ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಕಂಚಿನ ಪ್ರತಿಮೆಯ ಉದ್ಘಾಟನೆಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಯಿಂದ ಪವಿತ್ರ ಮೃತ್ತಿಕೆ ಸಂಗ್ರಹಣೆಗೆ ಅಕ್ಟೋಬರ್ 29 ರಂದು ಚಾಲನೆ ನೀಡಲಾಗುವುದು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ Minister Gopalaiah ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಇಂದು ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪವಿತ್ರ ಮಣ್ಣು ಸಂಗ್ರಹಣೆ ಎಲ್ಲಾ ಗ್ರಾಮ ಪಂಚಾಯತಿಗಳ ಪವಿತ್ರ ಸ್ಥಳಗಳಲ್ಲಿ ನಡೆಯಬೇಕು. ನಿಯೋಜಿಸಿರುವ ಅಧಿಕಾರಿಗಳು ಯಾವುದೇ ಲೋಪವಿಲ್ಲದಂತೆ ಕಾರ್ಯನಿರ್ವಹಿಸಬೇಕು ಎಂದರು.

ಪವಿತ್ರ ಮೃತ್ತಿಕೆ ಸಂಗ್ರಹಣೆಗೆ ಮಂಡ್ಯ ಜಿಲ್ಲೆಗೆ ಎರಡು ರಥಗಳು ಆಗಮಿಸಲಿದ್ದು, ಅಕ್ಟೋಬರ್ 29 ರಂದು ಮಂಡ್ಯ ಜಿಲ್ಲಾ ಕೇಂದ್ರದಲ್ಲಿ ಚಾಲನೆ ನೀಡಲಾಗುವುದು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಿ ನವಂಬರ್ 7 ರಂದು ಸಂಗ್ರಹಿಸುವ ಪವಿತ್ರ ಮಣ್ಣಿಗೆ ಮದ್ದೂರಿನ ಸತ್ಯಾಗ್ರಹ ಸೌಧದಲ್ಲಿ ಪೂಜೆ ಸಲ್ಲಿಸಿ ಬೆಂಗಳೂರಿಗೆ ಕಳುಹಿಸಿಕೊಡಲಾಗುವುದು ಎಂದರು.

Also read: ಕನ್ನಡಿಗರ ಹೆಮ್ಮೆಯ ಕೋಟಿ ಕಂಠ ಗಾಯನಕ್ಕೆ ಉತ್ತಮ ಸ್ಪಂದನೆ: ಸಚಿವ ನಾರಾಯಣ ಗೌಡ ಸಂತಸ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ಮಾತನಾಡಿ ಎರಡು ಅಭಿಯಾನ ರಥಕ್ಕೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.ಜಿಲ್ಲೆಯ 233 ಗ್ರಾಮ ಪಂಚಾಯತಿಗಳಲ್ಲಿ ಅಭಿಯಾನ ರಥ ಸಂಚರಿಸುವಂತೆ ಮಾರ್ಗನಕ್ಷೆ ಸಿದ್ಧಪಡಿಸಲಾಗಿದೆ ಎಂದರು.











Discussion about this post