ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಮಂಡ್ಯದಲ್ಲಿ ನಿರ್ಮಿಸಲಾಗಿರುವ ಮೆಗಾಡೈರಿಯನ್ನು ಕೇಂದ್ರ ಗೃಹ ಸಚಿವ ಅಮಿತ್ Central Home Minister Amith Shah ಅವರು ಇಂದು ಲೋಕಾರ್ಪಣೆ ಮಾಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ Former Prime Minister Devegowda ನುಡಿ ಅತ್ಯಂತ ಘನತೆಯಿಂದ ಕೂಡಿದ್ದು, ಪ್ರಶಂಸೆಗೆ ಪಾತ್ರವಾಗಿದೆ.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ದೇವೇಗೌಡರನ್ನು ಮಾಧ್ಯಮ ಪ್ರತಿನಿಧಿಗಳು ಮಾತನಾಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿಗಳು, ಇಂತಹ ದೊಡ್ಡ ಮೆಗಾ ಡೈರಿಯನ್ನು ಆರಂಭಿಸಲಾಗುತ್ತಿದೆ. ನನಗೆ ಕರೆದಿದ್ದಾರೆ. ಅತ್ಯಂತ ಸಂತೋಷದಿಂದ ಬಂದಿದ್ದೇನೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲುತ್ತೇನೆ. ಇಲ್ಲಿ ಯಾವುದೇ ರೀತಿಯ ರಾಜಕೀಯ ಮಾಡುವುದು ಹಾಗೂ ಮಾತನಾಡುವುದು ಬೇಡಪ್ಪ ಎಂದು ಹೇಳುವ ಮೂಲಕ ಮುತ್ಸದ್ಧಿತನವನ್ನು ಮೆರೆದಿದ್ದಾರೆ.
ದೇವೇಗೌಡರ ಈ ಮಾತು ಹಾಗೂ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
Also read: ತಾಯಿಯ ಅಗಲಿಕೆ ನೋವಲ್ಲೂ ಪ್ರಧಾನಿ ಮೋದಿ ವಿಶ್ವಕ್ಕೆ ಕಲಿಸಿದ ಆ ಮೂರು ಪಾಠಗಳು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post