ಕಲ್ಪ ಮೀಡಿಯಾ ಹೌಸ್ | ಮನಾಮ (ಬಹರೇನ್) |
ಬಹರೇನ್ ಕನ್ನಡ ಭವನದಲ್ಲಿ ಹೊಸದಾಗಿ ನಿರ್ಮಿಸಿರುವ ಮೊಗಸಾಲೆಯ (ಹಜಾರ) ಲೋಕಾರ್ಪಣೆ ಶುಕ್ರವಾರ ನಡೆಯಲಿದೆ.
ಇಲ್ಲಿನ “ಕನ್ನಡ ಭವನ”ದಲ್ಲಿ Kannada Bhavana in Bahrain ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ‘ರೊನಾಲ್ಡ್ ಕೊಲಾಸೊ ಮೊಗಸಾಲೆ’ಯ (ಲೌಂಜ್) ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಬಹರೇನ್ ಕನ್ನಡ ಸಂಘದ ಅಧ್ಯಕ್ಷ ಅಮರನಾಥ ರೈ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also read: ವಿಶ್ವ ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಶಿವಮೊಗ್ಗದ ಡಾ. ವರುಣ್ಕುಮಾರ್ಗೆ ಸ್ಥಾನ
ಬಹರೇನ್ ನಲ್ಲಿನ ಭಾರತೀಯ ರಾಯಭಾರಿ ವಿನೋದ್ ಕೆ. ಜೇಕಬ್ ಮತ್ತು ಜಿ.ಪರಮೇಶ್ವರ ಈ ಕಾರ್ಯಕ್ರಮದ
ಮತ್ತು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಬಹರೇನ್ ಕನ್ನಡ ಭವನ ನಿರ್ಮಾಣಕ್ಕೆ ಡಾ. ರೊನಾಲ್ಡ್ ಕೊಲಾಸೊ ಅವರು ದೊಡ್ಡ ಮೊತ್ತದ ಕೊಡುಗೆ ನೀಡಿರುವುದನ್ನು ಗೌರವಿಸಿ ಇಲ್ಲಿನ ಮೊಗಸಾಲೆಗೆ ಅವರ ಹೆಸರನ್ನು ಇರಿಸಲಾಗಿದೆ.











Discussion about this post