ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ರಾಜಕೀಯ ಎಂದಿಗೂ ನನಗೆ ಅನಿವಾರ್ಯವಾಗಿರಲಿಲ್ಲ. ಇವತ್ತೂ ಇಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ. ಆದರೆ, ಮಂಡ್ಯವನ್ನು ನಾನು ಯಾವುದೇ ಕಾರಣಕ್ಕೂ ಬಿಟ್ಟು ಹೋಗುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ #Sumalatha Ambrish ಹೇಳಿದರು.
ಮಂಡ್ಯದ ಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ಇಂದು ಮಾತನಾಡಿದ ಅವರು, ನನಗೆ ಸ್ಪರ್ಧೆ ಮಾಡಲು ಸ್ವಂತಂತ್ರ ಅಭ್ಯರ್ಥಿಯಾಗಿ ಅವಕಾಶವಿದೆ. ಆದರೆ ಲೋಕಸಭೆ ಚುನಾವಣೆ ಹುಡುಗಾಟವಲ್ಲ. ನಾನೇನೋ ದ್ವೇಷ ಅಥವಾ ಹಠಕ್ಕೆ ಸ್ಪರ್ಧೆ ಮಾಡಬೇಕು ಎಂದರೆ ನಾನು ಈಗಲೂ ಸ್ಪರ್ಧೆ ಮಾಡಬಹುದು. ಆದರೆ, ಇದರಿಂದ ಯಾರಿಗೆ ನಷ್ಟವಾಗುತ್ತದೆ ಎಂಬುದನ್ನೂ ಕೂಡ ಪರಿಶೀಲಿಸಿ ನೋಡಬೇಕು. ನಾನು ಸಂಸದೆ ಆಗಬೇಕೆಂದಿದ್ದರೆ ಬಿಜೆಪಿಯ ಗೆಲ್ಲುವ ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಬಹುದಿತ್ತು. ನಾನು ಟಿಪಿಕಲ್ ರಾಜಕಾರಣಿಯಲ್ಲ. ಆದರೆ, ನನಗೆ ರಾಜಕಾರಣ ಏನಿದ್ದರೂ ಅದು ಮಂಡ್ಯದಲ್ಲಿ ಮಾತ್ರ. ಇಲ್ಲದಿದ್ದರೆ ನನಗೆ ರಾಜಕೀಯವೇ ಬೇಡ. ಕಾರಣ ಅಂಬರೀಶ್ ಅವರ ಅಭಿಮಾನಿಗಳಿರುವ ಮಂಡ್ಯವನ್ನು ಬಿಟ್ಟು ನಾನೆಲ್ಲೂ ಹೋಗುವುದಿಲ್ಲ ಎಂದರು.

Also read: ಈ ಅಂಶಗಳು ಕಾಂಗ್ರೆಸ್ಸಿಗರನ್ನು ನಂಬದ ಸ್ಥಿತಿಗೆ ತಂದಿದೆ: ಟಿ.ಡಿ. ಮೇಘರಾಜ್ ವಾಗ್ದಾಳಿ
ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಸುಮಲತಾ ಅವರ ಅವಶ್ಯಕತೆ ಹಿಂದೆಯೂ ಇಲ್ಲ, ಮುಂದೆಯೂ ಬರೊಲ್ಲ ಹಾಗೂ ಇಂದಿಗೂ ಇಲ್ಲವೆಂದು ಹೇಳಿದರು. ಆದರೆ, ನನಗೆ ಗೌರವ ಇಲ್ಲದ ಕಡೆ ನಾನು ಹೋಗೋದಿಲ್ಲ ಎಂದು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇದ್ದ ಊಹಾಪೋಹಾಗಳಿಗೆ ತೆರೆ ಎಳೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post