ಮಂಡ್ಯ: ಮಂಡ್ಯ ಜಿಲ್ಲೆಯ ಮಂಡ್ಯ ಪಟ್ಟಣದ ಮಡುವಿನಕೋಡಿ ಗ್ರಾಮದಲ್ಲಿ ಗ್ರಾಮರಕ್ಷಕ ಶ್ರೀಆಂಜನೇಯಸ್ವಾಮಿ ಬ್ರಹ್ಮರಥೋತ್ಸವದ ಸಂಭ್ರಮದಿಂದ ನಡೆಯಿತು.
ಸಾವಿರಾರು ಭಕ್ತಾಧಿಗಳು ರಥೋತ್ಸವದಲ್ಲಿ ಭಾಗಿ…ಮೊಳಗಿದ ಜಯಘೋಷಗಳು.. ಉಘೇ.. ಆಂಜನೇಯ ಉಘೇ ಉಘೇ ಎಂದು ಭಕ್ತರು ರಥವನ್ನು ಎಳೆದು ಸಂಭ್ರಮಿಸಿದರು.
ಶಾಸಕ ಡಾ.ನಾರಾಯಣಗೌಡ, ಮನ್ ಮುಲ್ ಮಾಜಿ ಅಧ್ಯಕ್ಷ ಎಂ.ಬಿ. ಹರೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಪಿ. ಲೋಕೇಶ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಮಂಜುಳಾ ಪರಮೇಶ್ ಸೇರಿದಂತೆ ಸಾವಿರಾರು ಜನರು ರಥೋತ್ಸವದಲ್ಲಿ ಭಾಗವಹಿಸಿದ್ದರು.
ರಥದಲ್ಲಿ ವಿರಾಜಮಾನವಾಗಿದ್ದ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಗೆ ಸಾಂಕೇತಿಕ ಪೂಜೆ ಸಲ್ಲಿಸಿದ ಮುಖಂಡರು. ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ ಇನ್ಸ್’ಪೆಕ್ಟರ್ ಆನಂದೇಗೌಡ ಅವರ ನೇತೃತ್ವದಲ್ಲಿ ಬಿಗಿಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
Discussion about this post