ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ನಾಗಮಂಗಲದಲ್ಲಿ #Nagamangala Riots ಗಣೇಶೋತ್ಸವದ ಮೇಲೆ ಕಲ್ಲು, ಬಾಟಲಿ, ಪೆಟ್ರೋಲ್ ಬಾಂಬ್ ಎಸೆದ ಹಿನ್ನೆಲೆಯಲ್ಲಿ ಆರಂಭವಾದ ಕೋಮುಗಲಭೆ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ನಗರ ಠಾಣೆ ಇನ್ಸ್’ಪೆಕ್ಟರ್ ಅಶೋಕ್ ಕುಮಾರ್ #SI Suspended ಅವರನ್ನು ಅಮಾನತು ಮಾಡಲಾಗಿದೆ.
ಈ ಕುರಿತಂತೆ ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಅಮಾನತು ಆದೇಶ ಹೊರಡಿಸಿದ್ದು, ನಾಗಮಂಗಲ ಕೋಮುಗಲಭೆ ಪ್ರಕರಣವನ್ನು ನಿರ್ವಹಿಸುವಲ್ಲಿ ಅಶೋಕ್ ಕುಮಾರ್ ಅವರು ಕರ್ತವ್ಯ ನಿರ್ಲಕ್ಷ ವಹಿಸಿದ್ದಾರೆ ಎಂದು ಅಮಾನತು ಮಾಡಿದ್ದಾರೆ.
ಗಣೇಶ ವಿಸರ್ಜನೆ ವೇಳೆ ಮಸೀದಿ ಬಳಿಯಲ್ಲಿ ಘೋಷಣೆ ಕೂಗಬೇಡಿ ಎಂದು ಕಿರಿಕ್ ಮಾಡಿ ಮೆರವಣಿಗೆ ಮೇಲೆ ಮುಸ್ಲಿಂ ಯುವಕರು ಕಲ್ಲು, ಚಪ್ಪಲಿ, ಬಾಟಲಿ ಹಾಗೂ ಪೆಟ್ರೋಲ್ ಬಾಂಬ್’ಗಳನ್ನು ತೂರಿದ ಪರಿಣಾಮ ಕೋಮುಗಲಭೆ ಸೃಷ್ಠಿಯಾಗಿತ್ತು.
Also read: ನರ್ಸ್ ಮೇಲೆ ಗ್ಯಾಂಗ್ ರೇಪ್’ಗೆ ವೈದ್ಯ ಸಹಚರರು ಯತ್ನ | ರೊಚ್ಚಿಗೆದ್ದ ಆಕೆ ಮಾಡಿದ್ದೇನು?
ಗಣೇಶ ವಿಸರ್ಜನಾ ಪೂರ್ವ ಮೆರವಣಿಗೆ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಬರುತ್ತಿದ್ದಂತೆಯೇ ಮುಸ್ಲಿಂ ಯುವಕರು ಘೋಷಣೆ ಕೂಗಬೇಡಿ ಎಂದು ಆಕ್ಷೇಪಿಸಿ ಕಲ್ಲು ತೂರಾಟ ನಡೆಸಿದ್ದಾರೆ. ದರ್ಗಾ ಬಳಿಯಲ್ಲಿ ಘೋಷಣೆ ಕೂಗಬೇಡಿ, ಡೊಳ್ಳು ಬಾರಿಸಬೇಡಿ ಎಂದು ಆಕ್ಷೇಪಿಸಿದ್ದು, ಈ ವೇಳೆ ವಾಗ್ವಾದ ನಡೆದಿದ್ದು, ಏಕಾಏಕೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ.
ಇದರಿಂದ ಕೆರಳಿದ ಹಿಂದೂ ಯುವಕರು ಗಣೇಶ ಮೂರ್ತಿಯನ್ನು ಪೊಲೀಸ್ ಠಾಣೆ ಎದುರು ತಂದು ನಿಲ್ಲಿಸಿ, ಪ್ರತಿಭಟಿಸಿ, ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದರು.
ಕಿಡಿಗೇಡಿಗಳ ಗುಂಪು ಗಣೇಶ ಮೆರವಣಿಗೆಯಲ್ಲಿ ಪಾಲ್ಗೊಂಡವರ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದು, ಸಿಕ್ಕ ಸಿಕ್ಕ ಅಂಗಡಿ, ವಾಹನಗಳಿಗೂ ಸಹ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಹಲವು ವಾಹನಗಳು ಸುಟ್ಟು ಕರಕಲಾಗಿವೆ.
ಘಟನೆಯಲ್ಲಿ ಉದ್ದೇಶ ಪೂರ್ವಕವಾಗಿ ಕಿರಿಕ್ ತೆಗೆದಿರುವ ಕಿಡಿಗೇಡಿಗಳು ಹಿಂದೂಗಳನ್ನು ಟಾರ್ಗೆಟ್ ಮಾಡಿಕೊಂಡೇ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಹಿಂದೂಗಳ ಅಂಗಡಿ, ಕಾರು, ಬೈಕ್’ಗಳ ಮೇಲೆ ದಾಳಿ ನಡೆಸಿರುವುದು ಇದಕ್ಕೆ ಸಾಕ್ಷಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post