No Result
View All Result
Why The Hell Did You Make Manya Surve a Hero?: Sanjay Gupta Opens Up on Underworld Threats
English Articles

Why The Hell Did You Make Manya Surve a Hero?: Sanjay Gupta Opens Up on Underworld Threats

by ಕಲ್ಪ ನ್ಯೂಸ್
May 13, 2026
0

Kalpa Media House  |  Mumbai | From revolutionising Bollywood’s gangster genre with cult blockbusters like Kaante, Shootout at Lokhandwala, Shootout...

Read moreDetails
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
  • Advertise With Us
  • Grievances
  • About Us
  • Contact Us
Wednesday, May 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ರಾಷ್ಟ್ರೀಯ ವೀಣಾ ಉತ್ಸವಕ್ಕೆ 18ರ ಹರೆಯ: ವಾರಪೂರ್ಣ ವಿದ್ವತ್ಪೂರ್ಣ ಕಛೇರಿಗೆ ಶಿವಮೊಗ್ಗೆ ಸನ್ನದ್ಧ

ಮಲೆನಾಡಿಗರೇ ಅಪರೂಪದ ಈ ಕಾರ್ಯಕ್ರಮಕ್ಕೆ ನೀವೂ ಸಾಕ್ಷಿಯಾಗಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 12, 2021
in Special Articles, ಶಿವಮೊಗ್ಗ
0
ರಾಷ್ಟ್ರೀಯ ವೀಣಾ ಉತ್ಸವಕ್ಕೆ 18ರ ಹರೆಯ: ವಾರಪೂರ್ಣ ವಿದ್ವತ್ಪೂರ್ಣ ಕಛೇರಿಗೆ ಶಿವಮೊಗ್ಗೆ ಸನ್ನದ್ಧ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿಶೇಷ ಲೇಖನ  |  

ವೀಣೆಯು ಅಧ್ಯಾತ್ಮಿಕತೆಯ ಅನುಭವವನ್ನು ಸ್ಫುರಣಗೊಳಿಸುವ ಪ್ರಮುಖ ಭಾರತೀಯ ವಾದ್ಯವೂ ಹೌದು. ನೈಜತೆ, ಸಹಜತೆ, ಸಂಪ್ರದಾಯದ ನಿರಂತರತೆಯಲ್ಲಿ ಕಲಾತ್ಮಕ ಗಟ್ಟಿತನ ಉಳಿಯಲು, ಶಾಸೀಯ ಸಂಗೀತದ ಉದ್ದೇಶ ಸಖ್ಯವಾಗಿರಲು ಪೂರಕವಾದ ವಾದ್ಯವೂ ಹೌದು. ವೀಣೆಯನ್ನು ಕುರಿತು, ಸಪ್ತಾಹ ಕಾರ್ಯಕ್ರಮವನ್ನು ಕಳೆದ 17 ವರ್ಷಗಳಿಂದ ಅರ್ಥಪೂರ್ಣವಾಗಿ ನಡೆದಿರುವುದು, ನಡೆಯುತ್ತಿರುವುದಕ್ಕೆ ಶಾಸ್ತ್ರೀಯ ಪರಂಪರೆಯಲ್ಲಿ ಮಲೆನಾಡಿನ ತವರು ಶಿವಮೊಗ್ಗ ಒಂದು ದಾಖಲೆಯನ್ನೇ ನಿರ್ಮಿಸಿದೆ. 4 ದಶಕಗಳಿಂದ ಕರ್ನಾಟಕ-ಹಿಂದುಸ್ಥಾನಿ ಸೇರಿ ಶಾಸ್ತ್ರೀಯ ಸಂಗೀತದ ವಿವಿಧ ಪ್ರಾಕಾರಗಳಿಗೆ ಆಶ್ರಯ-ಅಪೂರ್ವ ವೇದಿಕೆ ನೀಡಿದ ಅಗ್ರಗಣ್ಯ ಸಂಸ್ಥೆ, ಶ್ರೋತೃಪರಂಪರೆ ಪಾಲನೆಗೆ ಮಹೋನ್ನತ ಕೊಡುಗೆ ನೀಡಿದ ಶ್ರೀ ಗುರುಗುಹ ವಾಗ್ಗೇಯ ಪ್ರತಿಷ್ಠಾನ ಮತ್ತು ಗುರುಗುಹ ಸಂಗೀತ ಮಹಾವಿದ್ಯಾಲಯ ಬಹು ಅಪರೂಪದ ‘ಮಾರ್ಗಶಿರ ವೀಣಾ ರಾಷ್ಟ್ರೀಯ ಮಹೋತ್ಸವ’ವನ್ನು ಪ್ರತಿ ವರ್ಷ ಆಯೋಜಿಸುತ್ತದೆ.
ಇದೀಗ ಶಿವಮೊಗ್ಗೆಯ ರಾಷ್ಟ್ರೀಯ ವೀಣಾ ಉತ್ಸವಕ್ಕೆ 18ರ ಹರೆಯ. ಸಾಂಸ್ಕೃತಿಕ, ಅಧ್ಯಾತ್ಮಿಕ ಮತ್ತು ಕಲಾತ್ಮಕವಾಗಿಯೂ ತನ್ನದೇ ಆದ ಕೊಡುಗೆಯನ್ನು ಭಾರತೀಯ ಶುದ್ಧ ಶಾಸೀಯ ಸಂಗೀತಕ್ಕೆ ಕೊಡುಗೆಯಾಗಿ ನೀಡಿದ ವೀಣೆ- ಮತ್ತು ವೀಣಾನಾದ ಸಪ್ತಾಹ ಈ ಬಾರಿ ಶಿವಮೊಗ್ಗದ ರವೀಂದ್ರನಗರದ ಗಣಪತಿ ದೇವಾಲಯದ ಆವರಣದಲ್ಲಿ ಡಿ.14-20 ರವರೆಗೆ ವಿಜೃಂಭಿಸಲಿದೆ.

