No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಶಿಕ್ಷಣದಿಂದ ಸಮಾಜದ ಬದಲಾವಣೆ ಸಾಧ್ಯ: ಡಿಸಿಎಂ ಅಶ್ವತ್ಥನಾರಾಯಣ

ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ಇಂಡಕ್ಷನ್ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 13, 2021
in ಮಂಡ್ಯ
0
ಪದವಿ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಡಿಸಿಎಂ: ಪ್ರವೇಶಕ್ಕೆ ಅಂತಿಮ ಅವಕಾಶ

File photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಆದಿಚುಂಚನಗಿರಿ (ಮಂಡ್ಯ): ಸಾಮಾಜಿಕ ಮತ್ತು ಆರ್ಥಿಕವಾಗಿ ತೀರಾ ತಳಹಂತದಿಂದ ಉನ್ನತ ಮಟ್ಟದವರೆಗೂ ಬದಲಾವಣೆಗಳನ್ನು ತರುವ ಶಕ್ತಿ ಶಿಕ್ಷಣಕ್ಕೆ ಮಾತ್ರ ಇದೆ. ಶಿಕ್ಷಣ ಬಿಟ್ಟರೆ ಬೇರೆ ದಾರಿಯೇ ಇಲ್ಲ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರತಿಪಾದಿಸಿದರು.

ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ನಡೆದ ಇಂಡಕ್ಷನ್ ಕಾರ್ಯಕ್ರಮದಲ್ಲಿ ಪಾಲೊಂಡು ಮಾತನಾಡಿದ ಅವರು, ದೇಶವನ್ನು ಕಟ್ಟುವಲ್ಲಿ ಹಾಗೂ ಪ್ರತಿಯೊಬ್ಬರ ಕನಸುಗಳನ್ನು ಸಾಕಾರಗೊಳಿಸಲು ಶಿಕ್ಷಣ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಗುಣಮಟ್ಟದ ಶಿಕ್ಷಣಕ್ಕೆ ಒತ್ತು

ಗುಣಮಟ್ಟದ ಶಿಕ್ಷಣಕ್ಕೆ ಇರುವ ಶಕ್ತಿ ಏನೆಂಬುದು ನಮಗೆ ಗೊತ್ತಿದೆ. ಇಡೀ ಸಮಾಜವನ್ನು ಬದಲಾವಣೆ ಮಾಡಬಲ್ಲ ಹಾಗೂ ಜೀವನಮಟ್ಟವನ್ನು ಸುಧಾರಿಸಬಲ್ಲ ಸಾಮರ್ಥ್ಯ ಶಿಕ್ಷಣಕ್ಕೆ ಮಾತ್ರ ಇದೆ ಎಂಬುದನ್ನು ಯಾರೂ ಮರೆಯಬಾರದು. ಇದೇ ಮಾತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ಹೇಳುತ್ತಲೇ ಇರುತ್ತಾರೆ. ಬಲಿಷ್ಠ ಮತ್ತು ನವಭಾರತವನ್ನು ನಿರ್ಮಾಣ ಮಾಡಬೇಕಾದರೆ ಶಿಕ್ಷಣದಿಂದ ಸಾಧ್ಯ ಎಂದು ಅವರು ನಂಬಿದ್ದಾರೆ. ಈ ನಿಟ್ಟಿನಲ್ಲಿ ಸರಕಾರ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಕೊಡುತ್ತಿದೆ. ಹಾಗೂ ಉತ್ತಮ ಬೋಧನೆ ಮತ್ತು ಕಲಿಕೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ಜಾಗತಿಕ ಗುಣಮಟ್ಟದ ಎಲ್ಲಾ ಸೌಲಭ್ಯಗಳಿವೆ. ವಿದ್ಯಾರ್ಥಿ ಕೇಂದ್ರೀಯ ಬೋಧನಾ ವ್ಯವಸ್ಥೆ ಇದೆ. ಹೀಗಾಗಿ ವಿದ್ಯಾರ್ಥಿಗಳು ಯಾವ ಉದ್ದೇಶಕ್ಕಾಗಿ ಇಲ್ಲಿಗೆ ಬಂದಿದ್ದೇವೆ ಎಂಬುದನ್ನು ಮರೆಯದೇ ಕಲಿಕೆಯನ್ನು ಮುಂದುವರಿಸಿ ತಮ್ಮ ಗುರಿಯನ್ನು ಸಾಧಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಡಿಸಿಎಂ ಕಿವಿಮಾತು ಹೇಳಿದರು.

ವಿವಿಗೆ ಮಾತ್ರ ಸೀಮಿತವಾಗದಿರಿ:

ವಿದ್ಯಾಭ್ಯಾಸ ಮಾಡುವುದು ಎಂದರೆ ಕೇವಲ ತರಗತಿಗೆ ಬಂದೆವು, ಕಲಿತೆವು, ಪರೀಕ್ಷೆ ಬರೆದವು, ಪಾಸಾದೆವು ಎಂದರ್ಥವಲ್ಲ. ವಿದ್ಯಾರ್ಥಿ ಜೀವನ ಎನ್ನುವುದು ಇಷ್ಟಕ್ಕೆ ಸೀಮಿತ ಆಗಬಾರದು. ನಿಮ್ಮ ತರಗತಿ- ಹಾಸ್ಟೆಲ್‌ಗಳಿಂದ ಹೊರಬಂದು ವಾರಕ್ಕೊಮ್ಮೆಯಾದರೂ ಸುತ್ತಮುತ್ತಲ ಹಳ್ಳಿಗಳ ಜನರನ್ನು ನೋಡಿ. ದಿನನಿತ್ಯ ಅವರು ಎದುರಿಸುತ್ತಿರುವ ಸವಾಲುಗಳನ್ನು ಗಮನಿಸಿ. ನಿಮ್ಮ ಕಲಿಕೆ ಆ ಗ್ರಾಮಗಳ ಜನರ ಬದುಕನ್ನು ಸುಧಾರಿಸಲು ಉಪಯೋಗವಾಗುತ್ತದಾ ಎಂಬುದನ್ನು ಆಲೋಚಿಸಿ. ಆಗ ಮಾತ್ರ ಯಾವುದೇ ವಿದ್ಯೆಗೆ ಸಾರ್ಥಕತೆ ಬರುತ್ತದೆ ಎಂದು ಡಾ.ಅಶ್ವತ್ಥನಾರಾಯಣ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿದ್ದರು. ರಾಜ್ಯದ ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಇಲಾಖೆಯ ನಿರ್ದೇಶಕಿ ಮೀನಾ ನಾಗರಾಜ್, ಉಪ ಕುಲಪತಿ ಡಾ.ಭೈರಪ್ಪ, ಕುಲಸಚಿವ ಸುಬ್ಬರಾಯಪ್ಪ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: Adichunchanagiri MandyaBangaloreDCM Ashwath NarayanKannada News WebsiteLatest Kannada NewsLocala Newsಆದಿಚುಂಚನಗಿರಿ (ಮಂಡ್ಯ)
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊರೊನಾ ಮಧ್ಯೆಯೂ ದಾಖಲೆ ರಸಗೊಬ್ಬರ ಪೂರೈಕೆ: ಸದಾನಂದ ಗೌಡರಿಗೆ ಉಪ-ರಾಷ್ಟ್ರಪತಿ ಮೆಚ್ಚುಗೆ

Next Post

ಬೆಂಗಳೂರು: ರೈತಸ್ನೇಹಿ ತೋಟಗಾರಿಕೆ ಮೇಳ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು: ರೈತಸ್ನೇಹಿ ತೋಟಗಾರಿಕೆ ಮೇಳ ಸಂಪನ್ನ

ಬೆಂಗಳೂರು: ರೈತಸ್ನೇಹಿ ತೋಟಗಾರಿಕೆ ಮೇಳ ಸಂಪನ್ನ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL