ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂಗಳೂರು: ಇಲ್ಲಿನ ಗೋಲಿಬಾರ್’ನಲ್ಲಿ ಮೃತರಾದವರು ಗಲಭೆಯ ತನಿಖೆಯಲ್ಲಿ ತಪ್ಪಿತಸ್ಥರು ಎಂದು ಸಾಬೀತಾದರೆ ಅವರ ಕುಟುಂಬಕ್ಕೆ ಒಂದು ರೂ. ಸಹ ಪರಿಹಾರ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಗೋಲಿಬಾರ್’ಗೆ ಬಲಿಯಾದ ಇಬ್ಬರು ಹಿಂಸಾಚಾರದಲ್ಲಿ ಭಾಗಿಯಾಗಿರುವ ಸಂಶಯವಿದೆ. ಗಲಭೆ ಕುರಿತಂತೆ ತನಿಖೆ ನಡೆಯುತ್ತಿದ್ದು, ಸದ್ಯ ಯಾವುದೇ ರೀತಿಯಲ್ಲಿ ಪರಿಹಾರ ನೀಡುವುದಿಲ್ಲ. ಮೃತರಾದ ಇಬ್ಬರೂ ಅಪರಾಧಿಗಳು ಎಂದು ಸಾಬೀತಾದರೆ ಪರಿಹಾರ ನೀಡುವುದು ಅಕ್ಷಮ್ಯವಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಡಿ.19ರಂದು ಮಂಗಳೂರಿನಲ್ಲಿ ನಡೆದ ಗೋಲಿಬಾರ್’ನಲ್ಲಿ ಅಬ್ದುಲ್ ಜಲೀಲ್ ಮತ್ತು ನೌಶೀನ್ ಎಂಬುಬವರು ಬಲಿಯಾಗಿದ್ದರು. ಡಿ.22ರಂದು ಮಂಗಳೂರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತ್ರಸ್ತ ಕುಟುಂಭವನ್ನು ಭೇಟಿ ಮಾಡಿ, ಸಾಂತ್ವನ ಹೇಳಿದ್ದರು.
ಈ ವೇಳೆ ಸಂತ್ರಸ್ತ ಕುಟುಂಬ ಕೂಡ ತಮಗೆ ಪರಿಹಾರ ಬೇಡ, ನ್ಯಾಯ ದೊರಕಿಸಿಕೊಡಿ ಎಂದು ಮನವಿ ಮಾಡಿತ್ತು. ಆದರೂ ಯಡಿಯೂರಪ್ಪ ಬೆಂಗಳೂರಿಗೆ ಬಂದ ಬಳಿಕ ಸಂತ್ರಸ್ತ ಎರಡು ಕುಟುಂಬಕ್ಕೆ ತಲಾ 10 ಲಕ್ಷ ರೂ.ಪರಿಹಾರ ನೀಡುವುದಾಗಿ ಘೋಷಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.
Get in Touch With Us info@kalpa.news Whatsapp: 9481252093

















