ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಪ್ರತಿಷ್ಠಿತ ಕುವೆಂಪು ವಿಶ್ವವಿದ್ಯಾಲಯ 36 ವರ್ಷದ ಇತಿಹಾಸ ಹೊಂದಿದ್ದು, ಇಂತಹ ವಿವಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದ ಕುರಿತಾಗಿ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ #DrDhananjayaSarji ಆಗ್ರಹಿಸಿದ್ದಾರೆ.
ಈ ಕುರಿತಂತೆ ಇಂದಿನ ವಿಧಾನ ಪರಿಷತ್ ಅಧಿವೇಶನದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರ ಮೂಲಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
Also Read>> ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯವೇ: ಗೃಹ ಸಚಿವ ಪರಮೇಶ್ಚರ್ ಹೇಳಿದ್ದೇನು?
10,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದಲ್ಲಿ #KuvempuUniversity ನಡೆದಿರುವ ಬ್ರಹ್ಮಾಂಡ ಭ್ರಷ್ಟಚಾರ ಮತ್ತು ಅಸಮರ್ಪಕ ಆಡಳಿತದ ಕುರಿತು ಸರ್ಕಾರ, ಉನ್ನತ ಮಟ್ಟದ ತನಿಖೆ ನಡೆಸಿ ಭ್ರಷ್ಟಚಾರದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದ ಆಗ್ರಹಿಸಿದರು.ಕುವೆಂಪು ವಿವಿಯಲ್ಲಿನ ಭ್ರಷ್ಟಾಚಾರ ಹಾಗೂ ದಕ್ಷ ಅಡಳಿತ ನಡೆಸುವಲ್ಲಿ ವಿಫಲವಾಗಿರುವ ಕುಲಸಚಿವರ ವಿರುದ್ಧ ಇತ್ತೀಚಿಗೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಸಮಗ್ರ ತನಿಖೆಗೆ ಆಗ್ರಹಿಸಿವೆ. ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟವಾಗಿರುವುದು ವಿಶ್ವವಿದ್ಯಾಲಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತದೆ ಎಂದರು.
ದೇಶದ ಮುಂದಿನ ಭವಿಷ್ಯವಾಗಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕನ್ನು ರೂಪಿಸುವ ಮಹತ್ತರ ಜವಾಬ್ದಾರಿ ನಿರ್ವಹಿಸಬೇಕಾದ ವಿಶ್ವವಿದ್ಯಾಲಯ ಏಕರೂಪದ ವೇಳಾಪಟ್ಟಿ ಅನುಸರಿಸುವಲ್ಲಿ ಲೋಪ, ವಿವಿಯ ಪ್ರಸಾರಾಂಗದಲ್ಲಿ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ಆಗಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ವಿವಿಯ ದೂರ ಶಿಕ್ಷಣ ಪ್ರವೇಶಾತಿ ಮತ್ತು ವ್ಯಾಸಂಗದ ಇನ್ನಿತರ ನಿರ್ವಹಣೆಗಳನ್ನು ಎಲ್.ಎಂ.ಎಸ್ ಮುಖಾಂತರ ನಡೆಸಲು ಬೆಂಗಳೂರಿನ Pheme Software Limited ಕಂಪನಿಯೊಂದಿಗೆ ಮಾಡಿಕೊಂಡಿರುವ ಒಪ್ಪಂದ, ದರ ನಿರ್ಣಯಗಳಲ್ಲಿನ ತಪ್ಪುಗಳಿಂದಾಗಿ ವಿ.ವಿ.ಗೆ ಲಕ್ಷಾಂತರ ರೂಪಾಯಿಗಳ ನಷ್ಟವಾಗಿರುವುದಾಗಿ ಪ್ರತಿಭಟನಕಾರರು ದೂರಿರುತ್ತಾರೆ ಎಂದು ಹೇಳಿದರು.
ಆಶ್ಚರ್ಯದ ವಿಷಯವೇನೆಂದರೇ ಸದರಿ ಸಂಸ್ಥೆಯವರು ಈ ಹಿಂದೆ ಅಧ್ಯಯನ ಕೇಂದ್ರ ತೆರೆದು ಆ ಮೂಲಕ ವಿದ್ಯಾರ್ಥಿಗಳಿಂದ ಪಡೆಯಲಾಗಿದ್ದ ಶುಲ್ಕಗಳನ್ನು ವಿಶ್ವವಿದ್ಯಾಲಯಕೆ ಪಾವತಿಸದೆ ಕೋಟ್ಯಾಂತರ ಶುಲ್ಕವನ್ನು ಬಾಕಿ ಉಳಿಸಿಕೊಂಡಿದ್ದು, ಸದರಿ ಸಂಸ್ಥೆಯು ವಿಶ್ವಾವಿದ್ಯಾಲಯಕ್ಕೆ ನೀಡಿದ 30 ಲಕ್ಷದ ಚೆಕ್ ಬೌನ್ಸ್ ಆಗಿ ಪ್ರಕರಣ ನ್ಯಾಯಲಯದಲ್ಲಿ ಇದು, ಇಂತಹ ಸಂಸ್ಥೆಯೊಂದಿಗೆ ಮತ್ತೊಮ್ಮೆ ವ್ಯವಹರಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದರು.
ಕುವೆಂಪು ವಿಶ್ವಾವಿದ್ಯಾಲಯದವು ದೂರಶಿಕ್ಷಣ ವ್ಯಾಸಂಗ ಮಾಡಲು ಪ್ರವೇಶಾತಿಯನ್ನು ಎಲ್.ಎಂ.ಎಸ್ ಮುಖಾಂತರ ನಡೆಸಲು Pheme Software Limited, Bangalore ಸಂಸ್ಥೆಯೊಂದಿಗೆ ಹಲವು ಆಕ್ಷೇಪಣೆಗಳನ್ನು ಬದಿಗೊತ್ತಿ ಕೆ.ಟಿ.ಟಿ.ಪಿ ಕಾಯ್ದೆಯನ್ನು ಉಲ್ಲಂಘನೆ ಮಾಡಿ ಒಪ್ಪಂದ ಮಾಡಿಕೊಂಡಿರುವುದು ವಿಶ್ವಾವಿದ್ಯಾಲಯಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟವನ್ನು ಉಂಟುಮಾಡಿದೆ ಮತ್ತು ಇದರಲ್ಲಿ ಭ್ರಷ್ಟಚಾರವಾಗಿರುವದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು ಸೂಕ್ತ ತನಿಖೆ ನಡೆಸುವಂತೆ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post