ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಸಾಬೀತಾಗುತ್ತಿದ್ದಂತೆ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಯುದ್ಧ ಆರಂಭಿಸಿದೆ.
ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, ಪಾಕಿಸ್ಥಾನಕ್ಕೆ ನೇರ ಎಚ್ಚರಿಕೆ ನೀಡಿದೆ.ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಸುದ್ದಿಗೋಷ್ಠಿ ನಡೆಸಿ ಈ ಕ್ರಮಗಳನ್ನು ಘೋಷಿಸಿದರು
ಏನೆಲ್ಲಾ ನಿರ್ಧಾರ ಕೈಗೊಳ್ಳಲಾಗಿದೆ?
- ಪಾಕ್ ಜೊತೆಗಿನ ಸಿಂಧೂ ನದಿ ನೀರು ಒಪ್ಪಂದ ಅಮಾನತು
- ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದಿಗೆ ನಿರ್ಧಾರ
- ಭಾರತದಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿ ಮುಚ್ಚುವುದು
- ಪಾಕ್ ಪ್ರಜೆಗಳಿಗೆ ವೀಸಾ ಕೊಡದಿರಲು ನಿರ್ಧಾರ
- ಪಾಕಿಸ್ತಾನಿ ರಾಜತಾಂತ್ರಿಕರು 48 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಗಡುವು
- ಅಟ್ಟಾರಿ ಗಡಿ ಚೆಕ್ಪೋಸ್ಟ್ ಮುಚ್ಚುವ ಪ್ರಮುಖ ನಿರ್ಧಾರ
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿಯವರ ತಮ್ಮ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಸಿದ್ದರು.
ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಕೇಂದ್ರ ನಾಯಕರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post