No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಮೋಸ್ಟ್ ಕ್ರಿಟಿಕಲ್ ಸರ್ಜರಿಯಲ್ಲಿ ಮಾಕ್ಸ್ ಆಸ್ಪತ್ರೆ ವೈದ್ಯರ ಯಶಸ್ಸು | ಉಳಿಯಿತು ಸಾವಿನಂಚಿನಲ್ಲಿದ್ದ ಮಹಿಳೆ ಪ್ರಾಣ

kalpa News by kalpa News
August 14, 2025
in Army
0
ಮೋಸ್ಟ್ ಕ್ರಿಟಿಕಲ್ ಸರ್ಜರಿಯಲ್ಲಿ ಮಾಕ್ಸ್ ಆಸ್ಪತ್ರೆ ವೈದ್ಯರ ಯಶಸ್ಸು | ಉಳಿಯಿತು ಸಾವಿನಂಚಿನಲ್ಲಿದ್ದ ಮಹಿಳೆ ಪ್ರಾಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಾ ಸಾವಿನ ಅಂಚಿನಲ್ಲಿದ್ದ ಮಹಿಳೆಗಾಗಿ ನಗರದ ದುರ್ಗಿಗುಡಿ ಮ್ಯಾಕ್ಸ್ ಆಸ್ಪತ್ರೆ ವೈದ್ಯರು ಸಮಯದ ಜೊತೆ ಸ್ಪರ್ಧೆ ಮಾಡಿ ಆಕೆಯನ್ನು ಸಾವಿನ ದವಡೆಯಿಂದ ಕಾಪಾಡಿದ್ದಾರೆ.

ಹೌದು… ಸುಮಾರು 35 ವಯಸ್ಸಿನ ಯುವತಿಗೆ ಅಪರೂಪ ಮತ್ತು ಗಂಭೀರವಾದ ಮಹಾಪಧಮನಿ ತುರ್ತುಚಿಕಿತ್ಸೆಯನ್ನು ಡಾ.ಸುಧೀರ್ ಭಟ್ ಮತ್ತು ತಂಡ ನಡೆಸಿದ್ದು, ಇದರಲ್ಲಿ ಯಶಸ್ವಿಯಾಗುವ ಮೂಲಕ ಅಪ್ರತಿಮ ಸಾಧನೆ ಮಾಡಿದ್ದಾರೆ.

ಈ ಕುರಿತಂತೆ ಮಾತನಾಡಿದ ಆಸ್ಪತ್ರೆಯ ಹೃದ್ರೋಗ ವಿಭಾಗದ ಡಾ. ಸುಧೀರ್ ಭಟ್, ಸುಮಾರು 35 ವರ್ಷದ ಮಹಿಳೆ ತೀವ್ರವಾದ ಹೊಟ್ಟೆ ನೋವಿನಿಂದ ಇದ್ದಕ್ಕಿದ್ದಂತೆ ಬಳಲ ತೊಡಗಿದ್ದರು. ಇದರಿಂದ ಆಕೆಗೆ ಸಹಿಸಲು ಅಸಾಧ್ಯವಾದ ನೋವು ಕಾಣಿಸಿಕೊಂಡಿದ್ದು, ಅವರನ್ನು ನಗರದ ದುರ್ಗಿಗುಡಿಯಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯ ತುರ್ತುಚಿಕಿತ್ಸಾ ಭಾಗಕ್ಕೆ ಕರೆ ತಂದರು ಎಂದರು.

