Saturday, October 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

20 ಸಾವಿರ ರೂ. ಮೌಲ್ಯದ AI ಶಿಕ್ಷಣ ಕಿಟ್ ಉಚಿತವಾಗಿ ಪಡೆಯಲು ಸುವರ್ಣಾವಕಾಶ

ಮಂಗಳೂರು | ಯತಿಕಾರ್ಪ್ ಇಂಡಿಯಾದಿಂದ AI ಕ್ಷೇತ್ರದಲ್ಲಿ ಕ್ರಾಂತಿಕಾರಕ ಹೆಜ್ಜೆ

July 22, 2025
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಸಾಧಿಸಿರುವ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, #YaticorpIndia ವಿಶ್ವದ ಮೊದಲ AI ಕಾರ್ಡ್ ಅನ್ನು ಅಭಿವೃದ್ಧಿಪಡಿಸುವ ಮೂಲಕ ಗಮನ ಸೆಳೆದಿದೆ. ಇದೀಗ. ಈ ಕಾರ್ಡ್ ಅನ್ನು ಒಳಗೊಂಡ #AI ಸಾಕ್ಷರತೆಯನ್ನು ಬೆಳೆಸುವ ಮಹತ್ವಾಕಾಂಕ್ಷೆಯ ಯೋಜನೆಯೊಂದಿಗೆ ಸಂಸ್ಥೆಯು ಮುನ್ನಡೆಯುತ್ತಿದೆ. ಇದರ ಭಾಗವಾಗಿ, ಪ್ರತಿ ತಾಲೂಕಿನಲ್ಲಿ ಆಯ್ದ 40 ಫಲಾನುಭವಿಗಳಿಗೆ ತಲಾ ರೂ. 20,000 ಮೌಲ್ಯದ AI ಶಿಕ್ಷಣ ಕಿಟ್‌ಗಳನ್ನು ವಿತರಿಸುವ ವಿಶೇಷ ಪೈಲಟ್ ಯೋಜನೆಯನ್ನು ಯತಿಕಾರ್ಪ್‌ ಆರಂಭಿಸಿದೆ ಎಂದು ಯತಿಕಾರ್ಪ್ ಸಂಸ್ಥೆಯ ಎಂಡಿ ಕೆ.ಎಸ್. ಯತೀಶ್ ಹೇಳಿದರು.

ಈ ಕುರಿತಂತೆ ಸುದ್ದಿಗೋಷ್ಥಿಯಲ್ಲಿ ಮಾತನಾಡಿದ ಅವರು, ಈ ಯೋಜನೆಯಡಿ, ಪ್ರತಿ ತಾಲೂಕಿನಲ್ಲಿ 10 ಯುವ ಉದ್ಯೋಗಾಕಾಂಕ್ಷಿಗಳು, 5 ಪ್ರಗತಿಪರ ಕೃಷಿಕರು, 15 ಉತ್ಸಾಹಿ ವಿದ್ಯಾರ್ಥಿಗಳು, 5 ಪೊಲೀಸ್ ಅಧಿಕಾರಿಗಳು ಹಾಗೂ 5 ಪತ್ರಕರ್ತರು ಸೇರಿದಂತೆ ಒಟ್ಟು 40 ಮಂದಿಯನ್ನು ಆಯ್ಕೆ ಮಾಡಲಾಗುವುದು. ಹೀಗೆ, ರಾಜ್ಯದಾದ್ಯಂತ ಒಟ್ಟು 10,000 ಫಲಾನುಭವಿಗಳಿಗೆ AI ಶಿಕ್ಷಣ ಕಿಟ್‌ಗಳನ್ನು ಉಚಿತವಾಗಿ ವಿತರಿಸಿ, ಕೃತಕ ಬುದ್ಧಿಮತ್ತೆಯನ್ನು ಅವರವರ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಬಳಸಲು ತರಬೇತಿ ನೀಡಲಾಗುವುದು. ಈ ಮೂಲಕ ಒಟ್ಟು 20 ಕೋಟಿ ರೂ. ಮೌಲ್ಯದ AI ಶಿಕ್ಷಣವನ್ನು ಉಚಿತವಾಗಿ ವಿತರಿಸಲಾಗುವುದು ಎಂದರು.

