ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ನೈಋತ್ಯ ಪದವೀಧರ ಕ್ಷೇತ್ರದ ಬಿಜೆಫಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಮಹತ್ವದ ಪೂರ್ವಭಾವಿ ಸಭೆ ನಡೆಸಿದರು.
ಸಭೆಯಲ್ಲಿ ರಾಜ್ಯ ಕಾರ್ಯದರ್ಶಿ ಅರುಣ್, ಪದವೀಧರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಹರೀಶ್ ಪೂಂಜಾ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್, ಸಹ ಸಂಚಾಲಕರಾದ ವಿಕಾಸ್ ಪುತ್ತೂರ್, ಶಿಕ್ಷಕರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಸಹ ಸಂಚಾಲಕರಾದ ಡಾ.ಮಂಜುಳಾ ರಾವ್, ಶಾಸಕಿ ಭಾಗೀರಥಿ, ಹಿರಿಯರಾದ ಮೋನಪ್ಪ ಭಂಡಾರಿ, ಗಣೇಶ್ ಕಾರ್ಣೀಕ್, ಬಾಲಕೃಷ್ಣ ಭಟ್, ಮಾಲತೇಶ್ ಮತ್ತಿತರರು ಹಾಜರಿದ್ದರು.
ಕಾರ್ಯಕ್ರಮಕ್ಕೂ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ವಿಜಯೀಭವ: ಕಲ್ಲಡ್ಕ ಪ್ರಭಾಕರ್ ಭಟ್ ಆರ್ಶೀವಾದ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮಂಗಳೂರಿನಲ್ಲಿ ಭೇಟಿಯಾಗಿ ಆರ್ಶೀವಾದ ಪಡೆದರು.
Also read: ಪ್ರಧಾನಿ ಮೋದಿ ಬಳಿ ಎಷ್ಟು ಆಸ್ತಿ, ನಗದು ಇದೆ? ಸ್ವಂತ ಕಾರು ಇದೆಯೇ? ಇಲ್ಲಿದೆ ಡಿಟೇಲ್ಸ್
ಈ ಸಂದರ್ಭ ಪ್ರಭಾಕರ್ ಭಟ್ ಅವರು ಚುನಾವಣೆಯಲ್ಲಿ ವಿಜಯಶಾಲಿ ಆಗಲಿ ಎಂದು ತುಂಬು ಹೃದಯದಿಂದ ಡಾ.ಧನಂಜಯ ಸರ್ಜಿ ಅವರಿಗೆ ಹರಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

