ಉದರ ಶಸ್ತ್ರಚಿಕಿತ್ಸಾ ತಜ್ಞರು ಅವರನ್ನು ತಪಾಸಣೆ ಮಾಡಿದಾಗ ಆಘಾತಕಾರಿ ಸುದ್ದಿ ಕಾದಿತ್ತು. ಅವರ ದೇಹದ ಅತ್ಯಂತ ಪ್ರಮುಖ ರಕ್ತನಾಳ, ಊದಿಕೊಂಡು ಒಡೆದು ಹೋಗಿತ್ತು. ಅದರ ಪರಿಣಾಮವಾಗಿ ತೀವ್ರ ಸ್ವರೂಪದ ರಕ್ತಸ್ರಾವ ಅವರನ್ನು ಜೀವಾಪಾಯಕ್ಕೆ ದೂಡಿತ್ತು. ಪ್ರತಿಕ್ಷಣವೂ ಸಹ ಅಮೂಲ್ಯ. ನೋಡ ನೋಡುತ್ತಿದ್ದಂತೆಯೇ ರೋಗಿಯ ರಕ್ತದೊತ್ತಡ ಕಡಿಮೆಯಾಗುತ್ತಿತ್ತು. ಆ ಸಂದರ್ಭದಲ್ಲಿ ತುರ್ತು ಶಸ್ತ್ರಚಿಕಿತ್ಸೆಯ ನಿರ್ಧಾರವನ್ನು ಕೈಗೊಳ್ಳಲಾಯಿತು. ಪರಿಸ್ಥಿತಿಯ ಗಂಭೀರತೆಯನ್ನು ರೋಗಿಯ ಸಂಬಂಧಿಗಳಿಗೆ ವಿವರಿಸಿದಾಗ ಅವರೂ ಸಹ ತುರ್ತು ಶಸ್ತ್ರಚಿಕಿತ್ಸೆಗೆ ಸಮ್ಮತಿಸಿದರು.

ಕ್ಷಣಕ್ಷಣಕ್ಕೂ ರಕ್ತದೊತ್ತಡ ಕಡಿಮೆಯಾಗುತ್ತಿತ್ತು. ರಕ್ತಸ್ರಾವದ ಪರಿಣಾಮವಾಗಿ ಹಿಮೋಗ್ಲೋಬಿನ್ ಕಡಿಮೆಯಾಗಿತ್ತು. ತಕ್ಷಣವೇ ರಕ್ತಟ್ರಾನ್ಸೂಷನ್ ಮಾಡಿ ರಕ್ತದ ಒತ್ತಡವನ್ನು ಮೇಲೆ ತರುವ ಹಾಗೂ ಶಸ್ತ್ರಚಿಕಿತ್ಸೆಯವರೆಗೆ ಜೀವ ಉಳಿಸುವ ಹೊಣೆ ಅರಿವಳಿಕೆ ತಜ್ಞರಾದ ಡಾ. ಶ್ರೀನಿವಾಸ್ ಮತ್ತು ಡಾ.ಶಿವಕುಮಾರ್ ಅವರೊಟ್ಟಿಗೆ ಹೊತ್ತುಕೊಳ್ಳಲಾಯಿತು.

ಡಾ.ರಾಕೇಶ್, ಉದರ ಶಸ್ತ್ರಚಿಕಿತ್ಸಕರಾದ ಡಾ.ಪ್ರಸನ್ನ ಬಸವರಾಜ್ ಮತ್ತು ಯುರಾಲಜಿಸ್ಟ್ ಡಾ. ರಾಕೇಶ್ ಬಿಸಿಲೆಹಳ್ಳಿಯವರು ಸಹ ಈ ಸಂಕೀರ್ಣ ಶಸ್ತ್ರಚಿಕಿತ್ಸೆಯ ಭಾಗವಾಗಿದ್ದು ಯಶಸ್ಸಿಗೆ ಕಾರಣರಾದರು. ಸುಮಾರು 5 ಗಂಟೆಯ ಶಸ್ತ್ರಚಿಕಿತ್ಸೆಯ ನಂತರ ರೋಗಿ ಅಪಾಯದಿಂದ ಪಾರಾಗಿ ಗುಣಮುಖರಾಗುವತ್ತ ಹೊರಳಿದರು. ಇಲ್ಲಿಯವರೆಗೆ ಹೋರಾಟದ ಮೊದಲ ಹಾಗೂ ಅತಿಮುಖ್ಯ ಮಜಲು ದಾಟಿಯಾಗಿತ್ತು ಎಂದರು.

ಅನಂತರ ರೋಗಿಗೆ ಶಸ್ತ್ರಚಿಕಿತ್ಸೆಯ ನಂತರದ ತೀವ್ರ ನಿಗಾ ಅವಶ್ಯಕವಿತ್ತು. ಇನ್ಟೆನ್ಸಿವ್ ಕೇರ್ ತಜ್ಞರ ಉಸ್ತುವಾರಿಯಲ್ಲಿ ಅಂತಿಮವಾಗಿ ಈ ಘಟ್ಟವನ್ನೂ ಸಹ ದಾಟಿ ರೋಗಿ ನಿಶ್ಚಿತ ಮೃತ್ಯುನಿಂದ ಪಾರಾಗಿ ಗುಣಮುಖರಾದರು.

ಡಾ. ನಾಗೇಂದ್ರ ಅವರ ನೇತೃತ್ವದ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಎಲ್ಲಾ ರೀತಿಯ ಟೆರಿಟರಿ ಚಿಕಿತ್ಸೆಗಳಲ್ಲಿ ಕಳೆದ ಹತ್ತು ವರ್ಷಗಳಿಂದ ತೊಡಗಿಕೊಂಡಿರುವುದು ಮಲೆನಾಡಿಗೆ ಹೆಮ್ಮೆಯ ಸಂಗತಿಯಾಗಿದೆ.ಶಸ್ತ್ರಚಿಕಿತ್ಸೆಗೊಳಗಾಗಿ ಗುಣಮುಖರಾದ ಶಿಕ್ಷಕಿ ಶ್ರೀಲಕ್ಷ್ಮಿ ಮಾತನಾಡಿ, ತೀವ್ರತರವಾದ ಹೊಟ್ಟೆನೋವಿನಿಂದಾಗಿ ನಾನು ಬದುಕುತ್ತೇನೆಂಬ ವಿಶ್ವಾಸವನ್ನು ಕಳೆದುಕೊಂಡಿದ್ದೆ. ತಂದೆಯನ್ನು ಕಳೆದುಕೊಂಡಿದ್ದ ನನನ ಮಗ ತಾಯಿಯನ್ನೂ ಕಳೆದುಕೊಳ್ಳುತ್ತಾನಾ ಎಂದು ಹೆದರಿದೆ. ಆದರೆ, ನಾನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿ ಡಾ. ಸುಧೀಂದ್ರಭಟ್ ಅವರ ತಂಡ ತೀವ್ರ ತಪಾಸಣೆ ನಡೆಸಿ ಕ್ಲಿಷ್ಟಕರವಾಗಿ ಶಸ್ತ್ರಚಿಕಿತ್ಸೆ ಮಾಡಿದ ಪರಿಣಾಮ ಸಾವಿನ ಅಂಚಿನಲ್ಲಿದ್ದ ನಾನು ಪ್ರಾಣ ಉಳಿದಿದೆ. ನನ್ನ ಪ್ರಾಣ ಉಳಿಸಿದ ವೈದ್ಯರ ತಂಡ ಹಾಗೂ ಸಿಬ್ಬಂದಿಗಳಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕಿ ಲತಾ ನಾಗೇಂದ್ರ, ವೈದ್ಯರಾದ ಡಾ. ವಿನಯಾ ಶ್ರೀನಿವಾಸ್, ಅರವಳಿಕೆ ತಜ್ಞ ಡಾ. ಶ್ರೀನಿವಾಸ್, ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞ ಡಾ. ರಾಕೇಶ್, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಕೌಶಿಕ್ ಉಪಸ್ಥಿತರಿದ್ದರು.

ಏನಿದು ಗಂಭೀರ ಆರೋಗ್ಯ ಸಮಸ್ಯೆ?
ಅಯೋರ್ಟ ಅಥವಾ ಮಹಾ ಅಪಧಮನಿಯು ಹೃದಯದಿಂದ ರಕ್ತವನ್ನು ದೇಹದ ಎಲ್ಲಾ ಭಾಗಗಳಿಗೂ ಸರಬರಾಜು ಮಾಡುವ ರಕ್ತನಾಳ. ದೇಹದ ಎಲ್ಲಾ ನಾಳಗಳಲ್ಲಿ ಇದು ಅತ್ಯಂತ ಪ್ರಮುಖವದದ್ದು.

ಕೆಲವು ಸಂದರ್ಭಗಳಲ್ಲಿ ಈ ರಕ್ತನಾಳದ ಗೋಡೆ ದುರ್ಬಲವಗುತ್ತದೆ. ಅಂತಹ ಸಂದರ್ಭಗಳಲ್ಲಿ ರಕ್ತ ಸಹಜವಾದ ರಕ್ತದ ಒತ್ತಡದಲ್ಲಿ ಕೂಡ ಅಯೋರ್ಟ ರಕ್ತನಾಳದ ಒಂದು ಭಾಗ ಊದಿಕೊಳ್ಳುತ್ತದೆ. ಹೀಗೆ ರಕ್ತನಾಳದ ಗೋಡೆ ಬಲೂನಿನಂತೆ ಹಿಗ್ಗುತ್ತ ಹೋಗಿ ಕೊನೆಯಲ್ಲಿ ಒಡೆದು ಹೋಗಬಹುದು.

ಸಾಧಾರಣವಾಗಿ ಅಂತಹ ಘಟ್ಟವನ್ನು ಮುಟ್ಟುವ ಮೊದಲು ರೋಗ ಪತ್ತೆಯಾದರೆ ಅದನ್ನು ಶಸ್ತ್ರಚಿಕಿತ್ಸೆಯಿಂದ ಗುಣಮಾಡಬಹುದು. ಈ ಸಂದರ್ಭದಲ್ಲಿ ರೋಗಿಗೆ ಯಾವುದೇ ಕಾಯಿಲೆಯ ಲಕ್ಷಣ ಗಮನಕ್ಕೆ ಬರದ ಕಾರಣ ಕೊನೆಯ ಹಂತದಲ್ಲಿ ತುರ್ತು ಶಸ್ತ್ರಚಿಕಿತ್ಸೆ ಅವಶ್ಯವಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

                                               

Tags: Abdominal surgeonAortaBlood vesselHealth NewsHealth UpdatesKannada News WebsiteLatest News KannadaMax HospitalShimogaShivamoggaShivamogga NewsSurgeryಉದರ ಶಸ್ತ್ರಚಿಕಿತ್ಸಾ ತಜ್ಞರುಮಹಾಪಧಮನಿಮ್ಯಾಕ್ಸ್‌ ಆಸ್ಪತ್ರೆರಕ್ತನಾಳಶಸ್ತ್ರಚಿಕಿತ್ಸೆಶಿವಮೊಗ್ಗಹೊಟ್ಟೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಸ್ತಿ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್‌ ಪ್ರೌಢಶಾಲೆಯ ಸುದೀಕ್ಷಾ, ದ್ರುವೀತ್ ರಾಜ್ಯಮಟ್ಟಕ್ಕೆ ಆಯ್ಕೆ

Next Post

ದರ್ಶನ್ ಬೇಲ್ ರದ್ದು ವಿಚಾರ ತಿಳಿದು ಶಾಕ್ ಆಯ್ತು : ಡಿಸಿಎಂ ಶಿವಕುಮಾರ್ ಏನೆಲ್ಲಾ ಹೇಳಿದರು?

kalpa News

kalpa News

Next Post
ದರ್ಶನ್ ಬೇಲ್ ರದ್ದು ವಿಚಾರ ತಿಳಿದು ಶಾಕ್ ಆಯ್ತು : ಡಿಸಿಎಂ ಶಿವಕುಮಾರ್ ಏನೆಲ್ಲಾ ಹೇಳಿದರು?

ದರ್ಶನ್ ಬೇಲ್ ರದ್ದು ವಿಚಾರ ತಿಳಿದು ಶಾಕ್ ಆಯ್ತು : ಡಿಸಿಎಂ ಶಿವಕುಮಾರ್ ಏನೆಲ್ಲಾ ಹೇಳಿದರು?

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL