No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಸ್ಮಾರ್ಟ್ ಕ್ಲಾಸ್’ನಲ್ಲಿ ಏನೆಲ್ಲಾ ಹೈಟೆಕ್ ಸೌಲಭ್ಯಗಳಿವೆ ಗೊತ್ತಾ?

ಮಲೆನಾಡ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಅಲೆ: ಸರ್ಕಾರಿ ಶಾಲೆಗಳ ರೂಪ ಬದಲಿಸಿದ ಸ್ಮಾರ್ಟ್ ಕ್ಲಾಸ್

kalpa News by kalpa News
March 9, 2021
in ಶಿವಮೊಗ್ಗ
0
ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಸ್ಮಾರ್ಟ್ ಕ್ಲಾಸ್’ನಲ್ಲಿ ಏನೆಲ್ಲಾ ಹೈಟೆಕ್ ಸೌಲಭ್ಯಗಳಿವೆ ಗೊತ್ತಾ?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಯಾವುದೇ ಕ್ಷೇತ್ರದಲ್ಲಾಗಲೀ, ವ್ಯವಸ್ಥೆಯಲ್ಲಾಗಲೀ ನಿರಂತರವಾಗಿ ಬದಲಾವಣೆಗಳಾಗುತ್ತಿದ್ದರೆ ಅದನ್ನು ಅಭಿವೃದ್ಧಿಯ ಮೆಟ್ಟಿಲುಗಳೆಂದು ಹೇಳಬಹುದು. ಹೀಗೇ ಯಾವುದೇ ಬದಲಾವಣೆಗಳನ್ನು ಮಾಡಬೇಕಾದರೂ ಅದರಲ್ಲಿ ದೃಢ ನಿರ್ಧಾರಗಳು ಮುಖ್ಯ. ಯಾವುದೇ ವ್ಯವಸ್ಥೆಯನ್ನು ಅರ್ಥಬದ್ಧವಾಗಿ ಮತ್ತು ಅಭಿವೃದ್ಧಿಗೆ ಪೂರಕವಾಗಿ ಬದಲಾಯಿಸಬೇಕು ಮತ್ತು ಅದು ಆಯಾ ಕ್ಷೇತ್ರದ ಸಮಸ್ತರಿಗೂ ಅನುಕೂಲವಾಗಬೇಕು ಎಂದರೆ ಅಲ್ಲಿ ಪೂರ್ವ ಪರಿಶೀಲನೆ ಮತ್ತು ಸ್ಥಿರ ಯೋಜನೆಗಳು ಅತ್ಯಗತ್ಯ. ಇವು ಅಭಿವೃದ್ಧಿಗೆ ಪೂರಕ ಅಂಶಗಳು.

ಹೀಗೇ ಹಿಂದಿನಿಂದಲೂ ಭಾರತದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಹೊಸತನವನ್ನು ಸೇರಿಸುವ ಮೂಲಕ ಆಧುನಿಕತೆಯನ್ನು ಬರಮಾಡಿಕೊಳ್ಳುವ ಕೆಲಸಗಳು ನಿರಂತರವಾಗಿ ಸಾಗುತ್ತಿದೆ. ಹೀಗೇ ಎಲ್ಲಾ ಕ್ಷೇತ್ರಗಳಂತೆ ಶಿಕ್ಷಣ ಕ್ಷೇತ್ರದಲ್ಲೂ ಹೊಸತನದ ಚಿಗುರೊಡೆದಿದೆ.ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಗಳಲ್ಲಿ ಒಂದಾದ, ದೇಶದಲ್ಲಿ ಆಯ್ದ ನೂರು ನಗರಗಳನ್ನು ಸ್ಮಾರ್ಟ್ ಸಿಟಿಗಳನ್ನಾಗಿ ರೂಪಾಂತರಗೊಳಿಸುವ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕರ್ನಾಟಕದ ಒಟ್ಟು 11 ನಗರಗಳು ಆಯ್ಕೆಯಾಗಿವೆ. ಶಿವಮೊಗ್ಗ ನಗರವನ್ನು ಸೇರಿದಂತೆ, ಮೈಸೂರು, ಕಲ್ಬುರ್ಗಿ, ವಿಜಯಪುರ, ಬಳ್ಳಾರಿ, ಬೆಂಗಳೂರು, ತುಮಕೂರು, ಮಂಗಳೂರು, ಬೆಳಗಾವಿ, ದಾವಣಗೆರೆ ಮತ್ತು ಹುಬ್ಬಳ್ಳಿ-ಧಾರವಾಡ ನಗರಗಳು ಈ ಪಟ್ಟಿಯಲ್ಲಿವೆ. ಈ ನಗರಗಳಲ್ಲಿ ಈಗಾಗಲೇ ಸ್ಮಾರ್ಟ್ ಸಿಟಿ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ.

ಈ ಯೋಜನೆಯ ಅನುಷ್ಟಾನ ಮುಖ್ಯಮಂತ್ರಿ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಶರವೇಗದಲ್ಲಿ ಸಾಗುತ್ತಿದೆ. ವ್ಯವಸ್ಥಿತ ಮೂಲಸೌಕರ್ಯ ಅಭಿವೃದ್ಧಿಯ ಜತೆಗೆ ಶಿಕ್ಷಣ ಕ್ಷೇತ್ರದಲ್ಲಿಯೂ ಮಹತ್ತರ ಬದಲಾವಣೆಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಮಾಡಿರುವುದು ಶಿವಮೊಗ್ಗದ ಹೆಗ್ಗಳಿಕೆ.ಜಿಲ್ಲೆಯ ಆಯ್ದ ಪ್ರಮುಖ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಪ್ರಾರಂಭಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವಂತೆ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯುವಲ್ಲಿ ನಮ್ಮ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟಿದೆ. ಅಲ್ಲದೇ ಸರ್ಕಾರಿ ಶಾಲೆಯ ಮಕ್ಕಳು ಕನ್ನಡ ಮಾಧ್ಯಮಕ್ಕೆ ಮಾತ್ರ ಸೀಮಿತವಾದವರು ಎಂಬ ಹಣೆಪಟ್ಟಿಯನ್ನು ತೊಡೆದುಹಾಕುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಈ ಹಿಂದೆಯೇ ಆಂಗ್ಲ ಮಾಧ್ಯಮದಲ್ಲಿಯೂ ಶಿಕ್ಷಣ ನೀಡಲು ಪ್ರಾರಂಭಿಸಲಾಗಿದೆ. ಸ್ಮಾರ್ಟ್ ಕ್ಲಾಸ್ ಈ ಬೆಳವಣಿಗೆಯ ಮುಂದಿನ ಭಾಗವೆಂದು ಹೇಳಬಹುದು.

ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 2021ರಿಂದ ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ಸ್ಮಾರ್ಟ್ ಕ್ಲಾಸ್‌ಗಳನ್ನು ಪ್ರಾರಂಭಿಸಲಾಗಿದೆ. ಅದರಂತೆ ಶಿವಮೊಗ್ಗ ಜಿಲ್ಲೆಯ ದುರ್ಗಿಗುಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಈಗಾಗಲೇ ಮಾದರಿಯಾಗಿ ಸ್ಮಾರ್ಟ್ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಅಂತೆಯೇ ಸ್ಮಾರ್ಟ್ ಸಿಟಿ ಯೋಜನೆ ವ್ಯಾಪ್ತಿಯ ಆಯ್ದ 45 ಸರ್ಕಾರಿ ಶಾಲೆಗಳಲ್ಲಿಯೂ ಸಹ ಸ್ಮಾರ್ಟ್ ತರಗತಿಗಳನ್ನು ಆರಂಭಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ತರಗತಿಗಳು ಸಂಪೂರ್ಣವಾಗಿ ಡಿಜಿಟಲ್ ತಂತ್ರಜ್ಞಾನವನ್ನು ಒಳಗೊಂಡಿರಲಿವೆ.ಜಿಲ್ಲೆಯಲ್ಲಿ ಪ್ರಥಮವಾಗಿ ದುರ್ಗಿಗುಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ 2020-21ನೆಯ ಸಾಲಿನಿಂದ ಸ್ಮಾರ್ಟ್ ತರಗತಿಗಳನ್ನು ಆರಂಭಿಸಲಾಗಿದೆ. 6 ನೆಯ ತರಗತಿಯಿಂದ 10 ನೆಯ ತರಗತಿವರೆಗಿನ ಎಲ್ಲಾ ಮಕ್ಕಳಿಗೆ ಸ್ಮಾರ್ಟ್ ತರಗತಿಗಳನ್ನು ನಡೆಸಲಾಗುತ್ತಿದೆ. ಇಲ್ಲಿ 6 ಮತ್ತು 7 ನೆಯ ತರಗತಿಯಲ್ಲಿ ತಲಾ 200ಕ್ಕೂ ಹೆಚ್ಚು ಮಕ್ಕಳಿದ್ದು, ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಪ್ರತಿ ತರಗತಿಗಳನ್ನು 4 ಸೆಕ್ಷನ್‌ಗಳಾಗಿ ವಿಂಗಡಿಸಲಾಗಿದೆ. ಅಲ್ಲದೇ, ಇಲ್ಲಿ ಒಟ್ಟು 4 ಐಸಿಟಿ ಲ್ಯಾಬ್’ಗಳಿವೆ.

ಈ ರೀತಿ ಆಧುನಿಕ ತಂತ್ರಜ್ಞಾನವನ್ನು ಬಳಸಿ ನಡೆಸುವ ಸ್ಮಾರ್ಟ್ ತರಗತಿಗಳನ್ನು ಕೆ-ಕ್ಲಾಸ್ ಎಂದು ಕರೆಯಲಾಗುತ್ತದೆ. ಸರ್ಕಾರದ ಪಠ್ಯಕ್ರಮವನ್ನು ಈಗಾಗಲೇ ಡಿಜಿಟಲೀಕರಣಗೊಳಿಸಿ ಶಾಲೆಗೆ ನೀಡಲಾಗಿದೆ. ಇವುಗಳ ಜೊತೆಗೆ ಯೂಟ್ಯೂಬ್ ಹಾಗೂ ಗೂಗಲ್ ಮೂಲಕ ಪಠ್ಯಕ್ಕೆ ಸಂಬಂಧಿಸಿದ ವೀಡಿಯೋಗಳನ್ನು ವಿದ್ಯಾರ್ಥಿಗಳಿಗೆ ತೋರಿಸಲಾಗುತ್ತಿದೆ. ಇವುಗಳನ್ನು ಕೆ-ಯಾನ್ ಪ್ರೊಜೆಕ್ಟರ್ ಮೂಲಕ ಸ್ಮಾರ್ಟ್ ಬೋರ್ಡ್ ಮೇಲೆ ಪ್ರದರ್ಶಿಸಲಾಗುತ್ತದೆ. ಹೀಗೆ ಪ್ರದರ್ಶನಗೊಂಡ ಪಠ್ಯಗಳ ಕುರಿತು ಅವಶ್ಯಕತೆ ಇದ್ದಾಗ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿವರಿಸುತ್ತಾರೆ. ಸ್ಮಾರ್ಟ್ ಬೋರ್ಡ್ ಮೇಲೆ ಬರೆಯಲು, ಪಠ್ಯವನ್ನು ಮೇಲೆ ಕೆಳಗೆ ಚಲಿಸುವಂತೆ ಮಾಡಲು ಸ್ಟೈಲಸ್ ಎಂಬ ಪೆನ್ ಅನ್ನು ಬಳಸಲಾಗುತ್ತದೆ. ಸ್ಟೈಲಸ್ ಸಹಾಯದಿಂದ ಕಪ್ಪು ಹಲಗೆಯ ಮೇಲೆ ಬರೆಯುವಂತೆ ಸ್ಮಾರ್ಟ್ ಬೋರ್ಡ್ ಮೇಲೆಯೂ ಬರೆದು ವಿವರಿಸಬಹುದು. ಈ ತಂತ್ರಜ್ಞಾನದ ಬಳಕೆಯ ಕುರಿತು ಶಿಕ್ಷಕರಿಗೆ ಮೂರು ದಿನಗಳ ತರಬೇತಿ ನೀಡಲಾಗಿದೆ. ವಿದ್ಯಾರ್ಥಿಗಳ ಹಾಜರಾತಿಯೂ ಈಗ ಡಿಜಿಟಲೀಕರಣಗೊಂಡಿದೆ.

ಸ್ಮಾರ್ಟ್ ತರಗತಿಗಳು ಪ್ರಾರಂಭವಾದ ನಂತರ ವಿದ್ಯಾರ್ಥಿಗಳು ಹೆಚ್ಚು ಕ್ರಿಯಾಶೀಲರಾಗಿದ್ದಾರೆ. ತರಗತಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಿದ್ದಾರೆ. ಸ್ಮಾರ್ಟ್ ತರಗತಿಗಳಿಂದ ವಿದ್ಯಾರ್ಥಿಗಳ ಗಮನವನ್ನು ಕೇಂದ್ರೀಕರಿಸುವುದು ಸುಲಭವಾಗಿದೆ. ವಿದ್ಯಾರ್ಥಿಗಳಲ್ಲಿ ತಂತ್ರಜ್ಞಾನದ ಜ್ಞಾನ ಹೆಚ್ಚಾಗಿದೆ. ಮಕ್ಕಳೇ ಉತ್ಸುಕತೆಯಿಂದ ಪಿಪಿಟಿ ಬಳಸಿ ಒಂದೊಂದು ವಿಷಯದ ಕುರಿತು ವಿವರಿಸುವಷ್ಟು ಕೌಶಲ್ಯ ಪಡೆದಿದ್ದಾರೆ. ಒಟ್ಟಾರೆ ಸ್ಮಾರ್ಟ್ ತರಗತಿಗಳು ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದ್ದು ವಿದ್ಯಾರ್ಥಿಗಳಲ್ಲಿ ಕಲಿಯುವ ಆಸಕ್ತಿ ಹೆಚ್ಚಿದೆ ಎಂದು ಶಾಲೆಯ ಸಹಾಯಕ ಶಿಕ್ಷಕಿಯಾದ ಉಶಾರಾಣಿ ಅಭಿಪ್ರಾಯಪಡುತ್ತಾರೆ.

ನನಗೆ ಹಿಂದಿನ ತರಗತಿ ಶೈಲಿಗಿಂತ ಸ್ಮಾರ್ಟ್ ತರಗತಿಗಳು ತುಂಬಾ ಇಷ್ಟ. ಇಲ್ಲಿ ಪಾಠದೊಂದಿಗೆ ಪಾಠಕ್ಕೆ ಸಂಬಂಧಿಸಿದ ವೀಡಿಯೋಗಳನ್ನು ಹಾಗೂ ಸಣ್ಣ ಕಥೆಗಳು, ಪದ್ಯಗಳ ವೀಡಿಯೋಗಳನ್ನು ನಮಗೆ ತೋರಿಸುತ್ತಾರೆ. ಇದರಿಂದ ವಿಷಯ ನಮಗೆ ಚೆನ್ನಾಗಿ ಅರ್ಥವಾಗುತ್ತೆ ಅನ್ನೋದು ಆರನೇ ತರಗತಿಯ ವಿದ್ಯಾರ್ಥಿನಿ ಮಾನಸಿ ಯ ಅಭಿಪ್ರಾಯ.

ಸ್ಮಾರ್ಟ್ ಸಿಟಿ ಯೋಜನೆಯಡಿ ಸರ್ಕಾರಿ ಶಾಲೆಯ ಮಕ್ಕಳಿಗೆ ಅತ್ಯಾಧುನಿಕ ತಂತ್ರಜ್ಞಾನದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸಲಾಗಿದೆ. ಯಾವುದೇ ಇಂಟರ್‌ನ್ಯಾಷನಲ್ ಶಾಲೆಗಳಿಗೂ ಕಡಿಮೆಯಿಲ್ಲದಂತಹ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಶಿಕ್ಷಕರಿಗೆ ನಿರಂತರ ತರಬೇತಿಯನ್ನು ಸಹ ನೀಡಲಾಗುತ್ತಿದೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ಹೇಳಿದ್ದಾರೆ.ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವ ಜನರ ಎದುರು ಸರ್ಕಾರಿ ಶಾಲೆಗಳು ಇಂದು ಸೆಡ್ಡು ಹೊಡೆದು ನಿಲ್ಲುತ್ತಿವೆ. ಯಾವುದೇ ಖಾಸಗೀ ಶಾಲೆಗೆ ಕಡಿಮೆಯಿಲ್ಲದಂತೆ ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳು ದೊರೆಯುತ್ತಿವೆ. ಉತ್ತಮ ಗುಣಮಟ್ಟದ ಕಟ್ಟಡಗಳು, ಉತ್ತಮ ಬೋಧಕ ವರ್ಗ, ಪಠ್ಯೇತರ ಚಟುವಟಿಕೆಗಳು, ಈಗ ಸ್ಮಾರ್ಟ್ ತರಗತಿಗಳು ಹೀಗೇ ಸರ್ಕಾರಿ ಶಾಲೆಗಳ ಗುಣಮಟ್ಟದ ಮಾನದಂಡಕ್ಕೆ ಹೊಸ ಹೊಸ ಅಂಶಗಳು ಸೇರ್ಪಡೆಯಾಗುತ್ತಿವೆ. ಒಟ್ಟಾರೆಯಾಗಿ ಸ್ಮಾರ್ಟ್ ಕ್ಲಾಸ್ ಗಳು ಸರ್ಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟವನ್ನು ಉತ್ತುಂಗಕ್ಕೇರಿಸಿವೆ.