ಸಾಹಿತಿ ವಿಜಯಾ ಶ್ರೀಧರ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಖ್ಯಾತ ವೈದ್ಯ ಗುರುದತ್, ಪ್ರಖ್ಯಾತ ವಿದುಷಿ ರೇವತಿ ಕಾಮತ್, ಉತ್ಸವದ ಪ್ರಮುಖ ರೂವಾರಿ ವಿದ್ವಾನ್ ಎಚ್.ಎಸ್. ನಾಗರಾಜ್ ಉಪಸ್ಥಿತರಿರಲಿದ್ದಾರೆ. 20ರಂದು ಸಂಜೆ 6ಕ್ಕೆ ಭಾರತೀಯ ವಿದ್ಯಾಭವನದ ಉಪಾಧ್ಯಕ್ಷ ದಿವಾಕರ ರಾವ್ ಸಮಾರೋಪ ಭಾಷಣ ಮಾಡಲಿದ್ದಾರೆ.


ಭರತವರ್ಷದ ಸಂಸ್ಕೃತಿಯ ಪ್ರತೀಕ
ಭಾರತೀಯ ಇತಿಹಾಸ, ಸಂಸ್ಕೃತಿ, ಸಂಗೀತ ಮತ್ತು ಸಂಪತ್ತಿನಲ್ಲಿ ವೀಣೆಯದು ಬಹಳ ಭದ್ರ ಹೆಜ್ಜೆ. ವೀಣಾವಾದ್ಯ ಭರತವರ್ಷದ ಸಂಸ್ಕೃತಿಯ ಚಿಹ್ನೆ ಕೂಡ. ವೀಣೆ ವೇದಕಾಲದಿಂದಲೂ ಕಂಡು, ಬೆಳೆದು ಬಂದಿರುವ ತಂತಿ ವಾದ್ಯ. ಬಹುತೇಕ ಪ್ರಕೃತಿದತ್ತ ಪರಿಕರದಿಂದಲೇ ರೂಪುಗೊಂಡು, ಮಾನವ ದೇಹಾಕೃತಿಗೆ ಅತಿ ಸಮೀಪದ ಆಕೃತಿಯನ್ನೂ ಪಡೆದ ವಾದ್ಯವಾಗಿರುವುದರಿಂದಲೇ ಇದರೊಂದಿಗಿನ ಅವಿನಾಭಾವ ಸಂಬಂಧ, ಅನುಸಂಧಾನ, ಅನನ್ಯನಂಟು ಅದ್ವಿತೀಯ. ವಿದ್ಯಾ ದೇವತೆ ಸರಸ್ವತಿ ವೀಣಾಪಾಣಿಯಾಗಿರುವುದು ಈ ಎಲ್ಲ ಸಂಗತಿಗಳಿಗೆ ದೈವಿಕ ಭಾವದೀಪಿಕೆಯಾಗಿದೆ.

ಅಧ್ಯಾತ್ಮಿಕತೆ ಸ್ಫುರಣ
ಸುಂದರ ಸಾಹಿತ್ಯ, ಕಲೆಯ ಲಾಲಿತ್ಯ ಪ್ರಕಟಗೊಳಿಸುವ, ಸುದೀರ್ಘ ಅಧ್ಯಾತ್ಮಿಕತೆಯ ಅನುಭವವನ್ನು ಸ್ಫುರಣಗೊಳಿಸುವ ಪ್ರಮುಖ ಭಾರತೀಯ ವಾದ್ಯವಾದ ವೀಣೆ ಸನಾತನ ಪರಂಪರೆಯಲ್ಲಿ ಹಾಸುಹೊಕ್ಕಾದ ಯಾಗ, ಹೋಮ ಹವನ, ಹಬ್ಬ- ಹರಿದಿನ, ಅರ್ಚನೆ, ಆರಾಧನೆ- ಹೀಗೆ ಎಲ್ಲ ವಿಧದಲ್ಲೂ ಅನಿವಾರ‌್ಯವಾಗಿದ್ದ ಕಾಲವೊಂದಿತ್ತು. ಗರ್ಭಿಣಿಯರಿಗೆ ನಿರತಂತರವಾಗಿ ವೀಣಾವಾದನ ಕೇಳಿಸುವ ಪರಿಪಾಠವೂ ಭಾರತೀಯ ಸಂಪ್ರದಾಯದಲ್ಲಿತ್ತು. ಆಧುನಿಕ ಮತ್ತು ಅವಸರದ ಬದುಕಿನ ಕಾಲ ಚಕ್ರಕ್ಕೆ ಸಿಲುಕಿ ಈ ಪರಂಪರೆ ಮರೆತುಹೋಗುವ ಮುನ್ನ ಮಾರ್ಗಶಿರ ಮಾಸದ ಮಾಗಿ ಚಳಿಯ ನಡುವೆ ಮಾಸಸೋಲ್ಲಾಸ ನೀಡುವ ಮಹೋತ್ಸವ ಪ್ರತಿ ವರ್ಷ ಸಂಪನ್ನಗೊಳ್ಳುತ್ತದೆ. ಮಲೆನಾಡಿನ ತವರು ಇದಕ್ಕೆ ಮುಖ್ಯ ಭೂಮಿಕೆಯಾಗಿ ಸಪ್ತಾಹದ ರೂಪದಲ್ಲಿ ಸರ್ವಜನರಿಗೂ ಸದಭಿರುಚಿಯ ನಾದಲಹರಿಯ ದರ್ಶನ ಮಾಡಿಸಲಿದೆ.
ಸುಲಭ ಮಾರ್ಗ
ಸಾವಿರಾರು ವರ್ಷಗಳಿಂದ ಚತುರ್ವಿಧ ಪುರುಷಾರ್ಥಗಳಿಗೆ ವೀಣೆ ಸುಲಭ ಮಾರ್ಗಿಯಾಗಿತ್ತು ಎಂಬ ಅರಿವನ್ನು ಹೊಸ ಪೀಳಿಗೆಗೆ ವಿಸ್ತರಿಸುವ ನಿಟ್ಟಿನಲ್ಲಿ ಜವಾಬ್ದಾರಿಯುತ ಪಾತ್ರ ವಹಿಸಲಿರುವ ಇದುವೇ ‘ಮಾರ್ಗಶಿರ ವೀಣಾ ರಾಷ್ಟ್ರೀಯ ಮಹೋತ್ಸವ’. ಭಾರತೀಯ ಸಂಗೀತದ ನೈಜತೆ, ಸಹಜತೆ, ಸಂಪ್ರದಾಯದ ನಿರಂತರತೆಯಲ್ಲಿ ಗಟ್ಟಿತನ ಉಳಿಯಲು, ಸಮಾಧಾನದ ಸಂಗೀತಕ್ಕೆ ಮತ್ತು ಸಂಗೀತದ ಉದ್ದೇಶ ಸಖ್ಯವಾಗಿರಲು ವೀಣಾವಾದನ ಕೇಳುವಿಕೆ ಅತೀ ಅವಶ್ಯ.

ರಂಜನೆಯೇ ಮುಖ್ಯವಲ್ಲ
ಇತ್ತೀಚಿನ ದಿನಗಳಲ್ಲಿ ವಿಶ್ವದ ಎಲ್ಲ ರೀತಿಯ ಸಂಗೀತ ಕೇಳ್ಮೆ ಸುಲಭವಾಗಿರುವುದರಿಂದ ಆನಂದ, ತನ್ಮಯತೆಗಿಂತ ಕೇವಲ ರಂಜನೆಯೇ ಮುಖ್ಯವಾಗುತ್ತಿರುವ ಕಾಲದಲ್ಲಿ ನಮ್ಮತನ ಕಾಪಾಡಿಕೊಳ್ಳಲು ಪರಂಪರಾಗತವಾಗಿ ಹಿರಿಯರು ನೀಡಿದ ಮೂಲ್ಯ ಸಂಗೀತ ಪರಂಪರೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ವೀಣಾವಾದನ ಉತ್ಸವಗಳು ಬಹಳ ಮಹತ್ವದ್ದೆನಿಸುತ್ತವೆ.
ಪ್ರಧಾನ ವಾದ್ಯ
ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನಕ್ಕೆ ಸಿಕ್ಕಷ್ಟು ಸಮೃದ್ಧ ವೇದಿಕೆಗಳು ವೀಣಾವಾದನಕ್ಕೆ ಅಷ್ಟಾಗಿ ದೊರಕುತ್ತಿಲ್ಲ. ಪ್ರಮುಖ ಕಚೇರಿಗಳಲ್ಲಿ ಪಕ್ಕವಾದ್ಯವಾಗಿ ಮಾತ್ರ ಬಳಕೆಯಾಗುತ್ತಿದೆ. ಇದಕ್ಕಾಗಿಯೇ ಉತ್ಸವಗಳನ್ನು ಆಯೋಜಿಸುವುದು ವಿರಳವಾಗಿ ವಾದ್ಯದಲ್ಲಿ ಪರಿಣತರ ಸಂಖ್ಯೆ ಕೂಡ ಮುಂದಿನ ದಿನಮಾನಗಳಲ್ಲಿ ಕಡಿಮೆಯಾಗುವ ಆತಂಕವೂ ಇದೆ. ಈ ಎಲ್ಲ ಒತ್ತಟ್ಟಿನ ಚಿಂತನೆಯಿಂದ, ಹಿಂದಿನ ಆದ್ಯತೆ- ಮಾನ್ಯಗೆ ಪಡೆಯುವ ದೃಷ್ಟಿಯಿಂದ ಪ್ರಸ್ತುತ ೧೮ನೆಯ ವರ್ಷದ ವೀಣಾ ಮಹೋತ್ಸವ ರಾಷ್ಟ್ರೀಯ ಸಪ್ತಾಹ ವೀಣಾ ವಿದ್ವಾಂಸರ-ಕಲಾ ರಸಿಕರ ಮತ್ತು ಕಲಿಕಾರ್ಥಿಗಳ ನಡುವೆ ಹೊಸ ಸೇತುವೆಯೊಂದನ್ನು ನಿರ್ಮಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ.

ವಿದ್ವನ್ಮಣಿಗಳ ಪಾಂಡಿತ್ಯ ಅನಾವರಣ
ಅಂತಾರಾಷ್ಟ್ರೀಯ ಖ್ಯಾತಿಯ ವಿನ್ಯಾಸಗಾರ್ತಿ ಮತ್ತು ವೀಣಾ ವಿದುಷಿ ರೇವತಿ ಕಾಮತ್ ಕಛೇರಿ ವೀಣಾ ಉತ್ಸವಕ್ಕೆ ಡಿ. 14ರಂದು ಮುನ್ನುಡಿ ಬರೆಯಲಿದೆ. ನಂತರ ಪ್ರತಿದಿನ ಸಂಜೆ 6ಕ್ಕೆ ವಿದ್ವನ್ಮಣಿಗಳಾದ ರಕ್ಷಿತಾ ರಮೇಶ್, ನಿಟ್ಟೂರು ಶ್ರೀಕಾಂತ್, ಪ್ರಶಾಂತ್ ಎಸ್. ಅಯ್ಯಂಗಾರ್, ಜೋತ್ಸ್ನಾ ಹೆಬ್ಬಾರ್, ವಿಜಯಲಕ್ಷ್ಮೀ ರಾಘು, ಮೈಸೂರು ಆರ್.ಕೆ. ಪದ್ಮನಾಭ ಅವರು ಈ ಬಾರಿಯ ಉತ್ಸವದಲ್ಲಿ ತಮ್ಮ ಅಪೂರ್ವ ವಿದ್ವತ್ತನ್ನು ಬಿಂಬಿಸಲಿದ್ದಾರೆ.
ವೀಣಾ ನಾದ ಧ್ಯಾನ ಯಜ್ಞ
ರಾಷ್ಟೀಯ ವೀಣಾ ಉತ್ಸವದ ವೇದಿಕೆಗಳಲ್ಲಿ ಕಲಾಪ್ರೌಢಿಮೆ ಮೆರೆದ ಕಲಾವಿದರ ಆಪ್ತ ನುಡಿಸಾಣಿಕೆಯನ್ನೂ ಶ್ರೋತೃ ಆಸ್ವಾದಿಸಬೇಕು ಎಂಬುದು ಉತ್ಸವದ ಮುಖ್ಯ ರುವಾರಿ ವಿದ್ವಾನ್ ಎಚ್.ಎಸ್. ನಾಗರಾಜರ ಆಶಯ. ಅದಕ್ಕೆಂದೇ ಉತ್ಸವದಲ್ಲಿ ಈ ಬಾರಿ ಡಿ. 19ರ ಮುಂಜಾನೆ 6ರಿಂದ 8ರ ವರೆಗೆ ‘ವೀಣಾ ನಾದ ಧ್ಯಾನ ಯಜ್ಞ ’ ಸಂಪನ್ನಗೊಳ್ಳಲಿದೆ. ಯಾವುದೇ ಕೃತಕ ಸಾಧನಗಳ ಗೊಡವೆ ಇಲ್ಲದೆ (ಮೈಕ್‌ಲೆಸ್) ಆಸಕ್ತ ಶ್ರೋತೃ ಸಮುದಾಯಕ್ಕೆ ವಿಶೇಷ ಪೂಜಾ ಕೈಂಕರ‌್ಯದೊಂದಿಗೆ ಆಪ್ತವಾಗಿ ವೀಣಾವಾದನ ಕೇಳಿಸುವ ಯಜ್ಞವೂ ಆಯೋಜನೆಗೊಂಡಿದೆ. ಬ್ರಾಹ್ಮೀ ಮುಹೂರ್ತದಲ್ಲಿ ವೀಣೆ ಮತ್ತು ಸರಸ್ವತಿ ಪೂಜೆಯೊಂದಿಗೆ ಆರಂಭವಾಗುವ ಯಜ್ಞ (ಮೈಕು, ಚಪ್ಪಾಳೆ, ಪಕ್ಕವಾದ್ಯ ರಹಿತ) ಆಸಕ್ತ ಶ್ರೋತೃಗಳಿಗೆ ಸಂಗೀತದ ಸಖ್ಯವನ್ನು ನೀಡುವುದಲ್ಲದೇ ಮನದಲ್ಲಿ ಶುದ್ಧ ಸಂಗೀತದ ಪ್ರತಿಷ್ಠಾಪನೆಗೆ ಅನುವು ಮಾಡಿಕೊಡಲಿದೆ. ಆಳವಾದ ಧ್ಯಾನದಿಂದ ಪಡೆಯುವ ಸ್ಥಿತಿಯೇ ವೀಣಾನಾದ ಆಲಿಸುವುದರಿಂದಲೂ ಲಭ್ಯವಾಗಲಿದೆ.

ಭಾರತೀಯ ಸಂಗೀತದ ರಾಗಗಳು ನಿರ್ಣಯಗೊಂಡಿರುವುದೇ ವೀಣೆಯಿಂದ. 72 ಮೇಳಕರ್ತ ರಾಗಗಳು ವೀಣೆಯಲ್ಲಿರುವ 72 ಮೇಳಗಳಿಂದ ಆವಿರ್ಭವಿಸಿವೆ. ವೀಣಾನಾದದಿಂದ ನಮ್ಮ ದೇಹದ 72 ಸಾವಿರ ನಾಡಿಗಳೂ ಚೇತನಗೊಳ್ಳಲಿವೆ. ವೀಣೆಯ 24 ಮೆಟ್ಟಿಲುಗಳು ಮಾನವನ ಬೆನ್ನುಹುರಿಯ 24 ಮಣಿಗಳ ಪ್ರತೀಕವಾಗಿದೆ- ಹೀಗೆ ವೀಣೆ ಕಲೆ, ರಾಗಾರಾಧನೆಗೆ ಮಾತ್ರವಲ್ಲದೇ ಮಾನವನ ಆಕಾರದ ಪ್ರತೀಕವಾಗಿದ್ದು ದೈಹಿಕ-ಮಾನಸಿಕ ಆರೋಗ್ಯವೃದ್ಧಿಯೊಂದಿಗೂ ಅವಿನಾ ಸಂಬಂಧ ಹೊಂದಿರುವ ವಿಶ್ವದ ಏಕೈಕ ತಂತಿ ವಾದ್ಯವಾಗಿದೆ.

ಅಬ್ಬರ-ಆಡಂಬರ ರಹಿತ
ಬಹುತೇಕ ನಾವು ಇಂದು ಕೇಳುತ್ತಿರುವ ಸಂಗೀತ, ಅಬ್ಬರ, ಚಮತ್ಕಾರ, ಓಟ, ಗಲಾಟಾ, ಚಪ್ಪಾಳೆಯ ಮುಖವಾಡದ್ದು. ಇದೇ ನಿಜವಾದ ಶಾಸ್ತ್ರೀಯ ಸಂಗೀತ ಎಂದು ನಂಬುವಂತಾಗಿದೆ. ಆದರೆ ಅಬ್ಬರ ರಹಿತವಾದ ರಂಜನೆ ಹಾಗೂ ಆನಂದದ ಅನುಭವ ನೀಡುವ ಸಂಗೀತ ಆಲಿಸುವ ಶೈಲಿಗೆ ಪುನ: ಶೋತೃಗಳನ್ನು ಅಣಿಗೊಳಿಸುವ ಕೆಲಸ ವೀಣಾ ಉತ್ಸವದ ಮೂಲಕ ಸಾಕಾರಗೊಳ್ಳುತ್ತಿದೆ.

