ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆ ಜಿಲ್ಲೆಯಾದ್ಯಂತ ಭಾರೀ ಅವಾಂತರ ಸೃಷ್ಠಿಸಿದ್ದು, ಶಿವಮೊಗ್ಗದ ಗಾಂಧಿನಗರದ ಜನವಸತಿ ಪ್ರದೇಶದಲ್ಲಿ ಮೊಣಕಾಲುದ್ದ ನೀರು ನಿಂತಿದ್ದು, ಜನರು ಹಿಡಿಶಾಪ ಹಾಕುತ್ತಿದ್ದಾರೆ.
Also Read: ಎಸ್’ಎಸ್’ಎಲ್’ಸಿ ಫಲಿತಾಂಶ: ಶಿವಮೊಗ್ಗ ಜಿಲ್ಲೆಯ ಎಷ್ಟು ವಿದ್ಯಾರ್ಥಿಗಳು 625 ಅಂಕ ಗಳಿಸಿದ್ದಾರೆ? ಇಲ್ಲಿದೆ ಮಾಹಿತಿ
ಗಾಂಧಿ ನಗರ ಎ ಬ್ಲಾಕ್’ನ 2ನೆಯ ಕ್ರಾಸ್ ಸುತ್ತಮುತ್ತ ಸುಮಾರು 2 ಅಡಿಗಳಷ್ಟು ನೀರು ನಿಂತಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದೆ. ಜನರು ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಮಳೆ ಹೆಚ್ಚಾಗಿ, ನೀರು ಏರಿಕೆಯಾದರೆ ಸಂಪರ್ಕವೇ ತೊಂದರೆಯಾಗುವ ಆತಂಕವಿದೆ.
ಹಲವು ಮನೆಗಳಿಗೆ ನೀರು ನುಗ್ಗಿದ್ದರೆ, ಗಾಂಧಿ ನಗರ ಪಾರ್ಕ್ ಸಂಪೂರ್ಣ ಜಲಾವೃತಗೊಂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post