ಸ್ಮಾರ್ಟ್ ಕ್ಲಾಸ್ ಯೋಜನೆ

  • ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 45 ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ತಂತ್ರಜ್ಞಾನದ ತರಗತಿಗಳು ಆರಂಭ
  • 45 ಶಾಲೆಗಳು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗೆ ಒಟ್ಟಾರೆಯಾಗಿ 92 ಡಿಜಿಟಲ್ ಕ್ಲಾಸ್ ರೂಂ ಮತ್ತು ಅದಕ್ಕೆ ಸಂಬಂಧಿಸಿದ ಸೌಲಭ್ಯಗಳನ್ನು ನೀಡಲಾಗಿದ್ದು, ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಂಚಿಕೆ
  • ಪ್ರತೀ ಸ್ಮಾರ್ಟ್ ತರಗತಿಗಳು ತಲಾ ಒಂದೊಂದು ಡಿಜಿಟಲ್ ಡಿವೈಸ್ ಗಳನ್ನು ಹೊಂದಿರಲಿದ್ದು, ಅದಕ್ಕೆ ಬೇಕಾದಂತಹ ಲ್ಯಾನ್, ಯುಪಿಎಸ್ ಮತ್ತು ವೈ-ಫೈ ಸೌಲಭ್ಯ ನೀಡಲಾಗಿದೆ
  • ಎಲ್ಲಾ 45 ಶಾಲೆಗಳು ಮತ್ತು ಒಂದು ಡಿಡಿಪಿಐ ನಲ್ಲಿತಲಾ ಒಂದೊಂದು ಸ್ಮಾರ್ಟ್ ಲ್ಯಾಬ್ ಇರಲಿದ್ದು, ವಿದ್ಯಾರ್ಥಿಗಳಿಗೆ ಕ್ರೋಮ್ ಬುಕ್ ಗಳು ಲಭ್ಯವಾಗಲಿವೆ. ಇವುಗಳ ಬಳಕೆಗೆ ಎಲ್ಲಾ ವಿದ್ಯಾರ್ಥಿಗಳಿಗೂ ವೈ-ಫೈ ಸೌಲಭ್ಯಗಳನ್ನು ನೀಡಲಾಗುತ್ತದೆ
  • ಈ ಯೋಜನೆಯಲ್ಲಿ ಒಟ್ಟು 436 ಲ್ಯಾಪ್‌ಟಾಪ್‌ಗಳನ್ನು ಮತ್ತು 46 ಸ್ಮಾರ್ಟ್ ಕಂಪ್ಯೂಟರ್ ಲ್ಯಾಬ್’ಗಳನ್ನು ನೀಡಲಾಗಿದೆ
  • ಇಲ್ಲಿ ಕಂಪ್ಯೂಟರ್ ಲ್ಯಾಬ್ ಮತ್ತು ಕ್ರೋಮ್ ಬುಕ್’ಗಳನ್ನು ಶಾಲೆಯ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ನೀಡಲಾಗುತ್ತದೆ
  • 45 ಶಾಲೆಯ ಎಲ್ಲಾ ಶಿಕ್ಷಕರಿಗೂ ಸ್ಮಾರ್ಟ್ ಕ್ಲಾಸ್ ಕುರಿತು 3 ದಿನಗಳ ತರಬೇತಿ ನೀಡಲಾಗಿದೆ

(ಲೇಖನ: ಅಮೃತಾ ಚಂದ್ರಶೇಖರ್, ವತ್ಸಲಾ ಲೋಕೇಶ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Government SchoolK ClassKannada News WebsiteLatest News KannadaShimogaShivamoggaShivamogga NewsSmart CitySmart Classಕೆ-ಕ್ಲಾಸ್ಶಿವಮೊಗ್ಗಸರ್ಕಾರಿ ಶಾಲೆಸರ್ಕಾರಿ ಸ್ಮಾರ್ಟ್ ಕ್ಲಾಸ್ಸ್ಮಾರ್ಟ್ ಕ್ಲಾಸ್ಸ್ಮಾರ್ಟ್ ಸಿಟಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಾಸನದಲ್ಲಿ ನಡೆದ ಕಾರ್ ರೇಸ್: ಸಾಲು ಸಾಲು ಪ್ರಶಸ್ತಿ ಬಾಚಿಕೊಂಡ ಶಿವಮೊಗ್ಗದ ಯುವಕ

Next Post

ಭದ್ರಾವತಿ ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಒತ್ತಾಯ

kalpa News

kalpa News

Next Post
ಭದ್ರಾವತಿ ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಒತ್ತಾಯ

ಭದ್ರಾವತಿ ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಒತ್ತಾಯ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL