No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ದೆಹಲಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ | 21 ಸಾವು | ಪ್ರಾಣ ಉಳಿಸಿಕೊಳ್ಳಲು ಮಹಡಿಯಿಂದ ಜಿಗಿದ ಮಹಿಳೆಯರು

kalpa News by kalpa News
June 3, 2026
in ರಾಷ್ಟ್ರೀಯ
1
ದೆಹಲಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ | 21 ಸಾವು | ಪ್ರಾಣ ಉಳಿಸಿಕೊಳ್ಳಲು ಮಹಡಿಯಿಂದ ಜಿಗಿದ ಮಹಿಳೆಯರು

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ದಕ್ಷಿಣ ದೆಹಲಿಯ ಹೌಜ್ ರಾಣಿ ಪ್ರದೇಶದಲ್ಲಿರುವ ‘ಫ್ಲರಿಶ್ ಸ್ಟೇ’ ಹೋಟೆಲ್‌ನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ #TerribleFireDisaster ಕನಿಷ್ಠ 21 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ವಿದೇಶಿ ನಾಗರಿಕರಾಗಿದ್ದಾರೆ ಎಂದು ತಿಳಿದುಬಂದಿದೆ.

ಐದು ಮಹಡಿಗಳ ಕಟ್ಟಡದ ನೆಲ ಮಹಡಿಯಲ್ಲಿ ಇರುವ ಉಪಹಾರ ಗೃಹದಲ್ಲಿ ಆರಂಭವಾದ ಬೆಂಕಿ ಕ್ಷಣಾರ್ಧದಲ್ಲೇ ಮೇಲ್ಮಹಡಿಗಳಿಗೆ ವ್ಯಾಪಿಸಿದೆ. ಘಟನೆಯ ಭೀಕರತೆಯನ್ನು ತೋರಿಸುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

Also Read>> ಸಾಕೇತ್ ಕಟ್ಟಡ ಕುಸಿತದ ಬಳಿಕ ಎಚ್ಚರಿಕೆ | ಕಟ್ಟಡ ನಿಯಮ ಉಲ್ಲಂಘನೆಗೆ ಕಠಿಣ ಕ್ರಮಕ್ಕೆ ಎಲ್‌ಜಿ ಸೂಚನೆ

ಬೆಂಕಿಯಿಂದ ಪಾರಾಗಲು ಪ್ರಯತ್ನಿಸಿದ ಕೆಲವರು ಮೇಲ್ಮಹಡಿಗಳಿಂದ ಜಿಗಿದಿದ್ದು, ಇಬ್ಬರು ಮಹಿಳೆಯರು ರಸ್ತೆಗೆ ಜಿಗಿದು ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ ದೃಶ್ಯಗಳು ಕಂಡುಬಂದಿವೆ. ಸ್ಥಳೀಯರು ರಸ್ತೆ ಮೇಲೆ ಹಾಸಿಗೆಗಳನ್ನು ಹಾಸಿ ಒಳಗಿದ್ದವರನ್ನು ರಕ್ಷಿಸಲು ಪ್ರಯತ್ನಿಸಿರುವುದು ಗಮನಾರ್ಹ.

ದಕ್ಷಿಣ ಜಿಲ್ಲೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಎಸ್‌ಡಿಎಂ ಜಿತೇಂದ್ರ ಕುಮಾರ್ ಅವರು, #Hotel “ಹೋಟೆಲ್ ನೆಲ ಮಹಡಿಯಲ್ಲಿ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿತ್ತು. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಮೇಲ್ಮಹಡಿಗಳಲ್ಲಿದ್ದ ಕೆಲವರು ಸ್ಥಳೀಯರು ಹಾಸಿದ ಹಾಸಿಗೆಗಳ ಮೇಲೆ ಜಿಗಿದಿದ್ದಾರೆ,” ಎಂದು ತಿಳಿಸಿದ್ದಾರೆ.ಸಂಕೀರ್ಣ ರಸ್ತೆಗಳ ನಡುವೆ ಇರುವ ಈ ಹೋಟೆಲ್‌ನಲ್ಲಿ ಸುಮಾರು 25 ಕೊಠಡಿಗಳು ಇದ್ದು, ಸುಮಾರು 40 ಮಂದಿ ವಾಸ್ತವ್ಯ ಹೊಂದಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ವೈದ್ಯಕೀಯ ಚಿಕಿತ್ಸೆಗೆ ಭಾರತಕ್ಕೆ ಬಂದ ವಿದೇಶಿ ನಾಗರಿಕರೇ ಹೆಚ್ಚಿನವರು ಎಂದು ತಿಳಿದುಬಂದಿದೆ.

ಘಟನೆ ಸಂಭವಿಸಿದ ವೇಳೆ ಬಹುತೇಕ ಅತಿಥಿಗಳು ನಿದ್ರೆಯಲ್ಲಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

Also Read>> ಹಾಂಗ್ ಕಾಂಗ್ ಓಪನ್‌ | ಸತ್ವಿಕ್–ಚಿರಾಗ್ ಕ್ವಾರ್ಟರ್ ಫೈನಲ್ ಪ್ರವೇಶ

ಭೀಕರ ಅಗ್ನಿ ಅವಘಡದಲ್ಲಿ ಸಾವಿನ ಸಂಖ್ಯೆ 21ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಪೊಲೀಸರು ದೃಢಪಡಿಸಿದ್ದಾರೆ. ಆರಂಭಿಕ ವರದಿಗಳಲ್ಲಿ ಕಡಿಮೆ ಸಂಖ್ಯೆಯ ಸಾವುಗಳ ಮಾಹಿತಿ ಇದ್ದರೂ, ನಂತರದ ವಿವರಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದೆ.

ಪಿಟಿಐ ವರದಿ ಪ್ರಕಾರ, ಮೃತರಲ್ಲಿ ಬಹುತೇಕರು ವಿದೇಶಿ ನಾಗರಿಕರಾಗಿದ್ದಾರೆ. ಹಲವಾರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಗ್ನಿಶಾಮಕ ಅಧಿಕಾರಿ ಎಕೆ ಮಾಲಿಕ್ ಮಾಹಿತಿ ನೀಡುವಂತೆ, ಬೆಳಿಗ್ಗೆ 8.50ಕ್ಕೆ ಅಗ್ನಿ ಅವಘಡದ ಕರೆ ಬಂದಿದ್ದು, ಆರಂಭದಲ್ಲಿ ಏಳು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ನಂತರ ಅಗತ್ಯವಿದ್ದ ಎಲ್ಲಾ ವಾಹನಗಳು ಸ್ಥಳಕ್ಕೆ ತಲುಪಿವೆ.“ನಮ್ಮ ತಂಡ ಸ್ಥಳಕ್ಕೆ ತಲುಪುತ್ತಿದ್ದಂತೆಯೇ ತಕ್ಷಣ ಕಾರ್ಯಾಚರಣೆ ಆರಂಭಿಸಿ ಕಟ್ಟಡದಿಂದ 37 ಮಂದಿಯನ್ನು ರಕ್ಷಿಸಿದೆ. ಇದು ಬೇಸ್‌ಮೆಂಟ್, ನೆಲ ಮಹಡಿ ಹಾಗೂ ಐದು ಮಹಡಿಗಳನ್ನು ಒಳಗೊಂಡ ಬಹುಮಹಡಿ ಕಟ್ಟಡವಾಗಿದೆ,” ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯರ ಮಾಹಿತಿಯ ಪ್ರಕಾರ, ಈ ಕಟ್ಟಡವು ಸಾಮಾನ್ಯ ವಸತಿ ಗೃಹವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಸಮೀಪದಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ಸಂಬಂಧಿಕರು ಇಲ್ಲಿ ತಂಗಿದ್ದರು ಎಂದು ತಿಳಿದುಬಂದಿದೆ. ವಿದೇಶಿ ನಾಗರಿಕರೂ ಇದರಲ್ಲಿ ಸೇರಿದ್ದಾರೆ.

ಅಗ್ನಿ ಅವಘಡವನ್ನು ತ್ವರಿತವಾಗಿ ನಿಯಂತ್ರಣಕ್ಕೆ ತಂದು ಕಟ್ಟಡವನ್ನು ಸಂಪೂರ್ಣವಾಗಿ ಖಾಲಿ ಮಾಡಲಾಗಿದೆ. ಬಳಿಕ ಸ್ಥಳವನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

https://kalpa.news/wp-content/uploads/2024/04/VID-20240426-WA0008.mp4

Tags: ‘ಫ್ಲರಿಶ್ ಸ್ಟೇfire accidentKannada News WebsiteLatest News KannadaNew DelhiSouth DelhiTerrible fire disasterದಕ್ಷಿಣ ದೆಹಲಿನವದೆಹಲಿಭೀಕರ ಅಗ್ನಿ ಅವಘಡ
Share233Tweet146Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಕೇತ್ ಕಟ್ಟಡ ಕುಸಿತದ ಬಳಿಕ ಎಚ್ಚರಿಕೆ | ಕಟ್ಟಡ ನಿಯಮ ಉಲ್ಲಂಘನೆಗೆ ಕಠಿಣ ಕ್ರಮಕ್ಕೆ ಎಲ್‌ಜಿ ಸೂಚನೆ

Next Post

Tragic Accident in Gujarat | Head-on Collision Between Two MSRTC Buses | 7 Burnt Alive

kalpa News

kalpa News

Next Post
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

Comments 1

  1. Pingback: Tragic Accident in Gujarat | Head-on Collision Between Two MSRTC Buses | 7 Burnt Alive » kalpa.news

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL