ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ #Kotekar Bank Robbery Case ಸಂಬಂಧಪಟ್ಟಂತೆ ನಾಲ್ವರನ್ನು ಬಂಧಿಸಿ 18.314 ಕೆಜಿ ಚಿನ್ನ ಮತ್ತು 3.80 ಲಕ್ಷ ರೂ. ನಗದನ್ನು ವಶಪಡಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ #Anupam Agarwal ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮಂಗಳೂರಿನ ಹೊರವಲಯದ ಉಳ್ಳಾಲ ಠಾಣೆ ವ್ಯಾಪ್ತಿಯ ಕೆ.ಸಿ. ರಸ್ತೆಯಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಕಳ್ಳತನ ಮಾಡಲು ಆರು ತಿಂಗಳ ಹಿಂದೆಯೇ ದರೋಡೆಗೆ ಸಂಚು ರೂಪಿಸಲಾಗಿತ್ತು ಮತ್ತು ಬ್ಯಾಂಕ್ ಬಳಿ ಮೂರು ಬಾರಿ ಪರಿಶೀಲನೆ ನಡೆಸಲಾಗಿತ್ತು ಎಂದು ತಿಳಿಸಿದರು.

ಬಂಧಿತ ಆರೋಪಗಳಾದ ಮುರುಗನ್ ಮತ್ತು ಕಣ್ಣನ್ ಮಣಿ ಆರು ತಿಂಗಳ ಹಿಂದೆಯೇ ತಲೋಜಾ ಜೈಲಿನಲ್ಲಿ ಭೇಟಿಯಾಗಿದ್ದಾಗ ಈ ಬ್ಯಾಂಕ್ ದರೋಡೆಗೆ ಸಂಚು ರೂಪಿಸಿದ್ದರು. ಇನ್ನೂ ಪರಾರಿಯಾಗಿರುವ ಸ್ಥಳೀಯ ಸಹಚರ ಶಶಿ ತೇವರ್ ಸಹ ಈ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಹೇಳಿದರು.
Also read: ಬೀದರ್, ಮಂಗಳೂರು ದರೋಡೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಎಟಿಎಂ ಕಳ್ಳತನಕ್ಕೆ ಯತ್ನ!
ಮಂಗಳೂರು ಮೂಲದ ಶಶಿ ತೇವರ್ ಆರು ತಿಂಗಳ ಹಿಂದೆ ಕೋಟೆಕಾರ ವ್ಯವಸಾಯ ಸಹಕಾರಿ ಬ್ಯಾಂಕ್ನಲ್ಲಿ ಭದ್ರತಾ ಸಿಬ್ಬಂದಿ ಕೊರತೆ ಹಾಗೂ ದರೋಡೆಗೆ ಸೂಕ್ತವಾದ ಬ್ಯಾಂಕ್ ಎಂಬುದನ್ನು ತಿಳಿಸಿದ್ದ. ಅದರಂತೆ 2024ರ ಆಗಸ್ಟ್, ಅಕ್ಟೋಬರ್ ಹಾಗೂ ನವೆಂಬರ್ನಲ್ಲಿ ಮುರುಗನ್, ಮಂಗಳೂರಿಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾನೆ. ಶುಕ್ರವಾರ ಮಧ್ಯಾಹ್ನ ಸೂಕ್ತ ದಿನವೆಂದು ನಿರ್ಧರಿಸಿ ಜ.17ರಂದು ದರೋಡೆ ಕೃತ್ಯ ಎಸಗಿದ್ದಾರೆ ಎಂದು ಆಯುಕ್ತರು ವಿವರಿಸಿದರು.
ಜನವರಿ 17ರಂದು ಮಧ್ಯಾಹ್ನ 1 ಗಂಟೆಯಿಂದ 1.20ರವರೆಗೆ ಬ್ಯಾಂಕಿನಲ್ಲಿ ದರೋಡೆ ನಡೆದಿದ್ದು, ಮುಸುಕು ಧರಿಸಿ ಶಸ್ತ್ರಸಜ್ಜಿತರಾದ ನಾಲ್ವರು ವ್ಯಕ್ತಿಗಳ ಗುಂಪು ಪಿಸ್ತೂಲು ಮತ್ತು ಚಾಕುಗಳನ್ನು ಹಿಡಿದು ಬ್ಯಾಂಕ್ ಆವರಣಕ್ಕೆ ನುಗ್ಗಿ ನಗದು ಮತ್ತು ಚಿನ್ನಾಭರಣಗಳನ್ನು ದೋಚಿದ್ದರು. ದರೋಡೆಕೋರರು ಒಟ್ಟು 18.674 ಕೆಜಿ ಚಿನ್ನಾಭರಣ ಹಾಗೂ 11,67,044 ರೂ.ಗಳನ್ನು ದೋಚಿದ್ದರು.

ಎಸಿಪಿಗಳಾದ ಧನ್ಯಾ ಮತ್ತು ಮನೋಜ್ ನೇತೃತ್ವದಲ್ಲಿ ಮಂಗಳೂರು ಪೊಲೀಸರ ಹಲವು ತಂಡಗಳು ತಮಿಳುನಾಡು ಮತ್ತು ಮುಂಬೈನಲ್ಲಿ ಸತತ ನಾಲ್ಕು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ದು, 2700 ಕಿ.ಮೀ. ಅಧಿಕ ಪ್ರಯಾಣ ಬೆಳೆಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post