ವಿವರಗಳಿಗೆ ಸಂಪರ್ಕ: ವಿದ್ವಾನ್ ಎಚ್‌ಎಸ್. ನಾಗರಾಜ್: 9448241149

ಲೇಖನ: ವಾರುಣಿ ರಾಮ್, ಶಿವಮೊಗ್ಗ

Tags: Carnatic classical musicIndian instrumentIndian MusicKannada News WebsiteLatest News KannadaLocal NewsMalnad NewsNational Veena UtsavScholar Sringeri NagarajShimogaShivamoggaShivamogga Newsಕರ್ನಾಟಕ ಶಾಸ್ತ್ರೀಯ ಸಂಗೀತಭಾರತೀಯ ವಾದ್ಯಭಾರತೀಯ ಸಂಗೀತರಾಷ್ಟೀಯ ವೀಣಾ ಉತ್ಸವವಿದ್ವಾನ್ ಎಚ್.ಎಸ್. ನಾಗರಾಜಶಿವಮೊಗ್ಗ
Share222Tweet123Send
Previous Post

ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ? 12.12.2021 to 18.12.2021

Next Post

ಶಿವಮೊಗ್ಗದ ಎಂಆರ್’ಎಸ್ ಬಳಿ ಬೈಕ್ ಅಪಘಾತ: ಸವಾರನ ಸ್ಥಿತಿ ಗಂಭೀರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದ ಎಂಆರ್’ಎಸ್ ಬಳಿ ಬೈಕ್ ಅಪಘಾತ: ಸವಾರನ ಸ್ಥಿತಿ ಗಂಭೀರ

ಶಿವಮೊಗ್ಗದ ಎಂಆರ್’ಎಸ್ ಬಳಿ ಬೈಕ್ ಅಪಘಾತ: ಸವಾರನ ಸ್ಥಿತಿ ಗಂಭೀರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

May 13, 2026
ದೇಶಕ್ಕೆ ಹೇಳಿದ್ದನ್ನು ತಾವೇ ಮಾಡಿದ ಮೋದಿ | ತಮ್ಮ ಬೆಂಗಾವಲು ಪಡೆ ವಾಹನದಲ್ಲಿ ಶೇ.50ರಷ್ಟು ಕಡಿತ

ದೇಶಕ್ಕೆ ಹೇಳಿದ್ದನ್ನು ತಾವೇ ಮಾಡಿದ ಮೋದಿ | ತಮ್ಮ ಬೆಂಗಾವಲು ಪಡೆ ವಾಹನದಲ್ಲಿ ಶೇ.50ರಷ್ಟು ಕಡಿತ

May 13, 2026
ಸ್ವಾಮಿ ವಿವೇಕಾನಂದ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ನಾರಾಯಣಸ್ವಾಮಿ ನಿಧನ

ಸ್ವಾಮಿ ವಿವೇಕಾನಂದ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ನಾರಾಯಣಸ್ವಾಮಿ ನಿಧನ

May 13, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 14ರ ನಾಳೆ ಶಿವಮೊಗ್ಗದ ಬಹಳಷ್ಟು ಕಡೆ ಕರೆಂಟ್ ಇರಲ್ಲ | ಇಲ್ಲಿದೆ ಡೀಟೇಲ್ಸ್

May 13, 2026
ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ | ಭಕ್ತರಿಗೆ ಅನುಕೂಲ

ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ | ಭಕ್ತರಿಗೆ ಅನುಕೂಲ

May 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL