No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮೇ 9-12: ಉಡುಪಿ ಪಲಿಮಾರು ಮಠದ ಉತ್ತರಾಧಿಕಾರಿ ಸನ್ಯಾಸ ಸ್ವೀಕಾರ, ಪೀಠಾರೋಹಣ

kalpa News by kalpa News
March 27, 2019
in Small Bytes, ಉಡುಪಿ
0
ಮೇ 9-12: ಉಡುಪಿ ಪಲಿಮಾರು ಮಠದ ಉತ್ತರಾಧಿಕಾರಿ ಸನ್ಯಾಸ ಸ್ವೀಕಾರ, ಪೀಠಾರೋಹಣ
Share on FacebookShare on TwitterShare on WhatsApp

ಉಡುಪಿ: ಶ್ರೀ ಕೃಷ್ಣ ಮಠದ ಪರ್ಯಾಯ ಪಲಿಮಾರು ಮಠದ ಶ್ರೀಶ್ರೀವಿದ್ಯಾಧೀಶ ತೀರ್ಥ ಶ್ರೀಪಾದಂಗಳವರು ತಮ್ಮ ಉತ್ತರಾಧಿಕಾರಿಗಳನ್ನಾಗಿ ಶೈಲೇಶ್ ಉಪಾಧ್ಯಾಯ ಎಂಬ ವಟುವನ್ನು ಆಯ್ಕೆ ಮಾಡಿದ್ದು, ಇವರ ಸನ್ಯಾಸ ಸ್ವೀಕಾರ ಹಾಗೂ ಪೀಠಾರೋಹಣ ಕಾರ್ಯಕ್ರಮ ಮೇ 9ರಿಂದ 12ರವರೆಗೂ ನಡೆಯಲಿದೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಲಿಮಾರು ಶ್ರೀಗಳು, ನಮಗೆ ಗುರುಗಳು ನೀಡಿದ ಭಾಗ್ಯ ಎರಡು ಒಂದು ಸನ್ಯಾಸ ಮತ್ತೊಂದು ಶ್ರೀ ಕೃಷ್ಣ ದೇವರ, ಶ್ರೀರಾಮ ದೇವರ ಪೂಜೆಯೊಂದಿಗೆ ಪಾಠ ಪ್ರವಚನ. ಇದು ನಿರಂತರವಾಗಿ ಬೆಳೆಯ ಬೇಕು ಮತ್ತು ಬೆಳಸಬೇಕು. ಸನ್ಯಾಸ ಎಂದರೆ ಕೇವಲ ಕಾಷಾಯ ವಸ್ತ್ರ ಬದಲಾವಣೆಯಲ್ಲ ಮಾನಸಿಕವಾದ ಪಕ್ವಾತೆಯೊಂದಿಗೆ ಪೂರ್ಣ ವಿರಕ್ತಿ ಭಾವ.ಅದು ಇದ್ದಲ್ಲಿ ಮಾತ್ರ ಸನ್ಯಾಸಕ್ಕೆ ಅರ್ಥವಿದೆ. ಇಂತಹ ಸನ್ಯಾಸದಿಂದಲೇ ಭಗವಂತನನ್ನು ಒಲಿಸಿಕೊಳ್ಳಲು ಸಾಧ್ಯ ಎಂದರು.

ಈ ನಿಟ್ಟಿನಲ್ಲಿ ನಮ್ಮ ಗುರುಗಳು ಹಾಗೂ ಪೂರ್ವಾಚಾರ್ಯರು ನೀಡಿದ ಈ ಜ್ಞಾನ ಸಂತತಿಯನ್ನು ಬೆಳೆಸುವ ದೃಷ್ಟಿಯಿಂದ ಯೋಗ್ಯ ವಟುವಿನ ನಿರೀಕ್ಷೆಯಲ್ಲಿದ್ದಾಗ ಶ್ರೀ ರಾಮಕೃಷ್ಣ ದೇವರ, ಅನಂತಾಸನ ದೇವರ ಅನುಗ್ರಹದಿಂದ ಶ್ರೀಮುಖ್ಯಪ್ರಾಣ ದೇವರ ಶ್ರೀಮಧ್ವಾಚಾರ್ಯರ ದಯೆಯಿಂದ ಪಲಿಮಾರಿನ ನಮ್ಮ ಯೋಗದೀಪಿಕಾ ವಿದ್ಯಾಪೀಠದಲ್ಲಿ ಅಧ್ಯಯನ ಮಾಡುತ್ತಿರುವ ವಟು ದೊರಕಿದ್ದಾನೆ ಎಂದರು.

ಮೊದಲಿನಿಂದಲೂ ಅಧ್ಯಾತ್ಮಿಕ ಸಾಧನೆಯಲ್ಲಿ ನಿಷ್ಠೆ ಶುದ್ಧ ಸದಾಚಾರದಿಂದ ಕೂಡಿದ ಹಾಗೂ ವಿಶೇಷವಾಗಿ ಸಹಜವಾಗಿ ಸನ್ಯಾಸದ ಬಗ್ಗೆ ಆಸಕ್ತಿಯಿದ್ದ ಶೈಲೇಶ್ ಉಪಾಧ್ಯಾಯ ಎಂಬ ವಿದ್ಯಾರ್ಥಿಯನ್ನು ಗುರುತಿಸಿ ಅವನ ತಂದೆ ತಾಯಿಗಳಾದ ಕೊಡವೂರು ಕಂಬ್ಲಕಟ್ಟ ನಿವಾಸಿಗಳಾದ ವೇದಮೂರ್ತಿ ಸುರೇಂದ್ರ ಉಪಾಧ್ಯಾಯ ಹಾಗೂ ಲಕ್ಷ್ಮೀ ಸುರೇಂದ್ರ ಉಪಾಧ್ಯಾಯ ದಂಪತಿಗಳನ್ನು ಸಂಪರ್ಕಿಸಿ, ಸಿದ್ಧ ಜ್ಯೋತಿಷಿಗಳ ಬಳಿ ವಟುವಿನ ಜಾತಕದ ಚಿಂತನೆಯನ್ನು ನಡೆಸಿ ಅವರ ಕುಟುಂಬದ ಸದಸ್ಯರ ಪೂರ್ಣ ಸಮ್ಮತಿಯೊಂದಿಗೆ ಶೈಲೇಶ ಉಪಾಧ್ಯಾಯ ಎಂಬ ವಟುವನ್ನು ನಮ್ಮ ಉತ್ತರಾಧಿಕಾರಿಯನ್ನಾಗಿ ಮಾಡಲು ನಿರ್ಣಯಿಸಿದ್ದೇವೆ ಎಂದರು.

ಸನ್ಯಾಸ ಆಶ್ರಮವನ್ನು ಬಲವಂತವಾಗಿ ಕೊಡಲಾಗದು. ಇದಕ್ಕೆ ಸಂನ್ಯಾಸದ ಆಸಕ್ತಿಯೂ ಇರಬೇಕು. ಎಲ್ಲ ಶಾಸ್ತ್ರೋಕ್ತ ಅಂಶಗಳ ಬೆಂಬಲಗಳೂ ಇರಬೇಕು. ವಟುವಿನ ತಾಯ್ತಂದೆಯರ ಒಪ್ಪಿಗೆಯೂ ಇರಬೇಕು ಎಂದರು.

ನಾವು ವಟುವಿನ ಕುಂಡಲಿಯನ್ನು ಮೂರು ಜನ ಬೇರೆ ಬೇರೆ ಸುಪ್ರಸಿದ್ಧ ಜ್ಯೋತಿಷಿಗಳಿಗೆ ಕೊಟ್ಟಿದ್ದೆವು. ಈ ವಿಷಯವು ಆ ಜ್ಯೋತಿಷಿಗಳಿಗೆ ಪರಸ್ಪರರಿಗೆ ತಿಳಿದಿದ್ದಿಲ್ಲ. ಆದರೆ ಕೊನೆಯಲ್ಲಿ ಬಂದ ಫಲಿತಾಂಶದಲ್ಲಿ ಎಲ್ಲರ ಅಭಿಪ್ರಾಯವು ಒಂದೇ ಆಗಿತ್ತು. ಶ್ರೀಮಠಕ್ಕೆ ಉತ್ತರಾಧಿಕಾರಿಗಳಾಗಿ ಇವರ ನೇಮಕವು ಉತ್ತಮ ನಿರ್ಧಾರವಾಗಲಿದೆ ಎಂಬುದೇ ಆ ಅಭಿಪ್ರಾಯವಾಗಿತ್ತು. ನಾವು ಮಾತ್ರವಲ್ಲ ವಟುವಿನ ತಂದೆ ತಾಯ್ಗಳು ಕೇರಳದ ಪ್ರಕಾಂಡ ಜ್ಯೋತಿಷಿಗಳಲ್ಲಿ ಇದನ್ನು ವಿಚಾರಿಸಿದಾಗ ಅಲ್ಲಿಯೂ ಕೂಡ ಧನಾತ್ಮಕ ಫಲಿತಾಂಶವೇ ದೊರಕಿದೆ ಎಂದರು.

ವಟುವಿಗೂ ಸನ್ಯಾಸದಲ್ಲಿ ಆಸಕ್ತಿಯಿರುವುದು ಗಮನಾರ್ಹ. ವಟುವು ಈಗಾಗಲೇ ಯೋಗದೀಪಿಕಾ ವಿದ್ಯಾಪೀಠದಲ್ಲಿ ಶಾಸ್ತ್ರಾಧ್ಯಯನವನ್ನು ಮಾಡುತ್ತಿದ್ದಾನೆ. ಮುಂದಿನ ಅಧ್ಯಯನವನ್ನು ನಾವೇ ಸ್ವತಃ ಮಾಡಿಸಲಿದ್ದೇವೆ. ನಿಮ್ಮೆಲ್ಲ ಪ್ರಾರ್ಥನೆ ಮತ್ತು ಹಾರೈಕೆಗಳು ವಟುವಿಗೆ ಇರಲಿ ಎಂದರು.

ಮಾರ್ಚ್ 26ರಂದು ಶೈಲೇಶ ಉಪಾಧ್ಯಾಯರ ಕುಟುಂಬದ ಹಿರಿಯರೆಲ್ಲರೂ ಶ್ರೀಗಳವರಲ್ಲಿ ಬಂದು, ತಮ್ಮ ಕುಟುಂಬದ ಕುಡಿಯ ಸನ್ಯಾಸಾಶ್ರಮ ಸ್ವೀಕಾರದ ನಿರ್ಧಾರಕ್ಕೆ ತಮ್ಮ ಒಪ್ಪಿಗೆಯನ್ನು ಸೂಚಿಸಿ, ಅವನನ್ನು ಶ್ರೀಕೃಷ್ಣದೇವರ ಎದುರು ಶ್ರೀಸಂಸ್ಥಾನಕ್ಕೆ ಒಪ್ಪಿಸಿದರು. ಈ ಹಿನ್ನೆಲೆಯಲ್ಲಿ ಆಶ್ರಮ ಸ್ವೀಕಾರ ದಿನಾಂಕಗಳನ್ನು ನಿರ್ಧರಿಸಲಾಗಿದೆ ಎಂದರು.

ಆಶ್ರಮ ಸ್ವೀಕಾರ ಪ್ರಕ್ರಿಯೆ ದಿನಾಂಕಗಳು ಹೀಗಿವೆ:
  • ಮೇ 5: ಆಶ್ರಮ ಸ್ವೀಕಾರ ಪ್ರಕ್ರಿಯೆ ಪ್ರಾರಂಭ, ಆ ದಿನ ಪ್ರಾಯಶ್ಚಿತ್ತಗಳು, ವಿರಜಾ ಹೋಮ ಮತ್ತು ಆತ್ಮಶ್ರಾದ್ಧಗಳು ನಡೆಯಲಿವೆ
  • ಮೇ 10: ವಟುವು ಪ್ರಣವ ಮಂತ್ರ ದೀಕ್ಷಾ ಪುರಸ್ಸರವಾಗಿ ಸಂನ್ಯಾಸ ಆಶ್ರಮವನ್ನು ಸ್ವೀಕರಿಸುತ್ತಾರೆ. ಈ ಕಾರ್ಯಕ್ರಮವು ಬ್ರಾಹ್ಮೀ ಮುಹೂರ್ತದಲ್ಲಿ ನಡೆಯಲಿದೆ
  • ಮೇ 11: ಅಷ್ಟ ಮಹಾಮಂತ್ರಗಳ ಉಪದೇಶವು ನಡೆಯಲಿದೆ
  • ಮೇ 12: ಶ್ರೀಹೃಷೀಕೇಶತೀರ್ಥ ಪೀಠವಾದ ಶ್ರೀಪಲಿಮಾರು ಮಠದ ಪೀಠಕ್ಕೆ ಉತ್ತರಾಧಿಕಾರಿಗಳಾಗಿ ಪಟ್ಟಾಭಿಷೇಕ ನಡೆಯಲಿದೆ.
  • ಈ ಎಲ್ಲ ಕಾರ್ಯಕ್ರಮಗಳು ಸರ್ವಜ್ಞ ಸಿಂಹಾಸನದಲ್ಲಿಯೇ ನಡೆಯಲಿವೆ.
Tags: Palimaru MuttSri Vidyadheesha Teertha SripadarusuccessorUdupiಆಶ್ರಮ ಸ್ವೀಕಾರಉಡುಪಿ ಪಲಿಮಾರು ಮಠಪರ್ಯಾಯ ಪಲಿಮಾರು ಮಠಶೈಲೇಶ ಉಪಾಧ್ಯಾಯಶ್ರೀ ಕೃಷ್ಣ ಮಠಶ್ರೀಕೃಷ್ಣಶ್ರೀಶ್ರೀವಿದ್ಯಾಧೀಶ ತೀರ್ಥ ಶ್ರೀಪಾದಂಗಳವರುಸನ್ಯಾಸ ಸ್ವೀಕಾರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊನ್ನಾವರ: ಕೈಯಲ್ಲೇ ಕಿತ್ತು ಬರುತ್ತಿದೆ ‘ನಗರೆ ಕ್ರಾಸ್’ ಡಾಂಬಾರ್ ರಸ್ತೆ, ಸ್ಥಳೀಯರ ಛೀಮಾರಿ

Next Post

ಉಡುಪಿ ಪಲಿಮಾರು ಮಠದ ಉತ್ತರಾಧಿಕಾರಿ ಶೈಲೇಶ್ ಉಪಾಧ್ಯಾಯರ ಬಗ್ಗೆ ತಿಳಿದುಕೊಳ್ಳಿ

kalpa News

kalpa News

Next Post
ಉಡುಪಿ ಪಲಿಮಾರು ಮಠದ ಉತ್ತರಾಧಿಕಾರಿ ಶೈಲೇಶ್ ಉಪಾಧ್ಯಾಯರ ಬಗ್ಗೆ ತಿಳಿದುಕೊಳ್ಳಿ

ಉಡುಪಿ ಪಲಿಮಾರು ಮಠದ ಉತ್ತರಾಧಿಕಾರಿ ಶೈಲೇಶ್ ಉಪಾಧ್ಯಾಯರ ಬಗ್ಗೆ ತಿಳಿದುಕೊಳ್ಳಿ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL