No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Tuesday, March 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

“ಮಂದಿರವಲ್ಲೇ ಕಟ್ಟುವೆವು”: ಕರಸೇವೆಗೈದ ಕನಸು ನನಸಾದ ದಿನ-ಒಂದು ನೆನಪು

ಯಡಿಯೂರಪ್ಪ, ಈಶ್ವರಪ್ಪ, ಸಿದ್ದರಾಮಣ್ಣ ಸೇರಿದಂತೆ ಶಿವಮೊಗ್ಗದ ಪ್ರಮುಖರ ಕರಸೇವೆಯಲ್ಲಿ ಪಾಲ್ಗೊಂಡಿದ್ದ ಎಕ್ಸ್‌'ಕ್ಲೂಸಿವ್ ಫೋಟೋ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 5, 2020
in Special Articles
0
“ಮಂದಿರವಲ್ಲೇ ಕಟ್ಟುವೆವು”: ಕರಸೇವೆಗೈದ ಕನಸು ನನಸಾದ ದಿನ-ಒಂದು ನೆನಪು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸ್ವಾತಂತ್ರ್ಯ ಸಂಗ್ರಾಮದ ದಿನಗಳನ್ನು ನೆನಪಿಸುವಂತೆ, ಮತ್ತೊಂದು ಕ್ರಾಂತಿಯ ಕಿಚ್ಚು ಹಚ್ಚಿ ಹುಚ್ಚೆದ್ದು ಕುಣಿದು ಗುರಿ ಸಾಧಿಸಲು ಪ್ರೇರೇಪಿಸಿದ್ದ ಆ ಎರಡು ಘೋಷಣೆಗಳು ಅವು.

ಕಟ್ಟುವೆವು ಕಟ್ಟುವೆವು, ಮಂದಿರವಲ್ಲೇ ಕಟ್ಟುವೆವು

ಜೈ… ಶ್ರೀರಾಮ್…, ಜೈ ಜೈ… ಶ್ರೀರಾಮ್

ಅದು1990 ಅಕ್ಟೋಬರ್‌ ತಿಂಗಳು. ರಾಜಕೀಯ ಏರುಪೇರುಗಳ ಮದ್ಯೆ ಲಾಲಕೃಷ್ಣ ಅಡ್ವಾಣಿಯವರು ಸೋಮನಾಥದಿಂದ ಅಯೋಧ್ಯೆಯವರೆಗೆ ರಥಯಾತ್ರೆ ಕೈಗೊಂಡು ಕ್ರಾಂತಿಯೊಂದಕ್ಕೆ ನಾಂದಿ ಹಾಡಿದ್ದ ಸಮಯ. ಭಾರತೀಯರ ಎದೆಯಾಳದಲ್ಲಿ ನೆಲೆಯೂರಿದ್ದ ಆರಾಧ್ಯ ದೈವ ಶ್ರೀ ರಾಮನಿಗಾಗಿ ಮಂದಿರ ನಿರ್ಮಾಣ ಆಗಲೇಬೇಕೆಂಬ ಒಕ್ಕೊರಲ ಧ್ವನಿ ಮೊಳಗಿದ ಸಮಯ. ಹಲವಾರು ಕ್ರಾಂತಿಗಳ ಕುರಿತು ಪಠ್ಯದಲ್ಲಿ ಮಾತ್ರ ಓದಿದ್ದ ನನಗೆ ಕ್ರಾಂತಿಯೆಂದರೆ ಹೇಗಿರುತ್ತದೆ ಎಂದು ಭಾಸವಾಗಿತ್ತು. ಸೋಮನಾಥದಿಂದ ಪ್ರಾರಂಭಗೊಂಡು ರಾಷ್ಟ್ರದ ಸುಮಾರು ಹತ್ತು ಸಾವಿರ ಕಿಲೋಮೀಟರುಗಳು ಕ್ರಮಿಸಿ ಅಕ್ಟೋಬರ್ 30ರಂದು ಅಯೋಧ್ಯೆಯಲ್ಲಿ ಕೊನೆಗೊಂಡು ರಾಷ್ಟ್ರದ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಗೆ ಕಾರಣವಾದ ರಥಯಾತ್ರೆಯು ರಾಮ ಮಂದಿರ ನಿರ್ಮಾಣಕ್ಕೆ ಚಳವಳಿಯ ರೂಪ ಕೊಟ್ಟಿತ್ತು. ಲಾಲ ಕೃಷ್ಣ ಅಡ್ವಾಣಿಯವರ ಕರೆಗೆ ಇಡೀ ದೇಶಕ್ಕೆ ದೇಶವೇ ರಾಮನ ಮಂದಿರಕ್ಕಾಗಿ ಟೊಂಕ ಕಟ್ಟಿ ಅಣಿಯಾಗಿತ್ತು. ಎಲ್ಲಿ ನೋಡಿದರಲ್ಲಿ ರಾಮ ಮಂದಿರದ್ದೇ ಮಾತುಗಳು, ಟಿವಿ ಮಾಧ್ಯಮಗಳಲ್ಲಿ ಚರ್ಚೆಗಳು, ವೃತ್ತಪತ್ರಿಕೆಗಳಲ್ಲಿ ಅದೇ ಸುದ್ದಿಗಳು ಅಲ್ಲಲ್ಲಿ ಸಭೆಗಳು. ರಾಮಮಂದಿರ ವಿಷಯವು ಭಾರತೀಯರ ಭಾವನಾತ್ಮಕತೆಯ ಪರಾಕಾಷ್ಠೆಯ ವಿಷಯವಾಗಿ ಉತ್ತುಂಗ ತಲುಪಿತ್ತು. ಈ ಮದ್ಯೆ ಶಿವಮೊಗ್ಗೆಯಿಂದ ಕರಸೇವೆಗಾಗಿ ಅಯೋಧ್ಯೆಗೆ ತೆರಳುವ ತಂಡದ ಸಿದ್ದತೆಗಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ಕರ್ನಾಟಕ ಸಂಘದಲ್ಲಿ ಕರೆದ ಸಭೆಗೆ ಕುತೂಹಲಕ್ಕಾಗಿ ತಾಯಿಯೊಡನೆ ನಾನೂ ತೆರಳಿದ್ದೆ. ಮಂದಿರ ಕಟ್ಟಿಯೇ ಬಿಟ್ಟೆವೆಂಬ ಉತ್ಸಾಹ ಉದ್ವೇಗಗಳ ಸೃಷ್ಟಿಗೆ ಕಾರಣವಾಗಿದ್ದ ಸಭೆಯಲ್ಲಿ ಸುಮಾರು ನಲವತ್ತು ಜನರ ತಂಡದ ಘೋಷಣೆ ಆಯಿತು. ಎಂತವರೂ ಕರಸೇವೆಗೆ ಹೋಗಲು ಪ್ರೇರೇಪಿಸುವ ವಾತಾವರಣ ಸೃಷ್ಟಿಗೆ ಕಾರಣವಾದ ಆ ಸಭೆಯು ನನ್ನಲ್ಲಿಯೂ ಕರಸೇವೆಗೆ ತೆರಳುವ ಆಕಾಂಕ್ಷೆ ಮೊಳಕೆಯೊಡೆಯುವಂತೆ ಮಾಡಿತ್ತು.

ಯಾವುದೇ ರೀತಿಯ ಪರಿಸ್ಥಿತಿ ಎದುರಿಸಲು ಸಿದ್ದರಿದ್ದರೆ ಮಾತ್ರ ಪಾಲ್ಗೊಳ್ಳಬಹುದು ಎಂಬ ಆಯೋಜಕರ ಖಡಕ್ ಸೂಚನೆ, ಆ ಶ್ರೀರಾಮನ ಧ್ಯಾನದಲ್ಲಿ ಮಗ್ನವಾಗಿದ್ದ ನನ್ನ ಮನಸ್ಸನ್ನು ಭಾವೋದ್ವೇಗಕ್ಕೆ ಒಳಪಡಿಸಿ ಯಾವುದೇ ತ್ಯಾಗಕ್ಕೂ ಸಿದ್ದವಾಗಲು ಪ್ರೇರೇಪಿಸಿತ್ತು. ತಾಯಿಯೆಡೆ ಒಮ್ಮೆ ತಿರುಗಿ ನೋಡಿದ್ದಷ್ಟೇ. ಕರಸೇವೆಯಲ್ಲಿ ಕುಟುಂಬದ ಪಾಲೂ ಇರಲಿ ಎಂಬಂತೆ ಯೋಚಿಸುತ್ತಿದ್ದ ತಾಯಿ ತನ್ನ ಸಮ್ಮತಿಯನ್ನು ಕಣ್ಸನ್ನೆಯಲ್ಲೇ ಸೂಚಿಸಿದರು. ಉದ್ವೇಗಕ್ಕೊಳಗಾಗಿ ಬಾಯಿಯಿಂದ ಮಾತುಗಳು ಹೊರಡದೇ ನಾನೂ ಬರುವೆ ಎಂದು ಕೈ ಎತ್ತಿದೆ. ಪಟ್ಟಿಯಲ್ಲಿ ಅಂತಿಮ ಹೆಸರು ನನ್ನದಾಗಿತ್ತು. ಸಿದ್ದತೆಯ ಭಾಗವಾಗಿ ತಿಂಗಳಿಗಾಗುವಷ್ಟು ತಿಂಡಿ ಪದಾರ್ಥಗಳೊಂದಿಗೆ ನಾಲ್ಕು ನೂರು ರೂಪಾಯಿಗಳನ್ನು ಹೊಂದಿಸಿಕೊಟ್ಟರು ಅಮ್ಮ‌. ಆದರೆ ಮೊನ್ನೆ ಅಯೋಧ್ಯೆಯ ತೀರ್ಪು ಬಂದ ಸಂತಸ ಹಂಚಿಕೊಳ್ಳಲು ಬಂದಾಗ ಅಮ್ಮ ಹೇಳಿದ ಮುನ್ನೂರು ರೂಪಾಯಿಯ ಸತ್ಯ ಕಥೆಯು ಆ ರಾಮನ ಮೇಲಿನ ಅವರ ಭಕ್ತಿಯನ್ನು ಅನಾವರಣಗೊಳಿಸಿತ್ತು.

ಮನೆಯಲ್ಲಿ ಒಂದು ಬಿಡಿಗಾಸು ಇಲ್ಲದಿದ್ದ ಆ ಸಮಯದಲ್ಲಿ ಇದ್ದ ಒಂದು ಬೆಳ್ಳಿಯ ತಂಬಿಗೆಯನ್ನು ಅಡವಿಟ್ಟು ಮುನ್ನೂರು ರೂಪಾಯಿ ಹಾಗೂ ಅಕ್ಕಪಕ್ಕದವರಲ್ಲಿ ಹೊಂದಿಸಿ ಒಟ್ಟು ನಾಲ್ಕು ನೂರು ರೂಪಾಯಿಗಳ ವ್ಯವಸ್ಥೆ ಮಾಡಿದ್ದ ನೆನಪಿನ ಬುತ್ತಿಯನ್ನು ಬಿಚ್ಚಿದಾಗ ರಾಮನಿಗಾಗಿ ಇಂತಹ ಕೋಟ್ಯಂತರ ತಾಯಂದಿರ ಪೂಜಾಫಲವೇ ನವೆಂಬರ್ ಒಂಭತ್ತರ ಐತಿಹಾಸಿಕ ತೀರ್ಪು ಹಾಗೂ ಆಗಸ್ಟ್ 5ರ ಶಿಲಾನ್ಯಾಸದ ಫಲ ಇರಬೇಕೆನಿಸಿತು.

ಕರಸೇವೆಗೆ ತೆರಳುವವರನ್ನು ಬಿಳ್ಕೊಡಲು ರೈಲ್ವೇ ನಿಲ್ದಾಣದಲ್ಲಿ ನೆರೆದಿದ್ದ ಜನಸಾಗರದ ಚಿತ್ರಣ ಇಂದಿಗೂ ಅಚ್ಚಳಿಯದೇ ಮನಸ್ಸಿನಲ್ಲುಳಿದಿದೆ. ಮನೆಯ ಸದಸ್ಯರನ್ನು ಯುದ್ದ ಭೂಮಿಗೆ ಕಳಿಸಿಕೊಡುತ್ತಿರುವಂತೆ ಭಾವುಕರಾಗಿ ಬಿಳ್ಕೊಟ್ಟಿದ್ದರು ಶಿವಮೊಗ್ಗ ಜನತೆ. ರೈಲು ಪ್ರಯಾಣ ಆರಂಭವಾದಮೇಲಷ್ಟೇ ತಿಳಿದದ್ದು ಮಾನ್ಯ ಬಿ.ಎಸ್. ಯಡಿಯೂರಪ್ಪರವರು (ಹಾಲಿ ಮುಖ್ಯಮಂತ್ರಿಗಳು), ಕೆ.ಎಸ್. ಈಶ್ವರಪ್ಪರವರು(ಹಾಲಿ ಜಿಲ್ಲಾ ಉಸ್ತುವಾರಿ ಮಂತ್ರಿಗಳು), ಡಿ.ಹೆಚ್. ಶಂಕರಮೂರ್ತಿಯವರು(ಮಾಜಿ ಸಭಾಪತಿಗಳು), ಅಂದಿನ ನಗರಸಭಾಧ್ಯಕ್ಷರಾಗಿದ್ದ ಆರ್.ಕೆ. ಸಿದ್ದರಾಮಣ್ಣರಾದಿಯಾಗಿ ಅನೇಕ ಹಿರಿಯ ನಾಯಕರು ನಮ್ಮ ತಂಡದಲ್ಲಿ ಭಾಗಿಯಾಗಿದ್ದಾರೆಂದು. ಬೆಂಗಳೂರು ತಲುಪುವವರೆಗೆ ದಾರಿಯುದ್ದಕ್ಕೂ ಎಲ್ಲೆಡೆ ಕೇಸರಿ ಧ್ವಜಗಳ ಸ್ವಾಗತ, ಜೈ ಶ್ರೀರಾಮ್ ಘೋಷಣೆಗಳು ಅಯೋಧ್ಯೆ ತಲುಪಲು ವೇಗವರ್ಧಕದಂತೆ ಉತ್ತೇಜಿಸುತ್ತಿತ್ತು. ಬೆಂಗಳೂರು ರೈಲ್ವೇ ನಿಲ್ದಾಣ ಸೇರಿದ ಮೇಲೆ ಎಲ್ಲೆ ಮೀರಿದ ಉತ್ಸಾಹ ಎಲ್ಲರನ್ನೂ ಆವರಿಸುವಂತೆ ರಾಜ್ಯದೆಲ್ಲೆಡೆಯಿಂದ ಆಗಮಿಸಿದ್ದ ಕರಸೇವಕರನ್ನು ಒಟ್ಟು ಮಾಡಿತ್ತು. ಕೇಸರಿಯಲ್ಲಿ ಮಿಂದ ಬೆಂಗಳೂರು ರೈಲು ನಿಲ್ದಾಣದ ಒಂದು ಮೂಲೆಯಲ್ಲಿ ಜೈ ಶ್ರೀರಾಮ್ ಘೋಷಣೆ ಮೊಳಗಿದರೆ ಮತ್ತೊಂದು ಮೂಲೆಯಲ್ಲಿ ಜೈ ಜೈ ಶ್ರೀರಾಮ್ ಘೋಷಣೆದಿನಗಳುವ ಅಪೂರ್ವ ಕ್ಷಣಗಳಿಗೆ ಸಾಕ್ಷಿಯಾಗಿದ್ದೆವು.

ಪ್ರಯಾಣ ಉತ್ತರದೆಡೆ ಪ್ರಾರಂಭವಾಗುತ್ತಿದ್ದಂತೆ ಕರಸೇವಕರಿಂದ ತುಂಬಿ ತುಳುಕುತ್ತಿದ್ದ ರೈಲಿಗೆ ‘ಜೈಶ್ರೀರಾಮ್’ ಘೋಷಣೆಯೇ ಇಂಧನವಾಗಿತ್ತು, ಕರಸೇವಕರಿಗೂ ಆ ಘೋಷಣೆಯೇ ಇಂಧನವೆಂಬಂತೆ ಭಾಸವಾಗಿ ಪ್ರಯಾಣ ಅಯೋಧ್ಯಾವಾಸಿ ಶ್ರೀರಾಮನೆಡೆಗೆ ಸಾಗಿತ್ತು. ಯಾವ ನಿಲ್ದಾಣ ಬಂದರೂ ಜೈಶ್ರೀರಾಮ್ ಘೋಷಣೆ ಮೊಳಗುತ್ತಿತ್ತು. ಪ್ರತಿ ನಿಲ್ದಾಣಗಳಲ್ಲೂ ಕರಸೇವಕರಿಗೆ ನೀರು, ಪಾನಕ, ಮಜ್ಜಿಗೆಯ ಸೇವೆ ದೊರೆಯುತ್ತಿದ್ದುದು ಆ ಶ್ರೀರಾಮನಿಗೆ ಅವನ ಭಕ್ತರಿಂದ ಸಲ್ಲುವ ಪೂಜೆಯಾಗಿತ್ತು. ಮದ್ಯಪ್ರದೇಶದ ಕಾಟನಿ ನಿಲ್ದಾಣ ಮಾತ್ರ ಜೀವಮಾನದಲ್ಲಿ ಮರೆಯಲಾರದ ಅನುಭವ ನೀಡಿತ್ತು. ನಿಲ್ದಾಣಕ್ಕೆ ರೈಲು ತಲುಪುತ್ತಿದ್ದಂತೆ ಆರು ವರ್ಷದ ಬಾಲಕನಿಂದ ಅರವತ್ತು ವರ್ಷದ ವಯಸ್ಕರವರೆಗೆ ಮಾತೆಯರು ಮಹನೀಯರು, ಯುವಕ ಯುವತಿಯರು, ಮಕ್ಕಳಾದಿಯಾಗಿ ಎಲ್ಲರೂ ಕರಸೇವಕರ ಸೇವೆಗೆ ಅಣಿಯಾಗಿ ನೀರು, ಪಾನಕ, ಉಪಹಾರ ಇತ್ಯಾದಿ ಬಗೆ ಬಗೆಯ ಆಹಾರ ತಿನಿಸುಗಳನ್ನು ಪ್ರಸಾದ ರೂಪದಲ್ಲಿ ಪ್ರತಿ ಬೋಗಿಯ ಪ್ರತಿ ಪ್ರಯಾಣಿಕನಿಗೆ ತಲುಪಿಸುತ್ತ ಶ್ರೀರಾಮನತ್ತ ಹೊರಟ ರಾಮಭಕ್ತರನ್ನೇ ಶ್ರೀರಾಮರು ಎಂದು ಭಾವಿಸಿದಂತೆ ಸೇವೆಗೈದ ಅವಿಸ್ಮರಣೀಯ ಕ್ಷಣಗಳು ಮತ್ತೆ ಕಣ್ಣಮುಂದೆ ಬಂದು  ರೋಮ ರೋಮಗಳು ನಿಲ್ಲುವಂತೆ ರೋಮಾಂಚನಗೊಂಡ ಅನುಭವವನ್ನು ಹಂಚಿಕೊಳ್ಳಲು ಪದಗಳು ದೊರೆಯದೇ ಮನದಲ್ಲೇ ಸಾಕಾರ ಮೂರ್ತಿಯ ನೆನೆದು ಸಾವಿರ ಸಾವಿರ ನಮನಗಳನ್ನು ಸಲ್ಲಿಸಿದೆ.

ಇಂತಹ ನೂರಾರು ಮರೆಯಲಾಗದ ಅನುಭವಗಳೊಂದಿಗೆ ಅಂತಿಮವಾಗಿ ಉತ್ತರಪ್ರದೇಶ ಪ್ರವೇಶಿಸಿದಾಗ ಊರಜನರ ಜೈ ಶ್ರೀರಾಮ್ ಘೋಷಣೆಯೊಂದಿಗೆ ದೊರೆತ ಅದ್ದೂರಿ ಸ್ವಾಗತ ನಮ್ಮನ್ನು ರೋಮಾಂಚನಗೊಳಿಸಿತ್ತು. ಕೇಸರಿಮಯ ಊರುಗಳು, ಕರಸೇವಕರ ಬಸ್ ಕಂಡೊಡನೆ ನಾಗರಿಕರ ಜೈ ಶ್ರೀರಾಮ್ ಘೋಷಣೆಗಳು ನಮ್ಮನ್ನು ಮಂತ್ರಮುಗ್ದರನ್ನಾಗಿಸಿತ್ತು. ಅಯೋಧ್ಯೆ ಸಮೀಪದ ಮಾರಕಾಪುರ ಎಂಬಲ್ಲಿ ಎಲ್ಲರನ್ನೂ ಬಂಧಿಸಿ ಜೈಲಾಗಿ ಪರಿವರ್ತಿತವಾಗಿದ್ದ ಬೃಹತ್ ಗೋದಾಮಿನಲ್ಲಿ ಇಂದಿನ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪರವರು, ಗ್ರಾಮೀಣಾಭಿವೃದ್ಧಿ ಸಚಿವರಾದ ಮಾನ್ಯ ಶ್ರೀ ಕೆ.ಎಸ್ ಈಶ್ವರಪ್ಪರವರು ಹಾಗೂ ಮಾಜಿ ಸಭಾಪತಿಗಳಾದ ಮಾನ್ಯ ಶ್ರೀ ಡಿ.ಹೆಚ್. ಶಂಕರಮೂರ್ತಿಯವರಂಥ  ರಾಜ್ಯ ನಾಯಕರುಕಳೊಂದಿಗೆ ಕಳೆದ ವಾರಕ್ಕೂ ಹೆಚ್ಚು ದಿನಗಳು ಎಂದಿಗೂ ಮರೆಯಲಾರದ ದಿನಗಳು ಎನ್ನಬಹುದು. ಈ ದಿನ ನಮ್ಮ ಆರಾಧ್ಯ ದೈವ ಪ್ರಭು ಶ್ರೀರಾಮನನ್ನು ಹೃದಯದಲ್ಲಿ ತುಂಬಿಕೊಳ್ಳುವ ಸುದಿನ. ಕನಸುಗಳೊಂದಿಗೆ ಗೈದ ಕರಸೇವೆಯು ಇಂದು ನನಸಾಗುತ್ತಿರುವುದರೊಂದಿಗೆ ಭಾರತೀಯರ ಸಂತಸಕ್ಕೆ ಪಾರವೇ ಇಲ್ಲ.

ಜೈ ಶ್ರೀರಾಮ್ ಜೈ ಜೈ ಶ್ರೀರಾಮ್

ಚಿತ್ರದಲ್ಲಿ ಕಾಣುವವರು

ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪರವರು, ಮಾನ್ಯ ಮುಖ್ಯ ಮಂತ್ರಿಗಳು, ಕರ್ನಾಟಕ ಸರ್ಕಾರ
ಮಾನ್ಯ ಶ್ರೀ ಕೆ.ಎಸ್.ಈಶ್ವರಪ್ಪರವರು, ಗ್ರಾಮೀಣಾಭಿವೃದ್ಧಿ ಸಚಿವರು, ಕರ್ನಾಟಕ ಸರ್ಕಾರ
ಮಾನ್ಯ ಶ್ರೀ ಡಿ.ಹೆಚ್.ಶಂಕರಮೂರ್ತಿರವರು, ಮಾಜಿ ಸಭಾಪತಿಗಳು, ಕರ್ನಾಟಕ ಸರ್ಕಾರ
ಮಾನ್ಯ ಶ್ರೀ ಆರ್.ಕೆ.ಸಿದ್ದರಾಮಣ್ಣರವರು, ಮಾಜಿ ನಗರಸಭಾ ಅಧ್ಯಕ್ಷರು, ಶಿವಮೊಗ್ಗ
ಮಾನ್ಯ ಶ್ರೀ ಬಿ. ಸತ್ಯನಾರಾಯಣರವರು, ಮಾಜಿ ನಗರಸಭಾ ಉಪಾಧ್ಯಕ್ಷರು.
ದಿ.ಶ್ರೀ ಮೈಲಾರಿಯವರು, ಆರ್.ಎಸ್.ಎಸ್ ಪ್ರಮುಖರು
ನಾಗರಾಜ ಶೆಟ್ಟರ್, ಉದ್ಯಮಿ ಮತ್ತಿತರರು


Get In Touch With Us info@kalpa.news Whatsapp: 9481252093

Tags: B S YediyurappaFreedom MovementK S EshwarappaKannada News WebsiteLatest News KannadaNagaraj ShetterShivamogga Newsಅಯೋಧ್ಯೆಕರಸೇವೆಕೆ.ಎಸ್. ಈಶ್ವರಪ್ಪಕೇಸರಿಜೈ ಶ್ರೀರಾಮ್ಡಿ.ಹೆಚ್. ಶಂಕರಮೂರ್ತಿಬಿ.ಎಸ್. ಯಡಿಯೂರಪ್ಪರಥಯಾತ್ರೆರಾಮಮಂದಿರಸ್ವಾತಂತ್ರ್ಯ ಸಂಗ್ರಾಮ
Share239Tweet123Send
Previous Post

ರಾಮ ಮಂದಿರ ನಿರ್ಮಾಣ ಶಿಲಾನ್ಯಾಸ ಗುಲಾಮಗಿರಿ ಸಂಕೇತವನ್ನು ಹೊಡೆದೋಡಿಸಿದೆ: ಈಶ್ವರಪ್ಪ

Next Post

ಭದ್ರಾವತಿ ಸೌತ್ ಇಂಡಿಯನ್ ಬ್ಯಾಂಕ್ ಎಲ್ಲ ಸಿಬ್ಬಂದಿಗೆ ಸ್ವಾಬ್ ಟೆಸ್ಟ್‌ ನೆಗೆಟಿವ್: ನಾಳೆಯಿಂದ ಶಾಖೆ ಮರು ಆರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಿಬ್ಬಂದಿಯೊಬ್ಬರಿಗೆ ಸ್ವಾಬ್ ಟೆಸ್ಟ್‌ ಪಾಸಿಟಿವ್‌: ಭದ್ರಾವತಿ ಸೌತ್ ಇಂಡಿಯನ್ ಬ್ಯಾಂಕ್ ಎರಡು ದಿನ ಬಂದ್

ಭದ್ರಾವತಿ ಸೌತ್ ಇಂಡಿಯನ್ ಬ್ಯಾಂಕ್ ಎಲ್ಲ ಸಿಬ್ಬಂದಿಗೆ ಸ್ವಾಬ್ ಟೆಸ್ಟ್‌ ನೆಗೆಟಿವ್: ನಾಳೆಯಿಂದ ಶಾಖೆ ಮರು ಆರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಅಶಕ್ತರಿಗೆ ಕಾನೂನಿನ ನೆರವು ಸಿಗಬೇಕು: ನ್ಯಾ.ಎಂ.ಎಸ್. ಸಂತೋಷ್

ಅಶಕ್ತರಿಗೆ ಕಾನೂನಿನ ನೆರವು ಸಿಗಬೇಕು: ನ್ಯಾ.ಎಂ.ಎಸ್. ಸಂತೋಷ್

March 10, 2026
ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

March 10, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ರಾಜ್ಯ ಸರ್ಕಾರದ ಬಜೆಟ್ | ಚಿಂದಿ ಬಟ್ಟೆ ಸೇರಿಸಿ ಕೌದಿ ಹೊಲೆದ ಹಾಗೆ ಆಗಿದೆ: ಈಶ್ವರಪ್ಪ ಲೇವಡಿ

March 10, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

March 10, 2026
ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ರಾಸೇಯೋ ವಿಶೇಷ ಶಿಬಿರ | ಉಚಿತ ಆರೋಗ್ಯ ತಪಾಸಣೆ ಸಂಪನ್ನ

ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ರಾಸೇಯೋ ವಿಶೇಷ ಶಿಬಿರ | ಉಚಿತ ಆರೋಗ್ಯ ತಪಾಸಣೆ ಸಂಪನ್ನ

March 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL