ಕಲ್ಪ ಮೀಡಿಯಾ ಹೌಸ್ | ಮಾನ್ವಿ |
ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯ 4 ನಿಗಮಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವೇತನ ಪರಿಷ್ಕರಣೆಗೆ 4 ಸಾವಿರ ಕೋಟಿ ರೂ. ಅನುದಾನವನ್ನು 2 ತಿಂಗಳೊಳಗೆ ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು Minister Shriramulu ಹೇಳಿದ್ದಾರೆ.
ಪಟ್ಟಣದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ನಿರ್ಮಿಸಿರುವ ಹೊಸ ಬಸ್ ಘಟಕ ಮತ್ತು ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ, ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾರಿಗೆ ಇಲಾಖೆ ಸಿಬ್ಬಂದಿಗಳ ವೇತನ ಪರಿಷ್ಕರಣೆ ಬಹಳ ದಿನಗಳ ಬೇಡಿಕೆಯಾಗಿದೆ. ಸಾರಿಗೆ ಸಚಿವನಾದ ಮೇಲೆ ಸಿಬ್ಬಂದಿ ಬೇಡಿಕೆಗೆ ಸ್ಪಂದಿಸಿದ್ದು, ಆದಷ್ಟು ಬೇಗ ಭರವಸೆ ಈಡೇರಿಸುವೆ ಎಂದರು.
Also read: ತನ್ನ ಪತ್ನಿ, ನಾಲ್ಕು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















