕರ್ತರ ಆರೋಗ್ಯ ಕಾರ್ಡ್ ವ್ಯವಸ್ಥೆಯನ್ನೂ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಆರೋಗ್ಯ ಸಂಜೀವಿನಿ ಕಾರ್ಡ್ ಕೂಡ ಜುಲೈ 1 ರಂದು ನೀಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಪತ್ರಕರ್ತರ ಭವನ ಮತ್ತು ತಾಲ್ಲೂಕು ಪತ್ರಕರ್ತರ ಭವನದ ನಿರ್ಮಾಣಕ್ಕೂ ಸರ್ಕಾರದ ಜೊತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: ChamarajanagaraKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMalemahadeshwaraNews_in_KannadaNews_Kannadaಮಲೆಮಹದೇಶ್ವರ ಬೆಟ್ಟ
Share196Tweet123Send
Previous Post

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

Next Post

ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
Indian Railways Sanctions Upgrade of Electric Traction System on Bengaluru–Tumkur Section

Indian Railways Sanctions Upgrade of Electric Traction System on Bengaluru–Tumkur Section

June 9, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

ದಾವಣಗೆರೆಯಲ್ಲಿ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ಆರೋಪ – 10 ಮಂದಿ ಬಂಧನ

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL