No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನೀವು ಅಸಹಾಯಕರೆಂಬ ಭಾವನೆ ದೊಡ್ಡ ತಪ್ಪು | ಸ್ವಾಮಿ ವಿವೇಕಾನಂದರ ಚಿಂತನೆ ಆದರ್ಶವಾಗಲಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 12, 2026
in Special Articles
0
ನೀವು ಅಸಹಾಯಕರೆಂಬ ಭಾವನೆ ದೊಡ್ಡ ತಪ್ಪು | ಸ್ವಾಮಿ ವಿವೇಕಾನಂದರ ಚಿಂತನೆ ಆದರ್ಶವಾಗಲಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |ಮತ್ತೆ ಬಂದಿದೆ ಸ್ವಾಮಿ ವಿವೇಕಾನಂದರ ಜಯಂತಿ (12 ಜನವರಿ). ಪ್ರತಿಯೊಬ್ಬರ ಆತ್ಮಕ್ಕೂ ಚೇತನ ತುಂಬಬಲ್ಲ, ಪ್ರತಿಯೊಬ್ಬರ ಬದುಕಿಗೂ ಬೆಳಕು ನೀಡಬಲ್ಲ ಅದ್ಭುತ ವ್ಯಕ್ತಿತ್ವ ಅವರದು. ಕೇವಲ 39 ವರುಷ (12.01.1863 – 04.07.1902) ಬಾಳಿದ ಅವರ ಬದುಕಿನ ಸಾಧನೆಗಳು ಅಮೋಘ.

ಮಾನವ ಜನ್ಮ ದೊಡ್ಡದು ಎಂದು ನಂಬಿದ್ದ ಅವರು ಮಾನವ ಜನಾಂಗದ ಒಳಿತಿಗಾಗಿ ತಮ್ಮ ಬದುಕನ್ನೇ ಸಮರ್ಪಿಸಿದವರು. ರಾಷ್ಟ್ರದ ಹಾಗೂ ವ್ಯಕ್ತಿಗಳ ಪ್ರಗತಿ ಸಾಧನೆಗಾಗಿ 1897ರಲ್ಲಿ ರಾಮಕೃಷ್ಣ ಮಠವನ್ನು ಸ್ಥಾಪಿಸಿ, ಧ್ಯೇಯಬದ್ಧ ಸನ್ಯಾಸಿಗಳ ತಂಡ ಕಟ್ಟಿ, ಮುನ್ನಡೆಸಿದ್ದು ಅವರ ದೂರಾಲೋಚನೆಯ ಉಜ್ವಲ ಉದಾಹರಣೆ.

ಸ್ವಾಮಿ ವಿವೇಕಾನಂದರ ಬಗ್ಗೆ ಉನ್ನತ ಚಿಂತನೆಯ ವ್ಯಕ್ತಿಗಳೂ, ರಾಷ್ಟ್ರ ನೇತಾರರೂ ವ್ಯಕ್ತ ಪಡಿಸಿರುವ ಅಭಿಪ್ರಾಯಗಳು, ಅವರ ಆದರ್ಶ ವ್ಯಕ್ತಿತ್ವವನ್ನು ತೆರೆದಿಡುತ್ತವೆ:

“ಸ್ವಾಮಿ ವಿವೇಕಾನಂದರ ಪವಿತ್ರ ಸ್ಮರಣೆಗೆ ನನ್ನ ನಮನ ಮತ್ತು ಗೌರವ ಅರ್ಪಿಸಲು ನಾನು ಇಲ್ಲಿಗೆ (ಬೇಲೂರು ಮಠ, ಕೊಲ್ಕತಾ) ಅವರ ಜನ್ಮದಿನದ ಆಚರಣೆಯ ಸಂದರ್ಭದಲ್ಲಿ ಬಂದಿದ್ದೇನೆ. ಅವರ ಬರವಣಿಗೆಗಳನ್ನು ನಾನು ಆಮೂಲಾಗ್ರವಾಗಿ ಓದಿಕೊಂಡಿದ್ದು, ಹಾಗೆ ಓದಿಕೊಂಡ ನಂತರ ನನ್ನ ದೇಶದ ಬಗ್ಗೆ ನನಗಿದ್ದ ಪ್ರೀತಿ ಸಾವಿರಪಟ್ಟು ಹೆಚ್ಚಾಗಿದೆ. ಇಲ್ಲಿರುವ ಯುವಜನರೇ, ಸ್ವಾಮಿ ವಿವೇಕಾನಂದರು ಜೀವಿಸಿದ್ದ ಮತ್ತು ತೀರಿಕೊಂಡ ಈ ಸ್ಥಳದ ಚೈತನ್ಯದ ಒಂದಂಶವನ್ನಾದರೂ ನಿಮ್ಮದಾಗಿಸಿಕೊಳ್ಳದೆ ಇಲ್ಲಿಂದ ಖಾಲಿ ಕೈಗಳಲ್ಲಿ ಹೊರಟು ಹೋಗಬೇಡಿ.”
-ಮಹಾತ್ಮಾ ಗಾಂಧಿ

“ಭಾವಪರವಶತೆಗೆ ಒಳಗಾಗದೇ ನಾನು ಸ್ವಾಮಿ ವಿವೇಕಾನಂದರ ಬಗ್ಗೆ ಬರೆಯಲಾರೆ. … ಅವರ ವ್ಯಕ್ತಿತ್ವ ಸಮೃದ್ಧ, ಅಗಾಧ ಮತ್ತು ಸಂಕೀರ್ಣ. ಈ ವ್ಯಕ್ತಿತ್ವವೇ – ಅವರು ಕಲಿಸಿದ್ದು ಮತ್ತು ಬರೆದದ್ದರ ಹೊರತಾಗಿ – ತನ್ನ ದೇಶಬಾಂಧವರ ಮೇಲೆ ಅವರು ಬೀರಿದ ಅದ್ಭುತ ಪ್ರಭಾವಕ್ಕೆ ಕಾರಣ. ಅವರದು ಪರಿಪೂರ್ಣ ಗಂಡೆದೆಯ ವ್ಯಕ್ತಿತ್ವ ಮತ್ತು ದೇಹದ ಕಣಕಣದಲ್ಲಿಯೂ ಅವರೊಬ್ಬ ಹೋರಾಟಗಾರ. ದೇಶಬಾಂಧವರ ಉತ್ಥಾನಕ್ಕಾಗಿ ಅವರು ವೇದಾಂತದ ಪ್ರಾಯೋಗಿಕ ಅರ್ಥವಿವರಣೆ ನೀಡಿದರು … ನಾನು ಅವರ ಬಗ್ಗೆ ಗಂಟೆಗಟ್ಟಲೆ ಮಾತನಾಡ ಬಲ್ಲೆನಾದರೂ ಆ ಶ್ರೇಷ್ಠ ವ್ಯಕ್ತಿಯ ಬಗ್ಗೆ ಕಿಂಚಿತ್ತೂ ತಿಳಿಸಲಿಕ್ಕಾಗದೆ ಸೋಲುತ್ತೇನೆ. ಯಾಕೆಂದರೆ ಅವರು ಅಂತಹ ಸಮೃದ್ಧ, ಅಗಾಧ ಮತ್ತು ಸಂಕೀರ್ಣ ವ್ಯಕ್ತಿ. ಅವರು ಸತ್ಯದೊಂದಿಗೆ ನೇರವಾಗಿ ಭಾವೈಕ್ಯರಾದ ಅತ್ಯುನ್ನತ ಅಧ್ಯಾತ್ಮಿಕ ಮಟ್ಟದ ಯೋಗಿ; ತನ್ನ ರಾಷ್ಟ್ರದ ಮತ್ತು ಮಾನವ ಜನಾಂಗದ ನೈತಿಕ ಮತ್ತು ಅಧ್ಯಾತ್ಮಿಕ ಉತ್ಥಾನಕ್ಕಾಗಿ ತನ್ನ ಸಂಪೂರ್ಣ ಬದುಕನ್ನು ಸಮರ್ಪಿಸಿದವರು ಎಂದು ನಾನು ಅವರನ್ನು ಚಿತ್ರಿಸುತ್ತೇನೆ. ಈಗ ಅವರು ಜೀವಂತವಾಗಿ ಇದ್ದಿದ್ದರೆ, ನಾನು ಅವರ ಚರಣಗಳಿಗೆ ವಂದಿಸುತ್ತಿದ್ದೆ. ಸ್ವಾಮಿ ವಿವೇಕಾನಂದರು ಪೂರ್ವ ಮತ್ತು ಪಶ್ಚಿಮಗಳನ್ನು, ಧರ್ಮ ಮತ್ತು ವಿಜ್ನಾನಗಳನ್ನು, ಪ್ರಾಚೀನ ಮತ್ತು ವರ್ತಮಾನಗಳನ್ನು ಸಾಮರಸ್ಯಗೊಳಿಸಿದವರು. ಆದ್ದರಿಂದಲೇ ಅವರು ಗ್ರೇಟ್. ಅವರು ನೀಡಿದ ಜ್ನಾನದಿಂದಾಗಿ ನಮ್ಮ ದೇಶಬಾಂಧವರು ಅಪೂರ್ವ ಆತ್ಮಗೌರವ, ಆತ್ಮವಿಶ್ವಾಸ ಮತ್ತು ಆತ್ಮಾಭಿಮಾನ ಗಳಿಸಿದ್ದಾರೆ.”
-ಸುಭಾಷ್ ಚಂದ್ರ ಬೋಸ್

“ಸ್ವಾಮಿ ವಿವೇಕಾನಂದರು ನಮ್ಮ ತಾಕತ್ತಿನ ಬಗ್ಗೆ ನಮ್ಮಲ್ಲಿ ಅರಿವು ಮೂಡಿಸಿದರು ಮಾತ್ರವಲ್ಲ, ನಮ್ಮ ದೋಷಗಳು ಮತ್ತು ದೌರ್ಬಲ್ಯಗಳನ್ನೂ ತೋರಿಸಿಕೊಟ್ಟರು. … ಭಾರತವು ಆ ಸಮಯದಲ್ಲಿ ತಮಸ್ಸಿನಲ್ಲಿ ಮುಳುಗಿತ್ತು ಹಾಗೂ ದೌರ್ಬಲ್ಯಗಳನ್ನು ನಿರ್ಮೋಹ ಮತ್ತು ನೆಮ್ಮದಿಯೆಂದು ತಪ್ಪಾಗಿ ತಿಳಿದಿತ್ತು. ಅದಕ್ಕಾಗಿಯೇ ವಿವೇಕಾನಂದರು ಆಲಸ್ಯ ಮತ್ತು ಮೈಗಳ್ಳತನಕ್ಕಿಂತ ಅಪರಾಧಿ ಪ್ರವೃತ್ತಿಗೆ ಪ್ರಾಶಸ್ತ್ಯ ನೀಡಬಹುದೆಂದು ಹೇಳಬೇಕಾಯಿತು. ತಾವು ಇದ್ದ ತಾಮಸಿಕ ಸ್ಥಿತಿಯ ಬಗ್ಗೆ, ಅದರಿಂದ ಬಿಡುಗಡೆ ಪಡೆಯಬೇಕಾದ ಅವಶ್ಯಕತೆಯ ಬಗ್ಗೆ ಮತ್ತು ಎದೆ ಸೆಟೆದು ನಿಲ್ಲುವುದರ ಬಗ್ಗೆ ಅವರು ಜನರಲ್ಲಿ ಅರಿವು ಮೂಡಿಸಿದರು – ಇವೆಲ್ಲವೂ ಜನರು ತಮ್ಮ ಜೀವನದಲ್ಲಿ ವೇದಾಂತದ ಶಕ್ತಿಯನ್ನು ಅರ್ಥ ಮಾಡಿಕೊಳ್ಳಲಿ ಎಂಬ ಉದ್ದೇಶ ಸಾಧನೆಗಾಗಿ. ಇತರರೊಂದಿಗಿನ ದೈನಂದಿನ ಸಂಬಂಧಗಳಲ್ಲಿ ಮತ್ತು ನಮ್ಮ ಚಟುವಟಿಕೆಗಳಲ್ಲಿ ಸ್ಥಾನ ಪಡೆಯದ ತತ್ವಜ್ನಾನವು ನಿಷ್ಪ್ರಯೋಜಕ ಮತ್ತು ಶೂನ್ಯಸಮಾನವೆಂಬ ಸತ್ಯವನ್ನು ಸ್ವಾಮಿ ವಿವೇಕಾನಂದರು ನಮಗೆ ತೋರಿಸಿಕೊಟ್ಟರು. ಆದ್ದರಿಂದಲೇ ಅವರು ದರಿದ್ರ-ನಾರಾಯಣರ ಸೇವೆಗೆ, ಅವರ ಉತ್ಥಾನ ಮತ್ತು ಜ್ನಾನವೃದ್ಧಿಗೆ, ನಮ್ಮನ್ನು ಸಮರ್ಪಿಸಿಕೊಳ್ಳಬೇಕೆಂದು ಸಲಹೆಯಿತ್ತರು. ಸ್ವಾಮಿ ವಿವೇಕಾನಂದರು ಠಂಕಿಸಿದ ದರಿದ್ರ-ನಾರಾಯಣ ಎಂಬ ಪದವನ್ನು ಗಾಂಧೀಜಿ ಜನಪ್ರಿಯಗೊಳಿಸಿದರು.”
-ವಿನೋಬಾ ಭಾವೆ

“ನೀವು ಅಸಹಾಯಕರೆಂದು ಭಾವಿಸುವುದು ಬಹಳ ದೊಡ್ಡ ತಪ್ಪು. ಯಾರಿಂದಲೂ ಸಹಾಯ ಕೇಳಬೇಡಿ. ನಮಗೆ ಸಹಾಯ ಮಾಡಬೇಕಾದವರು ನಾವೇ. ನಮಗೆ ಸಹಾಯ ಮಾಡಲು ನಮಗೇ ಸಾಧ್ಯವಾಗದಿದ್ದರೆ, ಬೇರೆ ಯಾರಿಂದಲೂ ನಮಗೆ ಸಹಾಯ ಮಾಡಲು ಸಾಧ್ಯವಿಲ್ಲ” ಎಂಬ ಸ್ವಾಮಿ ವಿವೇಕಾನಂದರ ಮಿಂಚಿನ ಮಾತು ನಮ್ಮ ಕಣ್ಣು ತೆರೆಸಲಿ. ಆ ಮೇರು ವ್ಯಕ್ತಿಯ ಜನ್ಮದಿನದ ಸಂದರ್ಭದಲ್ಲಿ “ಏಳು, ಎದ್ದೇಳು, ಗುರಿ ತಲಪುವ ತನಕ ವಿರಮಿಸದಿರು” ಎಂಬ ಅವರ ಕರೆಯನ್ನು ಮತ್ತೆಮತ್ತೆ ನೆನೆಯುತ್ತಾ, ಉನ್ನತ ಧ್ಯೇಯದ ಬದುಕಿನತ್ತ ಮುನ್ನಡಿಯಿಡೋಣ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: BelurKannada News WebsiteKolkattaLatest News KannadaMahatma GandhiNetaji Subhash Chabdra BoseSwami VivekanandaVivekanandaಮಹಾತ್ಮಾ ಗಾಂಧಿಮಾನವಶ್ರೀ ಸ್ವಾಮಿ ವಿವೇಕಾನಂದಸನ್ಯಾಸಿಸುಭಾಷ್ ಚಂದ್ರ ಬೋಸ್
Share200Tweet125Send
Previous Post

Winter Infections and Antibiotic Misuse: What Is Viral? What Is Dangerous?

Next Post

ಕಲಾರಾಧನೆಯಲ್ಲಿ ವಿನಯ ಸಂಪನ್ನರಾದ ವಿನಯ್ ಶಿವಮೊಗ್ಗ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಲಾರಾಧನೆಯಲ್ಲಿ ವಿನಯ ಸಂಪನ್ನರಾದ ವಿನಯ್ ಶಿವಮೊಗ್ಗ

ಕಲಾರಾಧನೆಯಲ್ಲಿ ವಿನಯ ಸಂಪನ್ನರಾದ ವಿನಯ್ ಶಿವಮೊಗ್ಗ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ದಿಶಾ ರಾಜ್ಯಕ್ಕೆ ಪ್ರಥಮ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ದಿಶಾ ರಾಜ್ಯಕ್ಕೆ ಪ್ರಥಮ

April 9, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು

ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು

April 9, 2026
ಶಿವಮೊಗ್ಗದಲ್ಲಿ ನಾಳೆ ಬೃಹತ್ ಶಾಂತಿಯುತ ಪಾದಯಾತ್ರೆ | ಕಾರಣವೇನು?

ಶಿವಮೊಗ್ಗದಲ್ಲಿ ನಾಳೆ ಬೃಹತ್ ಶಾಂತಿಯುತ ಪಾದಯಾತ್ರೆ | ಕಾರಣವೇನು?

April 9, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL