ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಪ್ರತೇಕ ರಾಷ್ಟ್ರ ಹೇಳಿಕೆ ನೀಡಿದ ಸಂಸದ ಡಿ.ಕೆ ಸುರೇಶ್ ಗೆ DK Suresh ಈಗ ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ವಕೀಲರೊಬ್ಬರು ಕೋರ್ಟ್ ಮೊರೆ ಹೋಗಿದ್ದಾರೆ.
ಮಂಗಳೂರಿನ 2ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಬಿಜೆಪಿ ಮುಖಂಡ ಹಾಗೂ ವಕೀಲ ಪಿ.ವಿಕಾಸ್ ಎಂಬುವರು ಈ ಸಂಬಂಧ ಅರ್ಜಿ ಸಲ್ಲಿಸಿದ್ದು, ಡಿ.ಕೆ. ಸುರೇಶ್ ಅವರ ಹೇಳಿಕೆ ದೇಶದ್ರೋಹದ, ಕುಮ್ಮಕ್ಕಿಗೆ ಕಾರಣವಾಗುವಂತ ಹೇಳಿಕೆಯಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋ ನಿಟ್ಟಿನಲ್ಲಿ ಕ್ರಮವಾಗಬೇಕಿದೆ. ಆ ನಿಟ್ಟಿನಲ್ಲಿ ಘನ ನ್ಯಾಯಾಲಯವು ಸೂಚಿಸಬೇಕು ಎಂಬುದಾಗಿ ಅರ್ಜಿಯಲ್ಲಿ ಕೋರಿದ್ದಾರೆ.

Also read: ಫೆ.4ರಂದು ಮಾತೃ ವಾತ್ಸಲ್ಯ- ಮದರ್ ಮತ್ತು ಬೇಬಿ ಕೇರ್ ಆಸ್ಪತ್ರೆ ಲೋಕಾರ್ಪಣೆ
ಈ ಹಿನ್ನಲೆಯಲ್ಲಿ ಉತ್ತರ ಭಾರತಕ್ಕೆ ಹಣ ಖರ್ಚು ಮಾಡೋದನ್ನು ಖಂಡಿಸಿ, ದಕ್ಷಿಣ ಭಾರತದ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದಂತ ಸಂಸದ ಡಿ.ಕೆ ಸುರೇಶ್ ಗೆ ಸಂಕಷ್ಟ ಎದುರಾದಂತೆ ಆಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post