ಈ ಕಾರ್ಯಕ್ರಮದ ಮೂಲಕ ಮುಂದಿನ 6 ತಿಂಗಳಲ್ಲಿ ರಾಜ್ಯದಲ್ಲಿ ವಿವಿಧ ಕ್ಷೇತ್ರದ 10 ಸಾವಿರ AI ತಂತ್ರಜ್ಞರನ್ನು ಸೃಷ್ಟಿಸುವ ಗುರಿ ಹಾಕಿಕೊಳ್ಳಲಾಗಿದೆ. ಇದರಿಂದಾಗಿ ಸಮಾಜದಲ್ಲಿ AI ಬಗೆಗಿನ ತಪ್ಪುಕಲ್ಪನೆಗಳು ದೂರವಾಗಿ, ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿರಲು ಸಹಾಯವಾಗಲಿದೆ ಎಂದರು.
ವಿಶೇಷ ಆಯ್ಕೆ ಪ್ರಕ್ರಿಯೆ
ಪ್ರತಿ ತಾಲೂಕಿನಲ್ಲಿ 40 ಸೂಕ್ತ ಫಲಾನುಭವಿಗಳನ್ನು ನೇರವಾಗಿ ಆಯ್ಕೆ ಮಾಡುವುದು ಸಂಸ್ಥೆಗೆ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ, ರೋಟರಿ, ಲಯನ್ಸ್, ಜೆಸಿಐ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಸರ್ಕಾರೇತರ ಸಂಸ್ಥೆಗಳ (ಎನ್‌ಜಿಓ) ಮೂಲಕ ಆಯ್ಕೆ ಮಾಡಲಾಗುತ್ತದೆ. ಎನ್‌ಜಿಓಗಳು ಫಲಾನುಭವಿಗಳನ್ನು ಆಯ್ಕೆ ಮಾಡಿದ ನಂತರ, ಯತಿಕಾರ್ಪ್ ಸಂಸ್ಥೆಯು ಉಚಿತ AI ಶಿಕ್ಷಣ ಕಿಟ್‌ಗಳನ್ನು ಈ ಸ್ಥಳೀಯ ಸಂಸ್ಥೆಗಳಿಗೆ ಪೂರೈಸಲಿದೆ. ಸ್ಥಳೀಯ ಸಂಸ್ಥೆಗಳು ವಿತರಣಾ ಕಾರ್ಯಕ್ರಮಗಳನ್ನು ಆಯೋಜಿಸಿ ಫಲಾನುಭವಿಗಳಿಗೆ ಕಿಟ್‌ಗಳನ್ನು ಹಸ್ತಾಂತರಿಸುವಾಗ, ಯತಿಕಾರ್ಪ್‌ನ ಸಂಪನ್ಮೂಲ ವ್ಯಕ್ತಿಗಳು ಕಿಟ್‌ ಬಳಕೆಯ ಬಗ್ಗೆ ಸಮಗ್ರ ಮಾಹಿತಿ ನೀಡಲಿದ್ದಾರೆ ಎಂದರು.

ಏನಿದರ ಉದ್ದೇಶ?
ಇಂದಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ (AI) ಶಿಕ್ಷಣ ಅತ್ಯಂತ ಅಗತ್ಯವಾಗಿದೆ. AI ಮಾನವ ಸಮಾಜಕ್ಕೆ ವರದಾನವಾಗುವ ಸಾಮರ್ಥ್ಯದ ಜೊತೆಗೆ ಶಾಪವಾಗಬಲ್ಲ ಅಪಾಯವನ್ನೂ ಹೊಂದಿದೆ. ಈ ತಂತ್ರಜ್ಞಾನವು ನಿರುದ್ಯೋಗ, ಆರ್ಥಿಕ ಅಸಮಾನತೆ, ಖಾಸಗಿತನದ ಉಲ್ಲಂಘನೆ, ತಪ್ಪು ಮಾಹಿತಿ ಹರಡುವಿಕೆ, ದಾರಿ ತಪ್ಪಿಸುವಿಕೆ ಮತ್ತು ಸ್ವಾಯತ್ತ ಶಸ್ತ್ರಾಸ್ತ್ರಗಳಂತಹ ಗಂಭೀರ ಅಪಾಯಗಳನ್ನು ತಂದೊಡ್ಡಬಹುದು ಎಂದರು.ಮಾನವನ ಅಸ್ತಿತ್ವಕ್ಕೆ ಸವಾಲಾಗಬಲ್ಲ ಈ ತಂತ್ರಜ್ಞಾನವನ್ನು, ನೈತಿಕ ಚೌಕಟ್ಟಿನಲ್ಲಿ ಜವಾಬ್ದಾರಿಯುತವಾಗಿ ಬಳಸುವುದು ಇಂದಿನ ತುರ್ತು ಅಗತ್ಯವಾಗಿದೆ. ಮಾನವಕುಲದ ಉಳಿವಿಗಾಗಿ AI ಮೇಲೆ ನಿಯಂತ್ರಣ ಸಾಧಿಸುವುದು ಅನಿವಾರ್ಯ. ಒಂದು ವೇಳೆ AI ಬಳಕೆಯು ಮಾನವನ ನೈತಿಕ ಚೌಕಟ್ಟಿನಿಂದ ಹೊರಗುಳಿದರೆ ಅಥವಾ ಕೆಲವೇ ವ್ಯಕ್ತಿ/ಸಂಸ್ಥೆಗಳ ಕೈಯಲ್ಲಿ ಕೇಂದ್ರೀಕೃತವಾದರೆ, ಅದು ಸಮಾಜದಲ್ಲಿ ಭೀಕರ ಅನಾಹುತಗಳಿಗೆ ಕಾರಣವಾಗಬಹುದು ಎಂದರು.

AI ಬಗೆಗಿನ ತಪ್ಪು ಕಲ್ಪನೆಗಳನ್ನು ದೂರಮಾಡಿ, ತಂತ್ರಜ್ಞಾನದ ಪರಿಣಾಮಕಾರಿ ಬಳಕೆಯನ್ನು ಪ್ರತಿಯೊಬ್ಬರಲ್ಲಿ ಬೆಳೆಸುವುದು ಇಂದಿನ ಯುಗದ ಅನಿವಾರ್ಯತೆ. ಹಾಗಾಗಿ, ‘ಎಲ್ಲರಿಗೂ AI ಕಲಿಕೆ ಸಾಧ್ಯ’ ಎಂಬುದನ್ನು ಸಾಬೀತುಪಡಿಸಲು ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಮೇಲೆ ತಿಳಿಸಿದ ಎಲ್ಲಾ ಗಂಭೀರ ಚಿಂತನೆಗಳನ್ನು ಮನಗಂಡು, ‘AI ಈಗ ಆಯ್ಕೆಯಲ್ಲ, ಅವಶ್ಯಕತೆ’ ಎಂಬ ಧೈಯ ವಾಕ್ಯದೊಂದಿಗೆ ಯತಿಕಾರ್ಪ್ ಸಂಸ್ಥೆಯು ಕರ್ನಾಟಕದಲ್ಲಿ AI ಸಾಕ್ಷರತಾ ಯೋಜನೆಯನ್ನು ಆರಂಭಿಸಿದೆ ಎಂದರು.AI ಕಿಟ್‌ನಲ್ಲಿ ಏನಿದೆ?
ಯತಿಕಾರ್ಪ್‌ ಈ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ, ಫಲಾನುಭವಿಗಳಿಗೆ ನೀಡಲಾಗುವ 20,000 ರೂ. ಮೌಲ್ಯದ AI ಶಿಕ್ಷಣ ಕಿಟ್‌ ಅತ್ಯಾಧುನಿಕ ಸಂಪನ್ಮೂಲಗಳನ್ನು ಒಳಗೊಂಡಿದೆ. AI ಶಿಕ್ಷಣದ ಜೊತೆಗೆ ಇಪ್ಪತ್ತಕ್ಕಿಂತಲೂ ಅಧಿಕ AI ಟೂಲ್’ಗಳನ್ನು ಬಳಕೆಯನ್ನು ತರಬೇತಿ ನೀಡುವುದಲ್ಲದೆ ಈ ಕೆಳಗಿನವು ಸೇರಿವೆ:

  • AI ಆಕ್ಸೆಸ್ ಕಾರ್ಡ್
  • ಪ್ರಿಂಟೆಡ್ ಹ್ಯಾಂಡ್ ಬುಕ್
  • ಡಿಜಿಟಲ್ ಆಕ್ಸೆಸ್ ಮೆಟೀರಿಯಲ್
  • AI ಬುಕ್ ವರ್ಕ್
  • ನೋಟ್ ಪ್ಯಾಡ್
  • ಮಾಸ್ಕಾಟ್ ಬ್ಯಾಡ್ಜ್
  • ವೆಲ್’ಕಮ್ ಲೆಟರ್
  • ಸರ್ಟಿಫಿಕೇಟ್ ಆಫ್ ಎನ್’ರೋಲ್’ಮೆಂಟ್
  • ಲರ್ನಿಂಗ್ ಟ್ರ್ಯಾಕರ್

ವಿಶ್ವದ ಮೊದಲ AI ಕಾರ್ಡ್
ಯತಿಕಾರ್ಪ್ ಸಂಸ್ಥೆಯ ಸಂಶೋಧನಾ ವಿಭಾಗವು 2022ರಿಂದಲೇ AI ಕಾರ್ಡ್‌ಗೆ ಸಂಬಂಧಿಸಿದಂತೆ ನಿರಂತರ ಸಂಶೋಧನೆ ನಡೆಸಿ ವಿಶ್ವದ ಮೊದಲ AI ಕಾರ್ಡ್ ಅನ್ನು ಅಭಿವೃದ್ಧಿಪಡಿಸಿ ಯಶಸ್ಸುಕಂಡಿದೆ. ಅಮೆರಿಕಾದ ಪ್ರಖ್ಯಾತ AI ವಿಜ್ಞಾನಿ ಪ್ರೊ. ಎಸ್.ಎಸ್. ಅಯ್ಯಂಗಾರ್ ಅವರ ಮಾರ್ಗದರ್ಶನದಲ್ಲಿ ಈ AI ಕಾರ್ಡ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಪ್ರಸ್ತುತ ವಿವಿಧ ಕ್ಷೇತ್ರಗಳ ಒಂದು ಲಕ್ಷಕ್ಕೂ ಅಧಿಕ ಬಳಕೆದಾರರನ್ನು ತಲುಪಿದೆ. ವಿದ್ಯಾರ್ಥಿಗಳು, ವೈದ್ಯರು, ವಕೀಲರು, ಪತ್ರಕರ್ತರು ಸೇರಿದಂತೆ 32 ವಿವಿಧ ಕ್ಷೇತ್ರದ ವೃತ್ತಿಪರರು ಈ ಕಾರ್ಡ್‌ನಿಂದ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.ಕೈಜೋಡಿಸಿ, ಮಾಹಿತಿ ತಲುಪಿಸಿ
ಈ ಮಹತ್ವದ ಯೋಜನೆ ಯಶಸ್ವಿಗೊಳಿಸಲು ಸಮಾಜದ ಎಲ್ಲಸ್ತರಗಳ ಬೆಂಬಲ ಅನಿವಾರ್ಯ. ಸೋಷಿಯಲ್ಮೀಡಿಯಾ ಪ್ರಭಾವಿಗಳು, ಸಾರ್ವಜನಿಕ ವ್ಯಕ್ತಿಗಳು, ಚಿತ್ರರಂಗದ ಗಣ್ಯರು ಹಾಗೂ ಮಾಧ್ಯಮ ಪ್ರತಿನಿಧಿಗಳು ನಮ್ಮೊಂದಿಗೆ ಕೈ ಜೋಡಿಸಬೇಕೆಂದು ಯತಿಕಾರ್ಪ್ ಸಂಸ್ಥೆಯು ಮನವಿ ಮಾಡುತ್ತದೆ. ಈ ಸುದ್ದಿಯನ್ನು ನಿಮ್ಮ ವೇದಿಕೆಗಳ ಮೂಲಕ ವ್ಯಾಪಕವಾಗಿ ಹಂಚಿಕೊಳ್ಳುವ ಮೂಲಕ. ಅರ್ಹಫಲಾನುಭವಿಗಳಿಗೆ ಈ ಉಚಿತ AI ಶಿಕ್ಷಣದ ಅವಕಾಶವನ್ನು ತಲುಪಿಸಲು ಸಹಾಯ ಮಾಡಿ. ನಿಮ್ಮ ಸಹಕಾರವು ಕರ್ನಾಟಕದಲ್ಲಿ AI ಸಾಕ್ಷರತಾ ಕ್ರಾಂತಿಗೆ ನಿರ್ಣಾಯಕ ಕೊಡುಗೆ ನೀಡಲಿದೆ ಎಂದರು.

ಈ ಮಹತ್ವಾಕಾಂಕ್ಷೆಯ AI ಸಾಕ್ಷರತಾ ಯೋಜನೆಯ ಮೂಲಕ, ಯತಿಕಾರ್ವ್ಸಂಸ್ಥೆಯು 10.000 ಫಲಾನುಭವಿಗಳಿಗೆ AI ಸಾಕ್ಷರತೆಯನ್ನು ಮಾತ್ರವಲ್ಲದೆ, ಸಮಗ್ರ ತಾಂತ್ರಿಕ ಪ್ರಗತಿಗೆ ಒತ್ತು ನೀಡಿದೆ. AI ಕಾರ್ಡ್‌ಗಳ ಅಭಿವೃದ್ಧಿ ಮತ್ತು ವಿತರಣೆಯು ಈಗಾಗಲೇ 1,000 ಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿದ್ದು, ರಾಜ್ಯದಲ್ಲಿ ಹೊಸ ವ್ಯಾಪಾರ ಅವಕಾಶಗಳಿಗೂ ರಹದಾರಿ ಮಾಡಿಕೊಟ್ಟಿದೆ. ಶಿಕ್ಷಣ ಮತ್ತು ತಂತ್ರಜ್ಞಾನದ ಸಮನ್ವಯದೊಂದಿಗೆ, ಕರ್ನಾಟಕದಲ್ಲಿ AI ಕ್ರಾಂತಿಗೆ ನಾಂದಿಹಾಡುವ ಮೂಲಕ, ಯತಿಕಾರ್ಪ್ ಸಂಸ್ಥೆಯು ಭವಿಷ್ಯದ ಬಾಗಿಲು ತೆರೆಯುತ್ತಿದೆ ಎಂದರು.

ಸುದ್ದಿಗೋಷ್ಥಿಯಲ್ಲಿ, ಕಂಪೆನಿಯ ಜನರಲ್ ಮ್ಯಾನೇಜರ್ ಕೆ. ಕೃಪಾ, ಬ್ಯುಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ ನವ್ಯ ಅಮೈ, ಎಚ್ ಆರ್ ಮ್ಯಾನೇಜರ್ ಭೂಮಿಕಾ ಪೂಜಾರಿ, ಸಾಫ್ಟ್ ವೇರ್ ಡೆವಲಪರ್ ಸಿ. ಶ್ರೀನಿಧಿ, ಸಿ.ಸಿ. ಕಿರಣ್, ಎಸ್ ಎಂ ಅಸೋಸಿಯೇಟ್ ರೆತಿಕ್ ಹಾಗೂ ಜಿತೇಶ್ ಶೆಟ್ಟಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: AIArtificial Intelligencecoastal newsDakshina KannadaKaravali newsMangaloreYaticorp Indiaಕೃತಕ ಬುದ್ಧಿಮತ್ತೆತಂತ್ರಜ್ಞಾನಪೈಲಟ್ ಯೋಜನೆಮಂಗಳೂರುಯತಿಕಾರ್ಪ್ ಇಂಡಿಯಾ
Previous Post

ಸೊರಬ | ಕುಬಟೂರಿನಲ್ಲಿ ನರಸಿಂಹಸ್ವಾಮಿ ಪೌರಾಣಿಕ ವಿಗ್ರಹ ಭಗ್ನಕ್ಕೆ ಖಂಡನೆ | ಮಾನಸಿಕ ಅಸ್ವಸ್ಥನಿಂದ ಕೃತ್ಯ?

Next Post

ಕುವೆಂಪು ವಿವಿ ಪ್ರವೇಶಾತಿಯ ಅವಧಿ ವಿಸ್ತರಣೆ | ಎಷ್ಟು ದಿನಗಳ ಕಾಲ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕುವೆಂಪು ವಿವಿ ಪ್ರವೇಶಾತಿಯ ಅವಧಿ ವಿಸ್ತರಣೆ | ಎಷ್ಟು ದಿನಗಳ ಕಾಲ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೈಸೂರು | ಅ.26-ನ.1 ರವರೆಗೆ ವಿಶೇಷ ಜ್ಞಾನಸತ್ರ | ಮಾಹುಲಿ ವಿದ್ಯಾಸಿಂಹಾಚಾರ್ಯ ಸಾರಥ್ಯ

October 25, 2025

ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನೋತ್ಸವ | ಅ.31ರಿಂದ ನವೆಂಬರ್ 26ರವರೆಗೆ ಏಕತಾಯಾತ್ರೆ

October 25, 2025

ಸುಪ್ರೀಂ ಕೊರ್ಟ್ ಸೂಚನೆ ಪಾಲಿಸುವಲ್ಲಿ ವಿಫಲ | ಅಜಾನ್ ವಿರುದ್ದ ಹೋರಾಟ: ಡಿ.ಎಸ್. ಅರುಣ್

October 25, 2025

ಸರ್ದಾರ್ ವಲ್ಲಭಭಾಯಿ ಪಟೇಲ್ ಯುವಕರಿಗೆ ರೋಲ್ ಮಾಡೆಲ್ ಆಗಬೇಕು: ಡಿ.ಎಸ್. ಅರುಣ್

October 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೈಸೂರು | ಅ.26-ನ.1 ರವರೆಗೆ ವಿಶೇಷ ಜ್ಞಾನಸತ್ರ | ಮಾಹುಲಿ ವಿದ್ಯಾಸಿಂಹಾಚಾರ್ಯ ಸಾರಥ್ಯ

October 25, 2025

ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನೋತ್ಸವ | ಅ.31ರಿಂದ ನವೆಂಬರ್ 26ರವರೆಗೆ ಏಕತಾಯಾತ್ರೆ

October 25, 2025

ಸುಪ್ರೀಂ ಕೊರ್ಟ್ ಸೂಚನೆ ಪಾಲಿಸುವಲ್ಲಿ ವಿಫಲ | ಅಜಾನ್ ವಿರುದ್ದ ಹೋರಾಟ: ಡಿ.ಎಸ್. ಅರುಣ್

October 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!